Homeಮುಖಪುಟಮಲ ಬಾಚುವ ಪದ್ಧತಿ ನಿರ್ಮೂಲನೆಗೆ ವಿಶೇಷ ಕಾಯ್ದೆ ಶಿಫಾರಸ್ಸು ಮಾಡಿದ NHRC: ಜಾರಿ ಸಾಧ್ಯವೇ?

ಮಲ ಬಾಚುವ ಪದ್ಧತಿ ನಿರ್ಮೂಲನೆಗೆ ವಿಶೇಷ ಕಾಯ್ದೆ ಶಿಫಾರಸ್ಸು ಮಾಡಿದ NHRC: ಜಾರಿ ಸಾಧ್ಯವೇ?

ಜಾತಿ ಪದ್ದತಿ ನಾಶವಾಗದೆ ಮಲ ಬಾಚುವ ಪದ್ದತಿ ನಿರ್ಮೂಲನೆಯಾಗುವುದಿಲ್ಲ ಎನ್ನುತ್ತಾರೆ ಹಿರಿಯ ಕಾರ್ಮಿಕ ಹೋರಾಟಗಾರರಾದ ಎಸ್. ಬಾಲನ್...

- Advertisement -
- Advertisement -

ವಿಜ್ಞಾನ, ನಾಗರಿಕತೆ ಎಷ್ಟೆಲ್ಲಾ ಅಭಿವೃದ್ದಿ ಹೊಂದಿದ್ದರೂ ಕೆಲ ಸಾಮಾಜಿಕ ಅನಿಷ್ಟ ಪದ್ಧತಿಗಳು ಇಂದಿಗೂ ಜಾರಿಯಲ್ಲಿರುವುದು ಇಡೀ ಭಾರತೀಯರು ತಲೆತಗ್ಗಿಸಬೇಕಾದ ವಿಚಾರ. ತಳಸಮುದಾಯದ ಜನರ ಮೇಲೆ ಮೇಲ್ಜಾತಿ, ಮೇಲ್ವರ್ಗದ ಜನರು ಹೇರಿದ ಮಲ ಹೊರುವ, ಮಲ ಬಾಚುವ (ಮ್ಯಾನುವಲ್ ಸ್ಕ್ಯಾವೆಜಿಂಗ್) ಕೆಲಸಗಳು 21ನೇ ಶತಮಾನದಲ್ಲಿಯೂ ಮುಂದುವರೆಯುತ್ತಿದ್ದರೂ ಜಡಗಟ್ಟಿದ ಸಮಾಜಕ್ಕೆ ಏನೇನು ಅನ್ನಿಸುತ್ತಿಲ್ಲ. ಈ ಕುರಿತು ಸಾವಿರಾರು ಚರ್ಚೆಗಳು ನಡೆದರೂ ಫಲಿತಾಂಶ ಮಾತ್ರ ತೀರಾ ಕಡಿಮೆ. ಇದಕ್ಕೆ ಕಾರಣ ಈ ಅನಿಷ್ಠ ಕೆಲಸವನ್ನು ಮಾಡುತ್ತಿರುವವರು ತಳಸಮುದಾಯದವರು. ಅವರ ಬಗ್ಗೆ ಯಾವ ಸರ್ಕಾರಗಳಿಗೂ, ಯಾವ ಪಕ್ಷಗಳಿಗೂ ಕಾಳಜಿಯಿಲ್ಲ ಮಾತ್ರವಲ್ಲ ಅವರಿರುವುದೇ ತಮ್ಮ ಸೇವೆ ಮಾಡುವುದಕ್ಕಾಗಿ ಎಂಬ ಫ್ಯೂಡಲ್ ಮನಸ್ಥಿತಿ. ಅಸಮಾನತೆ, ಅನ್ಯಾಯದ ತಳಹದಿಯ ಮೇಲಿರುವ ಈ ಸಮಾಜ ವ್ಯವಸ್ಥೆ ಇಂತಹ ಅನಿಷ್ಠ ಪದ್ಧತಿಗಳನ್ನು ಪೋಷಿಸುತ್ತಾ ಬರುತ್ತಿವೆ ಎನ್ನುವುದು ಚಾರಿತ್ರಿಕ ಸತ್ಯ.

