Homeಮುಖಪುಟಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಪ್ರತಿಭಟನಾ ನಿರತ ರೈತರು ರಿಲಾಯನ್ಸ್ ಆಸ್ತಿಪಾಸ್ತಿಗಳಿಗೆ ಹಾನಿಮಾಡಿದ್ದ ಹಿನ್ನಲೆಯಲ್ಲಿ ಕಂಪೆನಿಯು ತನಗೆ ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ಹೇಳಿತ್ತು

- Advertisement -
- Advertisement -

ಇಂದು ರಿಲಾಯನ್ಸ್ ಸಂಸ್ಥೆ ಮುದ್ದಾಂ ಆಗಿ ಬಹಳ ಎಚ್ಚರಿಕೆಯಿಂದ ಡ್ರಾಫ್ಟ್ ಮಾಡಿದ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ, ತಾನು ಈ ಹಿಂದೆಯಾಗಲೀ ಇನ್ನು ಮುಂದೆಯಾಗಲೀ “ಕಾಂಟ್ರಾಕ್ಟ್” ಮತ್ತು “ಕಾರ್ಪೋರೇಟ್” ಫಾರ್ಮಿಂಗ್ ನಲ್ಲಿ ತೊಡಗಿಕೊಳ್ಳುವ ಉದ್ದೇಶ ಹೊಂದಿಲ್ಲ ಎಂದು ಹೇಳಿದೆ. ಪತ್ರಿಕಾ ಹೇಳಿಕೆಗೆ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

6700 ಕ್ಕೂ ಹೆಚ್ಚು ನಗರಗಳಲ್ಲಿ ವರ್ಷಕ್ಕೆ 1,30,566 ಕೋಟಿ ರೂ.ಗಳ ವ್ಯವಹಾರ (2018-19) ನಡೆಸುವ ರಿಲಾಯನ್ಸ್ ರಿಟೇಲ್ ಲಿಮಿಟೆಡ್ ತನ್ನ ಕಚ್ಛಾಮಾಲುಗಳನ್ನು ಹೇಗೆ ಸಂಗ್ರಹಿಸುತ್ತದೆ, ಅದರ ಗುಣಮಟ್ಟವನ್ನು ಹೇಗೆ ಪರಿಶೀಲಿಸಿ ನಿಯಂತ್ರಿಸುತ್ತದೆ ಎಂಬ ಕುತೂಹಲದಿಂದ, ಅವರ ವೆಬ್ ಸೈಟ್ ಗಳನ್ನು ತಡಕಾಡಿದಾಗ ಸಿಕ್ಕಿದ ಮಾಹಿತಿಗಳನ್ನು ಇಲ್ಲಿ ಹಂಚಿಕೊಂಡಿದ್ದೇನೆ.

  • ರಿಲಾಯನ್ಸ್ ಫ್ರೆಶ್ ತನ್ನ ವೆಬ್ ಸೈಟಿನಲ್ಲಿ Continuing Reliance’s hallowed tradition of backward integration, Reliance Retail directly partners with a large number of farmers and small vendors in a farm-to-fork model ಎಂದು ಹೇಳುತ್ತದೆ. ಇಲ್ಲಿ ಫಾರ್ಮ್ ಟು ಫೋರ್ಕ್ (ಗದ್ದೆಯಿಂದ ಊಟದ ಬಟ್ಟಲ ತನಕ) ರೈತರ ಜೊತೆ ಪಾಲುದಾರಿಕೆ ಎಂಬ ಬಹಳ ಅಸ್ಪಷ್ಟವಾದ ಮಾಹಿತಿ ಸಿಗುತ್ತದೆ.
  • ಗಮನಾರ್ಹವಾದ ಮಾಹಿತಿ ಸಿಕ್ಕಿದ್ದು, ರಿಲಾಯನ್ಸ್‌ನ ಸ್ವಯಂಸೇವಾ ವಿಂಗ್ ಆಗಿರುವ ರಿಲಾಯನ್ಸ್ ಫೌಂಡೇಷನ್ ವೆಬ್ ಸೈಟಿನಲ್ಲಿ. ಅಲ್ಲಿ, ಅವರ “Reliance Foundation Bharat India Jodo (RF BIJ) ಕಾರ್ಯಕ್ರಮದಡಿ, ಅವರು ಬಹಳ ಸ್ಪಷ್ಟವಾಗಿ ತಮ್ಮ ಸಂಸ್ಥೆಯು ಸೆಪ್ಟಂಬರ್ 2020ರ ಹೊತ್ತಿಗೆ ದೇಶದ 12 ರಾಜ್ಯಗಳಲ್ಲಿ 26 FPO (ರೈತ ಉತ್ಪಾದಕ ಸಂಸ್ಥೆಯ)ಗಳಿಗೆ MENTOR ಆಗಿ ಕೆಲಸ ಮಾಡಿರುವ ಬಗ್ಗೆ ಮತ್ತು ಅವು ಒಟ್ಟಾಗಿ 50 ಕೋಟಿ ರೂಗಳ ವ್ಯವಹಾರ ಮಾಡಿರುವ ಬಗ್ಗೆ ಹೇಳುತ್ತಾರೆ. (ಅದರ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ). ಅಲ್ಲಿ ನೀಡಲಾಗಿರುವ ವಿವರಗಳೆಲ್ಲ, ಈಗ ಸರ್ಕಾರ ತಂದಿರುವ ಹೊಸ ಕೃಷಿ ನೀತಿಗೆ ಅನುಗುಣವಾಗಿಯೇ ಇರುವುದು ಬಹಳ ಸ್ಪಷ್ಟವಾಗಿ ಕಾಣಿಸುತ್ತದೆ.

