Homeಚಳವಳಿಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ಹಿಂದೆ ರಿಲಾಯನ್ಸ್ ಕಂಪೆನಿಯಿದೆ ಎಂದು ಆಕ್ರೋಶಗೊಂಡಿದ್ದ ಪಂಜಾಬ್ ಮತ್ತು ಹರಿಯಾಣದ ರೈತರು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ್ದರು. ಇದೀಗ ಕಂಪೆನಿಯು ಗುತ್ತಿಗೆ ಕೃಷಿಯಲ್ಲಿ ತನಗೆ ಆಸಕ್ತಿಯಿಲ್ಲ, ಆದ್ದರಿಂದ ತನಗೂ ಈ ಕಾನೂನಿಗೂ ಸಂಬಂಧವಿಲ್ಲ. ಆದ್ದರಿಂದ ತನ್ನ ಆಸ್ತಿ ಮತ್ತು ಸೇವೆಗಳನ್ನು ಕಾಪಾಡಲು ಸರ್ಕಾರದ ಹಸ್ತಕ್ಷೇಪ ಮಾಡುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದೆ.

ಹರಿಯಾಣ ಮತ್ತು ಪಂಜಾಬ್‌ನ ರೈತರು ರಿಲಯನ್ಸ್ ಕಂಪೆನಿಗೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವುದು ಹಾಗೂ ಕಂಪೆನಿಯ ಜಿಯೋ ಟವರ್‌ಗಳ ಕೇಬಲ್‌ಗಳನ್ನು ಕತ್ತರಿಸುವುದು ಸೇರಿದಂತೆ ಕಂಪೆನಿಯ ಮೂಲಸೌಕರ್ಯಕ್ಕೆ ಹಾನಿ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಅಲ್ಲದೇ ಕಳೆದೆರಡು ತಿಂಗಳಿಂದ ಜಿಯೋ ಸಿಮ್‌ನಿಂದ ಹೊರಬರುವಂತೆ ನೀಡಿದ ರೈತರ ಕರೆಗೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು ಭಾರತದಲ್ಲಿ ಜಿಯೋ ಗಣನೀಯವಾಗಿ ಕುಸಿಸಿದೆ. ಈಗ ಭಾರತದ ಸಕ್ರಿಯ ಬಳಕೆದಾರರದಲ್ಲಿ ಏರ್‌ಟೆಲ್ ನಂಬರ್ ಒನ್ ಸ್ಥಾನದಲ್ಲಿದೆ.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

ರಿಲಯನ್ಸ್ ಕಂಪೆನಿಯು ಇಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಮೊರೆ ಹೋಗಿದ್ದು, ದುಷ್ಕರ್ಮಿಗಳು ನಡೆಸಿದ ಅಕ್ರಮ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಸರ್ಕಾರದ ತುರ್ತು ಹಸ್ತಕ್ಷೇಪ ಮಾಡುವಂತೆ ಕೋರಿದೆ.

