Homeಮುಖಪುಟಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಪ್ರತಿಭಟನಾ ನಿರತ ರೈತರು ರಿಲಾಯನ್ಸ್ ಆಸ್ತಿಪಾಸ್ತಿಗಳಿಗೆ ಹಾನಿಮಾಡಿದ್ದ ಹಿನ್ನಲೆಯಲ್ಲಿ ಕಂಪೆನಿಯು ತನಗೆ ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ಹೇಳಿತ್ತು

- Advertisement -
- Advertisement -

ಇಂದು ರಿಲಾಯನ್ಸ್ ಸಂಸ್ಥೆ ಮುದ್ದಾಂ ಆಗಿ ಬಹಳ ಎಚ್ಚರಿಕೆಯಿಂದ ಡ್ರಾಫ್ಟ್ ಮಾಡಿದ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ, ತಾನು ಈ ಹಿಂದೆಯಾಗಲೀ ಇನ್ನು ಮುಂದೆಯಾಗಲೀ “ಕಾಂಟ್ರಾಕ್ಟ್” ಮತ್ತು “ಕಾರ್ಪೋರೇಟ್” ಫಾರ್ಮಿಂಗ್ ನಲ್ಲಿ ತೊಡಗಿಕೊಳ್ಳುವ ಉದ್ದೇಶ ಹೊಂದಿಲ್ಲ ಎಂದು ಹೇಳಿದೆ. ಪತ್ರಿಕಾ ಹೇಳಿಕೆಗೆ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

6700 ಕ್ಕೂ ಹೆಚ್ಚು ನಗರಗಳಲ್ಲಿ ವರ್ಷಕ್ಕೆ 1,30,566 ಕೋಟಿ ರೂ.ಗಳ ವ್ಯವಹಾರ (2018-19) ನಡೆಸುವ ರಿಲಾಯನ್ಸ್ ರಿಟೇಲ್ ಲಿಮಿಟೆಡ್ ತನ್ನ ಕಚ್ಛಾಮಾಲುಗಳನ್ನು ಹೇಗೆ ಸಂಗ್ರಹಿಸುತ್ತದೆ, ಅದರ ಗುಣಮಟ್ಟವನ್ನು ಹೇಗೆ ಪರಿಶೀಲಿಸಿ ನಿಯಂತ್ರಿಸುತ್ತದೆ ಎಂಬ ಕುತೂಹಲದಿಂದ, ಅವರ ವೆಬ್ ಸೈಟ್ ಗಳನ್ನು ತಡಕಾಡಿದಾಗ ಸಿಕ್ಕಿದ ಮಾಹಿತಿಗಳನ್ನು ಇಲ್ಲಿ ಹಂಚಿಕೊಂಡಿದ್ದೇನೆ.

  • ರಿಲಾಯನ್ಸ್ ಫ್ರೆಶ್ ತನ್ನ ವೆಬ್ ಸೈಟಿನಲ್ಲಿ Continuing Reliance’s hallowed tradition of backward integration, Reliance Retail directly partners with a large number of farmers and small vendors in a farm-to-fork model ಎಂದು ಹೇಳುತ್ತದೆ. ಇಲ್ಲಿ ಫಾರ್ಮ್ ಟು ಫೋರ್ಕ್ (ಗದ್ದೆಯಿಂದ ಊಟದ ಬಟ್ಟಲ ತನಕ) ರೈತರ ಜೊತೆ ಪಾಲುದಾರಿಕೆ ಎಂಬ ಬಹಳ ಅಸ್ಪಷ್ಟವಾದ ಮಾಹಿತಿ ಸಿಗುತ್ತದೆ.
  • ಗಮನಾರ್ಹವಾದ ಮಾಹಿತಿ ಸಿಕ್ಕಿದ್ದು, ರಿಲಾಯನ್ಸ್‌ನ ಸ್ವಯಂಸೇವಾ ವಿಂಗ್ ಆಗಿರುವ ರಿಲಾಯನ್ಸ್ ಫೌಂಡೇಷನ್ ವೆಬ್ ಸೈಟಿನಲ್ಲಿ. ಅಲ್ಲಿ, ಅವರ “Reliance Foundation Bharat India Jodo (RF BIJ) ಕಾರ್ಯಕ್ರಮದಡಿ, ಅವರು ಬಹಳ ಸ್ಪಷ್ಟವಾಗಿ ತಮ್ಮ ಸಂಸ್ಥೆಯು ಸೆಪ್ಟಂಬರ್ 2020ರ ಹೊತ್ತಿಗೆ ದೇಶದ 12 ರಾಜ್ಯಗಳಲ್ಲಿ 26 FPO (ರೈತ ಉತ್ಪಾದಕ ಸಂಸ್ಥೆಯ)ಗಳಿಗೆ MENTOR ಆಗಿ ಕೆಲಸ ಮಾಡಿರುವ ಬಗ್ಗೆ ಮತ್ತು ಅವು ಒಟ್ಟಾಗಿ 50 ಕೋಟಿ ರೂಗಳ ವ್ಯವಹಾರ ಮಾಡಿರುವ ಬಗ್ಗೆ ಹೇಳುತ್ತಾರೆ. (ಅದರ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ). ಅಲ್ಲಿ ನೀಡಲಾಗಿರುವ ವಿವರಗಳೆಲ್ಲ, ಈಗ ಸರ್ಕಾರ ತಂದಿರುವ ಹೊಸ ಕೃಷಿ ನೀತಿಗೆ ಅನುಗುಣವಾಗಿಯೇ ಇರುವುದು ಬಹಳ ಸ್ಪಷ್ಟವಾಗಿ ಕಾಣಿಸುತ್ತದೆ.