ಇದನ್ನೂ ಓದಿ: ಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ – ಪ್ರಭುತ್ವದ ದಬ್ಬಾಳಿಕೆ ನೋಡಿ!

  • ಈ ನಡುವೆ, ಒರಿಸ್ಸಾದಲ್ಲಿ ರಿಲಾಯನ್ಸ್ ಫ್ರೆಷ್ ವ್ಯವಹಾರಗಳ ಮಾಡೆಲ್ ಬಗ್ಗೆ ಅಧ್ಯಯನ ನಡೆಸಿರುವ ಉತ್ಕಲ ವಿವಿಯ ವ್ಯವಹಾರ ಆಡಳಿತ ವಿಭಾಗದ ಅಧ್ಯಯನ ತಂಡದ ಅಂತಾರಾಷ್ಟ್ರೀಯ ಸೆಮಿನಾರ್ ಪೇಪರ್ ಒಂದು, ರಿಲಾಯನ್ಸ್ ಫ್ರೆಷ್‌ನ SWOT ವಿಶ್ಲೇಷಣೆ ಮಾಡಿದೆ. ಅದರಲ್ಲಿ “ಕಾಂಟ್ರಾಕ್ಟ್ ಫಾರ್ಮಿಂಗ್” ಸಂಸ್ಥೆಯ ತಾಕತ್ತುಗಳಲ್ಲಿ ಒಂದು ಎಂದು ದಾಖಲಿಸಲಾಗಿದೆ. (ಆ ಸೆಮಿನಾರ್ ಪೇಪರ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ)

ರಿಲಾಯನ್ಸ್ ಅಂಬಾನಿ ಬಳಗ ಈ ತನಕ ಕಾಂಟ್ರಾಕ್ಟ್/ಕಾರ್ಪೋರೇಟ್ ಫಾರ್ಮಿಂಗಿಗೆ ಇಳಿದಿದೆಯೋ ಇಲ್ಲವೇ ಎಂಬುದಕ್ಕಿಂತಲೂ, ಸರ್ಕಾರದ ಈಗಷ್ಟೇ ಹೊರಬರುತ್ತಿರುವ “ಹೊಸ ಕೃಷಿ” ನೀತಿಗೆ ಈ ಸಂಸ್ಥೆಯ ಬಹಳ ಹಿಂದೆಯೇ ಸೂಕ್ತ ತಯಾರಿ ನಡೆಸಿದೆ, ರಂಗ ಸಜ್ಜುಮಾಡಿಟ್ಟುಕೊಂಡಿದೆ ಎಂಬುದು ಸ್ಪಷ್ಟ. ಇಲ್ಲಿ ಕಾನೂನು ಬಾಹಿರ ಏನೂ ಇಲ್ಲದಿರಬಹುದು. ಆದರೆ, ಅನೈತಿಕ ಅನ್ನಿಸಬಹುದಾದದ್ದು ಬಹಳ ಇದೆ ಎಂಬುದರಲ್ಲಿ ಏನೂ ಸಂಶಯ ಇಲ್ಲ.

ಈಗ ದಿಲ್ಲಿಯಲ್ಲಿ ಸೇರಿರುವ ರೈತರು ಚೆನ್ನಾಗಿಯೇ ಬಿಸಿ ಮುಟ್ಟಿಸಿರುವುದರಿಂದ, ಮೂಗು ಒತ್ತಿಹೋಗಿರುವುದರಿಂದ ಅಂಬಾನಿ ಬಳಗಕ್ಕೆ ಬಾಯಿ ಕಳೆಯದೇ ಬೇರೆ ದಾರಿ ಇಲ್ಲವಾಗಿದೆ.

ಇದನ್ನೂ ಓದಿ: ಬ್ರಾಂಡ್ ವಾಷ್ಡ್ ಬಿರಿಯಾನಿ; ಬಿತ್ತದೆ ಬೆಳೆಯದೆ ಕಂಪನಿಗಳಿಗೆ ಏಕಸ್ವಾಮ್ಯ ಹೊಂದಲು ಅವಕಾಶ ಕೊಡುವ ಕೃಷಿ ಕಾನೂನುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...