Homeಕರ್ನಾಟಕಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಕುರುಬರ ಸಂಘದಲ್ಲಿ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲು ಹಣವಿಲ್ಲ. ಆದರೆ ಮೀಸಲು ಹೋರಾಟದ ಸಮಾವೇಶಗಳಿಗೆ ಲಕ್ಷಾಂತರ ರೂ ಎಲ್ಲಿಂದ ಹಣ ಬರುತ್ತಿದೆ ಎಂದು ಕೆ.ರಂಗನಾಥ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಕುರುಬ ಸಮುದಾಯವನ್ನು ST ವರ್ಗಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಜ.15 ರಿಂದ ಕಾಗಿನೆಲೆಯಿಂದ ಆರಂಭಗೊಳ್ಳಲಿರುವ ಪಾದಯಾತ್ರೆಗೆ ಸಿದ್ದತೆ ನಡೆದಿರುವಾಗಲೇ ಈ ಹೋರಾಟದ ಹಿಂದೆ ಕುರುಬ ಸಮುದಾಯವನ್ನು ಒಡೆಯುವ ರಾಜಕೀಯ ಪಿತೂರಿ ಇದೆ ಎಂಬ ಅನುಮಾನ ಪ್ರದೇಶ ಕುರುಬರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಸ್ಫೋಟಗೊಂಡಿದೆ.

ಭಾನುವಾರ ತುಮಕೂರಿನಲ್ಲಿ ಕರೆಯಲಾಗಿದ್ದ ಪ್ರದೇಶ ಕುರುಬರ ಸಂಘದ ರಾಜ್ಯಕಾರ‍್ಯಕಾರಿಣಿ ಸಭೆಯಲ್ಲಿ ಎಸ್ಟಿ ಮೀಸಲು ಹೋರಾಟ ವಿದ್ಯಮಾನಗಳು ಮುಖ್ಯವಿಚಾರವಾಗಿ ಚರ್ಚೆಗೆ ಬಂದಿದ್ದು, ಸಚಿವ ಕೆ.ಎಸ್ ಈಶ್ವರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಹೋರಾಟದ ನೈಜ ಉದ್ದೇಶವೇನು? ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರಗಿಟ್ಟು ನಡೆಯುತ್ತಿರುವ ಹೋರಾಟ ಕುರುಬ ಸಮುದಾಯದ ಎಲ್ಲಾ ನಾಯಕರನ್ನು ಒಳಗೊಂಡು ಯಾಕೆ ನಡೆಯುತ್ತಿಲ್ಲ ಎಂಬ ಪ್ರಶ್ನೆಗಳಿಗೆ ಕಾರ್ಯಕಾರಿಣಿ ಸಭೆಯಲ್ಲಿ ಸಮರ್ಪಕ ಉತ್ತರ ಸಿಗದೆ ಕೊನೆಗೊಂಡಿದೆ.

ಸಭೆಯಲ್ಲಿ ಸಂಘದ ಶಿವಮೊಗ್ಗ ಜಿಲ್ಲೆಯ ಪ್ರತಿನಿಧಿ ನಿರ್ದೇಶಕ ಕೆ.ರಂಗನಾಥ್ ಸೇರಿದಂತೆ ಉತ್ತರ ಕರ್ನಾಟಕದ ಅದರಲ್ಲೂ ಕುರುಬ ಪ್ರಾಬಲ್ಯ ಜಿಲ್ಲೆಗಳ ನಿರ್ದೇಶಕರುಗಳು ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲು ಬೇಕೆಂದು ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. “ಬಲವಾದ ಅನುಮಾನಗಳು ಜನರಲ್ಲಿ ವ್ಯಕ್ತವಾಗುತ್ತಿವೆ. ಅಲ್ಲದೆ ಇದರಲ್ಲಿ ಅನೇಕ ಗೊಂದಲಗಳಿವೆ. ಸಮಾಜದ ಅಗ್ರ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಈ ಹೋರಾಟದಲ್ಲಿ ಪಾಲ್ಗೊಳ್ಳುತ್ತಿಲ್ಲ ಇದು ಬಹುಮುಖ್ಯವಾಗಿ ಗೊಂದಲಕ್ಕೆ ಕಾರಣವಾಗಿದೆ. ಇದನ್ನು ಮೊದಲು ನಿವಾರಿಸಬೇಕು. ಅಲ್ಲಿಯವರೆಗೂ ಮೀಸಲು ಹೋರಾಟದಲ್ಲಿ ತಾವು ಭಾಗವಹಿಸುವುದಿಲ್ಲ” ಎಂದು ಘೋಷಿಸಿದ್ದಾರೆ.

