Homeಕರ್ನಾಟಕಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಗ್ರಾಕೂಸ್‌ ವತಿಯಿಂದ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

- Advertisement -
- Advertisement -

ಗ್ರಾಮ ಪಂಚಾಯ್ತಿ ಚುನಾವಣೆಯ ಫಲಿತಾಂಶ ಹೊರಬಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಕಸರತ್ತುಗಳು ಆರಂಭವಾಗಿವೆ. ಈ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ಸೇರದೆ ಸ್ವತಂತ್ರವಾಗಿ 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ದಾಖಲೆಯ 498 ಜನರು ಆಯ್ಕೆಯಾಗುವ ಮೂಲಕ ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್) ಸಾಧನೆಗೈದಿದೆ.

ಗ್ರಾಮೀಣ ಕೂಲಿಕಾರರ ಸಂಘಟನೆಯು ರಾಯಚೂರು ಜಿಲ್ಲಾ ಕೇಂದ್ರಿತವಾಗಿ ರಾಜ್ಯದ್ಯಾಂತ ಹಲವು ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರ್ಮಿಕರು, ಮಹಿಳೆಯರನ್ನು ಸಂಘಟಿಸಿ ಅವರ ಸಬಲೀಕರಣಕ್ಕಾಗಿ ಹಲವು ದಶಕಗಳಿಂದ ಹೋರಾಡುತ್ತಿದೆ. ಉದ್ಯೋಗ ಖಾತ್ರಿಯ ಸಮರ್ಪಕ ಅನುಷ್ಠಾನಕ್ಕಾಗಿ, ಮದ್ಯನಿಷೇಧಕ್ಕಾಗಿ ಅದು ಹಲವು ಹೋರಾಟಗಳನ್ನು ಸಂಘಟಿಸಿದೆ. ಅದು 2015ರ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಸುಮಾರು 300 ಜನರು ಆಯ್ಕೆಯಾಗುವುದರೊಂದಿಗೆ ಗಮನ ಸೆಳೆದಿತ್ತು.

ಈ ಬಾರಿ ರಾಯಚೂರಿನೊಂದಿಗೆ ಸುಮಾರು 10 ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರರ ಸಂಘಟನೆ ಮತ್ತು ಮಹಿಳಾ ಸಂಘಟನೆಗಳು 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೆವು. ಅವರಲ್ಲಿ ದಾಖಲೆಯ 498 ಜನರು ಆಯ್ಕೆಯಾಗಿದ್ದಾರೆ. ಅಂದರೆ ಶೇ. 70ರಷ್ಟು ಜನರು ಆಯ್ಕೆಯಾಗಿದ್ದಾರೆ. 4-5 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಕೂಸ್ ಸಂಪೂರ್ಣ‌ ಬಹುಮತ ಹೊಂದಿದೆ. 100ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿಗಳಲ್ಲಿ ಶೇ.10-50ರವರೆಗೆ ನಮ್ಮ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಗ್ರಾಕೂಸ್‌ನ ಮುಖಂಡರಾದ ಅಭಯ್ ತಿಳಿಸಿದ್ದಾರೆ.

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಇದು ಅತಿ ಹೆಚ್ಚಿನದಾಗಿದೆ. ಅಂದರೆ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

ಈ ಬಾರಿ ಬಿಜೆಪಿ, ಕಾಂಗ್ರೆಸ್‌ನಂತಹ ದೊಡ್ಡ ರಾಜಕೀಯ ಪಕ್ಷಗಳು ನೇರವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭಾಗವಹಿಸಿದ್ದವು. ಮುಖ್ಯವಾಗಿ ಬಿಜೆಪಿಯು ತಮ್ಮ ಶಾಸಕರು, ಜಿ.ಪಂ/ತಾ.ಪಂ ಸಾಕಷ್ಟು ಹಣದ ಹೊಳೆ ಹರಿಸಿ ಚುನಾವಣೆ ಗೆಲ್ಲುವಂತೆ ನಿರ್ದೇಶನ ನೀಡಿತ್ತು. ಆ ಅಭ್ಯರ್ಥಿಗಳು ಒಂದು ವಾರ್ಡ್/ಸ್ಥಾನಕ್ಕೆ ಕನಿಷ್ಠ 3-4 ಲಕ್ಷ ರೂ ಹಣವನ್ನು ಖರ್ಚು ಮಾಡಿದ್ದವು. ಆದರೆ ನಮ್ಮ ಅಭ್ಯರ್ಥಿಗಳು ಕೇವಲ 2000-10000 ರೂ ಮಾತ್ರ ಖರ್ಚು ಮಾಡಿ ಪ್ರಾಮಾಣಿಕವಾಗಿ ಆಯ್ಕೆಯಾಗಿದ್ದೇವೆ ಎಂದು ಅಭಯ್ ಹೇಳಿದ್ದಾರೆ.