ಕಳೆದ ಹಲವಾರು ದಶಕಗಳಿಂದ ಮಲಬಾಚುವ ಪದ್ದತಿಯನ್ನು ನಿರ್ಮೂಲನೆ ಮಾಡಬೇಕು, ಸಂಪೂರ್ಣ ಆಧುನಿಕ ಯಾಂತ್ರಿಕೃತ ವ್ಯವಸ್ಥೆ ಜಾರಿಗೊಳಿಸಬೇಕೆಂದು ಸಾವಿರಾರು ಹೋರಾಟಗಳು ನಡೆದಿವೆ. ಆದರೆ ಈ ಪದ್ದತಿ ಮಾತ್ರ ಕೊನೆಗೊಂಡಿಲ್ಲ. ಈಗ ಈ ವಿಚಾರದ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಎಚ್ಚೆತ್ತುಕೊಂಡಂತೆ ಕಂಡುಬಂದಿದ್ದು ಮಲ ಬಾಚುವ ಪದ್ದತಿ ನಿರ್ಮೂಲನೆಗೆ ವಿಶೇಷ ಕಾಯ್ದೆಯನ್ನು ಶಿಫಾರಸ್ಸು ಮಾಡಿದೆ.

ಬರಿಗೈಲಿ ಮಲಬಾಚುವ, ಶೌಚ ಗುಂಡಿ ಸ್ವಚ್ಛಗೊಳಿಸಲು ಆಳಕ್ಕೆ ಇಳಿಯುವ, ಮಲಹೊರುವ ಕೆಲಸಕ್ಕೆ ನೇಮಿಸಿಕೊಳ್ಳುವ ಸ್ಥಳೀಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತಹ ಹೊಸ ಕಾಯ್ದೆಯೊಂದಿಗೆ ಹಲವು ಸರಣಿ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರಕ್ಕೆ NHRC ಮಾಡಿದೆ.

ತಳಮಟ್ಟದಲ್ಲಿ ಬದಲಾವಣೆ ತರುವ ಉದ್ದೇಶದಿಂದ ಮಲಬಾಚುವ ಕೆಲಸದಲ್ಲಿರುವ ಕುಟುಂಬ ಸದಸ್ಯರಿಗೆ ಕೇಂದ್ರ ಸರ್ಕಾರವು 10 ಲಕ್ಷ ರೂಗಳ ಸಾಲ ನೀಡಬೇಕೆಂದು NHRC ಒತ್ತಾಯಿಸಿದೆ. ಇದರಿಂದ ಆ ಕುಟುಂಬಗಳು ತಮ್ಮ ಬಡತನದ ಕಾರಣದಿಂದ ಅನಿವಾರ್ಯವಾಗಿ ಮಾಡಬೇಕಾದ ಈ ಕೆಲಸವನ್ನು ಬಿಟ್ಟು ಯಾವುದಾದರೂ ಸ್ವಂತ ಉದ್ಯಮವನ್ನು ಸ್ಥಾಪಿಸಬಹುದು ಎಂದು ಅದು ಹೇಳಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋವು ಈ ಮ್ಯಾನುವಲ್ ಸ್ಕ್ಯಾವೆಜಿಂಗ್ ನಲ್ಲಿ ಮೃತಪಟ್ಟ ಜನರ ವರದಿಗಳನ್ನು ಮೇಲ್ವಿಚಾರಣೆ ನಡೆಸಬೇಕು. ಕೆಲ ರಾಜ್ಯಗಳು ನಮ್ಮಲ್ಲಿ ಯಾವುದೇ ಮ್ಯಾನುವಲ್ ಸ್ಕ್ಯಾವೆಂಜರ್‌ಗಳನ್ನು ನೇಮಿಸಿಕೊಂಡಿಲ್ಲ, ಮಲಗುಂಡಿಗಳು ಇಲ್ಲ ಎಂದು ವರದಿ ನೀಡುತ್ತಿರುವುದು ಸತ್ಯಕ್ಕೆ ದೂರವಾದುದ್ದು ಎಂದು NHRC ದೂರಿದೆ. ಈ ವಿಚಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಒತ್ತಾಯಿಸಿದೆ.

ಎಲ್ಲಾ ರೀತಿಯ ಸ್ವಚ್ಛಗೊಳಿಸುವಿಕೆಯನ್ನು ಮ್ಯಾನುವಲ್ ಸ್ಕ್ಯಾವೆಜಿಂಗ್ ನಡಿ ತರುವುದಲ್ಲದೆ ಅದರ ವ್ಯಾಖ್ಯಾನವನ್ನು ವಿಸ್ತರಿಸುವಂತೆ ಆಯೋಗವು ತಿಳಿಸಿದೆ. ಮಲ ಬಾಚುವವರು, ಪೌರಕಾರ್ಮಿಕರು ಮತ್ತು ಮಕ್ಕಳು ಕೆಲಸದ ಸ್ಥಳದಲ್ಲಿ ಎದುರಿಸುವ ಕಿರುಕುಳವನ್ನು ತಡೆಗಟ್ಟಲು ದಂಡವಿಭಾಗವನ್ನು ಹೊಸ ಕಾಯ್ದೆಯಲ್ಲಿ ಸೇರಿಸುವಂತೆ ತಿಳಿಸಿದೆ.

