Homeಕರ್ನಾಟಕಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಗ್ರಾಕೂಸ್‌ ವತಿಯಿಂದ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

- Advertisement -
- Advertisement -

ಗ್ರಾಮ ಪಂಚಾಯ್ತಿ ಚುನಾವಣೆಯ ಫಲಿತಾಂಶ ಹೊರಬಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಕಸರತ್ತುಗಳು ಆರಂಭವಾಗಿವೆ. ಈ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ಸೇರದೆ ಸ್ವತಂತ್ರವಾಗಿ 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ದಾಖಲೆಯ 498 ಜನರು ಆಯ್ಕೆಯಾಗುವ ಮೂಲಕ ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್) ಸಾಧನೆಗೈದಿದೆ.

ಗ್ರಾಮೀಣ ಕೂಲಿಕಾರರ ಸಂಘಟನೆಯು ರಾಯಚೂರು ಜಿಲ್ಲಾ ಕೇಂದ್ರಿತವಾಗಿ ರಾಜ್ಯದ್ಯಾಂತ ಹಲವು ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರ್ಮಿಕರು, ಮಹಿಳೆಯರನ್ನು ಸಂಘಟಿಸಿ ಅವರ ಸಬಲೀಕರಣಕ್ಕಾಗಿ ಹಲವು ದಶಕಗಳಿಂದ ಹೋರಾಡುತ್ತಿದೆ. ಉದ್ಯೋಗ ಖಾತ್ರಿಯ ಸಮರ್ಪಕ ಅನುಷ್ಠಾನಕ್ಕಾಗಿ, ಮದ್ಯನಿಷೇಧಕ್ಕಾಗಿ ಅದು ಹಲವು ಹೋರಾಟಗಳನ್ನು ಸಂಘಟಿಸಿದೆ. ಅದು 2015ರ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಸುಮಾರು 300 ಜನರು ಆಯ್ಕೆಯಾಗುವುದರೊಂದಿಗೆ ಗಮನ ಸೆಳೆದಿತ್ತು.

ಈ ಬಾರಿ ರಾಯಚೂರಿನೊಂದಿಗೆ ಸುಮಾರು 10 ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರರ ಸಂಘಟನೆ ಮತ್ತು ಮಹಿಳಾ ಸಂಘಟನೆಗಳು 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೆವು. ಅವರಲ್ಲಿ ದಾಖಲೆಯ 498 ಜನರು ಆಯ್ಕೆಯಾಗಿದ್ದಾರೆ. ಅಂದರೆ ಶೇ. 70ರಷ್ಟು ಜನರು ಆಯ್ಕೆಯಾಗಿದ್ದಾರೆ. 4-5 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಕೂಸ್ ಸಂಪೂರ್ಣ‌ ಬಹುಮತ ಹೊಂದಿದೆ. 100ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿಗಳಲ್ಲಿ ಶೇ.10-50ರವರೆಗೆ ನಮ್ಮ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಗ್ರಾಕೂಸ್‌ನ ಮುಖಂಡರಾದ ಅಭಯ್ ತಿಳಿಸಿದ್ದಾರೆ.

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಇದು ಅತಿ ಹೆಚ್ಚಿನದಾಗಿದೆ. ಅಂದರೆ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

ಈ ಬಾರಿ ಬಿಜೆಪಿ, ಕಾಂಗ್ರೆಸ್‌ನಂತಹ ದೊಡ್ಡ ರಾಜಕೀಯ ಪಕ್ಷಗಳು ನೇರವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭಾಗವಹಿಸಿದ್ದವು. ಮುಖ್ಯವಾಗಿ ಬಿಜೆಪಿಯು ತಮ್ಮ ಶಾಸಕರು, ಜಿ.ಪಂ/ತಾ.ಪಂ ಸಾಕಷ್ಟು ಹಣದ ಹೊಳೆ ಹರಿಸಿ ಚುನಾವಣೆ ಗೆಲ್ಲುವಂತೆ ನಿರ್ದೇಶನ ನೀಡಿತ್ತು. ಆ ಅಭ್ಯರ್ಥಿಗಳು ಒಂದು ವಾರ್ಡ್/ಸ್ಥಾನಕ್ಕೆ ಕನಿಷ್ಠ 3-4 ಲಕ್ಷ ರೂ ಹಣವನ್ನು ಖರ್ಚು ಮಾಡಿದ್ದವು. ಆದರೆ ನಮ್ಮ ಅಭ್ಯರ್ಥಿಗಳು ಕೇವಲ 2000-10000 ರೂ ಮಾತ್ರ ಖರ್ಚು ಮಾಡಿ ಪ್ರಾಮಾಣಿಕವಾಗಿ ಆಯ್ಕೆಯಾಗಿದ್ದೇವೆ ಎಂದು ಅಭಯ್ ಹೇಳಿದ್ದಾರೆ.

