Homeಚಳವಳಿಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಏಳು ಸುತ್ತಿನ ಮಾತುಕತೆ ವಿಫಲ. ಆದರೆ ಎಲ್ಲ ಮಾತುಕತೆ ಸಂದರ್ಭದಲ್ಲೂ ಸರ್ಕಾರದ ಊಟ ಮತ್ತು ನೀರನ್ನು ನಿರಾಕರಿಸುವ ಮೂಲಕ ರೈತರು ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ.

- Advertisement -
- Advertisement -

ಸರ್ಕಾರ ಆಟವಾಡುತ್ತಿದೆ. ಮಾತುಕತೆ ಎಂಬ ನಾಟಕ ಆಡುತ್ತಿದೆ. ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳು ಮಾತುಕತೆಗೆ ಹೋಗದಿದ್ದರೆ, ರೈತ ನಾಯಕರಿಗೆ ಸಮಸ್ಯೆ ಇತ್ಯರ್ಥವಾಗುವುದೇ ಬೇಕಿಲ್ಲ ಎಂದು ತನ್ನ ಬಾಲಂಗೋಚಿ ಮಾಧ್ಯಮಗಳ ಮೂಲಕ ಅಪಪ್ರಚಾರ ನಡೆಸುವ ಹುನ್ನಾರವನ್ನೂ ಸರ್ಕಾರ ಮಾಡುತ್ತಿದೆ.
ಆದರೆ ಮಾತುಕತೆಯ ಮಾರ್ಗವನ್ನು ಮುಕ್ತವಾಗಿ ಇಡುವ ಮೂಲಕ ರೈತ ಸಂಘಟನೆಗಳು ಪ್ರಜ್ಞಾವಂತಿಕೆ ಮೆರೆದಿವೆ. ಮಾತುಕತೆ ಹೆಸರಲ್ಲಿ ಪ್ರಭುತ್ವ ಎಂದಿನಂತೆ ರಮಿಸುವ ನಾಟಕ ಆಡುತ್ತಿದೆ. ಆದರೆ ರೈತರು ಇದಕ್ಕೆ ಬಗ್ಗುತ್ತಿಲ್ಲ. ಇನ್ನೊಂದು ಕಡೆ ಸರ್ಕಾರ ನಡೆಸುವ ಪಕ್ಷದ ವಿಕೃತ ಹಿಂಬಾಲಕ ಸಂಸ್ಥೆಗಳು ರೈತರನ್ನು, ಈ ಹೋರಾಟವನ್ನು ಸುಳ್ಳುಗಳ ಮೂಲಕ ಅವಹೇಳನ ಮಾಡುವುದು, ಪ್ರತಿಭಟನೆಗೆ ಕಳಂಕ ತರುವುದರಲ್ಲಿ ತುಂಬ ಕ್ರಿಯಾಶೀಲವಾಗಿವೆ. ಬಹುಪಾಲು ಮಾಧ್ಯಮಗಳು ಕೂಡ ಈ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ಮಾಡುವ ಮೂಲಕ ವೃತ್ತಿದ್ರೋಹ ಎಸಗುತ್ತಿವೆ.

ಪ್ರತಿ ಮಾತುಕತೆಯಲ್ಲೂ ಸರ್ಕಾರ ಏರ್ಪಡಿಸುವ ಭೋಜನ ನಿರಾಕರಿಸುತ್ತಿರುವ ರೈತ ಸಂಘಟನೆಗಳ ಮುಖಂಡರು, 6ನೆ ಸುತ್ತಿನ ಮಾತುಕತೆಯಲ್ಲಿ ಊಟ ಬೇಡಿದ ಕೇಂದ್ರ ಸಚಿವರಿಗೆ ರೊಟ್ಟಿ ನೀಡುವ ಮೂಲಕ ರೈತಾಪಿ ಸಮೂಹದ ನೀಡುವ ಪರಂಪರೆಗೆ ಸಾಂಕೇತಿಕ ಸಾಕ್ಷಿ ಒದಗಿಸಿದ್ದಾರೆ.

