Homeಮುಖಪುಟಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

ಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

‘ಮೂವರು ಮುಸ್ಲಿಮರನ್ನು ತಪ್ಪಾಗಿ ಮತಾಂತರ ಪ್ರಕರಣದಲ್ಲಿ ಫ್ರೇಮ್ ಮಾಡಲಾಗಿದೆ’ ಎಂದು ಯುಪಿ ಪೊಲೀಸರೇ ಒಪ್ಪಿಕೊಂಡಿದ್ದಾರೆ.

- Advertisement -
- Advertisement -

‘ಮೂವರು ಮುಸ್ಲಿಮ್ ಯುವಕರನ್ನು ಬಲವಂತದ ಮತಾಂತರ ಪ್ರಕರಣದಲ್ಲಿ ಅನಗತ್ಯವಾಗಿ, ತಪ್ಪಾಗಿ ಸಿಕ್ಕಿಸಿಲಾಗಿದೆ’ ಎಂದು ಉತ್ತರಪ್ರದೇಶದ ಬರೇಲಿ ಜಿಲ್ಲೆಯ ಪೊಲೀಸ್ ಉನ್ನಾತಾಧಿಕಾರಿಗಳು ರವಿವಾರ ತಿಳಿಸಿದ್ದಾರೆ.

ಪೊಲೀಸರ ಈ ಒಪ್ಪಿಗೆ ಏನನ್ನು ಸೂಚಿಸುತ್ತಿದೆ? ಮತಾಂತರ ವಿರೋಧಿ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡು ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆತಂಕಗಳಿಗೆ ಇದು ಪುಷ್ಟಿ ನೀಡುತ್ತಿದೆ.
ಮೂವರು ಮುಸ್ಲಿಮರು 24 ವರ್ಷದ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದರು ಎಂಬ ದೂರು ಅಸತ್ಯವಾಗಿದೆ ಎಂದು ತನಿಖೆಯ ಬಳಿಕ ಪೊಲೀಸರೇ ಒಪ್ಪಿಕೊಂಡಿದ್ದಾರೆ.

ಏನಿದು ಪ್ರಕರಣ?

ಜನವರಿ 1 ರಂದು ಮೂವರು ಮುಸ್ಲಿಮರ ಮೇಲೆ ಬಲವಂತದ ಮತಾಂತರ ಪ್ರಕರಣದ ಕೇಸು ದಾಖಲಾಗಿತ್ತು. ‘ಸೆಪ್ಟೆಂಬರ್ 9, 2020ರಂದು ಮುಸ್ಲಿಮೇತರ ಯುವತಿ ಮನೆ ತೊರೆದು ಅಬ್ರಾರ್ ಖಾನ್ ಎಂಬ ಯುವಕನ ಜೊತೆ ದೆಹಲಿಗೆ ಹೋಗಿದ್ದಳು. ಫರೀದ್‌ಪುರ್ ಠಾಣೆಯಲ್ಲಿ ಅಪಹರಣದ ದೂರು ದಾಖಾಲಾಗಿತು. ಯುವತಿ ದೆಹಲಿಯ ತುಘಲಕ್‌ಬಾದ್‌ನಲ್ಲಿ ಅಬ್ರಾರ್ ಜೊತೆ 15 ದಿನ ಕಳೆದ ತನ್ನ ಮನೆಗೆ ವಾಪಸ್ಸಾದಳು. ನಂತರ ಆಕೆ ತನ್ನ ಸೋದರ ಮಾವನನ್ನು ವಿವಾಹವಾಗಿದ್ದಾಳೆ’ ಎಂದು ಬರೇಲಿಯ ಸೀನಿಯರ್ ಸುಪರಿಂಡೆಂಟ್ ಆಫ್ ಪೊಲೀಸ್ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಪಿಟಿಐಗೆ ತಿಳಿಸಿದ್ದಾರೆ.

‘ದೂರಿನ ಪ್ರಕಾರ, 2019ರ ಡಿಸೆಂಬರ್ 1ರಂದು ಫರೀದ್‌ಪುರ್‌ನಲ್ಲಿರುವ ತನ್ನ ಮನೆಗೆ ಯುವತಿ ವಾಪಸ್ಸಾಗುವ ಸಂದರ್ಭದಲ್ಲಿ ಅಬ್ರಾರ್ ಖಾನ್ ಮತ್ತು ಆತನ ಸಂಬಂಧಿಗಳಾದ ಮೈಸುರ್, ಇರ್ಷಾರ್‌ ಮದುವೆಗಾಗಿ ಆಕೆಯನ್ನು ಇಸ್ಲಾಂಗೆ ಮತಾಂತರವಾಗಲು ಬಲವಂತ ಮಾಡಿದರು ಎಂದು ಆರೋಪಿಸಲಾಗಿದೆ. ಆದರೆ ಪೊಲೀಸರು ಕಂಡುಕೊಂಡ ಪ್ರಕಾರ, ಆ ಮೂವರೂ ಮುಸ್ಲಿಂ ಯುವಕರು ಅಂದು ಆ ಜಾಗದಲ್ಲಿ ಇರಲೇ ಇಲ್ಲ. ಪೊಲೀಸರು ಸಂಗ್ರಹಿಸಿದ ಪುರಾವೆಗಳ ಪ್ರಕಾರ, ಈ ಮೂವರ ವಿರುದ್ಧ ಯುವತಿ ಮತ್ತು ಆಕೆಯ ಸೋದರ ಮಾವ ನೀಡಿದ ದೂರು ತಪ್ಪಾಗಿದೆ. ಮತಾಂತರ ಕಾಯ್ದೆಯ ಪ್ರಾವಿಷನ್‌ಗಳ ಪ್ರಕಾರ ಈ ವಿಷಯವನ್ನು ವಜಾಗೊಳಿಸಲಾಗುವುದು’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನಮ್ಮ ತನಿಖೆಯ ಸಮಯದಲ್ಲಿ, ಘಟನೆ ನಡೆದಾಗ ಆ ದಿನ ಆರೋಪಿಗಳು ಆ ಸ್ಥಳದಲ್ಲಿ ಹಾಜರಿರಲಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳ ಪ್ರಕಾರ, ಮೂವರು ಪುರುಷರ ವಿರುದ್ಧ ಮಹಿಳೆ ಮಾಡಿರುವ ಆರೋಪಗಳು ತಪ್ಪು.