ಮಲಬಾಚುವ ಕೆಲಸ ತ್ಯಜಿಸುವವರಿಗೆ ಪುನರ್ವಸತಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ಆಯೋಗ ತಿಳಿಸಿದೆ. ಆ ಜನರಿಗೆ ನರೇಗದಂತಹ ತಕ್ಷಣದ ಕೆಲಸಗಳನ್ನು ನೀಡುವುದರ ಜೊತೆಗೆ ಕೆಲಸ ಬಿಡುವ ಸಮಯದಲ್ಲಿ 40,000 ರೂನಿಂದ 1 ಲಕ್ಷ ರೂಗಳವರೆಗೆ ನಗದು ಪರಿಹಾರ ನೀಡಬೇಕೆಂದು ಶಿಫಾರಸ್ಸು ಮಾಡಿದೆ.

ಪೌರಕಾರ್ಮಿಕರು ಮಲಬಾಚುವ ಪದ್ದತಿ ಬಿಟ್ಟು ಕೆಲವು ವ್ಯವಹಾರ ಚಟುವಟಿಕೆಗಳನ್ನು ಪ್ರಾರಂಭಿಸಲು ಅವರಿಗೆ ಮತ್ತು ಅವರ ಅವಲಂಬಿತರಿಗೆ 10 ಲಕ್ಷ ರೂ.ವರೆಗೆ ಸಾಲವನ್ನು ನೀಡುವ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಪ್ರತಿ ರಾಜ್ಯಕ್ಕೆ ನಿರ್ದಿಷ್ಟ ರಾಷ್ಟ್ರೀಕೃತ ಬ್ಯಾಂಕ್ ಅನ್ನು ನೇಮಿಸಲು ಹಣಕಾಸು ಸಚಿವಾಲಯಕ್ಕೆ ಕೋರಲಾಗಿದೆ.

“ಮಲ ಬಾಚುವ ಪದ್ದತಿ ನಿರ್ಮೂಲನೆಗಾಗಿ ತಂತ್ರಜ್ಞಾನದ ಬಳಕೆ, ತಂತ್ರಜ್ಞಾನದ ನಿರ್ವಹಣೆ ಮತ್ತು ತಂತ್ರಜ್ಞಾನವನ್ನು ನಿರ್ವಹಿಸಲು ಕಾರ್ಮಿಕರಿಗೆ ತರಬೇತಿ ನೀಡಲು ಅನುಕೂಲವಾಗುವಂತೆ ಸರ್ಕಾರವು ಸಾಕಷ್ಟು ಹೂಡಿಕೆಯನ್ನು ಯೋಜಿಸುವ ಅಗತ್ಯವಿದೆ” ಎಂದು ಎನ್‌ಎಚ್‌ಆರ್‌ಸಿ ಹೇಳಿದೆ.

“ಮೇಲ್ವಿಚಾರಣಾ ಹಂತದಲ್ಲಿರುವ ಅಧಿಕಾರಿ ಅಥವಾ ಪ್ರದೇಶದ ಉಸ್ತುವಾರಿ ಯಾವುದೇ ವ್ಯಕ್ತಿಗೆ ಒಳಚರಂಡಿ / ಸೆಪ್ಟಿಕ್ ಟ್ಯಾಂಕ್‌ಗೆ ಪ್ರವೇಶಿಸುವ ಮೊದಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಒದಗಿಸಲಾಗುತ್ತಿದೆ ಎಂದು ಆಯಾ ನಾಗರಿಕ ಸಂಸ್ಥೆಗೆ ಘೋಷಣೆ ಸಲ್ಲಿಸಬೇಕು” ಎಂದು ಅದು ಹೇಳಿದೆ.

ಆಯೋಗದ ಈ ಶಿಫಾರಸ್ಸುಗಳನ್ನು ಸ್ವಾಗತಿಸುತ್ತಲೇ ಇವು ನಿಜವಾಗಿಯೂ ಕಾರ್ಯರೂಪಕ್ಕೆ ಬರುವಂತೆ ಒತ್ತಾಯಿಸಬೇಕಾಗಿದೆ. ಕೆಲದಿನಗಳ ಹಿಂದೆ ತಾನೇ ಆಂಧ್ರಪ್ರದೇಶದಲ್ಲಿ ಪೌರಕಾರ್ಮಿಕರು ವಿವಿಧ ಯೋಜನೆಗಳಡಿ ಬ್ಯಾಂಕ್‌ಗಳಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ನೀಡಲಾಗಿರಲಿಲ್ಲ. ಇದರಿಂದ ರೊಚ್ಚಿಗೆದ್ದ ಅವರು ಬ್ಯಾಂಕುಗಳ ಮುಂದೆ ಕಸ ಸುರಿದು ಪ್ರತಿಭಟನೆ ನಡೆಸಿದ್ದರು.

