Homeಮುಖಪುಟಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಪ್ರತಿಭಟನಾ ನಿರತ ರೈತರು ರಿಲಾಯನ್ಸ್ ಆಸ್ತಿಪಾಸ್ತಿಗಳಿಗೆ ಹಾನಿಮಾಡಿದ್ದ ಹಿನ್ನಲೆಯಲ್ಲಿ ಕಂಪೆನಿಯು ತನಗೆ ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ಹೇಳಿತ್ತು

- Advertisement -
- Advertisement -

ಇಂದು ರಿಲಾಯನ್ಸ್ ಸಂಸ್ಥೆ ಮುದ್ದಾಂ ಆಗಿ ಬಹಳ ಎಚ್ಚರಿಕೆಯಿಂದ ಡ್ರಾಫ್ಟ್ ಮಾಡಿದ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ, ತಾನು ಈ ಹಿಂದೆಯಾಗಲೀ ಇನ್ನು ಮುಂದೆಯಾಗಲೀ “ಕಾಂಟ್ರಾಕ್ಟ್” ಮತ್ತು “ಕಾರ್ಪೋರೇಟ್” ಫಾರ್ಮಿಂಗ್ ನಲ್ಲಿ ತೊಡಗಿಕೊಳ್ಳುವ ಉದ್ದೇಶ ಹೊಂದಿಲ್ಲ ಎಂದು ಹೇಳಿದೆ. ಪತ್ರಿಕಾ ಹೇಳಿಕೆಗೆ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

6700 ಕ್ಕೂ ಹೆಚ್ಚು ನಗರಗಳಲ್ಲಿ ವರ್ಷಕ್ಕೆ 1,30,566 ಕೋಟಿ ರೂ.ಗಳ ವ್ಯವಹಾರ (2018-19) ನಡೆಸುವ ರಿಲಾಯನ್ಸ್ ರಿಟೇಲ್ ಲಿಮಿಟೆಡ್ ತನ್ನ ಕಚ್ಛಾಮಾಲುಗಳನ್ನು ಹೇಗೆ ಸಂಗ್ರಹಿಸುತ್ತದೆ, ಅದರ ಗುಣಮಟ್ಟವನ್ನು ಹೇಗೆ ಪರಿಶೀಲಿಸಿ ನಿಯಂತ್ರಿಸುತ್ತದೆ ಎಂಬ ಕುತೂಹಲದಿಂದ, ಅವರ ವೆಬ್ ಸೈಟ್ ಗಳನ್ನು ತಡಕಾಡಿದಾಗ ಸಿಕ್ಕಿದ ಮಾಹಿತಿಗಳನ್ನು ಇಲ್ಲಿ ಹಂಚಿಕೊಂಡಿದ್ದೇನೆ.

  • ರಿಲಾಯನ್ಸ್ ಫ್ರೆಶ್ ತನ್ನ ವೆಬ್ ಸೈಟಿನಲ್ಲಿ Continuing Reliance’s hallowed tradition of backward integration, Reliance Retail directly partners with a large number of farmers and small vendors in a farm-to-fork model ಎಂದು ಹೇಳುತ್ತದೆ. ಇಲ್ಲಿ ಫಾರ್ಮ್ ಟು ಫೋರ್ಕ್ (ಗದ್ದೆಯಿಂದ ಊಟದ ಬಟ್ಟಲ ತನಕ) ರೈತರ ಜೊತೆ ಪಾಲುದಾರಿಕೆ ಎಂಬ ಬಹಳ ಅಸ್ಪಷ್ಟವಾದ ಮಾಹಿತಿ ಸಿಗುತ್ತದೆ.
  • ಗಮನಾರ್ಹವಾದ ಮಾಹಿತಿ ಸಿಕ್ಕಿದ್ದು, ರಿಲಾಯನ್ಸ್‌ನ ಸ್ವಯಂಸೇವಾ ವಿಂಗ್ ಆಗಿರುವ ರಿಲಾಯನ್ಸ್ ಫೌಂಡೇಷನ್ ವೆಬ್ ಸೈಟಿನಲ್ಲಿ. ಅಲ್ಲಿ, ಅವರ “Reliance Foundation Bharat India Jodo (RF BIJ) ಕಾರ್ಯಕ್ರಮದಡಿ, ಅವರು ಬಹಳ ಸ್ಪಷ್ಟವಾಗಿ ತಮ್ಮ ಸಂಸ್ಥೆಯು ಸೆಪ್ಟಂಬರ್ 2020ರ ಹೊತ್ತಿಗೆ ದೇಶದ 12 ರಾಜ್ಯಗಳಲ್ಲಿ 26 FPO (ರೈತ ಉತ್ಪಾದಕ ಸಂಸ್ಥೆಯ)ಗಳಿಗೆ MENTOR ಆಗಿ ಕೆಲಸ ಮಾಡಿರುವ ಬಗ್ಗೆ ಮತ್ತು ಅವು ಒಟ್ಟಾಗಿ 50 ಕೋಟಿ ರೂಗಳ ವ್ಯವಹಾರ ಮಾಡಿರುವ ಬಗ್ಗೆ ಹೇಳುತ್ತಾರೆ. (ಅದರ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ). ಅಲ್ಲಿ ನೀಡಲಾಗಿರುವ ವಿವರಗಳೆಲ್ಲ, ಈಗ ಸರ್ಕಾರ ತಂದಿರುವ ಹೊಸ ಕೃಷಿ ನೀತಿಗೆ ಅನುಗುಣವಾಗಿಯೇ ಇರುವುದು ಬಹಳ ಸ್ಪಷ್ಟವಾಗಿ ಕಾಣಿಸುತ್ತದೆ.

