Homeಮುಖಪುಟಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ಹರಿಯಾಣದ ವಿವಿಧ ಕಡೆ ರೈತ ಮಹಿಳೆಯರಿಗೆ ಈಗ ಟ್ರ್ಯಾಕ್ಟರ್ ಚಲಾಯಿಸುವ ತರಬೇತಿಯನ್ನು ನೀಡಲಾಗುತ್ತಿದೆ.

- Advertisement -
- Advertisement -

ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂಬ ತಮ್ಮ ಬೇಡಿಕೆ ಈಡೇರದಿದ್ದರೆ ಜನವರಿ 26ರ ಗಣರಾಜ್ಯೋತ್ಸವದಂದು ರಾಜಧಾನಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ನಡೆಸುವುದಾಗಿ ರೈತ ಸಂಘಟನೆಗಳು ಘೋಷಿಸಿದ ಬೆನ್ನಲ್ಲೇ ಹರಿಯಾಣದ ರೈತ ಮಹಿಳೆಯರು ಈಗ ನೂರಾರು ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿದ್ದಾರೆ.

ಹರಿಯಾಣದ ಹಲವು ಕಡೆ ರೈತ ಮಹಿಳೆಯರಿಗೆ ಟ್ರ್ಯಾಕ್ಟರ್ ಚಲಾಯಿಸುವ ತರಬೇತಿಯನ್ನು ನೀಡಲಾಗುತ್ತಿದ್ದು, ಸೋಮವಾರ ಜಿಂದ್ ಜಿಲ್ಲೆಯ ಖತ್ಕರ್ ಎಂಬಲ್ಲಿ ಇಂತಹ ಒಂದು ಕಾರ್ಯಾಗಾರ ನಡೆದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಎರಡನೆ ತಿಂಗಳಿಗೆ ಹೆಜ್ಜೆ ಇಟ್ಟಿರುವ ದೆಹಲಿ ಗಡಿಗಳಲ್ಲಿನ ರೈತ ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ರೈತ ಮಹಿಳೆಯರು ಭಾಗವಹಿಸಿದ್ದಾರೆ. ಜನವರಿ 26ರಂದು ರಾಜಧಾನಿಯಲ್ಲಿ ನಡೆಯುವ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಮಹಿಳೆಯರು ಟ್ರ್ಯಾಕ್ಟರ್ ನಡೆಸುವ ಮೂಲಕ ಹರಿಯಾಣದ ಪುರುಷ ಪ್ರಧಾನ ಸಮಾಜದಲ್ಲಿ ಹೊಸ ಬದಲಾವಣೆಯನ್ನು ಸೂಚಿಸಲಿದ್ದಾರೆ.

‘ತಖ್ತರ್‌ನ ಟೋಲ್ ಪ್ಲಾಜಾ ಬಳಿಯ ಹೆದ್ದಾರಿಯಲ್ಲಿ ನಮ್ಮ ಜಿಲ್ಲೆಯ ನೂರಕ್ಕೂ ಹೆಚ್ಚು ಮಹಿಳೆಯರು ಟ್ರ್ಯಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದೇವೆ. ರೈತ ಪ್ರತಿಭಟನೆಯ ರ‍್ಯಾಲಿಯಲ್ಲಿ ನಾವು ಟ್ರ್ಯಾಕ್ಟರ್ ಚಲಾಯಿಸಿ ನಮ್ಮ ಪ್ರತಿರೋಧ ದಾಖಲಿಸಲಿದ್ದೇವೆ’ ಎನ್ನುತ್ತಾರೆ ಸಫಾ ಖೇರಿ ಗ್ರಾಮದ ಸಿಕ್ಕಿಂ ನೈನ್ ಎಂಬ ಮಹಿಳೆ.