ಈ ಚುನಾವಣಾ ಖರ್ಚಿಗಾಗಿ ನಮ್ಮ ಸಂಘಟನೆಯ ಪ್ರತಿಯೊಂದು ಕುಟುಂಬವು ತಲಾ 50 ರೂಗಳ ದೇಣಿಗೆ ನೀಡಿವೆ. ಈ ಹಣದಿಂದಲೇ ನಾವು ಚುನಾವಣೆ ಎದುರಿಸಿದ್ದೇವೆ. ಅಲ್ಲದೇ ಪ್ರಾಮಾಣಿಕವಾಗಿ ಮತ ಕೇಳುವಂತೆ ಮತ್ತು ಗೆದ್ದ ನಂತರ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನಮ್ಮ ಅಭ್ಯರ್ಥಿಗಳಿಗೆ ನಾವು ಷರತ್ತುಗಳನ್ನು ವಿಧಿಸಿದ್ದೆವು. ಈ ಷರತ್ತುಗಳನ್ನು ಪಾಲಿಸಲಾಗದೇ ಸುಮಾರು 150-200 ಜನರು ಚುನಾವಣೆಗೆ ನಿಂತು ಆಯ್ಕೆಯಾಗಿದ್ದಾರೆ. ಆದರೆ ಅವರನ್ನು ನಮ್ಮವರೆಂದು ನಾವು ಭಾವಿಸಿಲ್ಲ ಮತ್ತು ನಮ್ಮ ಫಲಿತಾಂಶದಲ್ಲಿ ಅವರನ್ನು ಸೇರಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಆಯ್ಕೆಯಾದ ಅಭ್ಯರ್ಥಿಗಳು ಮತ್ತು ಆಯ್ಕೆಯಾಗದ ಅಭ್ಯರ್ಥಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಗ್ರಾಮಗಳ ಅಭಿವೃದ್ದಿ ಪ್ರಾಮಾಣಿಕವಾಗಿ ಕೆಲಸ ಮಾಡುವುದು ನಮ್ಮ ಗುರು ಎಂದು ಗ್ರಾಕೂಸ್ ಹೇಳಿಕೆಯಲ್ಲಿ ತಿಳಿಸಿದೆ.

ಮದ್ಯ ನಿಷೇಧ ಆಂದೋಲನದ ಹೋರಾಟಗಾರ್ತಿ ಸ್ವರ್ಣ ಭಟ್ ಮಾತನಾಡಿ “ನಮ್ಮ ಅಭ್ಯರ್ಥಿಗಳಿಗೆ ಪ್ರಾಮಾಣಿಕವಾಗಿ ಚುನಾವಣೆ ಎದುರಿಸುವಂತೆ ಷರತ್ತುಗಳನ್ನು ವಿಧಿಸಿದ್ದೆವು. ಅಲ್ಲದೆ ಬೇರೆ ಪಕ್ಷದ ಉತ್ತಮ ಅಭ್ಯರ್ಥಿಗಳಿಗೂ ಬೆಂಬಲ ನೀಡಿದ್ದೇವೆ. ಆದರೆ ಅದಕ್ಕೂ ಮುನ್ನ ಅವರವರ ಧಾರ್ಮಿಕ ನಂಬಿಕೆಗನುಗುಣವಾಗಿ ದೇವಸ್ಥಾನ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಅವರಿಂದ ಪ್ರಾಮಾಣಿಕವಾಗಿ ಜನರ ಕೆಲಸ ಮಾಡುತ್ತೇವೆ. ಭ್ರಷ್ಟಾಚಾರ ಎಸಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿಸಿದ್ದೇವೆ” ಎಂದಿದ್ದಾರೆ.


ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...