Homeಕರ್ನಾಟಕಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಕುರುಬರ ಸಂಘದಲ್ಲಿ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲು ಹಣವಿಲ್ಲ. ಆದರೆ ಮೀಸಲು ಹೋರಾಟದ ಸಮಾವೇಶಗಳಿಗೆ ಲಕ್ಷಾಂತರ ರೂ ಎಲ್ಲಿಂದ ಹಣ ಬರುತ್ತಿದೆ ಎಂದು ಕೆ.ರಂಗನಾಥ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಕುರುಬ ಸಮುದಾಯವನ್ನು ST ವರ್ಗಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಜ.15 ರಿಂದ ಕಾಗಿನೆಲೆಯಿಂದ ಆರಂಭಗೊಳ್ಳಲಿರುವ ಪಾದಯಾತ್ರೆಗೆ ಸಿದ್ದತೆ ನಡೆದಿರುವಾಗಲೇ ಈ ಹೋರಾಟದ ಹಿಂದೆ ಕುರುಬ ಸಮುದಾಯವನ್ನು ಒಡೆಯುವ ರಾಜಕೀಯ ಪಿತೂರಿ ಇದೆ ಎಂಬ ಅನುಮಾನ ಪ್ರದೇಶ ಕುರುಬರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಸ್ಫೋಟಗೊಂಡಿದೆ.

ಭಾನುವಾರ ತುಮಕೂರಿನಲ್ಲಿ ಕರೆಯಲಾಗಿದ್ದ ಪ್ರದೇಶ ಕುರುಬರ ಸಂಘದ ರಾಜ್ಯಕಾರ‍್ಯಕಾರಿಣಿ ಸಭೆಯಲ್ಲಿ ಎಸ್ಟಿ ಮೀಸಲು ಹೋರಾಟ ವಿದ್ಯಮಾನಗಳು ಮುಖ್ಯವಿಚಾರವಾಗಿ ಚರ್ಚೆಗೆ ಬಂದಿದ್ದು, ಸಚಿವ ಕೆ.ಎಸ್ ಈಶ್ವರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಹೋರಾಟದ ನೈಜ ಉದ್ದೇಶವೇನು? ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರಗಿಟ್ಟು ನಡೆಯುತ್ತಿರುವ ಹೋರಾಟ ಕುರುಬ ಸಮುದಾಯದ ಎಲ್ಲಾ ನಾಯಕರನ್ನು ಒಳಗೊಂಡು ಯಾಕೆ ನಡೆಯುತ್ತಿಲ್ಲ ಎಂಬ ಪ್ರಶ್ನೆಗಳಿಗೆ ಕಾರ್ಯಕಾರಿಣಿ ಸಭೆಯಲ್ಲಿ ಸಮರ್ಪಕ ಉತ್ತರ ಸಿಗದೆ ಕೊನೆಗೊಂಡಿದೆ.

ಸಭೆಯಲ್ಲಿ ಸಂಘದ ಶಿವಮೊಗ್ಗ ಜಿಲ್ಲೆಯ ಪ್ರತಿನಿಧಿ ನಿರ್ದೇಶಕ ಕೆ.ರಂಗನಾಥ್ ಸೇರಿದಂತೆ ಉತ್ತರ ಕರ್ನಾಟಕದ ಅದರಲ್ಲೂ ಕುರುಬ ಪ್ರಾಬಲ್ಯ ಜಿಲ್ಲೆಗಳ ನಿರ್ದೇಶಕರುಗಳು ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲು ಬೇಕೆಂದು ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. “ಬಲವಾದ ಅನುಮಾನಗಳು ಜನರಲ್ಲಿ ವ್ಯಕ್ತವಾಗುತ್ತಿವೆ. ಅಲ್ಲದೆ ಇದರಲ್ಲಿ ಅನೇಕ ಗೊಂದಲಗಳಿವೆ. ಸಮಾಜದ ಅಗ್ರ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಈ ಹೋರಾಟದಲ್ಲಿ ಪಾಲ್ಗೊಳ್ಳುತ್ತಿಲ್ಲ ಇದು ಬಹುಮುಖ್ಯವಾಗಿ ಗೊಂದಲಕ್ಕೆ ಕಾರಣವಾಗಿದೆ. ಇದನ್ನು ಮೊದಲು ನಿವಾರಿಸಬೇಕು. ಅಲ್ಲಿಯವರೆಗೂ ಮೀಸಲು ಹೋರಾಟದಲ್ಲಿ ತಾವು ಭಾಗವಹಿಸುವುದಿಲ್ಲ” ಎಂದು ಘೋಷಿಸಿದ್ದಾರೆ.

