Homeಚಳವಳಿಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಏಳು ಸುತ್ತಿನ ಮಾತುಕತೆ ವಿಫಲ. ಆದರೆ ಎಲ್ಲ ಮಾತುಕತೆ ಸಂದರ್ಭದಲ್ಲೂ ಸರ್ಕಾರದ ಊಟ ಮತ್ತು ನೀರನ್ನು ನಿರಾಕರಿಸುವ ಮೂಲಕ ರೈತರು ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ.

- Advertisement -
- Advertisement -

ಸರ್ಕಾರ ಆಟವಾಡುತ್ತಿದೆ. ಮಾತುಕತೆ ಎಂಬ ನಾಟಕ ಆಡುತ್ತಿದೆ. ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳು ಮಾತುಕತೆಗೆ ಹೋಗದಿದ್ದರೆ, ರೈತ ನಾಯಕರಿಗೆ ಸಮಸ್ಯೆ ಇತ್ಯರ್ಥವಾಗುವುದೇ ಬೇಕಿಲ್ಲ ಎಂದು ತನ್ನ ಬಾಲಂಗೋಚಿ ಮಾಧ್ಯಮಗಳ ಮೂಲಕ ಅಪಪ್ರಚಾರ ನಡೆಸುವ ಹುನ್ನಾರವನ್ನೂ ಸರ್ಕಾರ ಮಾಡುತ್ತಿದೆ.
ಆದರೆ ಮಾತುಕತೆಯ ಮಾರ್ಗವನ್ನು ಮುಕ್ತವಾಗಿ ಇಡುವ ಮೂಲಕ ರೈತ ಸಂಘಟನೆಗಳು ಪ್ರಜ್ಞಾವಂತಿಕೆ ಮೆರೆದಿವೆ. ಮಾತುಕತೆ ಹೆಸರಲ್ಲಿ ಪ್ರಭುತ್ವ ಎಂದಿನಂತೆ ರಮಿಸುವ ನಾಟಕ ಆಡುತ್ತಿದೆ. ಆದರೆ ರೈತರು ಇದಕ್ಕೆ ಬಗ್ಗುತ್ತಿಲ್ಲ. ಇನ್ನೊಂದು ಕಡೆ ಸರ್ಕಾರ ನಡೆಸುವ ಪಕ್ಷದ ವಿಕೃತ ಹಿಂಬಾಲಕ ಸಂಸ್ಥೆಗಳು ರೈತರನ್ನು, ಈ ಹೋರಾಟವನ್ನು ಸುಳ್ಳುಗಳ ಮೂಲಕ ಅವಹೇಳನ ಮಾಡುವುದು, ಪ್ರತಿಭಟನೆಗೆ ಕಳಂಕ ತರುವುದರಲ್ಲಿ ತುಂಬ ಕ್ರಿಯಾಶೀಲವಾಗಿವೆ. ಬಹುಪಾಲು ಮಾಧ್ಯಮಗಳು ಕೂಡ ಈ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ಮಾಡುವ ಮೂಲಕ ವೃತ್ತಿದ್ರೋಹ ಎಸಗುತ್ತಿವೆ.

ಪ್ರತಿ ಮಾತುಕತೆಯಲ್ಲೂ ಸರ್ಕಾರ ಏರ್ಪಡಿಸುವ ಭೋಜನ ನಿರಾಕರಿಸುತ್ತಿರುವ ರೈತ ಸಂಘಟನೆಗಳ ಮುಖಂಡರು, 6ನೆ ಸುತ್ತಿನ ಮಾತುಕತೆಯಲ್ಲಿ ಊಟ ಬೇಡಿದ ಕೇಂದ್ರ ಸಚಿವರಿಗೆ ರೊಟ್ಟಿ ನೀಡುವ ಮೂಲಕ ರೈತಾಪಿ ಸಮೂಹದ ನೀಡುವ ಪರಂಪರೆಗೆ ಸಾಂಕೇತಿಕ ಸಾಕ್ಷಿ ಒದಗಿಸಿದ್ದಾರೆ.

