Homeಕರ್ನಾಟಕಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

"ಈ 80 ಸಾವಿರ ಎಕರೆಯಷ್ಟು ಭಾರೀ ಭೂ ಪ್ರದೇಶವನ್ನು, ಸಹಜ ಕಾಡು ಬೆಳೆಯಬೇಕಾದ ಜಾಗವನ್ನು ಯಾರೋ ಒಬ್ಬ ವ್ಯಕ್ತಿ ಅಥವಾ ಒಂದು ಕಂಪನಿಯ ಲಾಭಕ್ಕಾಗಿ, ದಂಧೆಗಾಗಿ ಮತ್ತೆ ಬಿಟ್ಟುಕೊಡಲಾಗುತ್ತಿದೆ"

- Advertisement -
- Advertisement -

ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಯಡಿಯೂರಪ್ಪನವರ ಸರ್ಕಾರ, ಮಲೆನಾಡನ್ನು ಬೋಳುಗುಡ್ಡವಾಗಿಸಲು ಪ್ರಯತ್ನಿಸುತ್ತಿದೆ ಎಂದು ‘ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ’ ಆರೋಪಿಸಿದೆ. ಸರ್ಕಾರಿ ಅರಣ್ಯ ಭೂಮಿಯನ್ನು ಕಾನೂನುಬಾಹಿರವಾಗಿ ಖಾಸಗೀಕರಣಗೊಳಿಸಿ ಅದರ ಲಾಭವನ್ನು ಖಾಸಗಿ ಉದ್ಯಮಿಗಳಿಗೆ ನೀಡಲು ಪ್ರಯತ್ನಿಸಲಾಗುತ್ತಿದೆ. ಹಾಗಾಗಿ ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟದಿಂದ ಜನವರಿ 7 ರಂದು ಸಿಸಿಎಫ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದೇವೆ ಎಂದು ಒಕ್ಕೂಟದ ಮುಖ್ಯಸ್ಥರಾದ ಕೆ.ಪಿ.ಶ್ರೀಪಾಲ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೈಸೂರು ಪೇಪರ್ ಮಿಲ್ಸ್ (MPM) ಅನ್ನು ಖಾಸಗೀಕರಣ ಮಾಡುವುದರ ಜತೆಗೆ MPM ನೆಡುತೋಪಿನ ಅರಣ್ಯ ಇಲಾಖೆಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ನೀಡಲು ಮುಂದಾಗಿದೆ. ಈ ಸಂಬಂಧ ಅರಣ್ಯ ಇಲಾಖೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ

“ನಮ್ಮದು ಮಲೆನಾಡಿನ ಕಾಡು, ಕಾಡಿನೊಂದಿಗೆ ಬದುಕುವ ಜನ, ಕಾಡುಪ್ರಾಣಿಗಳು, ಸಸ್ಯ, ಹೊಳೆ-ಹಳ್ಳ, ನದಿ-ಕಣಿವೆಗಳಿಗೆ ಸಂಚಕಾರ ತಂದಿರುವ ಅರಣ್ಯ ಖಾಸಗೀಕರಣದ ಹುನ್ನಾರದ ವಿರುದ್ಧದ ಜನಹೋರಾಟ. ಕಾಡನ್ನು ಅದರ ಪಾಡಿಗೆ ಬಿಡಿ, ಕಾಡಿನಂಚಿನ ಮಲೆನಾಡಿನ ಸಕಲ ಜೀವ ಚರಾಚರಗಳ ಬದುಕನ್ನು ನಾಶ ಮಾಡಬೇಡಿ ಎಂದು ಸರ್ಕಾರಕ್ಕೆ ಮಲೆನಾಡಿಗರು ನೀಡುತ್ತಿರುವ ಎಚ್ಚರಿಕೆಯ ಹೋರಾಟ. ಕಾಡಿನ ಹೆಸರಲ್ಲಿ ದಂಧೆ ಮಾಡುವ ದಂಧೆಕೋರರ ವಿರುದ್ಧದ ಜನದನಿ” ಎಂದು ಹೇಳಿದರು.

ಕಳೆದ ಹಲವು ದಿನಗಳಿಂದ ಈ ಹೋರಾಟವನ್ನು ಸಂಘಟಿಸುತ್ತಿರುವ ಈ ಒಕ್ಕೂಟಕ್ಕೆ ನಾಡಿನ ಹತ್ತಾರು ಚಿಂತಕರು ಸಾಹಿತಿಗಳು, ತಜ್ಞರು ಬೆಂಬಲ ನೀಡಿದ್ದಾರೆ.

