Homeಚಳವಳಿರೈತರ ವಿರುದ್ಧ 'NAGA - ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ' ಕಂಪನಿ ನಿಂತಿದೆ: ಶ್ರೀ ಹರ್ಷಾನಂದ್‌ಜಿ...

ರೈತರ ವಿರುದ್ಧ ‘NAGA – ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ’ ಕಂಪನಿ ನಿಂತಿದೆ: ಶ್ರೀ ಹರ್ಷಾನಂದ್‌ಜಿ ಮಹಾರಾಜ್

ಜಗತ್ತಿನ ಎಲ್ಲ ವಸ್ತುಗಳನ್ನು ಮಾರುವವನು ನಿರ್ಧಾರ ಮಾಡುತ್ತಾನೆ. ಆದರೆ ರೈತನ ಫಸಲಿನ ಬೆಲೆಯನ್ನು ಮಾತ್ರ ಖರೀದಿಸುವವನು ನಿರ್ಧರಿಸುತ್ತಾನೆ

- Advertisement -
- Advertisement -

ರೈತರ ವಿರುದ್ಧ ‘ನಾಗ (NAGA)’ ಎಂಬ ಕಂಪನಿ ನಿಂತಿದೆ. ನಾಗ ಎಂದರೆ “ನರೇಂದ್ರ ಮೋದಿ, ಅಮಿತ್ ಶಾ‌, ಗೌತಮ್ ಅದಾನಿ,‌ ರಿಲಾಯನ್ಸ್ ಅಂಬಾನಿ” ಎಂದು ಯೋಗ ದರ್ಶನ ಪಾರಮಾರ್ಥಿಕ ಟ್ರಸ್ಟ್‌ ಸಂಸ್ಥಾಪಕ ಶ್ರೀ ಹರ್ಷಾನಂದಜಿ ಮಹಾರಾಜ್‌ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಹರ್ಷಾನಂದ್‌ ಜಿ ಮಹರಾಜ್‌, ‘ಮಾಸ್‌ ಮೀಡಿಯಾ ಫೌಂಡೇಷನ್‌’ ಪ್ರತಿನಿಧಿಯೊಂದಿಗೆ ಮಾತಾಡುತ್ತಾ, ಕಾರ್ಪೋರೇಟ್‌ ಶಕ್ತಿಗಳಿಗಾಗಿ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ ಎಂದಿದ್ದಾರೆ.

“ರೈತ ಭಾರತದ ಆತ್ಮ. ಇಂದು ಆ ರೈತ ಕನಿಷ್ಠ ಬೆಂಬಲ ಬೆಲೆಗಾಗಿ ಹೋರಾಟ ನಡೆಸುತ್ತಿದ್ದಾನೆ. ಜಗತ್ತಿನ ಎಲ್ಲ ವಸ್ತುಗಳನ್ನು ಮಾರುವವನು ನಿರ್ಧಾರ ಮಾಡುತ್ತಾನೆ. ಆದರೆ ರೈತನ ಫಸಲಿನ ಬೆಲೆಯನ್ನು ಮಾತ್ರ ಖರೀದಿಸುವವನು ನಿರ್ಧರಿಸುತ್ತಾನೆ” ಎಂದು ಬೇಸರ ವ್ಯಕ್ತಪಡಿಸಿದರು.

ಅವರು ಮಾತನಾಡಿದ ವಿಡಿಯೋ ನೋಡಿ.

ಈ ಚಿತ್ರಣವನ್ನು ಬದಲಿಸುವುದು ಈ ಸಮಯದ ಅಗತ್ಯ. ಆದರೆ ರೈತರಿಗೆ ಮುಖಾಮುಖಿಯಾಗಿರುವುದು ಒಂದು ಖಾಸಗಿ ಕಂಪನಿ. ಅದನ್ನು ನಾನು ನಾಗ ಎಂದು ಕರೆಯುತ್ತೇನೆ. ನಾಗ ಎಂದರೆ, ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ. ಸರ್ಕಾರ ಎಂಬುದು ಇದ್ದಿದ್ದರೆ, ರೈತರ ಜೊತೆಗೆ ಕೂತು ಮಾತನಾಡುತ್ತಿತ್ತು. ಆದರೆ ಇಂದು ವಿಶಾಲ ಆಕಾಶದ ಕೆಳಗೆ ಅಸಂಖ್ಯ ರೈತರು ಸೇರಿದ್ದಾರೆ. ಈ ಚಳಿಯಲ್ಲಿ ಅಮಾಯಕರು ಸಾವನ್ನಪ್ಪಿದ್ದಾರೆ. ಇದಾವುದೂ ಖಾಸಗಿ ಕಂಪನಿಯವರಿಗೆ ತಟ್ಟುತ್ತಿಲ್ಲ. ಅಂತಹ ಸಂವೇದನೆ ಅವರಿಗೆ ಇರುವುದೂ ಇಲ್ಲ” ಎಂದರು.

ನಾವು ಈಸ್ಟ್‌ ಇಂಡಿಯಾ ಕಂಪನಿಯನ್ನು ನೋಡಿದ್ದೇವೆ. ಅವರು ಹೇಗೆ ರಕ್ತ ಹೀರುತ್ತಿದ್ದರು ಎಂಬುದನ್ನು ನೋಡಿದ್ದೇವೆ. ಅದೇ ಪರಿಸ್ಥಿತಿ ಇಂದೂ ಇದೆ. ಈ ಪರಿಸ್ಥಿತಿಯನ್ನು ಬದಲಿಸುವುದಕ್ಕಾಗಿಯೇ ಪ್ರಕೃತಿಯೇ ಈ ಆಂದೋಲನವನ್ನು ನಡೆಸುತ್ತಿದೆ. ಈ ಆಂದೋಲನ ಸಂಪೂರ್ಣ ಮಾನವ ಕುಲಕ್ಕೆ ಪಾಠವಾಗಲಿದೆ. ಸೇವೆಯೊಂದಿಗೆ ಒಂದು ಆಂದೋಲನವನ್ನು ಹೇಗೆ ನಡೆಸಬಹುದು, ಹೇಗೆ ಜಯವನ್ನು ರೂಪಿಸಬಹುದು ಎಂಬುದನ್ನು ಕಲಿಸಿಕೊಡಲಿದೆ ಎಂಬ ವಿಶ್ವಾಸ ನನ್ನದು ಎಂದು ಹರ್ಷಾನಂದ್‌ ಜಿ ಮಹಾರಾಜ್‌ ಹೇಳಿದರು.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ಕೃಷಿ ಕಾಯ್ದೆಗಳು: ರೈತರಿಗಷ್ಟೇ ಮಾರಕವಲ್ಲ, ನಮ್ಮ ನಿಮ್ಮ ಬದುಕಿಗೂ ಅಪಾಯಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...