Homeಕರ್ನಾಟಕಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

"ಈ 80 ಸಾವಿರ ಎಕರೆಯಷ್ಟು ಭಾರೀ ಭೂ ಪ್ರದೇಶವನ್ನು, ಸಹಜ ಕಾಡು ಬೆಳೆಯಬೇಕಾದ ಜಾಗವನ್ನು ಯಾರೋ ಒಬ್ಬ ವ್ಯಕ್ತಿ ಅಥವಾ ಒಂದು ಕಂಪನಿಯ ಲಾಭಕ್ಕಾಗಿ, ದಂಧೆಗಾಗಿ ಮತ್ತೆ ಬಿಟ್ಟುಕೊಡಲಾಗುತ್ತಿದೆ"

- Advertisement -
- Advertisement -

ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಯಡಿಯೂರಪ್ಪನವರ ಸರ್ಕಾರ, ಮಲೆನಾಡನ್ನು ಬೋಳುಗುಡ್ಡವಾಗಿಸಲು ಪ್ರಯತ್ನಿಸುತ್ತಿದೆ ಎಂದು ‘ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ’ ಆರೋಪಿಸಿದೆ. ಸರ್ಕಾರಿ ಅರಣ್ಯ ಭೂಮಿಯನ್ನು ಕಾನೂನುಬಾಹಿರವಾಗಿ ಖಾಸಗೀಕರಣಗೊಳಿಸಿ ಅದರ ಲಾಭವನ್ನು ಖಾಸಗಿ ಉದ್ಯಮಿಗಳಿಗೆ ನೀಡಲು ಪ್ರಯತ್ನಿಸಲಾಗುತ್ತಿದೆ. ಹಾಗಾಗಿ ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟದಿಂದ ಜನವರಿ 7 ರಂದು ಸಿಸಿಎಫ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದೇವೆ ಎಂದು ಒಕ್ಕೂಟದ ಮುಖ್ಯಸ್ಥರಾದ ಕೆ.ಪಿ.ಶ್ರೀಪಾಲ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೈಸೂರು ಪೇಪರ್ ಮಿಲ್ಸ್ (MPM) ಅನ್ನು ಖಾಸಗೀಕರಣ ಮಾಡುವುದರ ಜತೆಗೆ MPM ನೆಡುತೋಪಿನ ಅರಣ್ಯ ಇಲಾಖೆಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ನೀಡಲು ಮುಂದಾಗಿದೆ. ಈ ಸಂಬಂಧ ಅರಣ್ಯ ಇಲಾಖೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ

“ನಮ್ಮದು ಮಲೆನಾಡಿನ ಕಾಡು, ಕಾಡಿನೊಂದಿಗೆ ಬದುಕುವ ಜನ, ಕಾಡುಪ್ರಾಣಿಗಳು, ಸಸ್ಯ, ಹೊಳೆ-ಹಳ್ಳ, ನದಿ-ಕಣಿವೆಗಳಿಗೆ ಸಂಚಕಾರ ತಂದಿರುವ ಅರಣ್ಯ ಖಾಸಗೀಕರಣದ ಹುನ್ನಾರದ ವಿರುದ್ಧದ ಜನಹೋರಾಟ. ಕಾಡನ್ನು ಅದರ ಪಾಡಿಗೆ ಬಿಡಿ, ಕಾಡಿನಂಚಿನ ಮಲೆನಾಡಿನ ಸಕಲ ಜೀವ ಚರಾಚರಗಳ ಬದುಕನ್ನು ನಾಶ ಮಾಡಬೇಡಿ ಎಂದು ಸರ್ಕಾರಕ್ಕೆ ಮಲೆನಾಡಿಗರು ನೀಡುತ್ತಿರುವ ಎಚ್ಚರಿಕೆಯ ಹೋರಾಟ. ಕಾಡಿನ ಹೆಸರಲ್ಲಿ ದಂಧೆ ಮಾಡುವ ದಂಧೆಕೋರರ ವಿರುದ್ಧದ ಜನದನಿ” ಎಂದು ಹೇಳಿದರು.

ಕಳೆದ ಹಲವು ದಿನಗಳಿಂದ ಈ ಹೋರಾಟವನ್ನು ಸಂಘಟಿಸುತ್ತಿರುವ ಈ ಒಕ್ಕೂಟಕ್ಕೆ ನಾಡಿನ ಹತ್ತಾರು ಚಿಂತಕರು ಸಾಹಿತಿಗಳು, ತಜ್ಞರು ಬೆಂಬಲ ನೀಡಿದ್ದಾರೆ.