ಈ ಚುನಾವಣಾ ಖರ್ಚಿಗಾಗಿ ನಮ್ಮ ಸಂಘಟನೆಯ ಪ್ರತಿಯೊಂದು ಕುಟುಂಬವು ತಲಾ 50 ರೂಗಳ ದೇಣಿಗೆ ನೀಡಿವೆ. ಈ ಹಣದಿಂದಲೇ ನಾವು ಚುನಾವಣೆ ಎದುರಿಸಿದ್ದೇವೆ. ಅಲ್ಲದೇ ಪ್ರಾಮಾಣಿಕವಾಗಿ ಮತ ಕೇಳುವಂತೆ ಮತ್ತು ಗೆದ್ದ ನಂತರ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನಮ್ಮ ಅಭ್ಯರ್ಥಿಗಳಿಗೆ ನಾವು ಷರತ್ತುಗಳನ್ನು ವಿಧಿಸಿದ್ದೆವು. ಈ ಷರತ್ತುಗಳನ್ನು ಪಾಲಿಸಲಾಗದೇ ಸುಮಾರು 150-200 ಜನರು ಚುನಾವಣೆಗೆ ನಿಂತು ಆಯ್ಕೆಯಾಗಿದ್ದಾರೆ. ಆದರೆ ಅವರನ್ನು ನಮ್ಮವರೆಂದು ನಾವು ಭಾವಿಸಿಲ್ಲ ಮತ್ತು ನಮ್ಮ ಫಲಿತಾಂಶದಲ್ಲಿ ಅವರನ್ನು ಸೇರಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಆಯ್ಕೆಯಾದ ಅಭ್ಯರ್ಥಿಗಳು ಮತ್ತು ಆಯ್ಕೆಯಾಗದ ಅಭ್ಯರ್ಥಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಗ್ರಾಮಗಳ ಅಭಿವೃದ್ದಿ ಪ್ರಾಮಾಣಿಕವಾಗಿ ಕೆಲಸ ಮಾಡುವುದು ನಮ್ಮ ಗುರು ಎಂದು ಗ್ರಾಕೂಸ್ ಹೇಳಿಕೆಯಲ್ಲಿ ತಿಳಿಸಿದೆ.

ಮದ್ಯ ನಿಷೇಧ ಆಂದೋಲನದ ಹೋರಾಟಗಾರ್ತಿ ಸ್ವರ್ಣ ಭಟ್ ಮಾತನಾಡಿ “ನಮ್ಮ ಅಭ್ಯರ್ಥಿಗಳಿಗೆ ಪ್ರಾಮಾಣಿಕವಾಗಿ ಚುನಾವಣೆ ಎದುರಿಸುವಂತೆ ಷರತ್ತುಗಳನ್ನು ವಿಧಿಸಿದ್ದೆವು. ಅಲ್ಲದೆ ಬೇರೆ ಪಕ್ಷದ ಉತ್ತಮ ಅಭ್ಯರ್ಥಿಗಳಿಗೂ ಬೆಂಬಲ ನೀಡಿದ್ದೇವೆ. ಆದರೆ ಅದಕ್ಕೂ ಮುನ್ನ ಅವರವರ ಧಾರ್ಮಿಕ ನಂಬಿಕೆಗನುಗುಣವಾಗಿ ದೇವಸ್ಥಾನ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಅವರಿಂದ ಪ್ರಾಮಾಣಿಕವಾಗಿ ಜನರ ಕೆಲಸ ಮಾಡುತ್ತೇವೆ. ಭ್ರಷ್ಟಾಚಾರ ಎಸಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿಸಿದ್ದೇವೆ” ಎಂದಿದ್ದಾರೆ.


ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...