Homeಕರ್ನಾಟಕಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

"ಈ 80 ಸಾವಿರ ಎಕರೆಯಷ್ಟು ಭಾರೀ ಭೂ ಪ್ರದೇಶವನ್ನು, ಸಹಜ ಕಾಡು ಬೆಳೆಯಬೇಕಾದ ಜಾಗವನ್ನು ಯಾರೋ ಒಬ್ಬ ವ್ಯಕ್ತಿ ಅಥವಾ ಒಂದು ಕಂಪನಿಯ ಲಾಭಕ್ಕಾಗಿ, ದಂಧೆಗಾಗಿ ಮತ್ತೆ ಬಿಟ್ಟುಕೊಡಲಾಗುತ್ತಿದೆ"

- Advertisement -
- Advertisement -

ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಯಡಿಯೂರಪ್ಪನವರ ಸರ್ಕಾರ, ಮಲೆನಾಡನ್ನು ಬೋಳುಗುಡ್ಡವಾಗಿಸಲು ಪ್ರಯತ್ನಿಸುತ್ತಿದೆ ಎಂದು ‘ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ’ ಆರೋಪಿಸಿದೆ. ಸರ್ಕಾರಿ ಅರಣ್ಯ ಭೂಮಿಯನ್ನು ಕಾನೂನುಬಾಹಿರವಾಗಿ ಖಾಸಗೀಕರಣಗೊಳಿಸಿ ಅದರ ಲಾಭವನ್ನು ಖಾಸಗಿ ಉದ್ಯಮಿಗಳಿಗೆ ನೀಡಲು ಪ್ರಯತ್ನಿಸಲಾಗುತ್ತಿದೆ. ಹಾಗಾಗಿ ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟದಿಂದ ಜನವರಿ 7 ರಂದು ಸಿಸಿಎಫ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದೇವೆ ಎಂದು ಒಕ್ಕೂಟದ ಮುಖ್ಯಸ್ಥರಾದ ಕೆ.ಪಿ.ಶ್ರೀಪಾಲ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೈಸೂರು ಪೇಪರ್ ಮಿಲ್ಸ್ (MPM) ಅನ್ನು ಖಾಸಗೀಕರಣ ಮಾಡುವುದರ ಜತೆಗೆ MPM ನೆಡುತೋಪಿನ ಅರಣ್ಯ ಇಲಾಖೆಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ನೀಡಲು ಮುಂದಾಗಿದೆ. ಈ ಸಂಬಂಧ ಅರಣ್ಯ ಇಲಾಖೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ

“ನಮ್ಮದು ಮಲೆನಾಡಿನ ಕಾಡು, ಕಾಡಿನೊಂದಿಗೆ ಬದುಕುವ ಜನ, ಕಾಡುಪ್ರಾಣಿಗಳು, ಸಸ್ಯ, ಹೊಳೆ-ಹಳ್ಳ, ನದಿ-ಕಣಿವೆಗಳಿಗೆ ಸಂಚಕಾರ ತಂದಿರುವ ಅರಣ್ಯ ಖಾಸಗೀಕರಣದ ಹುನ್ನಾರದ ವಿರುದ್ಧದ ಜನಹೋರಾಟ. ಕಾಡನ್ನು ಅದರ ಪಾಡಿಗೆ ಬಿಡಿ, ಕಾಡಿನಂಚಿನ ಮಲೆನಾಡಿನ ಸಕಲ ಜೀವ ಚರಾಚರಗಳ ಬದುಕನ್ನು ನಾಶ ಮಾಡಬೇಡಿ ಎಂದು ಸರ್ಕಾರಕ್ಕೆ ಮಲೆನಾಡಿಗರು ನೀಡುತ್ತಿರುವ ಎಚ್ಚರಿಕೆಯ ಹೋರಾಟ. ಕಾಡಿನ ಹೆಸರಲ್ಲಿ ದಂಧೆ ಮಾಡುವ ದಂಧೆಕೋರರ ವಿರುದ್ಧದ ಜನದನಿ” ಎಂದು ಹೇಳಿದರು.

ಕಳೆದ ಹಲವು ದಿನಗಳಿಂದ ಈ ಹೋರಾಟವನ್ನು ಸಂಘಟಿಸುತ್ತಿರುವ ಈ ಒಕ್ಕೂಟಕ್ಕೆ ನಾಡಿನ ಹತ್ತಾರು ಚಿಂತಕರು ಸಾಹಿತಿಗಳು, ತಜ್ಞರು ಬೆಂಬಲ ನೀಡಿದ್ದಾರೆ.