 

“ಸುಮಾರು 40 ವರ್ಷಗಳ ಹಿಂದೆ MPM ಕಾಗದ ಕಾರ್ಖಾನೆಯನ್ನು ಸರ್ಕಾರ ಆರಂಭಿಸಿದಾಗ ಅದಕ್ಕೆ ಕಚ್ಚಾವಸ್ತು ಸರಬರಾಜಿಗಾಗಿ ಮಲೆನಾಡಿನ ದಟ್ಟ ಕಾಡಿನ 32,000 ಹೆಕ್ಟೇರ್ (ಅಂದಾಜು 80 ಸಾವಿರ ಎಕರೆ) ಅರಣ್ಯ ಭೂಮಿಯನ್ನು 40 ವರ್ಷದ ಲೀಸ್ (ಗುತ್ತಿಗೆ) ಆಧಾರದ ಮೇಲೆ ನೀಡಲಾಗಿತ್ತು. ಲೀಸ್ ಅವಧಿ ಮುಗಿದ ಮೇಲೆ ಒಂದು ವೇಳೆ, ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಿಕೊಟ್ಟರೂ ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಕೊಡಬೇಕು ಎಂದು ಲೀಸಿನಲ್ಲಿ ಸರ್ಕಾರವೇ ಷರತ್ತು ಹಾಕಿತ್ತು”

ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಆ ಭೂಮಿಯಲ್ಲಿ ಬೆಳೆದುನಿಂತಿದ್ದ ಸಹಜ ಕಾಡನ್ನು ನಾಶಮಾಡಿದ ಕಂಪನಿ, ಅಲ್ಲಿ ಮಲೆನಾಡಿನ ಅಂತರ್ಜಲ ಮತ್ತು ಒಟ್ಟಾರೆ ಪರಿಸರಕ್ಕೆ ಮಾರಕವಾದ ಅಕೇಶಿಯಾ ಹಾಗೂ ನೀಲಗಿರಿ ಬೆಳೆದಿದೆ. ಸಾವಿರಾರು ಎಕರೆ ಪ್ರದೇಶದ ಕಾಡಿನ ಜಾಗದಲ್ಲಿ ಈ ವಿದೇಶಿ ತಳಿ ಮರಗಳನ್ನು ಬೆಳೆದ ಕಾರಣ ಮಲೆನಾಡಿನ ಪರಿಸರ, ವನ್ಯಜೀವಿ, ಜನಜೀವನ, ಹವಾಮಾನ ಮತ್ತು ನದಿ ಕಣಿವೆಯ ಜೊತೆ ಅಂತರ್ಜಲ ಮಟ್ಟದ ಮೇಲೆಯೂ ಸಾಕಷ್ಟು ಪರಿಣಾಮಗಳಾಗಿವೆ. ಈ ನಡುವೆ ನಷ್ಟದ ಸುಳಿಗೆ ಸಿಲುಕಿ MPM ಕಂಪನಿ ಮುಚ್ಚಿಹೋಗಿ ವರ್ಷಗಳೇ ಉರುಳಿವೆ.

ಈಗ, ಭೂಮಿಯ ಲೀಸ್ ಅವಧಿ ಮುಗಿದಿದೆ. ಆದರೆ ಸರ್ಕಾರ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿ ಪಡೆಯುವ ಬದಲು, ಮತ್ತೆ ಲೀಸ್ ನವೀಕರಣದ ಮೂಲಕ ಆ ಭೂಮಿಯನ್ನು ಮುಚ್ಚಿಹೋಗಿರುವ ಕಂಪನಿಗೆ ಪರಭಾರೆ ಮಾಡಿದೆ! ಏಕೆಂದರೆ; ಈ ಅಪಾರ ಪ್ರಮಾಣದ ಅಮೂಲ್ಯ ಭೂಮಿಯ ಮೇಲೆ ಸರ್ಕಾರದ ಆಯಕಟ್ಟಿನ ಜಾಗದಲ್ಲಿರುವವರ ಕಣ್ಣು ಬಿದ್ದಿದೆ. ಕಾರ್ಖಾನೆಯನ್ನು ಪುನರಾರಂಭಿಸುವ ನೆಪದಲ್ಲಿ ಮಲೆನಾಡಿನ ಈ ಭೂಮಿಯನ್ನು ತಮ್ಮ ವಶಕ್ಕೆ ಪಡೆದು ಅಲ್ಲಿ ವಾಣಿಜ್ಯ ಅರಣ್ಯಬೆಳೆ ಬೆಳೆಯುವ ದಂಧೆ ನಡೆಸಲು ಅವರು ಸಂಚು ಹೂಡಿದ್ದಾರೆ. ಅದಕ್ಕೆ ತಕ್ಕಂತೆ ಅರಣ್ಯ ಇಲಾಖೆ, ಸರ್ಕಾರ ಮತ್ತು ಸರ್ಕಾರದ ಚುಕ್ಕಾಣಿ ಹಿಡಿದವರೂ ಅವರಿಗೆ ಸಾಥ್ ನೀಡುತ್ತಿದ್ದಾರೆ. ಕಾರ್ಪೊರೇಟ್ ಕಂಪನಿಗಳೊಂದಿಗೆ ರಾಜಕಾರಣಿಗಳೂ, ಅಧಿಕಾರಿಗಳು ಕೈಜೋಡಿಸಿದ್ದಾರೆ.