ಇತ್ತೀಚೆಗೆ ಮಾಜಿ ಹಣಕಾಸು ಸಚಿವ ಪಿ. ಚಿದಮಬರಂ ಈ ರೈತ ಹೋರಾಟದ ಬಗ್ಗೆ ಬರೆಯುತ್ತ, ‘ಇದು ನಮಗೆ 1942ರ ಅಗಸ್ಟ್ ತಿಂಗಳನ್ನು ನೆನಪಿಸುತ್ತಿದೆ. 1942 ಅಗಸ್ಟ್ 7-8 ರಂದು ಮುಂಬೈನ (ಆಗಿನ ಬಾಂಬೆ) ಗೋವಾಲಿಯಾ ಟ್ಯಾಂಕ್ ಮೈದಾನದಲ್ಲಿ ನಡೆದ ಐತಿಹಾಸಿಕ ಸಭೆಯಲ್ಲಿ, ಮಹಾತ್ಮ ಗಾಂಧಿ ‘ಮಾಡು ಇಲ್ಲವೇ ಮಡಿ’ ಘೋಷಣೆಯ ಮೂಲಕ ಭಾರತದಿಂದ ತೊಲಗಿ ಎಂದು ಬ್ರಿಟಿಷರನ್ನು ಎಚ್ಚರಿಸಿದ್ದರು. ಈಗಿನ ರೈತ ಹೋರಾಟದಲ್ಲಿ ಮಹಾತ್ಮ ಇಲ್ಲ, ಆದರೆ ರೈತರ ಮನಸ್ಸುಗಳ ತುಂಬ ಅಹಿಂಸಾತ್ಮಕ ಪ್ರತಿಭಟನೆಯ ಉತ್ಸಾಹವೇ ತುಂಬಿದೆ’ ಎಂದು ಉಲ್ಲೇಖಿಸಿದ್ದಾರೆ.

‘ಈ ರೈತ ಪ್ರತಿಭಟನೆಯು ಸರ್ಕಾರಗಳಿಗೆ (ಈಗಿನ ಮತ್ತು ಭವಿಷ್ಯದ ಸರ್ಕಾರಗಳಿಗೆ) ‘ಆಡಳಿತದಲ್ಲಿ ವಿನಮ್ರತೆ’ಯ ಅಗತ್ಯದ ಪಾಠಗಳನ್ನು ಕಲಿಸಲಿದೆ, ಸಂಸತ್ತಿನಲ್ಲಿ ಮಸೂದೆಗಳನ್ನು ಹೇಗೆ ಅಂಗೀಕಾರ ಮಾಡಬೇಕು, ಜನರ ಬಯಕೆಗಳ ಅನುಸಾರ ಹೇಗೆ ಆಡಳಿತ ನಡೆಸಬೇಕು ಎಂಬುದನ್ನೂ ಈ ಹೋರಾಟ ಕಲಿಸಲಿದೆ’ ಎಂದು ಚಿದಂಬರಂ ಬರೆದಿದ್ದಾರೆ.

ಇದಿರಲಿ, ಈ ಮಾತುಕತೆಯ ಆಟವನ್ನು ರೈತರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರತಿಭಟನೆಯ ಸ್ಥಳದಲ್ಲಿ ಸಂಭವಿಸಿದ ಸಾವುಗಳು ಮತ್ತು ಆತ್ಮಹತ್ಯೆಗಳ ಕುರಿತು ದೇಶದ ನಂಬರ್ 1 ಟ್ವಿಟರಿಸ್ಟ್ ಮೋದಿ ಏನನ್ನೂ ಟ್ವೀಟ್ ಮಾಡಿಲ್ಲ. ವಲಸೆ ಕಾರ್ಮಿಕರ ಸಾವುಗಳಿಗೂ ಅವರು ಸ್ಪಂದಿಸಲೇ ಇಲ್ಲವಲ್ಲ? ಆದರೆ ಸೌರವ್ ಗಂಗೂಲಿಗೆ ಅನಾರೋಗ್ಯವಾದಾಗ ಅವರು ಟ್ವೀಟ್ ಮಾಡುವುದನ್ನು ಮರೆಯಲಿಲ್ಲ.

ಈಗ ಮಾತುಕತೆ ಸಂದರ್ಭದಲ್ಲಿ ರೈತ ಹೋರಾಟಗಾರರು ಸರ್ಕಾರದ ಒಂದು ತುತ್ತನ್ನೂ ಮುಟ್ಟದೇ, ಹನಿ ನೀರನ್ನೂ ಕುಡಿಯದೇ ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ. ಇದು ನಮ್ಮೆಲ್ಲ ಪ್ರಗತಿಪರ ಸಂಘಟನೆಗಳಿಗೆ ಆದರ್ಶವಾಗಬೇಕಿದೆ.

ಏಳು ಸುತ್ತಿನ ಮಾತುಕತೆ ವಿಫಲವಾಗಿವೆ. ಕೊರೆವ ಚಳಿ, ಆಗಾಗ ಉದುರುತ್ತಿರುವ ಮಳೆಯನ್ನು ಎದುರಿಸುತ್ತಲೇ ರೈತರು ಸಂಯಮವನ್ನು ಕಾಪಾಡಿಕೊಂಡಿದ್ದಾರೆ. ಪ್ರೊ. ಅಮಿತ್ ಬಾಧುರಿ ಬರೆದಂತೆ, ಸಮುದ್ರದ ಅಲೆ ರಾಜಾಜ್ಞೆಗೆ ಕಾಯುವುದಿಲ್ಲ. ಈ ಸಲ ಅಲೆ ತನ್ನ ಶಕ್ತಿ ತೋರಿಸಬೇಕೆಂದರೆ ರೈತರೊಂದಿಗೆ ನಾವೆಲ್ಲ ಕೈ ಜೋಡಿಸಲೇಬೇಕು.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...