 

“ಸುಮಾರು 40 ವರ್ಷಗಳ ಹಿಂದೆ MPM ಕಾಗದ ಕಾರ್ಖಾನೆಯನ್ನು ಸರ್ಕಾರ ಆರಂಭಿಸಿದಾಗ ಅದಕ್ಕೆ ಕಚ್ಚಾವಸ್ತು ಸರಬರಾಜಿಗಾಗಿ ಮಲೆನಾಡಿನ ದಟ್ಟ ಕಾಡಿನ 32,000 ಹೆಕ್ಟೇರ್ (ಅಂದಾಜು 80 ಸಾವಿರ ಎಕರೆ) ಅರಣ್ಯ ಭೂಮಿಯನ್ನು 40 ವರ್ಷದ ಲೀಸ್ (ಗುತ್ತಿಗೆ) ಆಧಾರದ ಮೇಲೆ ನೀಡಲಾಗಿತ್ತು. ಲೀಸ್ ಅವಧಿ ಮುಗಿದ ಮೇಲೆ ಒಂದು ವೇಳೆ, ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಿಕೊಟ್ಟರೂ ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಕೊಡಬೇಕು ಎಂದು ಲೀಸಿನಲ್ಲಿ ಸರ್ಕಾರವೇ ಷರತ್ತು ಹಾಕಿತ್ತು”

ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಆ ಭೂಮಿಯಲ್ಲಿ ಬೆಳೆದುನಿಂತಿದ್ದ ಸಹಜ ಕಾಡನ್ನು ನಾಶಮಾಡಿದ ಕಂಪನಿ, ಅಲ್ಲಿ ಮಲೆನಾಡಿನ ಅಂತರ್ಜಲ ಮತ್ತು ಒಟ್ಟಾರೆ ಪರಿಸರಕ್ಕೆ ಮಾರಕವಾದ ಅಕೇಶಿಯಾ ಹಾಗೂ ನೀಲಗಿರಿ ಬೆಳೆದಿದೆ. ಸಾವಿರಾರು ಎಕರೆ ಪ್ರದೇಶದ ಕಾಡಿನ ಜಾಗದಲ್ಲಿ ಈ ವಿದೇಶಿ ತಳಿ ಮರಗಳನ್ನು ಬೆಳೆದ ಕಾರಣ ಮಲೆನಾಡಿನ ಪರಿಸರ, ವನ್ಯಜೀವಿ, ಜನಜೀವನ, ಹವಾಮಾನ ಮತ್ತು ನದಿ ಕಣಿವೆಯ ಜೊತೆ ಅಂತರ್ಜಲ ಮಟ್ಟದ ಮೇಲೆಯೂ ಸಾಕಷ್ಟು ಪರಿಣಾಮಗಳಾಗಿವೆ. ಈ ನಡುವೆ ನಷ್ಟದ ಸುಳಿಗೆ ಸಿಲುಕಿ MPM ಕಂಪನಿ ಮುಚ್ಚಿಹೋಗಿ ವರ್ಷಗಳೇ ಉರುಳಿವೆ.

ಈಗ, ಭೂಮಿಯ ಲೀಸ್ ಅವಧಿ ಮುಗಿದಿದೆ. ಆದರೆ ಸರ್ಕಾರ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿ ಪಡೆಯುವ ಬದಲು, ಮತ್ತೆ ಲೀಸ್ ನವೀಕರಣದ ಮೂಲಕ ಆ ಭೂಮಿಯನ್ನು ಮುಚ್ಚಿಹೋಗಿರುವ ಕಂಪನಿಗೆ ಪರಭಾರೆ ಮಾಡಿದೆ! ಏಕೆಂದರೆ; ಈ ಅಪಾರ ಪ್ರಮಾಣದ ಅಮೂಲ್ಯ ಭೂಮಿಯ ಮೇಲೆ ಸರ್ಕಾರದ ಆಯಕಟ್ಟಿನ ಜಾಗದಲ್ಲಿರುವವರ ಕಣ್ಣು ಬಿದ್ದಿದೆ. ಕಾರ್ಖಾನೆಯನ್ನು ಪುನರಾರಂಭಿಸುವ ನೆಪದಲ್ಲಿ ಮಲೆನಾಡಿನ ಈ ಭೂಮಿಯನ್ನು ತಮ್ಮ ವಶಕ್ಕೆ ಪಡೆದು ಅಲ್ಲಿ ವಾಣಿಜ್ಯ ಅರಣ್ಯಬೆಳೆ ಬೆಳೆಯುವ ದಂಧೆ ನಡೆಸಲು ಅವರು ಸಂಚು ಹೂಡಿದ್ದಾರೆ. ಅದಕ್ಕೆ ತಕ್ಕಂತೆ ಅರಣ್ಯ ಇಲಾಖೆ, ಸರ್ಕಾರ ಮತ್ತು ಸರ್ಕಾರದ ಚುಕ್ಕಾಣಿ ಹಿಡಿದವರೂ ಅವರಿಗೆ ಸಾಥ್ ನೀಡುತ್ತಿದ್ದಾರೆ. ಕಾರ್ಪೊರೇಟ್ ಕಂಪನಿಗಳೊಂದಿಗೆ ರಾಜಕಾರಣಿಗಳೂ, ಅಧಿಕಾರಿಗಳು ಕೈಜೋಡಿಸಿದ್ದಾರೆ.