 

“ಸುಮಾರು 40 ವರ್ಷಗಳ ಹಿಂದೆ MPM ಕಾಗದ ಕಾರ್ಖಾನೆಯನ್ನು ಸರ್ಕಾರ ಆರಂಭಿಸಿದಾಗ ಅದಕ್ಕೆ ಕಚ್ಚಾವಸ್ತು ಸರಬರಾಜಿಗಾಗಿ ಮಲೆನಾಡಿನ ದಟ್ಟ ಕಾಡಿನ 32,000 ಹೆಕ್ಟೇರ್ (ಅಂದಾಜು 80 ಸಾವಿರ ಎಕರೆ) ಅರಣ್ಯ ಭೂಮಿಯನ್ನು 40 ವರ್ಷದ ಲೀಸ್ (ಗುತ್ತಿಗೆ) ಆಧಾರದ ಮೇಲೆ ನೀಡಲಾಗಿತ್ತು. ಲೀಸ್ ಅವಧಿ ಮುಗಿದ ಮೇಲೆ ಒಂದು ವೇಳೆ, ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಿಕೊಟ್ಟರೂ ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಕೊಡಬೇಕು ಎಂದು ಲೀಸಿನಲ್ಲಿ ಸರ್ಕಾರವೇ ಷರತ್ತು ಹಾಕಿತ್ತು”

ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಆ ಭೂಮಿಯಲ್ಲಿ ಬೆಳೆದುನಿಂತಿದ್ದ ಸಹಜ ಕಾಡನ್ನು ನಾಶಮಾಡಿದ ಕಂಪನಿ, ಅಲ್ಲಿ ಮಲೆನಾಡಿನ ಅಂತರ್ಜಲ ಮತ್ತು ಒಟ್ಟಾರೆ ಪರಿಸರಕ್ಕೆ ಮಾರಕವಾದ ಅಕೇಶಿಯಾ ಹಾಗೂ ನೀಲಗಿರಿ ಬೆಳೆದಿದೆ. ಸಾವಿರಾರು ಎಕರೆ ಪ್ರದೇಶದ ಕಾಡಿನ ಜಾಗದಲ್ಲಿ ಈ ವಿದೇಶಿ ತಳಿ ಮರಗಳನ್ನು ಬೆಳೆದ ಕಾರಣ ಮಲೆನಾಡಿನ ಪರಿಸರ, ವನ್ಯಜೀವಿ, ಜನಜೀವನ, ಹವಾಮಾನ ಮತ್ತು ನದಿ ಕಣಿವೆಯ ಜೊತೆ ಅಂತರ್ಜಲ ಮಟ್ಟದ ಮೇಲೆಯೂ ಸಾಕಷ್ಟು ಪರಿಣಾಮಗಳಾಗಿವೆ. ಈ ನಡುವೆ ನಷ್ಟದ ಸುಳಿಗೆ ಸಿಲುಕಿ MPM ಕಂಪನಿ ಮುಚ್ಚಿಹೋಗಿ ವರ್ಷಗಳೇ ಉರುಳಿವೆ.

ಈಗ, ಭೂಮಿಯ ಲೀಸ್ ಅವಧಿ ಮುಗಿದಿದೆ. ಆದರೆ ಸರ್ಕಾರ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿ ಪಡೆಯುವ ಬದಲು, ಮತ್ತೆ ಲೀಸ್ ನವೀಕರಣದ ಮೂಲಕ ಆ ಭೂಮಿಯನ್ನು ಮುಚ್ಚಿಹೋಗಿರುವ ಕಂಪನಿಗೆ ಪರಭಾರೆ ಮಾಡಿದೆ! ಏಕೆಂದರೆ; ಈ ಅಪಾರ ಪ್ರಮಾಣದ ಅಮೂಲ್ಯ ಭೂಮಿಯ ಮೇಲೆ ಸರ್ಕಾರದ ಆಯಕಟ್ಟಿನ ಜಾಗದಲ್ಲಿರುವವರ ಕಣ್ಣು ಬಿದ್ದಿದೆ. ಕಾರ್ಖಾನೆಯನ್ನು ಪುನರಾರಂಭಿಸುವ ನೆಪದಲ್ಲಿ ಮಲೆನಾಡಿನ ಈ ಭೂಮಿಯನ್ನು ತಮ್ಮ ವಶಕ್ಕೆ ಪಡೆದು ಅಲ್ಲಿ ವಾಣಿಜ್ಯ ಅರಣ್ಯಬೆಳೆ ಬೆಳೆಯುವ ದಂಧೆ ನಡೆಸಲು ಅವರು ಸಂಚು ಹೂಡಿದ್ದಾರೆ. ಅದಕ್ಕೆ ತಕ್ಕಂತೆ ಅರಣ್ಯ ಇಲಾಖೆ, ಸರ್ಕಾರ ಮತ್ತು ಸರ್ಕಾರದ ಚುಕ್ಕಾಣಿ ಹಿಡಿದವರೂ ಅವರಿಗೆ ಸಾಥ್ ನೀಡುತ್ತಿದ್ದಾರೆ. ಕಾರ್ಪೊರೇಟ್ ಕಂಪನಿಗಳೊಂದಿಗೆ ರಾಜಕಾರಣಿಗಳೂ, ಅಧಿಕಾರಿಗಳು ಕೈಜೋಡಿಸಿದ್ದಾರೆ.

