Homeಚಳವಳಿಇಂದು 7 ನೇ ಸುತ್ತಿನ ಮಾತುಕತೆ: ಎರಡು ಪ್ರಮುಖ ಅಂಶಗಳ ಬಗ್ಗೆ ಚರ್ಚೆ

ಇಂದು 7 ನೇ ಸುತ್ತಿನ ಮಾತುಕತೆ: ಎರಡು ಪ್ರಮುಖ ಅಂಶಗಳ ಬಗ್ಗೆ ಚರ್ಚೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನಿನ ವಿರುದ್ದ ರೈತರು ನಡೆಸುತ್ತಿರುವ ಪ್ರತಿಭಟನೆ ಇಂದಿಗೆ 40 ನೇ ದಿನಕ್ಕೆ ಕಾಲಿಟ್ಟಿದೆ. ಇದುವರೆಗೂ 6 ಸುತ್ತಿನ ಮಾತುಕತೆ ನಡೆದರೂ ಎಲ್ಲವೂ ವಿಫಲಾಗಿದೆ. ರೈತರ ಪ್ರಧಾನ ಬೇಡಿಕೆಯಾದ ಕೃಷಿ ಕಾನೂನುಗಳ ರದ್ದತಿ ಮತ್ತು ಕನಿಷ್ಠ ಬೆಂಬಲ ಬೆಲೆ ಕಾನೂನಿನ ಬಗ್ಗೆ ಸರ್ಕಾರ ಇನ್ನೂ ತೀರ್ಮಾನಕ್ಕೆ ಬಂದಿಲ್ಲ. ಆದರೆ ರೈತರು ತಮ್ಮ ಹೋರಾಟದ ನಿರ್ಧಾರವನ್ನು ಇನ್ನೂ ಗಟ್ಟಿಗೊಳಿಸಿದ್ದು ಬೇಡಿಕೆಗಳು ಈಡೇರುವವರೆಗೆ ಪ್ರತಿಭಟನೆಗಳು ಮುಂದುವರೆಯುತ್ತದೆ ಎಂದು ಘೋಷಿಸಿದ್ದಾರೆ. ಈ ನಡುವೆ ಸೋಮವಾರ(ಇಂದು) ಏಳನೇ ಸುತ್ತಿನ ಮಾತುಕತೆಗೆ ರೈತರನ್ನು ಸರ್ಕಾರ ಆಹ್ವಾನಿಸಿದೆ.

ದೆಹಲಿಯಿಂದ ಘಾಜಿಯಾಬಾದ್‌ ಹಾಗೂ ನೋಯ್ಡಾ ಮೂಲಕ ಘಾಜಿಯಾಪುರ ಸಂಪರ್ಕಿಸುವ ರಸ್ತೆಗಳನ್ನು ಬಂದ್‌ ಮಾಡಿರುವುದಾಗಿ ದೆಹಲಿ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಈಗಾಗಲೇ ದೆಹಲಿಯ ಸಿಂಘು, ಟಿಕ್ರಿ, ಧಂನ್ಸಾ ಗಡಿಭಾಗಗಳನ್ನು ಬಂದ್ ಮಾಡಲಾಗಿದೆ. ಪ್ರಯಾಣಿಕರು ದೆಹಲಿ ತಲುಪಲು ಆನಂದ್ ವಿಹಾರ್, ಡಿಎನ್‌ಡಿ, ಭೋಪ್ರಾ ಮತ್ತು ಲೋನಿ ಗಡಿಭಾಗದ ಮಾರ್ಗಗಳನ್ನು ಬಳಸುವಂತೆ ಸೂಚಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ-6 ನೇ ಸುತ್ತಿನ ಮಾತುಕತೆಯು ವಿಫಲ; ಹೋರಾಟ ಮುಂದುವರೆಯಲಿದೆ

ಆರನೇ ಸುತ್ತಿನ ಮಾತುಕತೆಯಲ್ಲಿ ಒಕ್ಕೂಟ ಸರ್ಕಾರವು ವಿದ್ಯುತ್ ತಿದ್ದುಪಡಿ ಕಾಯ್ದೆ ಮತ್ತು ವಾಯುಮಾಲಿನ್ಯ ಕಾಯ್ದೆಯನ್ನು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿತ್ತು. ಇಂದು ನಡೆಯುವ ಮಾತುಕತೆಯಲ್ಲಿ ಮುಖ್ಯವಾಗಿ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವುದು ಮತ್ತು ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನುಗಳನ್ನು ಜಾರಿಗೆ ತರುವ ಬಗ್ಗೆ ಚರ್ಚೆ ನಡೆಯುತ್ತದೆ. ದೆಹಲಿಯ ಕೊರೆಯುವ ಚಳಿ ಹಾಗೂ ಪ್ರತಿಭಟನೆ ನಡೆಸುತ್ತಿರುವ ರೈತರು, ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ರ್‍ಯಾಲಿ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ.

ದೆಹಲಿ ಚಲೋ
PC: RAVAN KHOSA/Twitter

ಒಕ್ಕೂಟ ಸರ್ಕಾರವು ಆರನೇ ಸುತ್ತಿನ ಸಭೆಯಲ್ಲಿ, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಿಲ್ಲ ಹಾಗೂ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಜಾರಿಗೊಳಿಸುವ ಕಾನೂನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತ್ತು. ಆದರೆ ಈ ಬಗ್ಗೆ ಪರಿಶೀಲಿಸಲು ಸಮಿತಿಯನ್ನು ರಚಿಸಬಹುದು ಎಂದು ಅದು ಹೇಳಿದೆ.

ಇಂದಿನ ಸಭೆಯಲ್ಲಿ ತಮ್ಮ ಬೇಡಿಕೆಗಳು ಈಡೇರದಿದ್ದರೆ ಜನವರಿ 6 ರಂದು ಜಿಟಿ-ಕರ್ನಲ್ ರಸ್ತೆಯಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ನಡೆಸುವುದಾಗಿ ರೈತರು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್‌ “ನಮ್ಮ ಬೇಡಿಕೆಗಳಿಗೆ ಸರ್ಕಾರ ಒಪ್ಪದಿದ್ದರೆ, ನಾವು ಮುಂದಿನ ವಾರ ಶಹಜಹಾನ್‌ಪುರ ಗಡಿಯಿಂದ ದೆಹಲಿ ಕಡೆಗೆ ಮೆರವಣಿಗೆ ಪ್ರಾರಂಭಿಸುತ್ತೇವೆ”  ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...