ಇದನ್ನೂ ಓದಿ: ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ಈ ನಾಡದ್ರೋಹಿ, ಜನದ್ರೋಹಿ ವಿಷವರ್ತುಲ, ಇಡೀ ಮಲೆನಾಡಿನ ಅರಣ್ಯ ಪ್ರದೇಶವನ್ನೇ ತಮ್ಮ ಕಬ್ಜಕ್ಕೆ ಪಡೆದು, ಮಲೆನಾಡು ಮಾತ್ರವಲ್ಲದೆ, ಇಡೀ ರಾಜ್ಯಕ್ಕೇ ಶುದ್ಧ ಗಾಳಿ, ನೀರು, ಆಹಾರ ಮೂಲಿಕೆಗಳನ್ನು ನೀಡುವ ಕಾಡನ್ನೇ ಸರ್ವನಾಶ ಮಾಡುವ ಸಂಚು ಹೂಡಿದೆ. ಜಗತ್ತಿನ ಅತ್ಯಂತ ಸೂಕ್ಷ್ಮ ಪರಿಸರ ಪ್ರದೇಶಗಳಲ್ಲಿ ಒಂದಾದ ಪಶ್ಚಿಮ ಘಟ್ಟದ ಸಹ್ಯಾದ್ರಿ ಶ್ರೇಣಿಯನ್ನೇ ತಮ್ಮ ಜಹಗೀರು ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ಹೋರಾಟಗಾರರ ಒಕ್ಕೂಟವು ಆರೋಪಿಸಿದೆ.

ವಿರೋಧ ಯಾಕೆ?

ಈ 80 ಸಾವಿರ ಎಕರೆಯಷ್ಟು ಭಾರೀ ಭೂ ಪ್ರದೇಶವನ್ನು, ಸಹಜ ಕಾಡು ಬೆಳೆಯಬೇಕಾದ ಜಾಗವನ್ನು ಯಾರೋ ಒಬ್ಬ ವ್ಯಕ್ತಿ ಅಥವಾ ಒಂದು ಕಂಪನಿಯ ಲಾಭಕ್ಕಾಗಿ, ದಂಧೆಗಾಗಿ ಮತ್ತೆ ಬಿಟ್ಟುಕೊಡಲಾಗುತ್ತಿದೆ. ಅದು ಈಗಾಗಲೇ ವಿವಿಧ ಕಾರಣಗಳಿಂದಾಗಿ ಕರಗುತ್ತಿರುವ ಕಾಡಿಗೆ, ಬತ್ತಿ ಹೋಗಿರುವ ಅಂತರ್ಜಲಕ್ಕೆ, ಮಾಯವಾಗುತ್ತಿರುವ ವನ್ಯಜೀವಿಗಳಿಗೆ ಮತ್ತು ಅಂತಿಮವಾಗಿ ಸಾಕಷ್ಟು ಸಂಕಷ್ಟದಲ್ಲಿರುವ ಮಲೆನಾಡಿನ ನಮ್ಮ-ನಿಮ್ಮೆಲ್ಲರ ಬದುಕಿನ ಅಂತ್ಯವೇ ಆಗಲಿದೆ. ಕಾಡಿನ ನಡುವಿನಲ್ಲಿರುವ ನಮ್ಮ ಮನೆ, ಹೊಲ, ಗದ್ದೆಗಳಿಗೆ ಹೋಗಲೂ ಅವಕಾಶವಾಗದಂತೆ ಖಾಸಗಿ ಕಂಪನಿಗಳ ಬಲಿಷ್ಠ ಬೇಲಿಗಳು ಸುತ್ತುವರಿಯಲಿವೆ. ಅವರ ಅನುಮತಿ ಇಲ್ಲದೆ ನಮ್ಮ ಮನೆಗೆ ನಾನೇ ಹೋಗುವುದು ಕೂಡ ದುಸ್ತರವಾಗಲಿದೆ. ಹಾಗಾಗಿ ವಿರೋಧ. ನಮ್ಮ ಬದುಕಿನ ಮೇಲೆ ಮತ್ತೊಬ್ಬರ ಬೀಗ ಬೀಳುವುದಕ್ಕಾಗಿ ಈ ವಿರೋಧ, ನಮ್ಮ ಕಾಡಿನ ಮೇಲೆ, ಕಾಡಿನ ಜೀವಿಗಳ ಮೇಲೆ, ನಮ್ಮ ಹೊಳೆ-ಹಳ್ಳ-ನದಿ-ಕಣಿವೆಗಳ ಮೇಲೆ ದೊಣ್ಣೆ ನಾಯಕನ ಅಪ್ಪಣೆಯ ತೂಗುಗತ್ತಿ ಬೇಡ ಎಂದು ಈ ವಿರೋಧ! ಎಂದು ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...