“ಈ ಹಿಂಸಾಚಾರವು ತನ್ನ ಸಾವಿರಾರು ಉದ್ಯೋಗಿಗಳ ಜೀವಕ್ಕೆ ಅಪಾಯ ಉಂಟುಮಾಡಿದೆ. ಎರಡು ರಾಜ್ಯಗಳಲ್ಲಿ ಅಂಗಸಂಸ್ಥೆಗಳ ಪ್ರಮುಖ ಸಂವಹನ ಮೂಲಸೌಕರ್ಯ, ಮಾರಾಟ ಮತ್ತು ಸೇವಾ ಮಳಿಗೆಗಳಿಗೆ ಹಾನಿ ಮತ್ತು ಅಡ್ಡಿಯುಂಟಾಗುತ್ತಿದೆ. ಈ ವಿಧ್ವಂಸಕ ಕೃತ್ಯದಲ್ಲಿ ಪಾಲ್ಗೊಳ್ಳುವ ದುಷ್ಕರ್ಮಿಗಳನ್ನು ಪಟ್ಟಭದ್ರ ಹಿತಾಸಕ್ತಿಗಳು ಮತ್ತು ನಮ್ಮ ವ್ಯಾಪಾರಿ ಪ್ರತಿಸ್ಪರ್ಧಿಗಳು ಪ್ರಚೋದಿಸಿದ್ದಾರೆ ಹಾಗೂ ಸಹಾಯ ಮಾಡಿದ್ದಾರೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಪಟ್ಟಭದ್ರ ಹಿತಾಸಕ್ತಿಗಳು ರಿಲಯನ್ಸ್ ವಿರುದ್ಧ ನಿರಂತರ, ದುರುದ್ದೇಶಪೂರಿತ ಅಭಿಯಾನವನ್ನು ನಡೆಸಿ ರೈತರ ಆಂದೋಲನದ ಲಾಭವನ್ನು ಪಡೆದುಕೊಳ್ಳುತ್ತಿದೆ. ಗುತ್ತಿಗೆ ಕೃಷಿಯಲ್ಲಿ ತನಗೆ ಆಸಕ್ತಿ ಇಲ್ಲದಿರುವುದರಿಂದ ಕೃಷಿ ಕಾನೂನುಗಳೊಂದಿಗೆ ತನಗೂ ಯಾವುದೇ ಸಂಬಂಧವಿಲ್ಲ ಎಂದು ಕಂಪೆನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ’ಜಿಯೋ ಸಿಮ್ ತಿರಸ್ಕರಿಸಿ, ಬಿಎಸ್‌ಎನ್‌ಎಲ್‌ ಸಿಮ್‌ ಪ್ರೋತ್ಸಾಹಿಸಿ’: ಮಂಡ್ಯದಲ್ಲಿ AILU ಪ್ರತಿಭಟನೆ

ಕಾನೂನುಗಳನ್ನು ಗಮನದಲ್ಲಿಟ್ಟುಕೊಂಡು ಪಂಜಾಬ್ ಅಥವಾ ಹರಿಯಾಣದಲ್ಲಿ ತಾನು ಭೂಮಿಯನ್ನು ಖರೀದಿಸುವುದಿಲ್ಲ ಎಂದು ಕಂಪೆನಿಯೂ ಹೇಳಿದ್ದು, “ಭಾರತೀಯರ ಅನ್ನದಾತರಾಗಿರುವ ರೈತರ ಬಗ್ಗೆ ರಿಲಯನ್ಸ್‌ಗೆ ಅಪಾರವಾದ ಗೌರವ ಮತ್ತ ಕೃತಜ್ಞತೆಯಿದೆ” ಎಂದು ಹೇಳಿದೆ.

ಒಕ್ಕೂಟ ಸರ್ಕಾರವು ಜಾರಿ ಮಾಡಿದ ಕಾನೂನುಗಳ ಹಿಂದೆ ಮುಖೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಇದೆ ಎಂದು ಹಲವಾರು ರೈತರು ಈಗಾಗಲೆ ಆರೋಪಿಸಿದ್ದರು. ಈ ಕಾನೂನುಗಳು ತಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ಹಾನಿಕಾರಕವೆಂದು ಹೇಳುತ್ತಿರುವ ರೈತರು ಇದರ ವಿರುದ್ದ ಕಳೆದ 40 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪಂಜಾಬ್‌ ರಾಜ್ಯದಲ್ಲಿರುವ ಜಿಯೋ ರಿಲಯನ್ಸ್ ಜಿಯೋದ 9,000 ಟವರ್‌ಗಳಲ್ಲಿ 1,500 ಕ್ಕೂ ಹೆಚ್ಚು ಟವರ್‌ಗೆ ಹಾನಿ ಮಾಡಲಾಗಿದೆ ಎಂದು ಕಂಪೆನಿಯ ಪ್ರತಿನಿಧಿಯೊಬ್ಬರು ತಿಳಿಸಿದ್ದರು. ಘಟನೆಯ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂತಹ ವಿಧ್ವಂಸಕ ಕೃತ್ಯಗಳ ವಿರುದ್ಧ ಕಠಿಣ ಎಚ್ಚರಿಕೆ ನೀಡಿದ್ದು, ಇಂತಹ ಪ್ರಕರಣಗಳಲ್ಲಿ ಕಟ್ಟುನಿಟ್ಟಾಗಿ ವರ್ತಿಸುವಂತೆ ಪೊಲೀಸರಿಗೆ ಸೂಚಿಸಿದ್ದರು.

ಇದನ್ನೂ ಓದಿ: ಪಂಜಾಬ್: 1500 ಕ್ಕೂ ಹೆಚ್ಚು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ ರೈತ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...