ಇದನ್ನೂ ಓದಿ: ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ಈ ನಾಡದ್ರೋಹಿ, ಜನದ್ರೋಹಿ ವಿಷವರ್ತುಲ, ಇಡೀ ಮಲೆನಾಡಿನ ಅರಣ್ಯ ಪ್ರದೇಶವನ್ನೇ ತಮ್ಮ ಕಬ್ಜಕ್ಕೆ ಪಡೆದು, ಮಲೆನಾಡು ಮಾತ್ರವಲ್ಲದೆ, ಇಡೀ ರಾಜ್ಯಕ್ಕೇ ಶುದ್ಧ ಗಾಳಿ, ನೀರು, ಆಹಾರ ಮೂಲಿಕೆಗಳನ್ನು ನೀಡುವ ಕಾಡನ್ನೇ ಸರ್ವನಾಶ ಮಾಡುವ ಸಂಚು ಹೂಡಿದೆ. ಜಗತ್ತಿನ ಅತ್ಯಂತ ಸೂಕ್ಷ್ಮ ಪರಿಸರ ಪ್ರದೇಶಗಳಲ್ಲಿ ಒಂದಾದ ಪಶ್ಚಿಮ ಘಟ್ಟದ ಸಹ್ಯಾದ್ರಿ ಶ್ರೇಣಿಯನ್ನೇ ತಮ್ಮ ಜಹಗೀರು ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ಹೋರಾಟಗಾರರ ಒಕ್ಕೂಟವು ಆರೋಪಿಸಿದೆ.

ವಿರೋಧ ಯಾಕೆ?

ಈ 80 ಸಾವಿರ ಎಕರೆಯಷ್ಟು ಭಾರೀ ಭೂ ಪ್ರದೇಶವನ್ನು, ಸಹಜ ಕಾಡು ಬೆಳೆಯಬೇಕಾದ ಜಾಗವನ್ನು ಯಾರೋ ಒಬ್ಬ ವ್ಯಕ್ತಿ ಅಥವಾ ಒಂದು ಕಂಪನಿಯ ಲಾಭಕ್ಕಾಗಿ, ದಂಧೆಗಾಗಿ ಮತ್ತೆ ಬಿಟ್ಟುಕೊಡಲಾಗುತ್ತಿದೆ. ಅದು ಈಗಾಗಲೇ ವಿವಿಧ ಕಾರಣಗಳಿಂದಾಗಿ ಕರಗುತ್ತಿರುವ ಕಾಡಿಗೆ, ಬತ್ತಿ ಹೋಗಿರುವ ಅಂತರ್ಜಲಕ್ಕೆ, ಮಾಯವಾಗುತ್ತಿರುವ ವನ್ಯಜೀವಿಗಳಿಗೆ ಮತ್ತು ಅಂತಿಮವಾಗಿ ಸಾಕಷ್ಟು ಸಂಕಷ್ಟದಲ್ಲಿರುವ ಮಲೆನಾಡಿನ ನಮ್ಮ-ನಿಮ್ಮೆಲ್ಲರ ಬದುಕಿನ ಅಂತ್ಯವೇ ಆಗಲಿದೆ. ಕಾಡಿನ ನಡುವಿನಲ್ಲಿರುವ ನಮ್ಮ ಮನೆ, ಹೊಲ, ಗದ್ದೆಗಳಿಗೆ ಹೋಗಲೂ ಅವಕಾಶವಾಗದಂತೆ ಖಾಸಗಿ ಕಂಪನಿಗಳ ಬಲಿಷ್ಠ ಬೇಲಿಗಳು ಸುತ್ತುವರಿಯಲಿವೆ. ಅವರ ಅನುಮತಿ ಇಲ್ಲದೆ ನಮ್ಮ ಮನೆಗೆ ನಾನೇ ಹೋಗುವುದು ಕೂಡ ದುಸ್ತರವಾಗಲಿದೆ. ಹಾಗಾಗಿ ವಿರೋಧ. ನಮ್ಮ ಬದುಕಿನ ಮೇಲೆ ಮತ್ತೊಬ್ಬರ ಬೀಗ ಬೀಳುವುದಕ್ಕಾಗಿ ಈ ವಿರೋಧ, ನಮ್ಮ ಕಾಡಿನ ಮೇಲೆ, ಕಾಡಿನ ಜೀವಿಗಳ ಮೇಲೆ, ನಮ್ಮ ಹೊಳೆ-ಹಳ್ಳ-ನದಿ-ಕಣಿವೆಗಳ ಮೇಲೆ ದೊಣ್ಣೆ ನಾಯಕನ ಅಪ್ಪಣೆಯ ತೂಗುಗತ್ತಿ ಬೇಡ ಎಂದು ಈ ವಿರೋಧ! ಎಂದು ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...