ಇದನ್ನೂ ಓದಿ: ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ಈ ನಾಡದ್ರೋಹಿ, ಜನದ್ರೋಹಿ ವಿಷವರ್ತುಲ, ಇಡೀ ಮಲೆನಾಡಿನ ಅರಣ್ಯ ಪ್ರದೇಶವನ್ನೇ ತಮ್ಮ ಕಬ್ಜಕ್ಕೆ ಪಡೆದು, ಮಲೆನಾಡು ಮಾತ್ರವಲ್ಲದೆ, ಇಡೀ ರಾಜ್ಯಕ್ಕೇ ಶುದ್ಧ ಗಾಳಿ, ನೀರು, ಆಹಾರ ಮೂಲಿಕೆಗಳನ್ನು ನೀಡುವ ಕಾಡನ್ನೇ ಸರ್ವನಾಶ ಮಾಡುವ ಸಂಚು ಹೂಡಿದೆ. ಜಗತ್ತಿನ ಅತ್ಯಂತ ಸೂಕ್ಷ್ಮ ಪರಿಸರ ಪ್ರದೇಶಗಳಲ್ಲಿ ಒಂದಾದ ಪಶ್ಚಿಮ ಘಟ್ಟದ ಸಹ್ಯಾದ್ರಿ ಶ್ರೇಣಿಯನ್ನೇ ತಮ್ಮ ಜಹಗೀರು ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ಹೋರಾಟಗಾರರ ಒಕ್ಕೂಟವು ಆರೋಪಿಸಿದೆ.

ವಿರೋಧ ಯಾಕೆ?

ಈ 80 ಸಾವಿರ ಎಕರೆಯಷ್ಟು ಭಾರೀ ಭೂ ಪ್ರದೇಶವನ್ನು, ಸಹಜ ಕಾಡು ಬೆಳೆಯಬೇಕಾದ ಜಾಗವನ್ನು ಯಾರೋ ಒಬ್ಬ ವ್ಯಕ್ತಿ ಅಥವಾ ಒಂದು ಕಂಪನಿಯ ಲಾಭಕ್ಕಾಗಿ, ದಂಧೆಗಾಗಿ ಮತ್ತೆ ಬಿಟ್ಟುಕೊಡಲಾಗುತ್ತಿದೆ. ಅದು ಈಗಾಗಲೇ ವಿವಿಧ ಕಾರಣಗಳಿಂದಾಗಿ ಕರಗುತ್ತಿರುವ ಕಾಡಿಗೆ, ಬತ್ತಿ ಹೋಗಿರುವ ಅಂತರ್ಜಲಕ್ಕೆ, ಮಾಯವಾಗುತ್ತಿರುವ ವನ್ಯಜೀವಿಗಳಿಗೆ ಮತ್ತು ಅಂತಿಮವಾಗಿ ಸಾಕಷ್ಟು ಸಂಕಷ್ಟದಲ್ಲಿರುವ ಮಲೆನಾಡಿನ ನಮ್ಮ-ನಿಮ್ಮೆಲ್ಲರ ಬದುಕಿನ ಅಂತ್ಯವೇ ಆಗಲಿದೆ. ಕಾಡಿನ ನಡುವಿನಲ್ಲಿರುವ ನಮ್ಮ ಮನೆ, ಹೊಲ, ಗದ್ದೆಗಳಿಗೆ ಹೋಗಲೂ ಅವಕಾಶವಾಗದಂತೆ ಖಾಸಗಿ ಕಂಪನಿಗಳ ಬಲಿಷ್ಠ ಬೇಲಿಗಳು ಸುತ್ತುವರಿಯಲಿವೆ. ಅವರ ಅನುಮತಿ ಇಲ್ಲದೆ ನಮ್ಮ ಮನೆಗೆ ನಾನೇ ಹೋಗುವುದು ಕೂಡ ದುಸ್ತರವಾಗಲಿದೆ. ಹಾಗಾಗಿ ವಿರೋಧ. ನಮ್ಮ ಬದುಕಿನ ಮೇಲೆ ಮತ್ತೊಬ್ಬರ ಬೀಗ ಬೀಳುವುದಕ್ಕಾಗಿ ಈ ವಿರೋಧ, ನಮ್ಮ ಕಾಡಿನ ಮೇಲೆ, ಕಾಡಿನ ಜೀವಿಗಳ ಮೇಲೆ, ನಮ್ಮ ಹೊಳೆ-ಹಳ್ಳ-ನದಿ-ಕಣಿವೆಗಳ ಮೇಲೆ ದೊಣ್ಣೆ ನಾಯಕನ ಅಪ್ಪಣೆಯ ತೂಗುಗತ್ತಿ ಬೇಡ ಎಂದು ಈ ವಿರೋಧ! ಎಂದು ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...