Homeಮುಖಪುಟಮಲೆಂಗಾವ್ ಸ್ಪೋಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

ಮಲೆಂಗಾವ್ ಸ್ಪೋಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

2018ರ ಅಕ್ಟೋಬರ್‌ನಲ್ಲಿ ಪ್ರಗ್ಯಾ ಸಿಂಗ್ ಠಾಕೂರ್, ಕರ್ನಲ್ ಪುರೋಹಿತ್ ಸೇರಿದಂತೆ ಇತರ ಐವರ ಮೇಲೆ ನ್ಯಾಯಾಲಯ ಭಯೋತ್ಪಾದನೆಯ ಪ್ರಕರಣ ದಾಖಲಿಸಿತ್ತು.

- Advertisement -
- Advertisement -

2008ರ ಮಲೆಂಗಾವ್ ಸ್ಪೋಟ ಪ್ರಕರಣದ ಏಳು ಆರೋಪಿಗಳಲ್ಲಿ ಒಬ್ಬರಾದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಮುಂಬೈನ ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯಕ್ಕೆ ನಿಯಮಿತವಾಗಿ ಹಾಜರಾಗುವುದರಿಂದ ಇಂದು ವಿನಾಯಿತಿ ಪಡೆದಿದ್ದಾರೆ.

ಪ್ರಗ್ಯಾ ಸಿಂಗ್ ಠಾಕೂರ್‌ರವರು ಹಲವು ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರು ತಮ್ಮ ಭೋಪಾಲ್ ಕ್ಷೇತ್ರದ ಜವಾಬ್ದಾರಿ ಹೊತ್ತಿದ್ದಾರೆ. ಅಲ್ಲದೆ ಅವರಿಗೆ ಜೀವ ಬೆದರಿಕೆ ಇದೆ. ಈ ಎಲ್ಲಾ ಕಾರಣಗಳಿಂದ ಅವರು ಮುಂಬೈನ ನ್ಯಾಯಾಲಯಕ್ಕೆ ನಿಯಮಿತವಾಗಿ ಹಾಜರಾಗಲು ಸಾಧ್ಯವಿಲ್ಲ ಎಂದು ಪ್ರಗ್ಯಾ ಪರ ವಕೀಲ ಜೆ.ಪಿ ಮಿಶ್ರಾ ಲಿಖಿತ ಅರ್ಜಿ ಸಲ್ಲಿಸಿದ್ದರು.

ಪ್ರಗ್ಯಾ ಹಲವು ಆರೋಗ್ಯ ಸಮಸ್ಯೆಗಳಿಗೆ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಕೂಡ ಮುಂಬೈನ ಕೊಕಿಲಾಬೆನ್‌ ಆಸ್ಪತ್ರೆಯಲ್ಲಿ ಹಲವು ಪರೀಕ್ಷೆಗಳಿಗೆ ಒಳಗಾಗಿದ್ದಾರೆ. ಅವರ ಆರೋಗ್ಯಕ್ಕಾಗಿ ಹಲವು ವೈದ್ಯರು ಚಿಕಿತ್ಸೆ ನೀಡಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಅರ್ಜಿ ಆಲಿಸಿದ ಪ್ರಬ್ಲಿಕ್ ಪ್ರಾಸಿಕ್ಯೂಸರ್ ಅವಿನಾಶ್ ರಸಲ್ “ಅಗತ್ಯವಿದ್ದಾಗ ಮಾತ್ರ ನ್ಯಾಯಾಲಯಕ್ಕೆ ಹಾಜರಾಗಲಿ, ಉಳಿದಂತೆ ನಿಯಮಿತವಾಗಿ ಅವರ ಹಾಜರಾಗಬೇಕಿಲ್ಲ” ಎಂದು ತಿಳಿಸಿದ್ದಾರೆ.

ಈ ಹಿಂದೆ ಹಲವು ಬಾರಿ ಅವರು ನ್ಯಾಯಾಲಯದ ವಿಚಾರಣೆಗೆ ತಪ್ಪಿಸಿಕೊಂಡಿದ್ದರು. 2 ತಿಂಗಳಿಂದ ಹಾಜರಾಗದ ಅವರ ನಡೆಗೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. 2020ರ ಡಿಸೆಂಬರ್ 19 ರಂದು ಅವರು ನ್ಯಾಯಾಲಯಕ್ಕೆ ಹಾಜರಾಗಲು ಇದು ಕೊನೆಯ ಅವಕಾಶ ಎಂದು ಎಚ್ಚರಿಸಿದ್ದರು.

2008ರ ಸೆಪ್ಟಂಬರ್ 29 ರಂದು ಸ್ಪೋಟಕಗಳನ್ನೊಳಗೊಂಡಿದ್ದ ಮೋಟಾರ್ ಸೈಕಲ್‌ ಒಂದನ್ನು ಮಲೆಂಗಾವ್‌ನ ಮಸೀದಿಯೊಂದಕ್ಕೆ ನುಗ್ಗಿಸಿ ಸ್ಪೋಟಿಸಲಾಗಿತ್ತು. ಈ ಘಟನೆಯಲ್ಲಿ 6 ಜನ ಮೃತಪಟ್ಟು, 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಘಟನೆ ನಡೆದ 10 ವರ್ಷಗಳ ನಂತರ 2018ರ ಅಕ್ಟೋಬರ್‌ನಲ್ಲಿ ಪ್ರಗ್ಯಾ ಸಿಂಗ್ ಠಾಕೂರ್, ಕರ್ನಲ್ ಪುರೋಹಿತ್ ಸೇರಿದಂತೆ ಇತರ ಐವರ ಮೇಲೆ ನ್ಯಾಯಾಲಯ ಭಯೋತ್ಪಾದನೆಯ ಪ್ರಕರಣ ದಾಖಲಿಸಿತ್ತು.

ಇಂದು ನ್ಯಾಯಾಲಯಕ್ಕೆ ಹಾಜರಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಲ್ಲು ತೂರುವವರ ವಿರುದ್ಧ ಕಾನೂನು ತಂದಿರುವ ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್‌ ಚೌಹಾಣ್‌ರವರಿಗೆ ಧನ್ಯವಾದ ತಿಳಿಸಿದ್ದಾರೆ.


ಇದನ್ನೂ ಓದಿ: ಮಾಲೆಗಾಂವ್‌‌ ಸ್ಪೋಟ: 2 ನೇ ಬಾರಿಯೂ ವಿಚಾರಣೆಗೆ ತಪ್ಪಿಸಿಕೊಂಡ ಪ್ರಜ್ಞಾ ಸಿಂಗ್ ಠಾಕೂರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...