ಕುರುಬ ಸಮುದಾಯ ಎಸ್ಟಿ ಸೇರ್ಪಡೆ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿಯನ್ನಾಗಿ ನನ್ನನ್ನು ನೇಮಕ ಮಾಡಲಾಗಿದೆ. ಆದರೆ ಹೋರಾಟಕ್ಕೆ ಸಂಬಂಧ ಪಟ್ಟ ಅನೇಕ ವಿಚಾರಗಳು ನನಗೆ ಗೊತ್ತಾಗುತ್ತಿಲ್ಲ. ಈ ಹೋರಾಟದ ಹಿಂದೆ ಆರ್ ಎಸ್ ಎಸ್ ಪ್ರಾಯೋಜಿತ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿವೆ. ಕುರುಬರ ಸಂಘದಲ್ಲಿ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲು ಹಣವಿಲ್ಲ. ಆದರೆ ಮೀಸಲು ಹೋರಾಟದ ಸಮಾವೇಶಗಳಿಗೆ ಲಕ್ಷಾಂತರ ರೂಪಾಯಿಗಳು ಖರ್ಚು ಮಾಡಲಾಗುತ್ತಿದೆ. ಇದಕ್ಕೆಲ್ಲಾ ಎಲ್ಲಿಂದ ಹಣ ಬರುತ್ತಿದೆ ಎಂದು ಕೆ.ರಂಗನಾಥ್ ಪ್ರಶ್ನಿಸಿದ್ದಾರೆ.

ಈ ಹೋರಾಟ ಶಿವಮೊಗ್ಗ ಕೇಂದ್ರಿತವಾಗಿ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ ಅವರು ಹೋರಾಟದಿಂದ ದೂರ ಉಳಿದಿದ್ದಾರೆ. ಇದೂ ಕೂಡ ಸಾರ್ವಜನಿಕ ಚರ್ಚೆಗೆ ಅವಕಾಶವಾಗಿದೆ. ಈ ಹೋರಾಟ ಕುರಿತು ಸಿದ್ದರಾಮಯ್ಯ ಅವರು ಎತ್ತಿರುವ ಮತ್ತು ಸಾರ್ವಜನಿಕವಾಗಿ ಕೇಳಿಬರುತ್ತಿರುವ ಪ್ರಶ್ನೆಗಳಿಂದ ಸಮುದಾಯವೂ ಗೊಂದಲದಲ್ಲಿದೆ. ಸಂಘವು ಮೊದಲು ಇದನ್ನು ಪರಿಹರಿಸಬೇಕು. ಎಲ್ಲಿಯವರೆಗೂ ಸಿದ್ದರಾಮಯ್ಯ ಅವರು ಈ ಹೋರಾಟದಲ್ಲಿ ಪಾಲ್ಗೊಳ್ಳುವುದಿಲ್ಲವೋ ಅಲ್ಲಿಯವರೆಗೂ ತಾವು ಭಾಗವಹಿಸದೆ ತಟಸ್ಥರಾಗಿರುತ್ತೇವೆ ಎಂದು ರಂಗನಾಥ್ ಸೇರಿದಂತೆ ಅನೇಕ ನಿರ್ದೇಶಕರುಗಳು ಘೋಷಿಸಿದ್ದು, ಇದು ಸಂಘದ ಅಧ್ಯಕ್ಷರಿಗೆ ಮತ್ತು ಹೋರಾಟ ಪರವಹಿಸಿದ್ದ ಹಲವು ನಿರ್ದೇಶಕರಿಗೆ ನುಂಗಲಾರದ ತುತ್ತಾಗಿದೆ. ಒಂದು ಹಂತದಲ್ಲಿ ರಂಗನಾಥ್ ಈ ಗೊಂದಲ ಬಗೆಹರಿಸದಿದ್ದರೆ ನಿರ್ದೇಶಕ ಸ್ಥಾನಕ್ಕೆ ತಾವು ರಾಜೀನಾಮೆ ನೀಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಕೆ.ರಂಗನಾಥ್