ಈ ಕುರಿತು ಬೆಂಗಳೂರಿನಲ್ಲಿ ಹತ್ತಾರು ವರ್ಷಗಳಿಂದ ಪೌರಕಾರ್ಮಿಕರನ್ನು ಸಂಘಟಿಸಿ ಹೋರಾಟ ನಡೆಸುತ್ತಿರುವ ಹಿರಿಯ ಕಾರ್ಮಿಕ ಮುಖಂಡರಾದ ಎಸ್.ಬಾಲನ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. “ಮಲ ಬಾಚುವ ಪದ್ದತಿಯು ಆದಿ ಆಂಧ್ರ, ಅರುಂಧತಿಯಾರ್, ಚಕ್ಲಿಯರ್, ಮಾದಿಗರು ಜಾತಿಗೆ ಸಂಬಂಧಿಸಿದೆ. ಈ ಜಾತಿಗಳು ಮಾತ್ರ ಈ ಕೆಲಸ ಮಾಡುತ್ತಿವೆ. ಬ್ರಿಟೀಷರು, ಈಗಿನ ಕಾಲದಲ್ಲಿಯೂ ಸಹ ಇವರು ಮೋರಿಗಳು ಎಲ್ಲಿವೆಯೋ ಅಲ್ಲಿಯೇ ಇವರು ವಾಸಿಸುತ್ತಿದ್ದಾರೆ. ಸಂವಿಧಾನದ 17ನೇ ಆರ್ಟಿಕಲ್ ಇದೆ, 1993ರಲ್ಲಿ ಮಲಹೊರುವ ಪದ್ದತಿ ನಿಷೇಧ ಕಾಯ್ದೆ ಬಂತು. ಎಷ್ಟೇ ಕಾನೂನುಗಳು ಬಂದರೂ ಈ ಅನಿಷ್ಠ ಪದ್ದತಿಯನ್ನು ತಡೆಗಟ್ಟಲು ಸಾಧ್ಯವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ನಿಜವಾಗಿಯೂ ಇದು ಪರಿಹಾರವಾಗಬೇಕಾದರೆ ಜಾತಿ ವ್ಯವಸ್ಥೆ ನಾಶವಾಗಬೇಕು. ಆದರೆ ಇಂದು ಜಾತಿಗಳು ಮತ್ತಷ್ಟು ಸಂಘಟಿತವಾಗುತ್ತಿವೆ. ಹಿಂದೂ ಧರ್ಮ ಜಾತಿಪದ್ದತಿಯನ್ನು ಪೋಷಿಸುತ್ತಿದೆ. ಕಾರ್ಪೋರೇಟ್ ಕಂಪನಿಗಳು, ದೊಡ್ಡ ದೊಡ್ಡ ಮಾಲ್‌ಗಳಲ್ಲಿ ಈ ಜನರನ್ನು ಶೌಚಾಲಯಗಳ ಒಳಗಡೆಯೆ ಇವರನ್ನು ಬಂಧಿಸಲಾಗಿದೆ. ಈ ಕಾನೂನುಗಳನ್ನು ನಾನು ನಂಬುವುದಿಲ್ಲ. ಜಾತಿ ನಾಶವಾಗದೆ ಇದು ನಿರ್ಮೂಲನೆಯಾಗುವುದಿಲ್ಲ. ಮೋದಿಯವರು ಪೌರ ಕಾರ್ಮಿಕರ ಕಾಲು ತೊಳೆದು ನಾಟಕ ಮಾಡುತ್ತಾರೆ ಆದರೆ ಪೌರ ಕಾರ್ಮಿಕರ ನೌಕರಿಯನ್ನು ಕಾಯಂ ಮಾಡುವುದಿಲ್ಲ ಏಕೆ ಎಂದು ಬಾಲನ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಸಾಲ ಕೊಡಲು ಹಿಂದೇಟು: ಬ್ಯಾಂಕ್‌ಗಳ ಮುಂದೆ ಕಸ ಸುರಿದ ಪೌರ ಕಾರ್ಮಿಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...