Homeಚಳವಳಿಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ಗ್ರಾಹಕರಾಗಿ ನಾವು ಪ್ರತಿಭಟಿಸುತ್ತಿರುವ ರೈತರಿಗೆ ಕೃತಜ್ಞರಾಗಿರಬೇಕು ಮತ್ತು ತುಂಬು ಹೃದಯದಿಂದ ಅವರ ಹೋರಾಟವನ್ನು ಬೆಂಬಲಿಸಬೇಕು.

- Advertisement -
- Advertisement -

ನೀವು ಮೋದಿ ಸರ್ಕಾರ ಪಾಸು ಮಾಡಿರುವ ಮೂರು ಕೃಷಿ ಮಸೂದೆಗಳನ್ನು ಓದಿದರೆ ಅರ್ಥವಾಗುತ್ತದೆ: ಈ ಕಾಯ್ದೆಗಳು ಕೇವಲ ರೈತರಿಗಷ್ಟೇ ಮಾರಕವಲ್ಲ, ಬದಲಿಗೆ ನಮ್ಮ ನಿಮ್ಮಂತಹ ಸಾಮಾನ್ಯ ಜನರ ಬದುಕಿಗೂ ಕೊಳ್ಳಿ ಇಡಲಿವೆ ಎಂಬ ಸತ್ಯ. ಮಾರುಕಟ್ಟೆಗಳು ಬೃಹತ್ ಕಾರ್ಪೋರೇಟ್ ತಿಮಿಂಗಲುಗಳ ವಶವಾಗಲಿದ್ದು, ಈ ಮಾರುಕಟ್ಟೆಗಳು ಅವರ ಬಿಗಿ ಹಿಡಿತಕ್ಕೆ ಒಳಗಾಗಲಿವೆ. ಏಕೆಂದರೆ ಈ ಕಾಯ್ದೆಗಳ ಪರಿಣಾಮವಾಗಿ ಕಾರ್ಪೊರೇಟ್‌ಗಳು ಆಹಾರ ಪದಾರ್ಥಗಳನ್ನು ಅನಿಯಮಿತವಾಗಿ ಸಂಗ್ರಹಿಸಬಹುದು, ಅದೂ ಕಾನೂನಾತ್ಮಕ ಬೆಂಬಲದಿಂದ ಸಂಗ್ರಹಿಸಬಹುದು. ಈ ದೊಡ್ಡ ಕಾರ್ಪೊರೇಟ್‌ಗಳ ಕುತ್ತಿಗೆ ಹಿಸುಕುವ ಬೆಲೆ ಸ್ಪರ್ಧೆಯಿಂದಾಗಿ ರೈತರು ಕೃಷಿಯನ್ನೇ ತೊರೆಯಬಹುದು.

ಈ ಕಾಯ್ದೆಯ ಉಪ-ವಿಭಾಗ 1-ಎ ನ ಕ್ಲಾಜ್ ‘ಬಿ’ ಅನ್ನು ಒಮ್ಮೆ ಓದಿ ನೋಡಿ. ಸಂಗ್ರಹಣಾ ಮಿತಿಯನ್ನು ನಿಯಂತ್ರಿಸುವ ಆದೇಶವು ಯಾವುದೇ ಕೃಷಿ ಉತ್ಪನ್ನಗಳ ನಿರ್ವಹಣೆ ಅಥವಾ ಮೌಲ್ಯ ವರ್ಧನೆಯಲ್ಲಿ ಭಾಗಿಯಾಗುವವರಿಗೆ ಅನ್ವಯಿಸುವುದಿಲ್ಲ. ಅಂತಹ ವ್ಯಕ್ತಿಯ ಸಂಗ್ರಹಣಾ (ಸ್ಟಾಕ್) ಮಿತಿಯು ಸಂಸ್ಕರಿಸಿದ ಸಾಮರ್ಥ್ಯದ ಒಟ್ಟಾರೆ ಸೀಲಿಂಗ್ ಅನ್ನು ಮೀರದಿದ್ದರೆ ಅಥವಾ ರಫ್ತುದಾರನಾಗಿದ್ದಲ್ಲಿ ರಫ್ತು ಬೇಡಿಕೆಯನ್ನು ಮೀರದಿದ್ದಲ್ಲಿ ಆತ ಸುರಕ್ಷಿತ.