‘ಪ್ರತಿಭಟನೆಯಲ್ಲಿ ಈಗ ಮಹಿಳಾ ಶಕ್ತಿಯೂ ಸೇರಿಕೊಂಡಿದೆ. ನಾವು ಹಿಂದಕ್ಕೆ ಹೆಜ್ಜೆ ಇಡುವುದಿಲ್ಲ. ನಮ್ಮನ್ನು ಹಗುರವಾಗಿ ಪರಿಗಣಿಸಬೇಡಿ. ಇದು ಎರಡನೇ ಸ್ವಾತಂತ್ರ್ಯ ಸಂಗ್ರಾಮ. ಈಗ ನಾವು ಪ್ರತಿಭಟನೆ ಮಾಡದೇ ಹೋದರೆ ನಮ್ಮ ಮುಂದಿನ ತಲೆಮಾರಿಗೆ ಏನಂತ ಉತ್ತರಿಸಲು ಸಾಧ್ಯ’ ಎಂದು ಅವರು ಹೇಳಿದ್ದಾರೆ.

ಖತ್ಕರ್ ಗ್ರಾಮದ ಸರಜಾ ರಾಜಪಾಲಾ ಎನ್ನುವ 35 ವರ್ಷದ ಮಹಿಳೆ, “ನಾನು ರೈತರ ಮಗಳು. ಇಲ್ಲಿವರೆಗೆ ಸರ್ಕಾರಗಳು ರೈತರ ಮೇಲೆ ಸಾಕಷ್ಟು ದೌರ್ಜನ್ಯ ನಡೆಸಿವೆ. ಇನ್ನು ಮುಂದೆ ನಾವು ಇದನ್ನು ಸಹಿಸೆವು. ಎದೆ ಸೆಟೆಸಿ ಹೋರಾಡುವೆವು” ಎಂದಿದ್ದಾರೆ.

‘ಖತ್ಕರ್, ಸಫಾ ಖೇರಿ, ಬರ್ಸೊಲಾ, ಪೌಕ್ರಿ ಖೇರಿ ಮುಂತಾದ ಗ್ರಾಮಗಳ ರೈತ ಮಹಿಳೆಯರು ಟ್ರ್ಯಾಕ್ಟರ್ ಚಲಾಯಿಸುವುದನ್ನು ಕಲಿಯಲು ಬರುತ್ತಿದ್ದಾರೆ’ ಎಂದು ರೈತ ವಿಜೇಂದರ್ ಸಂಧು ಹೇಳಿದ್ದಾರೆ.

ಮಹಿಳೆಯರು ಈ ಕ್ರಮಕ್ಕೆ ಮುಂದಾಗಿರುವುದು ಹೋರಾಟದಲ್ಲಿ ಒಂದು ದೊಡ್ಡ ನೆಗೆತವಾಗಿದೆ, ಇದು ಅನಿವಾರ್ಯವೂ ಆಗಿದೆ ಎಂದು ಹಿರಿಯ ರೈತ ಸತ್ಬೀರ್ ಪೆಹ್ಲವಾಲಾ ತಿಳಿಸಿದ್ದಾರೆ. ‘ನಮ್ಮ ಮಕ್ಕಳು ಅಂತಾರಾಷ್ಟ್ರೀಯ ಗಡಿಗಳಲ್ಲಿ ಪ್ರತಿಭಟಿಸುತ್ತಿದ್ದಾರೆ, ನಮ್ಮ ಜನರು ದೇಶದ ರಾಜಧಾನಿಗೆ ಘೇರಾವ್ ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ.

ಖಾಪ್ ಮುಖ್ಯಸ್ಥ ಅಜಾದ್ ಸಿಂಗ್ ಕೂಡ ಮಹಿಳೆಯರ ಹೋರಾಟ ಬೆಂಬಲಿಸಿದ್ದು, ಗಣರಾಜ್ಯೋತ್ಸವದಂದು ನಡೆಯುವ ಸೈನಿಕರ ಪರೇಡ್‌ನಂತೆಯೇ ನಮ್ಮ ಪರೇಡ್ ಕೂಡ ನಡೆಯಲಿದೆ ಎಂದಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...