ಆದರೆ, ಮಾವಂದಿರ ಮನೆಯಲ್ಲಿದ್ದ ಯುವತಿಗೆ ಅಬ್ರಾರ್ ಬೆದರಿಕೆಗಳನ್ನು ಹಾಕಿದ್ದ ಎಂಬ ಆರೋಪವನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

‘ಡಿಸೆಂಬರ್ 11 ರಂದು ಯುವತಿಯ ಸೋದರಮಾವ ಬರೇಲಿ ಜಿಲ್ಲೆಯ ಅವೊನ್ಲಾ ಎಂಬಲ್ಲಿ ಯುವತಿಯನ್ನು ಮದುವೆಯಾಗಿದ್ದಾನೆ. ಯುವತಿಯ ಸೋದಮಾವಂದಿರ ಮನೆಗೆ ಹೋದ ಅಬ್ರಾರ್, ಬೇಗನೆ ಫರೀದ್‌ಪುರಕ್ಕೆ ಬಾ, ಇಲ್ಲವಾದರೆ ತೊಂದರೆಯಾಗುತ್ತದೆ ಎಂದು ಯುವತಿಗೆ ಹೇಳಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದನ್ನು ಪರೀಕ್ಷಿಸುತ್ತಿದ್ದು, ಆರೋಪ ಸತ್ಯವಾಗಿದ್ದರೆ ಕಾನೂನು ಪ್ರಕಾ ಕ್ರಮ ಜರುಗಿಸುತ್ತೇವೆ’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನವಂಬರ್ 2020ರಲ್ಲಿ ಲವ್ ಜಿಹಾದ್ ‘ತಡೆಯಲು’ ಯೋಗಿ ಆದಿತ್ಯನಾಥ್ ಸರ್ಕಾರ ಜಾರಿಗೆ ತಂದ ಮತಾಂತರ ವಿರೋದಿ ಕಾಯ್ದೆ ಮುಸ್ಲಿಂರಲ್ಲಿ ಆತಂಕ ಮೂಡಿಸಿದೆ. ಮುಸ್ಲಿಂ ಪುರುಷರನ್ನು ಟಾರ್ಗೆಟ್ ಮಾಡಲು ಮತ್ತು ಅಂತರ್‌ಧರ್ಮೀಯ ಸಂಬಂಧಗಳನ್ನು ತಡೆಯಲೆಂದೇ ಈ ಕಾಯ್ದೆ ತರಲಾಗಿದೆ ಎಂಬ ಆತಂಕಗಳು ಮನೆ ಮಾಡಿವೆ.

ಮುಸ್ಲಿಂ ಪುರುಷರು ಆಮಿಷ-ಓಲೈಕೆಗಳ ಮೂಲಕ ಮತ್ತು ಮದುವೆಯ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡುವ ಸಂಚು ನಡೆಸುತ್ತಿದ್ದಾರೆ ಎಂಬ ಸಂಘ ಪರಿವಾರದ ಅನಿಸಿಕೆಯನ್ನು ಕಾನೂನಾತ್ಮಕಗೊಳಿಸಲೆಂದೇ ಈ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಪ್ರಗತಿಪರರು ಹೇಳುತ್ತಿದ್ದಾರೆ. (ಸಂಘ ಪರಿವಾರದ ಈ ‘ಥಿಯರಿ’ಗೆ ಯಾವುದೇ ಆಧಾರವಿಲ್ಲದಿದ್ದರೂ ಕೇಂದ್ರ ಸರ್ಕಾರವೂ ಇದನ್ನು ಒಪ್ಪಿಕೊಂಡಿದೆ) ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳು ಮತಾಂತರ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದಿವೆ. ಇನ್ನು ಹಲವು ರಾಜ್ಯಗಳು ತರುವ ತಯಾರಿಯಲ್ಲಿವೆ.

ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕಾರ್ಯಕಾರಿಣಿ ಸಮಿತಿಯ ಸಭೆಯಲ್ಲಿ ಕರ್ನಾಟಕದಲ್ಲಿಯೂ ಈ ಕಾಯ್ದೆ ತರುವ ಕುರಿತು ಚರ್ಚೆ ನಡೆದಿದೆ.


ಇದನ್ನೂ ಓದಿ: ಸಾವಿರವಲ್ಲ, ಕೇವಲ ಒಂದು ಸುಳ್ಳು ಹೇಳಿ ಮದುವೆಯಾದಳು: ‘ಅವನು’ ಈಗ ಜೈಲಿನಲ್ಲಿ, ‘ಅವಳು’ ಪೋಷಕರ ಬಂಧನದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...