Homeಚಳವಳಿಕೃಷಿ ಕಾಯ್ದೆ ಅಪಾಯಗಳ ಬಗ್ಗೆ ಮನವರಿಕೆ: 4ನೇ ದಿನಕ್ಕೆ ಕಾಲಿಟ್ಟ ಯುವಜನರ ಸೈಕಲ್ ಜಾಥ

ಕೃಷಿ ಕಾಯ್ದೆ ಅಪಾಯಗಳ ಬಗ್ಗೆ ಮನವರಿಕೆ: 4ನೇ ದಿನಕ್ಕೆ ಕಾಲಿಟ್ಟ ಯುವಜನರ ಸೈಕಲ್ ಜಾಥ

ರಾಮನಗರ ಜಿಲ್ಲೆಯಲ್ಲಿ ಜಾಥಾದ ಯುವಜನರು ಕೃಷಿ ಕಾರ್ಯದಲ್ಲಿ ನಿರತ ರೈತರ ಜೊತೆ ಶ್ರಮದಾನದಲ್ಲಿ ಭಾಗವಹಿಸಿದ್ದರು. ಭತ್ತದ ಹೊರೆಕಟ್ಟಿ ಟ್ರಾಕ್ಟರ್‌ಗಳಿಗೆ ತುಂಬುವ ಕೆಲಸದಲ್ಲಿಯೂ ಸಹ ಯುವಜನರು ತೊಡಗಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತು ಕರ್ನಾಟಕದ ರೈತರಿಗೆ ಮನವರಿಕೆ ಮಾಡಿಕೊಡಲು ದೇಶಪ್ರೇಮಿ ಯುವಾಂದೋಲನ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯರು ನಡೆಸುತ್ತಿರುವ ಸೈಕಲ್ ಜಾಥಾ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹಳ್ಳಿಗಳಿಗೆ ಹೋಗೋಣ ಹೆಸರಿನಲ್ಲಿ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ 8 ಜಿಲ್ಲೆಗಳಲ್ಲಿ ನಡೆಯುತ್ತಿರುವ ಸೈಕಲ್ ಜಾಥಾಗೆ ರೈತರಿಂದ ಸ್ವಾಗತಾರ್ಹ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದಕ್ಷಿಣ ಕರ್ನಾಟಕ ವರದಿ

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ “ನಾವು ರೈತರಿಗೆ ಹೆಚ್ಚು ತಿಳಿಸುವುದಕ್ಕಿಂತ, ರೈತರಿಂದ ನಾವು ಬಹಳ ಕಲಿತಿದ್ದೇವೆ. ಮದ್ದೂರು ತಾಲ್ಲೂಕು ಗೆಜ್ಜಲಗೆರೆಯಲ್ಲಿ ರೈತರು ನಮಗಿಂತ ಹೆಚ್ಚು ಈ ಕಾಯ್ದೆಗಳ ಅಪಾಯಗಳ ಬಗ್ಗೆ ತಿಳಿದುಕೊಂಡಿದ್ದಾರೆ ಎಂಬುದು ತಿಳಿಯಿತು. ಈ ಕಾಯ್ದೆಗಳು ಯುವಜನರ ಉದ್ಯೋಗಗಳನ್ನು ಸಹ ಕಿತ್ತುಕೊಳ್ಳುತ್ತವೆ. ನಮ್ಮ ಕಾಲದಲ್ಲಿ ಜನವಿರೋಧಿ, ರೈತ ವಿರೋಧಿ ಕಾನೂನುಗಳು ಬಂದರೆ ಆ ಸರ್ಕಾರವನ್ನೇ ನಾವು ಬದಲಿಸುವ ಮಟ್ಟಿಗೆ ಹೋರಾಟ ಮಾಡುತ್ತಿದ್ದೆವು. ಆದರೆ ಈಗಿನ ಯುವಜನರು ಕೇವಲ ಮೋದಿಯನ್ನು ಹೊಗಳುತ್ತಿದ್ದಾರೆ. ಅವರನ್ನು ಪ್ರಶ್ನಿಸುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ” ಎಂದು ರೈತರು ಬೇಸರ ವ್ಯಕ್ತಪಡಿಸಿದರು ಎಂದರು.