ಮೌಲ್ಯ ಸರಪಳಿಯಲ್ಲಿ (ವ್ಯಾಲ್ಯೂ ಚೈನ್) ಭಾಗಿಯಾಗುವವರನ್ನು ಕಾಯ್ದೆಯಲ್ಲಿ ಹೀಗೆ ವ್ಯಾಖ್ಯಾನಿಸಲಾಗಿದೆ: ಯಾವುದೇ ಕೃಷಿ ಉತ್ಪನ್ನಕ್ಕೆ ಸಂಬಂಧಿಸಿದಂತೆ “ಮೌಲ್ಯ ಸರಪಳಿ ಭಾಗಿದಾರರರು” ಎಂಬ ಅಭಿವ್ಯಕ್ತಿ, ಯಾವುದೇ ಉತ್ಪಾದನೆಯಿಂದ ಭಾಗವಹಿಸುವವರ ಗುಂಪನ್ನು ಅರ್ಥೈಸುತ್ತದೆ ಮತ್ತು ಅವರನ್ನು ಒಳಗೊಂಡಿದೆ. ಅದು ಕೃಷಿ ಕ್ಷೇತ್ರದಲ್ಲಿ ಕೃಷಿ ಉತ್ಪನ್ನಗಳ ಅಂತಿಮ ಬಳಕೆಯವರೆಗೂ ವ್ಯಾಪಿಸಿದೆ. ಸಂಸ್ಕರಣೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾರಿಗೆ ಮತ್ತು ವಿತರಣೆಯನ್ನು ಒಳಗೊಂಡಿರುತ್ತದೆ, ಅಲ್ಲಿ ಪ್ರತಿ ಹಂತದಲ್ಲೂ ಉತ್ಪನ್ನಕ್ಕೆ ಮೌಲ್ಯವನ್ನು ಸೇರಿಸಲಾಗುತ್ತದೆ “.

ಇತರ ರೈತರಿಗೆ ಕೆಲವು ನಿರ್ಬಂಧ ಹೇರಲಾಗಿದೆ. ಯಾಕೀ ತಾರತಮ್ಯ? ರೈತರು ಮತ್ತು ಗ್ರಾಹಕರು ಈ ಕಾರ್ಪೊರೇಟ್‌ಗಳ ಮರ್ಜಿಗೆ ಬಿದ್ದು, ಬಿಗ್ ಕಾರ್ಪೊರೇಟ್‌ಗಳಿಗೆ ಕೃಷಿಯ ಮೇಲೆ ನಿಯಂತ್ರಣ ಸಾಧಿಸಲು ಈ ಕಾಯ್ದೆ ಅವಕಾಶ ನೀಡುತ್ತದೆ.

‘ಕ್ಲಾಜ್ ‘ಬಿ’ ಅನ್ವಯ, ಸಂಗ್ರಹಣಾ ಮಿತಿಯನ್ನು ಹೇರುವ ಯಾವುದೇ ಕ್ರಮವು ಬೆಲೆ ಏರಿಕೆಯನ್ನು ಆಧರಿಸುತ್ತದೆ. ಯಾವುದೇ ಕೃಷಿ ಉತ್ಪನ್ನಗಳ ಸಂಗ್ರಹಣೆಯ ಮಿತಿ ಮೇಲೆ ನಿರ್ಬಂಧ ಹೇರುವುದು ಈ ಕೆಳಗಿನ ಅಂಶಗಳನ್ನು ಅವಲಂಭಿಸಿದೆ:
1. ತೋಟಗಾರಿಕಾ ಉತ್ಪನ್ನಗಳ ಚಿಲ್ಲರೆ ಮಾರಾಟ ದರದಲ್ಲಿ ಶೇ. 100ರಷ್ಟು ಏರಿಕೆಯಾದ ಸಂದರ್ಭದಲ್ಲಿ. ಅಥವಾ
2. ನಾಶವಾಗದ ಕೃಷಿ ಆಹಾರ ಪದಾರ್ಥಗಳ ಚಿಲ್ಲರೆ ಬೆಲೆಯಲ್ಲಿ ಶೇ. 50ರಷ್ಟು ಏರಿಕೆಯಾದ ಸಂದರ್ಭದಲ್ಲಿ.
ಈ ಎರಡು ಸಂದರ್ಭಗಳಲ್ಲಿ. ಹನ್ನೆರಡು ತಿಂಗಳುಗಳ ಹಿಂದಿನ ಚಾಲ್ತಿಯಲ್ಲಿರುವ ಬೆಲೆ ಅಥವಾ ಕಳೆದ ಐದು ವರ್ಷಗಳ ಸರಾಸರಿ ಚಿಲ್ಲರೆ ಬೆಲೆ, ಯಾವುದು ಕಡಿಮೆ ಇರುತ್ತದೋ ಅದು ಲಾಗೂ ಆಗುತ್ತದೆ.

