Homeಚಳವಳಿಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ಹಿಂದೆ ರಿಲಾಯನ್ಸ್ ಕಂಪೆನಿಯಿದೆ ಎಂದು ಆಕ್ರೋಶಗೊಂಡಿದ್ದ ಪಂಜಾಬ್ ಮತ್ತು ಹರಿಯಾಣದ ರೈತರು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ್ದರು. ಇದೀಗ ಕಂಪೆನಿಯು ಗುತ್ತಿಗೆ ಕೃಷಿಯಲ್ಲಿ ತನಗೆ ಆಸಕ್ತಿಯಿಲ್ಲ, ಆದ್ದರಿಂದ ತನಗೂ ಈ ಕಾನೂನಿಗೂ ಸಂಬಂಧವಿಲ್ಲ. ಆದ್ದರಿಂದ ತನ್ನ ಆಸ್ತಿ ಮತ್ತು ಸೇವೆಗಳನ್ನು ಕಾಪಾಡಲು ಸರ್ಕಾರದ ಹಸ್ತಕ್ಷೇಪ ಮಾಡುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದೆ.

ಹರಿಯಾಣ ಮತ್ತು ಪಂಜಾಬ್‌ನ ರೈತರು ರಿಲಯನ್ಸ್ ಕಂಪೆನಿಗೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವುದು ಹಾಗೂ ಕಂಪೆನಿಯ ಜಿಯೋ ಟವರ್‌ಗಳ ಕೇಬಲ್‌ಗಳನ್ನು ಕತ್ತರಿಸುವುದು ಸೇರಿದಂತೆ ಕಂಪೆನಿಯ ಮೂಲಸೌಕರ್ಯಕ್ಕೆ ಹಾನಿ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಅಲ್ಲದೇ ಕಳೆದೆರಡು ತಿಂಗಳಿಂದ ಜಿಯೋ ಸಿಮ್‌ನಿಂದ ಹೊರಬರುವಂತೆ ನೀಡಿದ ರೈತರ ಕರೆಗೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು ಭಾರತದಲ್ಲಿ ಜಿಯೋ ಗಣನೀಯವಾಗಿ ಕುಸಿಸಿದೆ. ಈಗ ಭಾರತದ ಸಕ್ರಿಯ ಬಳಕೆದಾರರದಲ್ಲಿ ಏರ್‌ಟೆಲ್ ನಂಬರ್ ಒನ್ ಸ್ಥಾನದಲ್ಲಿದೆ.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

ರಿಲಯನ್ಸ್ ಕಂಪೆನಿಯು ಇಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಮೊರೆ ಹೋಗಿದ್ದು, ದುಷ್ಕರ್ಮಿಗಳು ನಡೆಸಿದ ಅಕ್ರಮ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಸರ್ಕಾರದ ತುರ್ತು ಹಸ್ತಕ್ಷೇಪ ಮಾಡುವಂತೆ ಕೋರಿದೆ.