ರೈತರು ನಿಜವಾಗಿಯೂ ಈ ಕಾಯ್ದೆಗಳ ಅಪಾಯಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಅವರು ಮಾಧ್ಯಮಗಳು ಮತ್ತು ಮೋದಿ ಸರ್ಕಾರದ ಬಗ್ಗೆ ಕೋಪಗೊಂಡಿದ್ದಾರೆ. ಪ್ರತಿ ಊರಿನಲ್ಲಿಯೂ ರೈತರು ನಮ್ಮನ್ನು ತಮ್ಮ ಮನೆಗೆ ತಿಂಡಿಗೆ, ಕಾಫಿಗೆ ಬರುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ರೈತರ ಪ್ರೀತಿ ನಮಗೆ ಸಿಕ್ಕಿದೆ. ಹಾಗೆಯೇ ರೈತರ ಸಂಕಷ್ಟಗಳನ್ನು ನಾವು ನಮ್ಮ ಎದೆಯೊಳಗೆ ಇಳಿಸಿಕೊಂಡಿದ್ದು, ಹೋರಾಟ ಮುಂದುವೆರೆಸುತ್ತೇವೆ ಎಂದು ಭರವಸೆ ನೀಡಿದ್ದೇವೆ ಎಂದು ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಜಾಥಾದ ಯುವಜನರು ಕೃಷಿ ಕಾರ್ಯದಲ್ಲಿ ನಿರತ ರೈತರ ಜೊತೆ ಶ್ರಮದಾನದಲ್ಲಿ ಭಾಗವಹಿಸಿದ್ದರು. ಭತ್ತದ ಹೊರೆಕಟ್ಟಿ ಟ್ರಾಕ್ಟರ್‌ಗಳಿಗೆ ತುಂಬುವ ಕೆಲಸದಲ್ಲಿಯೂ ಸಹ ಯುವಜನರು ತೊಡಗಿಸಿಕೊಂಡಿದ್ದಾರೆ. ಮನೋಜ್, ಮಮತಾ, ರಾಜಶೇಖರ್ ಅಂಗಡಿ, ಪುಷ್ಪಲತಾ, ರಜಿನಿ, ಸಲೀಂ ಮುಂತಾದವರು ಜಾಥಾದಲ್ಲಿದ್ದಾರೆ.

ಹೈದರಾಬಾದ್ ಕರ್ನಾಟಕ ವರದಿ

ಹೈದರಾಬಾದ್ ಕರ್ನಾಟಕದಲ್ಲಿ ಈ ಮೂರು ದಿನದಲ್ಲಿ 20ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಜಾಥಾ ಯಶಸ್ವಿಯಾಗಿ ನಡೆಯುತ್ತಿದೆ. ರೈತರು ನಮ್ಮ ನಮ್ಮ ಹಳ್ಳಿಗಳಿಗೆ ಬನ್ನಿ ಎಂದು ಕರೆಯುತ್ತಿದ್ದಾರೆ. ಈಗ ನಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಕ್ವಿಂಟಾಲ್ ಭತ್ತಕ್ಕೆ ಕೆಲವೊಮ್ಮೆ 1500 ರಿಂದ 800ಕ್ಕೆ ಇಳಿದುಬಿಡುತ್ತದೆ. ಹಾಗಾಗಿ ಎಪಿಎಂಸಿ ಮಂಡಿಗಳು ಇರಬೇಕೆಂಬುದು ನಮ್ಮ ಒತ್ತಾಯ ಎಂದು ರೈತರು ತಿಳಿಸಿದ್ದಾರೆ ಎಂದು ದೇಶಪ್ರೇಮಿ ಯುವಾಂದೋಲನದ ಗುರುಬಸವ ನಾನುಗೌರಿ.ಕಾಂಗೆ ತಿಳಿಸಿದರು.

ಎಮ್ಮಿಗನೂರು, ನೆಲ್ಲುಡಿ_ಕೊಟ್ಟಾಲ್, ಕಂಪ್ಲಿ, ಕಂಪ್ಲಿ_ಕೋಟೆ, ಡಣಾಪುರ, ಹೆಬ್ಬಾಳ, ಮುಷ್ಟೂರು, ಕುಂಟೋಜಿ, ಬರಗೂರು ಗ್ರಾಮದ ಬೀದಿ ಬೀದಿ ಗಳಲ್ಲಿ ಹೋರಾಟ ಗೀತೆಯನ್ನು ಹಾಡಿ, ಕರಪತ್ರಗಳನ್ನು ಹಂಚಲಾಯಿತು. ಗ್ರಾಮಸ್ಥರಿಗೆ ರೈತವಿರೋಧಿ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಅಲ್ಲಿನ ಜನರೊಂದಿಗೆ ಚರ್ಚೆಗಳು ನಡೆದವು. ದಾರಿ ಉದಕ್ಕೂ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ಕರಪತ್ರಗಳನ್ನು ಹಂಚಿ ಸರ್ಕಾರ ತರುತ್ತಿರುವ ರೈತ ವಿರೋಧಿ ಕಾನೂನುಗಳ ಬಗ್ಗೆ ಮಾಹಿತಿ ನೀಡಲಾಯಿತು. ಇಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರಚಾರಾಂದೋಲನ ಮುಗಿಸಿ ಕೊಪ್ಪಳ ಜಿಲ್ಲೆಯ ಕಡೆಗೆ ಹೊರಟಿತು ಎಂದು ಅವರು ಮಾಹಿತಿ ನೀಡಿದರು.

ಜಾಥಾದಲ್ಲಿ ದೇಶಪ್ರೇಮಿ ಯುವಾಂದೋಲನದ ಸಂತೋಷ ಎಚ್. ಎಂ, ರಾಜೇಂದ್ರ ರಾಜವಳ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣು, ಚಿದಾನಂದ, ಇಸ್ಮಾಯಿಲ್, ಭುವನ್ ಕುಮಾರ್ ಮತ್ತು ಕರ್ನಾಟಕ ಜನಶಕ್ತಿಯ ವಸಂತ್ ರಾಜ್ ಕಹಳೆ ಇದ್ದರು.


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...