Homeಅಂತರಾಷ್ಟ್ರೀಯತನ್ನ ಸೋಲನ್ನು ತಿರುಚುವಂತೆ ಚುನಾವಣಾ ಅಧಿಕಾರಿಗೆ ಕರೆ ಮಾಡಿ ಒತ್ತಡ ಹೇರಿದ ಟ್ರಂಪ್!

ತನ್ನ ಸೋಲನ್ನು ತಿರುಚುವಂತೆ ಚುನಾವಣಾ ಅಧಿಕಾರಿಗೆ ಕರೆ ಮಾಡಿ ಒತ್ತಡ ಹೇರಿದ ಟ್ರಂಪ್!

- Advertisement -
- Advertisement -

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಸೋಲನುಭವಿಸಿದ್ದಾರೆ. ಜಾರ್ಜಿಯಾದಲ್ಲಿ ಜೋ ಬೈಡೆನ್ ಅವರ ಗೆಲುವನ್ನು ತಿರುಚಲು ಅಲ್ಲಿನ ಚುನಾವಣಾ ಮುಖ್ಯಸ್ಥರಿಗೆ ಡೊನಾಲ್ಡ್‌ ಟ್ರಂಪ್‌ ಕರೆ ಮಾಡಿದ್ದು ಇದೀಗ ಭಾರಿ ವಿವಾದ ಎಬ್ಬಿಸಿದೆ.

ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಬಂದಾಗಿಂನಿಂದಲೂ ಡೊನಾಲ್ಡ್‌ ಟ್ರಂಪ್ ತನ್ನ ಸೋಲನ್ನು ನಿರಾಕರಿಸುತ್ತಲೇ ಬಂದಿದ್ದಾರೆ. ಅಲ್ಲದೆ ಫಲಿತಾಂಶಗಳ ವಿರುದ್ದ ಅವರ ಪ್ರಚಾರ ಅಭಿಯಾನ ಸಮಿತಿಯು ಸುಪ್ರೀಂಕೋರ್ಟ್‌ ಕದ ತಟ್ಟಿತ್ತು. ಆದರೆ ನ್ಯಾಯಾಲಯವು ಅವರ ಅರ್ಜಿಯನ್ನು ತಿರಸ್ಕರಿಸಿತ್ತು.

ಡೊನಾಲ್ಡ್ ಟ್ರಂಪ್‌ ಚುನಾವಣೆಯಲ್ಲಿ ತನಗಾದ ಸೋಲನ್ನು ಗೆಲುವಾಗಿ ಪರಿವರ್ತಿಸಲು ಬೇಕಾಗಿರುವ ಅಗತ್ಯ ಮತಗಳನ್ನು ಹುಡುಕಲು ಆಗ್ರಹಿಸಿ ಕರೆ ಮಾಡಿರುವುದನ್ನು, ಅಮೆರಿಕದ ಮಾಧ್ಯಮ ವಾಷಿಂಗ್ಟನ್‌ ಪೋಸ್ಟ್ ಶನಿವಾರ ವರದಿ ಮಾಡಿದೆ. ಅಮೆರಿಕದ ಕಾನೂನು ತಜ್ಞರು ಇದು ಅಧಿಕಾರದ ದುರ್ಬಳಕೆ ಹಾಗೂ ಸಂಭಾವ್ಯ ಅಪರಾಧ ಕೃತ್ಯ ಎಂದು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ:  ಚುನಾವಣಾ ಫಲಿತಾಂಶ ವಿರೋಧಿಸಿ ಬೃಹತ್‌ ರ್‍ಯಾಲಿ ನಡೆಸಲಿರುವ ಟ್ರಂಪ್‌‌ ಬೆಂಬಲಿಗರು

ಡೊನಾಲ್ಡ್‌ ಟ್ರಂಪ್ ಜಾರ್ಜಿಯಾದಲ್ಲಿ 11,779 ಮತಗಳಿಂದ ಸೋತಿದ್ದರು, ಅವರು ತನ್ನ ಕರೆಯಲ್ಲಿ, “ಜಾರ್ಜಿಯಾ ಜನರು ಹಾಗೂ ದೇಶದ ಜನರು ಆಕ್ರೋಶದಲ್ಲಿದ್ದಾರೆ. ಮತಗಳನ್ನು ಮತ್ತೆ ಎಣಿಕೆ ಮಾಡಿದ್ದೀರಿ ಎಂದು ಹೇಳುವುದರಲ್ಲಿ ಯಾವುದೇ ತಪ್ಪು ಇಲ್ಲ. 11,780 ಮತಗಳನ್ನು ಹುಡುಕಿ, ನನಗೆ ಬೇಕಾಗಿರುವುದು ಇಷ್ಟೇ. ಯಾಕೆಂದರೆ ನಾವು ಜಾರ್ಜಿಯಾವನ್ನು ಗೆದ್ದಿದ್ದೇವೆ” ಎಂದು ಹೇಳಿದ್ದಾರೆ ಎಂದು ವಾಷಿಂಗ್ಟನ್‌ ಪೋಸ್ಟ್‌ ತನ್ನ ವರದಿಯಲ್ಲಿ ಹೇಳಿದೆ.

ಚುನಾವಣಾ ಸಂಸ್ಥೆಯ ಕಚೇರಿಯು ಟ್ರಂಪ್‌ ಜೊತೆಗಿನ ಕರೆಯಲ್ಲಿ ಟ್ರಂಪ್ ಪ್ರತಿಪಾದನೆಯನ್ನು ನಿರಾಕರಿಸಿದ್ದು, ಜಾರ್ಜಿಯಾದಲ್ಲಿ ಟ್ರಂಪ್ ಸೋತಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಯು, “ನಿಮ್ಮಲ್ಲಿರುವ ಅಂಕಿ ಅಂಶಗಳು ಸರಿಯಾಗಿಲ್ಲ” ಎಂದು ಟ್ರಂಪ್‌ಗೆ ತಿಳಿಸಿದರೂ, “ಜಾರ್ಜಿಯಾದಲ್ಲಿ ತಾನು ಸೋಲಲು ಸಾಧ್ಯವೇ ಇಲ್ಲ” ಎಂದು ಟ್ರಂಪ್‌ ಮತ್ತೆ ಹೇಳಿದ್ದಾರೆ ಎಂದು ವಾಷಿಂಗ್ಟನ್‌ ಪೋಸ್ಟ್‌ ವರದಿ ಉಲ್ಲೇಖಿಸಿದೆ.

ಚುನಾವಣಾ ಅಧಿಕಾರಿಗೆ ಕರೆ ಮಾಡಿ ಒತ್ತಡ ಹೇರಿರುವುದನ್ನು ಅಲ್ಲಿನ ವಿಪಕ್ಷದ ನಾಯಕರು ಟೀಕಿಸಿದ್ದು, ಒತ್ತಡಕ್ಕೆ ಮಣಿಯದ ಚುನಾವಣಾ ಅಧಿಕಾರಿಯನ್ನು ಅಭಿನಂದಿಸಿದ್ದಾರೆ.

ಇದನ್ನೂ ಓದಿ: ವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...