Homeಕರ್ನಾಟಕಕನ್ನಡ ಧ್ವಜ ಇಳಿಸದಿದ್ದರೆ ಗಲ್ಲಿ-ಗಲ್ಲಿಯಲ್ಲಿ ಭಗವಾಧ್ವಜ ಹಾರಾಡುತ್ತದೆ: ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ

ಕನ್ನಡ ಧ್ವಜ ಇಳಿಸದಿದ್ದರೆ ಗಲ್ಲಿ-ಗಲ್ಲಿಯಲ್ಲಿ ಭಗವಾಧ್ವಜ ಹಾರಾಡುತ್ತದೆ: ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ

ಕನ್ನಡ ಧ್ವಜ ವಿವಾದವನ್ನು ಹುಟ್ಟು ಹಾಕುವ ಮೂಲಕ ನಗರದಲ್ಲಿ ಶಾಂತಿ ಕದಡಲು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಪಾಲಿಕೆ ಆವರಣದಲ್ಲಿ ಕನ್ನಡ ಧ್ವಜ ಹಾರಿಸಿರುವುದು ಕಾನೂನು ಬಾಹಿರವಾಗಿದೆ. ಇದೆಲ್ಲ ಗೊತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ- MES

- Advertisement -
- Advertisement -

ಬೆಳಗಾವಿಯ ಮಹಾನಗರ ಪಾಲಿಕೆ ಕಛೇರಿ ಎದುರು ಹಾರಿಸಿರುವ ಕನ್ನಡ ಬಾವುಟವನ್ನು ಡಿಸಂಬರ್ 31 ರೊಳಗೆ ತೆರವುಗೊಳಿಸಬೇಕು ಎಂದು ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯು (MES) ಎಚ್ಚರಿಕೆ ನೀಡಿತ್ತು. ಈ ಬೆನ್ನಲ್ಲೇ ಮತ್ತೊಂದು ಎಚ್ಚರಿಕೆಯನ್ನೂ ನೀಡಿದ್ದು, “ಹಾರಿಸಿರುವ ಕನ್ನಡ ಧ್ವಜವನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಗರದ ಗಲ್ಲಿ ಗಲ್ಲಿಗಳಲ್ಲಿ ಭಗವಾಧ್ವಜಗಳು ಹಾರಾಡಲಿವೆ. ಜೊತೆಗೆ ಗಡಿ ವಿವಾದಕ್ಕೆ ಸಂಬಂಧಿಸಿದ ಘೋಷಣೆಗಳು ಮೊಳಗಲಿವೆ” ಎಂದು ಜಿಲ್ಲಾಡಳಿತಕ್ಕೆ ಸವಾಲು ಹಾಕಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ಹೋರಾಟದಲ್ಲಿ ಸಾವನ್ನಪ್ಪಿದ್ದ MES ಕಾರ್ಯಕರ್ತರ ನೆನಪಿಗಾಗಿ ಜನವರಿ 17 ರಂದು ಹುತಾತ್ಮ ದಿನಾಚರಣೆ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಲು ಮರಾಠಾ ಮಂದಿರದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇದನ್ನೂ ಓದಿ: ಕನ್ನಡ ಧ್ವಜ ವಿವಾದ; ಕನ್ನಡಿಗರಿಗೇ ಎಚ್ಚರಿಕೆ ನೀಡುವವರಿಗೆ ತಕ್ಕ ಶಾಸ್ತಿಯಾಗಬೇಕು- ಎಚ್‌.ಡಿ.ಕೆ

MES ಅಧ್ಯಕ್ಷ ದೀಪಕ ದಳವಿ ಮಾತನಾಡಿ, “ಕನ್ನಡ ಧ್ವಜ ವಿವಾದವನ್ನು ಹುಟ್ಟು ಹಾಕುವ ಮೂಲಕ ನಗರದಲ್ಲಿ ಶಾಂತಿ ಕದಡಲು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಪಾಲಿಕೆ ಆವರಣದಲ್ಲಿ ಕನ್ನಡ ಧ್ವಜ ಹಾರಿಸಿರುವುದು ಕಾನೂನು ಬಾಹಿರವಾಗಿದೆ. ಇದೆಲ್ಲ ಗೊತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಇದರಿಂದ ಮರಾಠಾ ಜನರ ಆತಂಕ ಮತ್ತು ವೇದನೆ ಹೆಚ್ಚಾಗಿದೆ” ಎಂದು ಆರೋಪಿಸಿದರು.

ಹಲವು ವರ್ಷಗಳ ಹೋರಾಟದ ನಂತರ, ಪಾಲಿಕೆ ಕಚೇರಿ ಎದುರು ಇತ್ತೀಚೆಗೆ ಕನ್ನಡಪರ ಹೋರಾಟಗಾರರು ಕಂಬ ನೆಟ್ಟು, ಕನ್ನಡ ಬಾವುಟ ಹಾರಿಸಿದ್ದರು.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

ಈ ಹಿಂದೆಯೂ, ಅಲ್ಲಿ ಕನ್ನಡ ಬಾವುಟ ಹಾರಿಸಿದ ಬೆನ್ನಲ್ಲೇ ಪೊಲೀಸರು ಅದನ್ನು ತೆರವುಗೊಳಿಸಿದ್ದರು. ಇದೇ ರೀತಿ ಈಗಲೂ ತೆರವುಗೊಳಿಸಬಹುದೆಂಬ ಕಾರಣಕ್ಕೆ ಕನ್ನಡಪರ ಹೋರಾಟಗಾರರು ಕಂಬ ಹಾಗೂ ಬಾವುಟವನ್ನು ಕಾವಲು ಕಾಯುತ್ತಿದ್ದಾರೆ. ಕೊರೆವ ಚಳಿಯಲ್ಲೂ ರಾತ್ರಿಯಿಡೀ ಅಲ್ಲಿಯೇ ಮಲಗಿ, ಧ್ವಜಸ್ತಂಭ ತೆರವುಗೊಳಿಸಬಾರದು ಎಂದು ಒತ್ತಾಯಿಸುತ್ತಿದ್ದಾರೆ.

“ಮಹಾನಗರ ಪಾಲಿಕೆ ಕಛೇರಿ ಸೇರಿದಂತೆ, ನಗರದ ರೈಲು ನಿಲ್ದಾಣ, ಪ್ರಾದೇಶಿಕ ಆಯುಕ್ತರ ಕಛೇರಿಯ ಬಳಿ ಕಾನೂನುಬಾಹಿರವಾಗಿ ಹಳದಿ–ಕೆಂಪು ಬಣ್ಣದ ಧ್ವಜ ಹಾರಿಸಲಾಗಿದೆ. ಈ ಧ್ವಜಕ್ಕೆ ಮಾನ್ಯತೆ ಸಿಕ್ಕಿಲ್ಲ. ರಾಷ್ಟ್ರಧ್ವಜದ ಎದುರು ಈ ಧ್ವಜ ಹಾರಿಸಿ, ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರಲಾಗಿದೆ. ಬಾವುಟ ಹಾರಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು MES ಸದಸ್ಯರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.


ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...