Homeಮುಖಪುಟಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

ಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

‘ಮೂವರು ಮುಸ್ಲಿಮರನ್ನು ತಪ್ಪಾಗಿ ಮತಾಂತರ ಪ್ರಕರಣದಲ್ಲಿ ಫ್ರೇಮ್ ಮಾಡಲಾಗಿದೆ’ ಎಂದು ಯುಪಿ ಪೊಲೀಸರೇ ಒಪ್ಪಿಕೊಂಡಿದ್ದಾರೆ.

- Advertisement -
- Advertisement -

‘ಮೂವರು ಮುಸ್ಲಿಮ್ ಯುವಕರನ್ನು ಬಲವಂತದ ಮತಾಂತರ ಪ್ರಕರಣದಲ್ಲಿ ಅನಗತ್ಯವಾಗಿ, ತಪ್ಪಾಗಿ ಸಿಕ್ಕಿಸಿಲಾಗಿದೆ’ ಎಂದು ಉತ್ತರಪ್ರದೇಶದ ಬರೇಲಿ ಜಿಲ್ಲೆಯ ಪೊಲೀಸ್ ಉನ್ನಾತಾಧಿಕಾರಿಗಳು ರವಿವಾರ ತಿಳಿಸಿದ್ದಾರೆ.

ಪೊಲೀಸರ ಈ ಒಪ್ಪಿಗೆ ಏನನ್ನು ಸೂಚಿಸುತ್ತಿದೆ? ಮತಾಂತರ ವಿರೋಧಿ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡು ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆತಂಕಗಳಿಗೆ ಇದು ಪುಷ್ಟಿ ನೀಡುತ್ತಿದೆ.
ಮೂವರು ಮುಸ್ಲಿಮರು 24 ವರ್ಷದ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದರು ಎಂಬ ದೂರು ಅಸತ್ಯವಾಗಿದೆ ಎಂದು ತನಿಖೆಯ ಬಳಿಕ ಪೊಲೀಸರೇ ಒಪ್ಪಿಕೊಂಡಿದ್ದಾರೆ.

ಏನಿದು ಪ್ರಕರಣ?

ಜನವರಿ 1 ರಂದು ಮೂವರು ಮುಸ್ಲಿಮರ ಮೇಲೆ ಬಲವಂತದ ಮತಾಂತರ ಪ್ರಕರಣದ ಕೇಸು ದಾಖಲಾಗಿತ್ತು. ‘ಸೆಪ್ಟೆಂಬರ್ 9, 2020ರಂದು ಮುಸ್ಲಿಮೇತರ ಯುವತಿ ಮನೆ ತೊರೆದು ಅಬ್ರಾರ್ ಖಾನ್ ಎಂಬ ಯುವಕನ ಜೊತೆ ದೆಹಲಿಗೆ ಹೋಗಿದ್ದಳು. ಫರೀದ್‌ಪುರ್ ಠಾಣೆಯಲ್ಲಿ ಅಪಹರಣದ ದೂರು ದಾಖಾಲಾಗಿತು. ಯುವತಿ ದೆಹಲಿಯ ತುಘಲಕ್‌ಬಾದ್‌ನಲ್ಲಿ ಅಬ್ರಾರ್ ಜೊತೆ 15 ದಿನ ಕಳೆದ ತನ್ನ ಮನೆಗೆ ವಾಪಸ್ಸಾದಳು. ನಂತರ ಆಕೆ ತನ್ನ ಸೋದರ ಮಾವನನ್ನು ವಿವಾಹವಾಗಿದ್ದಾಳೆ’ ಎಂದು ಬರೇಲಿಯ ಸೀನಿಯರ್ ಸುಪರಿಂಡೆಂಟ್ ಆಫ್ ಪೊಲೀಸ್ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಪಿಟಿಐಗೆ ತಿಳಿಸಿದ್ದಾರೆ.

‘ದೂರಿನ ಪ್ರಕಾರ, 2019ರ ಡಿಸೆಂಬರ್ 1ರಂದು ಫರೀದ್‌ಪುರ್‌ನಲ್ಲಿರುವ ತನ್ನ ಮನೆಗೆ ಯುವತಿ ವಾಪಸ್ಸಾಗುವ ಸಂದರ್ಭದಲ್ಲಿ ಅಬ್ರಾರ್ ಖಾನ್ ಮತ್ತು ಆತನ ಸಂಬಂಧಿಗಳಾದ ಮೈಸುರ್, ಇರ್ಷಾರ್‌ ಮದುವೆಗಾಗಿ ಆಕೆಯನ್ನು ಇಸ್ಲಾಂಗೆ ಮತಾಂತರವಾಗಲು ಬಲವಂತ ಮಾಡಿದರು ಎಂದು ಆರೋಪಿಸಲಾಗಿದೆ. ಆದರೆ ಪೊಲೀಸರು ಕಂಡುಕೊಂಡ ಪ್ರಕಾರ, ಆ ಮೂವರೂ ಮುಸ್ಲಿಂ ಯುವಕರು ಅಂದು ಆ ಜಾಗದಲ್ಲಿ ಇರಲೇ ಇಲ್ಲ. ಪೊಲೀಸರು ಸಂಗ್ರಹಿಸಿದ ಪುರಾವೆಗಳ ಪ್ರಕಾರ, ಈ ಮೂವರ ವಿರುದ್ಧ ಯುವತಿ ಮತ್ತು ಆಕೆಯ ಸೋದರ ಮಾವ ನೀಡಿದ ದೂರು ತಪ್ಪಾಗಿದೆ. ಮತಾಂತರ ಕಾಯ್ದೆಯ ಪ್ರಾವಿಷನ್‌ಗಳ ಪ್ರಕಾರ ಈ ವಿಷಯವನ್ನು ವಜಾಗೊಳಿಸಲಾಗುವುದು’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನಮ್ಮ ತನಿಖೆಯ ಸಮಯದಲ್ಲಿ, ಘಟನೆ ನಡೆದಾಗ ಆ ದಿನ ಆರೋಪಿಗಳು ಆ ಸ್ಥಳದಲ್ಲಿ ಹಾಜರಿರಲಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳ ಪ್ರಕಾರ, ಮೂವರು ಪುರುಷರ ವಿರುದ್ಧ ಮಹಿಳೆ ಮಾಡಿರುವ ಆರೋಪಗಳು ತಪ್ಪು.