ಇತ್ತೀಚೆಗೆ ಮಾಜಿ ಹಣಕಾಸು ಸಚಿವ ಪಿ. ಚಿದಮಬರಂ ಈ ರೈತ ಹೋರಾಟದ ಬಗ್ಗೆ ಬರೆಯುತ್ತ, ‘ಇದು ನಮಗೆ 1942ರ ಅಗಸ್ಟ್ ತಿಂಗಳನ್ನು ನೆನಪಿಸುತ್ತಿದೆ. 1942 ಅಗಸ್ಟ್ 7-8 ರಂದು ಮುಂಬೈನ (ಆಗಿನ ಬಾಂಬೆ) ಗೋವಾಲಿಯಾ ಟ್ಯಾಂಕ್ ಮೈದಾನದಲ್ಲಿ ನಡೆದ ಐತಿಹಾಸಿಕ ಸಭೆಯಲ್ಲಿ, ಮಹಾತ್ಮ ಗಾಂಧಿ ‘ಮಾಡು ಇಲ್ಲವೇ ಮಡಿ’ ಘೋಷಣೆಯ ಮೂಲಕ ಭಾರತದಿಂದ ತೊಲಗಿ ಎಂದು ಬ್ರಿಟಿಷರನ್ನು ಎಚ್ಚರಿಸಿದ್ದರು. ಈಗಿನ ರೈತ ಹೋರಾಟದಲ್ಲಿ ಮಹಾತ್ಮ ಇಲ್ಲ, ಆದರೆ ರೈತರ ಮನಸ್ಸುಗಳ ತುಂಬ ಅಹಿಂಸಾತ್ಮಕ ಪ್ರತಿಭಟನೆಯ ಉತ್ಸಾಹವೇ ತುಂಬಿದೆ’ ಎಂದು ಉಲ್ಲೇಖಿಸಿದ್ದಾರೆ.

‘ಈ ರೈತ ಪ್ರತಿಭಟನೆಯು ಸರ್ಕಾರಗಳಿಗೆ (ಈಗಿನ ಮತ್ತು ಭವಿಷ್ಯದ ಸರ್ಕಾರಗಳಿಗೆ) ‘ಆಡಳಿತದಲ್ಲಿ ವಿನಮ್ರತೆ’ಯ ಅಗತ್ಯದ ಪಾಠಗಳನ್ನು ಕಲಿಸಲಿದೆ, ಸಂಸತ್ತಿನಲ್ಲಿ ಮಸೂದೆಗಳನ್ನು ಹೇಗೆ ಅಂಗೀಕಾರ ಮಾಡಬೇಕು, ಜನರ ಬಯಕೆಗಳ ಅನುಸಾರ ಹೇಗೆ ಆಡಳಿತ ನಡೆಸಬೇಕು ಎಂಬುದನ್ನೂ ಈ ಹೋರಾಟ ಕಲಿಸಲಿದೆ’ ಎಂದು ಚಿದಂಬರಂ ಬರೆದಿದ್ದಾರೆ.

ಇದಿರಲಿ, ಈ ಮಾತುಕತೆಯ ಆಟವನ್ನು ರೈತರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರತಿಭಟನೆಯ ಸ್ಥಳದಲ್ಲಿ ಸಂಭವಿಸಿದ ಸಾವುಗಳು ಮತ್ತು ಆತ್ಮಹತ್ಯೆಗಳ ಕುರಿತು ದೇಶದ ನಂಬರ್ 1 ಟ್ವಿಟರಿಸ್ಟ್ ಮೋದಿ ಏನನ್ನೂ ಟ್ವೀಟ್ ಮಾಡಿಲ್ಲ. ವಲಸೆ ಕಾರ್ಮಿಕರ ಸಾವುಗಳಿಗೂ ಅವರು ಸ್ಪಂದಿಸಲೇ ಇಲ್ಲವಲ್ಲ? ಆದರೆ ಸೌರವ್ ಗಂಗೂಲಿಗೆ ಅನಾರೋಗ್ಯವಾದಾಗ ಅವರು ಟ್ವೀಟ್ ಮಾಡುವುದನ್ನು ಮರೆಯಲಿಲ್ಲ.

ಈಗ ಮಾತುಕತೆ ಸಂದರ್ಭದಲ್ಲಿ ರೈತ ಹೋರಾಟಗಾರರು ಸರ್ಕಾರದ ಒಂದು ತುತ್ತನ್ನೂ ಮುಟ್ಟದೇ, ಹನಿ ನೀರನ್ನೂ ಕುಡಿಯದೇ ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ. ಇದು ನಮ್ಮೆಲ್ಲ ಪ್ರಗತಿಪರ ಸಂಘಟನೆಗಳಿಗೆ ಆದರ್ಶವಾಗಬೇಕಿದೆ.

ಏಳು ಸುತ್ತಿನ ಮಾತುಕತೆ ವಿಫಲವಾಗಿವೆ. ಕೊರೆವ ಚಳಿ, ಆಗಾಗ ಉದುರುತ್ತಿರುವ ಮಳೆಯನ್ನು ಎದುರಿಸುತ್ತಲೇ ರೈತರು ಸಂಯಮವನ್ನು ಕಾಪಾಡಿಕೊಂಡಿದ್ದಾರೆ. ಪ್ರೊ. ಅಮಿತ್ ಬಾಧುರಿ ಬರೆದಂತೆ, ಸಮುದ್ರದ ಅಲೆ ರಾಜಾಜ್ಞೆಗೆ ಕಾಯುವುದಿಲ್ಲ. ಈ ಸಲ ಅಲೆ ತನ್ನ ಶಕ್ತಿ ತೋರಿಸಬೇಕೆಂದರೆ ರೈತರೊಂದಿಗೆ ನಾವೆಲ್ಲ ಕೈ ಜೋಡಿಸಲೇಬೇಕು.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...