ಕುರುಬ ಸಮುದಾಯ ಎಸ್ಟಿ ಸೇರ್ಪಡೆ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿಯನ್ನಾಗಿ ನನ್ನನ್ನು ನೇಮಕ ಮಾಡಲಾಗಿದೆ. ಆದರೆ ಹೋರಾಟಕ್ಕೆ ಸಂಬಂಧ ಪಟ್ಟ ಅನೇಕ ವಿಚಾರಗಳು ನನಗೆ ಗೊತ್ತಾಗುತ್ತಿಲ್ಲ. ಈ ಹೋರಾಟದ ಹಿಂದೆ ಆರ್ ಎಸ್ ಎಸ್ ಪ್ರಾಯೋಜಿತ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿವೆ. ಕುರುಬರ ಸಂಘದಲ್ಲಿ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲು ಹಣವಿಲ್ಲ. ಆದರೆ ಮೀಸಲು ಹೋರಾಟದ ಸಮಾವೇಶಗಳಿಗೆ ಲಕ್ಷಾಂತರ ರೂಪಾಯಿಗಳು ಖರ್ಚು ಮಾಡಲಾಗುತ್ತಿದೆ. ಇದಕ್ಕೆಲ್ಲಾ ಎಲ್ಲಿಂದ ಹಣ ಬರುತ್ತಿದೆ ಎಂದು ಕೆ.ರಂಗನಾಥ್ ಪ್ರಶ್ನಿಸಿದ್ದಾರೆ.

ಈ ಹೋರಾಟ ಶಿವಮೊಗ್ಗ ಕೇಂದ್ರಿತವಾಗಿ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ ಅವರು ಹೋರಾಟದಿಂದ ದೂರ ಉಳಿದಿದ್ದಾರೆ. ಇದೂ ಕೂಡ ಸಾರ್ವಜನಿಕ ಚರ್ಚೆಗೆ ಅವಕಾಶವಾಗಿದೆ. ಈ ಹೋರಾಟ ಕುರಿತು ಸಿದ್ದರಾಮಯ್ಯ ಅವರು ಎತ್ತಿರುವ ಮತ್ತು ಸಾರ್ವಜನಿಕವಾಗಿ ಕೇಳಿಬರುತ್ತಿರುವ ಪ್ರಶ್ನೆಗಳಿಂದ ಸಮುದಾಯವೂ ಗೊಂದಲದಲ್ಲಿದೆ. ಸಂಘವು ಮೊದಲು ಇದನ್ನು ಪರಿಹರಿಸಬೇಕು. ಎಲ್ಲಿಯವರೆಗೂ ಸಿದ್ದರಾಮಯ್ಯ ಅವರು ಈ ಹೋರಾಟದಲ್ಲಿ ಪಾಲ್ಗೊಳ್ಳುವುದಿಲ್ಲವೋ ಅಲ್ಲಿಯವರೆಗೂ ತಾವು ಭಾಗವಹಿಸದೆ ತಟಸ್ಥರಾಗಿರುತ್ತೇವೆ ಎಂದು ರಂಗನಾಥ್ ಸೇರಿದಂತೆ ಅನೇಕ ನಿರ್ದೇಶಕರುಗಳು ಘೋಷಿಸಿದ್ದು, ಇದು ಸಂಘದ ಅಧ್ಯಕ್ಷರಿಗೆ ಮತ್ತು ಹೋರಾಟ ಪರವಹಿಸಿದ್ದ ಹಲವು ನಿರ್ದೇಶಕರಿಗೆ ನುಂಗಲಾರದ ತುತ್ತಾಗಿದೆ. ಒಂದು ಹಂತದಲ್ಲಿ ರಂಗನಾಥ್ ಈ ಗೊಂದಲ ಬಗೆಹರಿಸದಿದ್ದರೆ ನಿರ್ದೇಶಕ ಸ್ಥಾನಕ್ಕೆ ತಾವು ರಾಜೀನಾಮೆ ನೀಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಕೆ.ರಂಗನಾಥ್