ಆದರೆ, ಮಾವಂದಿರ ಮನೆಯಲ್ಲಿದ್ದ ಯುವತಿಗೆ ಅಬ್ರಾರ್ ಬೆದರಿಕೆಗಳನ್ನು ಹಾಕಿದ್ದ ಎಂಬ ಆರೋಪವನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

‘ಡಿಸೆಂಬರ್ 11 ರಂದು ಯುವತಿಯ ಸೋದರಮಾವ ಬರೇಲಿ ಜಿಲ್ಲೆಯ ಅವೊನ್ಲಾ ಎಂಬಲ್ಲಿ ಯುವತಿಯನ್ನು ಮದುವೆಯಾಗಿದ್ದಾನೆ. ಯುವತಿಯ ಸೋದಮಾವಂದಿರ ಮನೆಗೆ ಹೋದ ಅಬ್ರಾರ್, ಬೇಗನೆ ಫರೀದ್‌ಪುರಕ್ಕೆ ಬಾ, ಇಲ್ಲವಾದರೆ ತೊಂದರೆಯಾಗುತ್ತದೆ ಎಂದು ಯುವತಿಗೆ ಹೇಳಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದನ್ನು ಪರೀಕ್ಷಿಸುತ್ತಿದ್ದು, ಆರೋಪ ಸತ್ಯವಾಗಿದ್ದರೆ ಕಾನೂನು ಪ್ರಕಾ ಕ್ರಮ ಜರುಗಿಸುತ್ತೇವೆ’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನವಂಬರ್ 2020ರಲ್ಲಿ ಲವ್ ಜಿಹಾದ್ ‘ತಡೆಯಲು’ ಯೋಗಿ ಆದಿತ್ಯನಾಥ್ ಸರ್ಕಾರ ಜಾರಿಗೆ ತಂದ ಮತಾಂತರ ವಿರೋದಿ ಕಾಯ್ದೆ ಮುಸ್ಲಿಂರಲ್ಲಿ ಆತಂಕ ಮೂಡಿಸಿದೆ. ಮುಸ್ಲಿಂ ಪುರುಷರನ್ನು ಟಾರ್ಗೆಟ್ ಮಾಡಲು ಮತ್ತು ಅಂತರ್‌ಧರ್ಮೀಯ ಸಂಬಂಧಗಳನ್ನು ತಡೆಯಲೆಂದೇ ಈ ಕಾಯ್ದೆ ತರಲಾಗಿದೆ ಎಂಬ ಆತಂಕಗಳು ಮನೆ ಮಾಡಿವೆ.

ಮುಸ್ಲಿಂ ಪುರುಷರು ಆಮಿಷ-ಓಲೈಕೆಗಳ ಮೂಲಕ ಮತ್ತು ಮದುವೆಯ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡುವ ಸಂಚು ನಡೆಸುತ್ತಿದ್ದಾರೆ ಎಂಬ ಸಂಘ ಪರಿವಾರದ ಅನಿಸಿಕೆಯನ್ನು ಕಾನೂನಾತ್ಮಕಗೊಳಿಸಲೆಂದೇ ಈ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಪ್ರಗತಿಪರರು ಹೇಳುತ್ತಿದ್ದಾರೆ. (ಸಂಘ ಪರಿವಾರದ ಈ ‘ಥಿಯರಿ’ಗೆ ಯಾವುದೇ ಆಧಾರವಿಲ್ಲದಿದ್ದರೂ ಕೇಂದ್ರ ಸರ್ಕಾರವೂ ಇದನ್ನು ಒಪ್ಪಿಕೊಂಡಿದೆ) ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳು ಮತಾಂತರ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದಿವೆ. ಇನ್ನು ಹಲವು ರಾಜ್ಯಗಳು ತರುವ ತಯಾರಿಯಲ್ಲಿವೆ.

ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕಾರ್ಯಕಾರಿಣಿ ಸಮಿತಿಯ ಸಭೆಯಲ್ಲಿ ಕರ್ನಾಟಕದಲ್ಲಿಯೂ ಈ ಕಾಯ್ದೆ ತರುವ ಕುರಿತು ಚರ್ಚೆ ನಡೆದಿದೆ.


ಇದನ್ನೂ ಓದಿ: ಸಾವಿರವಲ್ಲ, ಕೇವಲ ಒಂದು ಸುಳ್ಳು ಹೇಳಿ ಮದುವೆಯಾದಳು: ‘ಅವನು’ ಈಗ ಜೈಲಿನಲ್ಲಿ, ‘ಅವಳು’ ಪೋಷಕರ ಬಂಧನದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...