ಇದಕ್ಕೆ ಮಣಿದ ರಾಜ್ಯ ಕಾರ‍್ಯಕಾರಿಣಿಯು ಜ.5 ರಂದು ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನೊಳಗೊಂಡಂತೆ ನಿಯೋಗವೊಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರಿಗಿರಬಹುದಾದ ಅನುಮಾನಗಳನ್ನು ಬಗೆಹರಿಸಿ ಹೋರಾಟಕ್ಕೆ ಕರೆತರುವ ಭರವಸೆಯನ್ನು ನೀಡಿದೆ. ಆದರೆ ಈ ಹೋರಾಟ ಹಿಂದೆ ಆರ್ ಎಸ್ ಎಸ್ ಇದೆ ಎಂದು ಸಿದ್ದರಾಮಯ್ಯ ಅವರೇ ಬಹಿರಂಗವಾಗಿ ಆರೋಪಿಸಿರುವುದರಿಂದ ಅವರನ್ನು ಮನವೊಲಿಸುವಲ್ಲಿ ರಾಜ್ಯ ಕುರುಬ ಸಂಘದ ಪದಾಧಿಕಾರಿಗಳು ಯಶಸ್ವಿಯಾಗುವರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕೆಂಬ ಹೋರಾಟ ಸಮಿತಿಗೆ ಸಚಿವ ಕೆ.ಎಸ್ ಈಶ್ವರಪ್ಪ ಅವರೇ ಗೌರವಾಧ್ಯಕ್ಷರಾಗಿದ್ದಾರೆ. ಅವರ ಹಿಂಬಾಲಕರೆ ಆಗಿರುವ ವಿರೂಪಾಕ್ಷಪ್ಪ ಅಧ್ಯಕ್ಷರಾಗಿದ್ದಾರೆ. ಅಹಿಂದ ಪರ ಹೋರಾಟದ ಹೆಸರಿನಲ್ಲಿ ಅಸ್ತಿತ್ವಕ್ಕೆ ಬಂದು ಈಗಾಗಲೆ ಬರಖಾಸ್ತು ಗೊಂಡಿರುವ ಸಂಗೊಳ್ಳಿರಾಯಣ್ಣ ಬ್ರಿಗೇಡ್ ನಲ್ಲಿದ್ದ ಬಹುತೇಕರು ಈ ಹೋರಾಟ ಮುಂಚೂಣಿ ನಾಯಕರಾಗಿದ್ದಾರೆ. ಈ ವಿಷಯದಲ್ಲಿ ಕಾಗಿನಲೆ ಶ್ರೀಗಳ ನಡೆ ಕೂಡ ಕುರುಬ ಸಮುದಾಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಅದಕ್ಕೂ ಮುಖ್ಯವಾಗಿ ರಾಜ್ಯದಲ್ಲಿ ಬಿಜೆಪಿ ಯೇ ಅಧಿಕಾರದಲ್ಲಿದ್ದು, ಈಶ್ವರಪ್ಪ ಅವರು ಹಿರಿಯ ಪ್ರಭಾವಿ ಸಚಿವರೂ ಆಗಿರುವಾಗ ಬೀದಿ ಹೋರಾಟ ಮಾಡುವ ಔಚಿತ್ಯವಾದರೂ ಏನು? ಸರ್ಕಾರವೇ ಕುರುಬ ಸಮುದಾಯದ ಬೇಡಿಕೆಯನ್ನು ಏಕೆ ಅನುಮೋದಿಸಬಾರದು? ಎಂಬ ಪ್ರಶ್ನೆಗಳು ಎದ್ದಿವೆ.

ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸಮಸ್ತ ಹಿಂದುಳಿದ ವರ್ಗಗಳು ಪ್ರಬಲನಾಯಕರಾಗಿ ಬೆಳೆದಿದ್ದಾರೆ. ಆಡಳಿತ ರೂಢ ಬಿಜೆಪಿಗೆ ರಾಜಕೀಯ ಸಿಂಹಸ್ವಪ್ನವಾಗಿದ್ದಾರೆ. ಇದು ಬಿಜೆಪಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ರಾಜ್ಯದಲ್ಲಿ ಬಲಿಷ್ಠ ಹಿಂದುಳಿದ ವರ್ಗವಾಗಿರುವ ಕುರುಬ ಸಮುದಾಯದ ಒಗ್ಗಟ್ಟನ್ನು ಒಡೆದು ಹೋಳು ಮಾಡುವುದು ಮತ್ತು ಆ ಮೂಲಕ ಸಿದ್ದರಾಮಯ್ಯ ಅವರ ಪ್ರಾಬಲ್ಯವನ್ನು ನೆಲಕಚ್ಚಿಸುವ ರಾಜಕೀಯ ಸಂಚಿಗೆ ಸಮುದಾಯವನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂಬ ಮಾತುಗಳು ಕುರುಬ ಸಮುದಾಯದ್ದಷ್ಟೆ ಅಲ್ಲ, ರಾಜಕೀಯ ವಿಶ್ಲೇಷಕರದ್ದೂ ಆಗಿದೆ.

ಎನ್.ರವಿಕುಮಾರ್ ಟೆಲೆಕ್ಸ್

(ಪತ್ರಕರ್ತರು ಮತ್ತು ಯುವ ಬರಹಗಾರರು)


ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸ್.ಟಿ. ಸೇರ್ಪಡೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರವರಿಗೆ ಖಚಿತವಾದ ಚಿತ್ರಣ ಇದೆ…
    ಆದರೆ ಉಳಿದ ಹೋರಾಟಗಾರಿಗೆ ಇದರ ಬಗ್ಗೆ ಮನವರಿಕೆ ಇಲ್ಲ…. ಪ.ಪಂಗಡ ಕ್ಕೆ ಸೇರಲು ಬುಡಕಟ್ಟು ಲಕ್ಷಣಗಳಾದ ಭಾಷೆ, ಉಡುಪು, ಊಟೋಪಚಾರ,ದೈವಿಕ ಪರಿಕಲ್ಪನೆ ಆಚಾರ ವಿಚಾರ… ಮತ್ತು ಮುಂತಾದ ವಿಚಾರಗಳನ್ನು ಸಿದ್ದರಾಮಯ್ಯರವರಿಗೆ ಕಲ್ಪನೆ ಇದ್ದು ಇದರಿಂದ ದೂರ ಉಳಿದಿದ್ದಾರೆ…

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...