ಇದನ್ನೂ ಓದಿ: ಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ – ಪ್ರಭುತ್ವದ ದಬ್ಬಾಳಿಕೆ ನೋಡಿ!

  • ಈ ನಡುವೆ, ಒರಿಸ್ಸಾದಲ್ಲಿ ರಿಲಾಯನ್ಸ್ ಫ್ರೆಷ್ ವ್ಯವಹಾರಗಳ ಮಾಡೆಲ್ ಬಗ್ಗೆ ಅಧ್ಯಯನ ನಡೆಸಿರುವ ಉತ್ಕಲ ವಿವಿಯ ವ್ಯವಹಾರ ಆಡಳಿತ ವಿಭಾಗದ ಅಧ್ಯಯನ ತಂಡದ ಅಂತಾರಾಷ್ಟ್ರೀಯ ಸೆಮಿನಾರ್ ಪೇಪರ್ ಒಂದು, ರಿಲಾಯನ್ಸ್ ಫ್ರೆಷ್‌ನ SWOT ವಿಶ್ಲೇಷಣೆ ಮಾಡಿದೆ. ಅದರಲ್ಲಿ “ಕಾಂಟ್ರಾಕ್ಟ್ ಫಾರ್ಮಿಂಗ್” ಸಂಸ್ಥೆಯ ತಾಕತ್ತುಗಳಲ್ಲಿ ಒಂದು ಎಂದು ದಾಖಲಿಸಲಾಗಿದೆ. (ಆ ಸೆಮಿನಾರ್ ಪೇಪರ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ)

ರಿಲಾಯನ್ಸ್ ಅಂಬಾನಿ ಬಳಗ ಈ ತನಕ ಕಾಂಟ್ರಾಕ್ಟ್/ಕಾರ್ಪೋರೇಟ್ ಫಾರ್ಮಿಂಗಿಗೆ ಇಳಿದಿದೆಯೋ ಇಲ್ಲವೇ ಎಂಬುದಕ್ಕಿಂತಲೂ, ಸರ್ಕಾರದ ಈಗಷ್ಟೇ ಹೊರಬರುತ್ತಿರುವ “ಹೊಸ ಕೃಷಿ” ನೀತಿಗೆ ಈ ಸಂಸ್ಥೆಯ ಬಹಳ ಹಿಂದೆಯೇ ಸೂಕ್ತ ತಯಾರಿ ನಡೆಸಿದೆ, ರಂಗ ಸಜ್ಜುಮಾಡಿಟ್ಟುಕೊಂಡಿದೆ ಎಂಬುದು ಸ್ಪಷ್ಟ. ಇಲ್ಲಿ ಕಾನೂನು ಬಾಹಿರ ಏನೂ ಇಲ್ಲದಿರಬಹುದು. ಆದರೆ, ಅನೈತಿಕ ಅನ್ನಿಸಬಹುದಾದದ್ದು ಬಹಳ ಇದೆ ಎಂಬುದರಲ್ಲಿ ಏನೂ ಸಂಶಯ ಇಲ್ಲ.

ಈಗ ದಿಲ್ಲಿಯಲ್ಲಿ ಸೇರಿರುವ ರೈತರು ಚೆನ್ನಾಗಿಯೇ ಬಿಸಿ ಮುಟ್ಟಿಸಿರುವುದರಿಂದ, ಮೂಗು ಒತ್ತಿಹೋಗಿರುವುದರಿಂದ ಅಂಬಾನಿ ಬಳಗಕ್ಕೆ ಬಾಯಿ ಕಳೆಯದೇ ಬೇರೆ ದಾರಿ ಇಲ್ಲವಾಗಿದೆ.

ಇದನ್ನೂ ಓದಿ: ಬ್ರಾಂಡ್ ವಾಷ್ಡ್ ಬಿರಿಯಾನಿ; ಬಿತ್ತದೆ ಬೆಳೆಯದೆ ಕಂಪನಿಗಳಿಗೆ ಏಕಸ್ವಾಮ್ಯ ಹೊಂದಲು ಅವಕಾಶ ಕೊಡುವ ಕೃಷಿ ಕಾನೂನುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...