“ಈ ಹಿಂಸಾಚಾರವು ತನ್ನ ಸಾವಿರಾರು ಉದ್ಯೋಗಿಗಳ ಜೀವಕ್ಕೆ ಅಪಾಯ ಉಂಟುಮಾಡಿದೆ. ಎರಡು ರಾಜ್ಯಗಳಲ್ಲಿ ಅಂಗಸಂಸ್ಥೆಗಳ ಪ್ರಮುಖ ಸಂವಹನ ಮೂಲಸೌಕರ್ಯ, ಮಾರಾಟ ಮತ್ತು ಸೇವಾ ಮಳಿಗೆಗಳಿಗೆ ಹಾನಿ ಮತ್ತು ಅಡ್ಡಿಯುಂಟಾಗುತ್ತಿದೆ. ಈ ವಿಧ್ವಂಸಕ ಕೃತ್ಯದಲ್ಲಿ ಪಾಲ್ಗೊಳ್ಳುವ ದುಷ್ಕರ್ಮಿಗಳನ್ನು ಪಟ್ಟಭದ್ರ ಹಿತಾಸಕ್ತಿಗಳು ಮತ್ತು ನಮ್ಮ ವ್ಯಾಪಾರಿ ಪ್ರತಿಸ್ಪರ್ಧಿಗಳು ಪ್ರಚೋದಿಸಿದ್ದಾರೆ ಹಾಗೂ ಸಹಾಯ ಮಾಡಿದ್ದಾರೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಪಟ್ಟಭದ್ರ ಹಿತಾಸಕ್ತಿಗಳು ರಿಲಯನ್ಸ್ ವಿರುದ್ಧ ನಿರಂತರ, ದುರುದ್ದೇಶಪೂರಿತ ಅಭಿಯಾನವನ್ನು ನಡೆಸಿ ರೈತರ ಆಂದೋಲನದ ಲಾಭವನ್ನು ಪಡೆದುಕೊಳ್ಳುತ್ತಿದೆ. ಗುತ್ತಿಗೆ ಕೃಷಿಯಲ್ಲಿ ತನಗೆ ಆಸಕ್ತಿ ಇಲ್ಲದಿರುವುದರಿಂದ ಕೃಷಿ ಕಾನೂನುಗಳೊಂದಿಗೆ ತನಗೂ ಯಾವುದೇ ಸಂಬಂಧವಿಲ್ಲ ಎಂದು ಕಂಪೆನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ’ಜಿಯೋ ಸಿಮ್ ತಿರಸ್ಕರಿಸಿ, ಬಿಎಸ್‌ಎನ್‌ಎಲ್‌ ಸಿಮ್‌ ಪ್ರೋತ್ಸಾಹಿಸಿ’: ಮಂಡ್ಯದಲ್ಲಿ AILU ಪ್ರತಿಭಟನೆ

ಕಾನೂನುಗಳನ್ನು ಗಮನದಲ್ಲಿಟ್ಟುಕೊಂಡು ಪಂಜಾಬ್ ಅಥವಾ ಹರಿಯಾಣದಲ್ಲಿ ತಾನು ಭೂಮಿಯನ್ನು ಖರೀದಿಸುವುದಿಲ್ಲ ಎಂದು ಕಂಪೆನಿಯೂ ಹೇಳಿದ್ದು, “ಭಾರತೀಯರ ಅನ್ನದಾತರಾಗಿರುವ ರೈತರ ಬಗ್ಗೆ ರಿಲಯನ್ಸ್‌ಗೆ ಅಪಾರವಾದ ಗೌರವ ಮತ್ತ ಕೃತಜ್ಞತೆಯಿದೆ” ಎಂದು ಹೇಳಿದೆ.

ಒಕ್ಕೂಟ ಸರ್ಕಾರವು ಜಾರಿ ಮಾಡಿದ ಕಾನೂನುಗಳ ಹಿಂದೆ ಮುಖೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಇದೆ ಎಂದು ಹಲವಾರು ರೈತರು ಈಗಾಗಲೆ ಆರೋಪಿಸಿದ್ದರು. ಈ ಕಾನೂನುಗಳು ತಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ಹಾನಿಕಾರಕವೆಂದು ಹೇಳುತ್ತಿರುವ ರೈತರು ಇದರ ವಿರುದ್ದ ಕಳೆದ 40 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪಂಜಾಬ್‌ ರಾಜ್ಯದಲ್ಲಿರುವ ಜಿಯೋ ರಿಲಯನ್ಸ್ ಜಿಯೋದ 9,000 ಟವರ್‌ಗಳಲ್ಲಿ 1,500 ಕ್ಕೂ ಹೆಚ್ಚು ಟವರ್‌ಗೆ ಹಾನಿ ಮಾಡಲಾಗಿದೆ ಎಂದು ಕಂಪೆನಿಯ ಪ್ರತಿನಿಧಿಯೊಬ್ಬರು ತಿಳಿಸಿದ್ದರು. ಘಟನೆಯ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂತಹ ವಿಧ್ವಂಸಕ ಕೃತ್ಯಗಳ ವಿರುದ್ಧ ಕಠಿಣ ಎಚ್ಚರಿಕೆ ನೀಡಿದ್ದು, ಇಂತಹ ಪ್ರಕರಣಗಳಲ್ಲಿ ಕಟ್ಟುನಿಟ್ಟಾಗಿ ವರ್ತಿಸುವಂತೆ ಪೊಲೀಸರಿಗೆ ಸೂಚಿಸಿದ್ದರು.

ಇದನ್ನೂ ಓದಿ: ಪಂಜಾಬ್: 1500 ಕ್ಕೂ ಹೆಚ್ಚು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ ರೈತ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...