ಇದನ್ನೂ ಓದಿ: ಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ – ಪ್ರಭುತ್ವದ ದಬ್ಬಾಳಿಕೆ ನೋಡಿ!

  • ಈ ನಡುವೆ, ಒರಿಸ್ಸಾದಲ್ಲಿ ರಿಲಾಯನ್ಸ್ ಫ್ರೆಷ್ ವ್ಯವಹಾರಗಳ ಮಾಡೆಲ್ ಬಗ್ಗೆ ಅಧ್ಯಯನ ನಡೆಸಿರುವ ಉತ್ಕಲ ವಿವಿಯ ವ್ಯವಹಾರ ಆಡಳಿತ ವಿಭಾಗದ ಅಧ್ಯಯನ ತಂಡದ ಅಂತಾರಾಷ್ಟ್ರೀಯ ಸೆಮಿನಾರ್ ಪೇಪರ್ ಒಂದು, ರಿಲಾಯನ್ಸ್ ಫ್ರೆಷ್‌ನ SWOT ವಿಶ್ಲೇಷಣೆ ಮಾಡಿದೆ. ಅದರಲ್ಲಿ “ಕಾಂಟ್ರಾಕ್ಟ್ ಫಾರ್ಮಿಂಗ್” ಸಂಸ್ಥೆಯ ತಾಕತ್ತುಗಳಲ್ಲಿ ಒಂದು ಎಂದು ದಾಖಲಿಸಲಾಗಿದೆ. (ಆ ಸೆಮಿನಾರ್ ಪೇಪರ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ)

ರಿಲಾಯನ್ಸ್ ಅಂಬಾನಿ ಬಳಗ ಈ ತನಕ ಕಾಂಟ್ರಾಕ್ಟ್/ಕಾರ್ಪೋರೇಟ್ ಫಾರ್ಮಿಂಗಿಗೆ ಇಳಿದಿದೆಯೋ ಇಲ್ಲವೇ ಎಂಬುದಕ್ಕಿಂತಲೂ, ಸರ್ಕಾರದ ಈಗಷ್ಟೇ ಹೊರಬರುತ್ತಿರುವ “ಹೊಸ ಕೃಷಿ” ನೀತಿಗೆ ಈ ಸಂಸ್ಥೆಯ ಬಹಳ ಹಿಂದೆಯೇ ಸೂಕ್ತ ತಯಾರಿ ನಡೆಸಿದೆ, ರಂಗ ಸಜ್ಜುಮಾಡಿಟ್ಟುಕೊಂಡಿದೆ ಎಂಬುದು ಸ್ಪಷ್ಟ. ಇಲ್ಲಿ ಕಾನೂನು ಬಾಹಿರ ಏನೂ ಇಲ್ಲದಿರಬಹುದು. ಆದರೆ, ಅನೈತಿಕ ಅನ್ನಿಸಬಹುದಾದದ್ದು ಬಹಳ ಇದೆ ಎಂಬುದರಲ್ಲಿ ಏನೂ ಸಂಶಯ ಇಲ್ಲ.

ಈಗ ದಿಲ್ಲಿಯಲ್ಲಿ ಸೇರಿರುವ ರೈತರು ಚೆನ್ನಾಗಿಯೇ ಬಿಸಿ ಮುಟ್ಟಿಸಿರುವುದರಿಂದ, ಮೂಗು ಒತ್ತಿಹೋಗಿರುವುದರಿಂದ ಅಂಬಾನಿ ಬಳಗಕ್ಕೆ ಬಾಯಿ ಕಳೆಯದೇ ಬೇರೆ ದಾರಿ ಇಲ್ಲವಾಗಿದೆ.

ಇದನ್ನೂ ಓದಿ: ಬ್ರಾಂಡ್ ವಾಷ್ಡ್ ಬಿರಿಯಾನಿ; ಬಿತ್ತದೆ ಬೆಳೆಯದೆ ಕಂಪನಿಗಳಿಗೆ ಏಕಸ್ವಾಮ್ಯ ಹೊಂದಲು ಅವಕಾಶ ಕೊಡುವ ಕೃಷಿ ಕಾನೂನುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...