ಇದಕ್ಕೆ ಮಣಿದ ರಾಜ್ಯ ಕಾರ‍್ಯಕಾರಿಣಿಯು ಜ.5 ರಂದು ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನೊಳಗೊಂಡಂತೆ ನಿಯೋಗವೊಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರಿಗಿರಬಹುದಾದ ಅನುಮಾನಗಳನ್ನು ಬಗೆಹರಿಸಿ ಹೋರಾಟಕ್ಕೆ ಕರೆತರುವ ಭರವಸೆಯನ್ನು ನೀಡಿದೆ. ಆದರೆ ಈ ಹೋರಾಟ ಹಿಂದೆ ಆರ್ ಎಸ್ ಎಸ್ ಇದೆ ಎಂದು ಸಿದ್ದರಾಮಯ್ಯ ಅವರೇ ಬಹಿರಂಗವಾಗಿ ಆರೋಪಿಸಿರುವುದರಿಂದ ಅವರನ್ನು ಮನವೊಲಿಸುವಲ್ಲಿ ರಾಜ್ಯ ಕುರುಬ ಸಂಘದ ಪದಾಧಿಕಾರಿಗಳು ಯಶಸ್ವಿಯಾಗುವರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕೆಂಬ ಹೋರಾಟ ಸಮಿತಿಗೆ ಸಚಿವ ಕೆ.ಎಸ್ ಈಶ್ವರಪ್ಪ ಅವರೇ ಗೌರವಾಧ್ಯಕ್ಷರಾಗಿದ್ದಾರೆ. ಅವರ ಹಿಂಬಾಲಕರೆ ಆಗಿರುವ ವಿರೂಪಾಕ್ಷಪ್ಪ ಅಧ್ಯಕ್ಷರಾಗಿದ್ದಾರೆ. ಅಹಿಂದ ಪರ ಹೋರಾಟದ ಹೆಸರಿನಲ್ಲಿ ಅಸ್ತಿತ್ವಕ್ಕೆ ಬಂದು ಈಗಾಗಲೆ ಬರಖಾಸ್ತು ಗೊಂಡಿರುವ ಸಂಗೊಳ್ಳಿರಾಯಣ್ಣ ಬ್ರಿಗೇಡ್ ನಲ್ಲಿದ್ದ ಬಹುತೇಕರು ಈ ಹೋರಾಟ ಮುಂಚೂಣಿ ನಾಯಕರಾಗಿದ್ದಾರೆ. ಈ ವಿಷಯದಲ್ಲಿ ಕಾಗಿನಲೆ ಶ್ರೀಗಳ ನಡೆ ಕೂಡ ಕುರುಬ ಸಮುದಾಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಅದಕ್ಕೂ ಮುಖ್ಯವಾಗಿ ರಾಜ್ಯದಲ್ಲಿ ಬಿಜೆಪಿ ಯೇ ಅಧಿಕಾರದಲ್ಲಿದ್ದು, ಈಶ್ವರಪ್ಪ ಅವರು ಹಿರಿಯ ಪ್ರಭಾವಿ ಸಚಿವರೂ ಆಗಿರುವಾಗ ಬೀದಿ ಹೋರಾಟ ಮಾಡುವ ಔಚಿತ್ಯವಾದರೂ ಏನು? ಸರ್ಕಾರವೇ ಕುರುಬ ಸಮುದಾಯದ ಬೇಡಿಕೆಯನ್ನು ಏಕೆ ಅನುಮೋದಿಸಬಾರದು? ಎಂಬ ಪ್ರಶ್ನೆಗಳು ಎದ್ದಿವೆ.

ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸಮಸ್ತ ಹಿಂದುಳಿದ ವರ್ಗಗಳು ಪ್ರಬಲನಾಯಕರಾಗಿ ಬೆಳೆದಿದ್ದಾರೆ. ಆಡಳಿತ ರೂಢ ಬಿಜೆಪಿಗೆ ರಾಜಕೀಯ ಸಿಂಹಸ್ವಪ್ನವಾಗಿದ್ದಾರೆ. ಇದು ಬಿಜೆಪಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ರಾಜ್ಯದಲ್ಲಿ ಬಲಿಷ್ಠ ಹಿಂದುಳಿದ ವರ್ಗವಾಗಿರುವ ಕುರುಬ ಸಮುದಾಯದ ಒಗ್ಗಟ್ಟನ್ನು ಒಡೆದು ಹೋಳು ಮಾಡುವುದು ಮತ್ತು ಆ ಮೂಲಕ ಸಿದ್ದರಾಮಯ್ಯ ಅವರ ಪ್ರಾಬಲ್ಯವನ್ನು ನೆಲಕಚ್ಚಿಸುವ ರಾಜಕೀಯ ಸಂಚಿಗೆ ಸಮುದಾಯವನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂಬ ಮಾತುಗಳು ಕುರುಬ ಸಮುದಾಯದ್ದಷ್ಟೆ ಅಲ್ಲ, ರಾಜಕೀಯ ವಿಶ್ಲೇಷಕರದ್ದೂ ಆಗಿದೆ.

ಎನ್.ರವಿಕುಮಾರ್ ಟೆಲೆಕ್ಸ್

(ಪತ್ರಕರ್ತರು ಮತ್ತು ಯುವ ಬರಹಗಾರರು)


ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸ್.ಟಿ. ಸೇರ್ಪಡೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರವರಿಗೆ ಖಚಿತವಾದ ಚಿತ್ರಣ ಇದೆ…
    ಆದರೆ ಉಳಿದ ಹೋರಾಟಗಾರಿಗೆ ಇದರ ಬಗ್ಗೆ ಮನವರಿಕೆ ಇಲ್ಲ…. ಪ.ಪಂಗಡ ಕ್ಕೆ ಸೇರಲು ಬುಡಕಟ್ಟು ಲಕ್ಷಣಗಳಾದ ಭಾಷೆ, ಉಡುಪು, ಊಟೋಪಚಾರ,ದೈವಿಕ ಪರಿಕಲ್ಪನೆ ಆಚಾರ ವಿಚಾರ… ಮತ್ತು ಮುಂತಾದ ವಿಚಾರಗಳನ್ನು ಸಿದ್ದರಾಮಯ್ಯರವರಿಗೆ ಕಲ್ಪನೆ ಇದ್ದು ಇದರಿಂದ ದೂರ ಉಳಿದಿದ್ದಾರೆ…

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...