1955ರ ಅಗತ್ಯ ವಸ್ತುಗಳ ಕಾಯ್ದೆಗೆ ತಂದ ತಿದ್ದುಪಡಿಯ ಪ್ರಕಾರ,
ಎ.) ಅಸಾಧಾರಣ ಸಂದರ್ಭಗಳಲ್ಲಿ (ಯುದ್ಧ, ಕ್ಷಾಮ, ಅಸಾಧಾರಣ ಬೆಲೆ ಏರಿಕೆ ಮತ್ತು ನೈಸರ್ಗಿಕ ವೈಪರೀತ್ಯ) ಮಾತ್ರ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳು, ಆಲೂಗಡ್ಡೆ, ಈರುಳ್ಳಿ, ಖಾದ್ಯ ಎಣ್ಣೆಕಾಳುಗಳು ಮತ್ತು ತೈಲಗಳು ಸೇರಿದಂತೆ ಅಂತಹ ಆಹಾರ ಪದಾರ್ಥಗಳ ಪೂರೈಕೆಯನ್ನು ಕೇಂದ್ರ ಸರ್ಕಾರವು ಅಧಿಕೃತ ಗೆಜೆಟ್‌ನಲ್ಲಿ ನಿರ್ದಿಷ್ಟಪಡಿಸಿ, ಅಧಿಸೂಚನೆಯ ಮೂಲಕ ಮಾತ್ರ ನಿಯಂತ್ರಿಸಬಹುದು.

ವಿವರಣೆ: ಕೃಷಿಗೆ ಸಂಬಂಧಿಸಿದಂತೆ ‘ಮೌಲ್ಯ ಸರಪಳಿಯ ಭಾಗಿದಾರರು’ : ಜಮೀನಿನಲ್ಲಿ ಉತ್ಪನ್ನವಾಗುವುದರಿಂದ ಹಿಡಿದು ಕೊನೆಯ ಗ್ರಾಹಕರು ಇದರ ವ್ಯಾಪ್ತಿಗೆ ಬರುತ್ತಾರೆ. ಇದರಲ್ಲಿ ಸಂಸ್ಕರಣೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾಗಾಣಿಕೆ ಮತ್ತು ವಿತರಣೆಯ ಹಂತಗಳಿವೆ. ಪ್ರತಿ ಹಂತದಲ್ಲೂ ಮೌಲ್ಯ ವರ್ಧನೆ ಆಗುತ್ತದೆ.

ಇದರ ಒಟ್ಟು ತಾತ್ಪರ್ಯವೆಂದರೆ, ಯಾವುದನ್ನೂ ಕುರುಡಾಗಿ ನಂಬಬೇಡಿ, ನಿಮ್ಮ ಶಿಕ್ಷಣ ಮತ್ತು ಬುದ್ಧಿಯನ್ನು ಬಳಸಿ ಒಂದು ಮಾಹಿತಿಯುಕ್ತ ಅಭಿಪ್ರಾಯವನ್ನು ಸೃಷ್ಟಿಸಿ.

ಗ್ರಾಹಕರಾಗಿ ನಾವು ಪ್ರತಿಭಟಿಸುತ್ತಿರುವ ರೈತರಿಗೆ ಕೃತಜ್ಞರಾಗಿರಬೇಕು ಮತ್ತು ತುಂಬು ಹೃದಯದಿಂದ ಅವರ ಹೋರಾಟವನ್ನು ಬೆಂಬಲಿಸಬೇಕು.

ಈ ಮೂರು ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ನಮ್ಮ-ನಿಮ್ಮಂತಹ ಗ್ರಾಹಕರಿಗೂ ಮಾರಕವಾಗಿವೆ. ಏಕೆಂದರೆ, ‘ಮೌಲ್ಯ ಸರಪಳಿ ಭಾಗಿದಾರರು” ಎಂದು ಕರೆಯಲ್ಪಡುವ ಈ ದೊಡ್ಡ ಕಂಪನಿಗಳು ಯಾವುದೇ ಮಿತಿಗಳಿಲ್ಲದೆ ಸಂಗ್ರಹಿಸಬಹುದು. ಆದರೆ ಮಿತಿಗಳು ರೈತರಿಗೆ ಮಾತ್ರ ಅನ್ವಯಿಸುತ್ತವೆ. ಇದು ಹೊಸ ತಿದುಪಡಿಯ ಅಂಶ.

ಅಂತಿಮವಾಗಿ, ಈ ದೊಡ್ಡ ಕಾರ್ಪೋರೇಟ್‌ಗಳು ಬೃಹತ್ತಾಗಿ ಸಂಗ್ರಹಿಸಿಡುತ್ತವೆ ಮತ್ತು ರೈತರಿಗೆ ಕಡಿಮೆ ಬೆಲೆಯನ್ನು ನೀಡುವ ಮೂಲಕ ಪೂರೈಕೆಯನ್ನು ನಿಯಂತ್ರಿಸುತ್ತವೆ. ಇನ್ನೊಂದು ಕಡೆ ಅನಿಯಮಿತ ಸಂಗ್ರಹಣೆ ಮೂಲಕ ಕೊರತೆಯನ್ನು ಉಂಟು ಮಾಡಿ ಗ್ರಾಹಕರ ಬೇಡಿಕೆಯ ಮೇಲೆ ನಿಯಂತ್ರಣ ಹೊಂದುತ್ತವೆ.

  • ಆದರ್ಶ್ ಆರ್ ಅಯ್ಯರ್

(ಆದರ್ಶ್ ಆರ್ ಅಯ್ಯರ್ ರವರು ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷರು)


ಇದನ್ನೂ ಓದಿ: ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...