HomeಮುಖಪುಟJNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ ಸ್ಥಗಿತ!

JNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ ಸ್ಥಗಿತ!

ಕಳೆದ ವರ್ಷ ಸುಮಾರು 100 ಮಾಸ್ಕ್‌ಧಾರಿಗಳ ತಂಡವೊಂದು ದೆಹಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ (JNU) ಸಿಕ್ಕಾಪಟ್ಟೆ ದಾಂಧಲೆ ಮಾಡಿ, 36 ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿಯನ್ನು ಭೀಕರವಾಗಿ ಗಾಯಗೊಳಿಸಿದ್ದರು.

- Advertisement -
- Advertisement -

ಪೊಲೀಸ್ ಮೂಲಗಳ ಪ್ರಕಾರ, ದೆಹಲಿ ಪೊಲೀಸ್ ಕ್ರೈಮ್ ಬ್ರ್ಯಾಂಚ್‌ನ ವಿಶೇಷ ತನಿಖಾ ದಳ 15 ಆರೋಪಿಗಳನ್ನು (ಎಲ್ಲರೂ ವಿದ್ಯಾರ್ಥಿಗಳೇ) ಗುರುತಿಸಿದೆ. ಆದರೆ ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳು ಮನೆಗೆ ಮರಳಿದ ನಂತರ ತನಿಖೆ ಸ್ಥಗಿತಗೊಂಡಿತು.
ಒಂದೂ ಬಂಧನವಿಲ್ಲ, ಚಾರ್ಜ್‌ಶಿಟೂ ಇಲ್ಲ, ವಿಶ್ವವಿದ್ಯಾಲಯದ ಆಂತರಿಕ ತನಿಖೆಯನ್ನು ನಿಲ್ಲಿಸಲಾಗಿದೆ ಕೂಡ! ಮುಖಗವಸು (ಮಾಸ್ಕ್) ಹಾಕಿಕೊಂಡು JNU ಕ್ಯಾಂಪಸ್‌ನಲ್ಲಿ ಪುಂಡರು ದಾಂಧಲೆ ಮಾಡಿ ಇಂದಿಗೆ ವರ್ಷವಾದರೂ ತನಿಖೆಯಲ್ಲಿ ಏನೇನೂ ಪ್ರಗತಿಯಾಗಿಲ್ಲ.

ಕಳೆದ ವರ್ಷ ಸುಮಾರು 100 ಜನರ ಮಾಸ್ಕ್‌ಧಾರಿಗಳ ತಂಡವೊಂದು ದೆಹಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ (JNU) ಸಿಕ್ಕಾಪಟ್ಟೆ ದಾಂಧಲೆ ಮಾಡಿ, 36 ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿಯನ್ನು ಭೀಕರವಾಗಿ ಗಾಯಗೊಳಿಸಿದ್ದರು. ಇದಾದ ನಾಲ್ಕು ದಿನಗಳ ನಂತರ ಜನೆವರಿ 9 ರಂದು ದೆಹಲಿ ಪೊಲೀಸರು ಒಂದು ಪತ್ರಿಕಾಗೋಷ್ಠಿ ನಡೆಸಿದ್ದರು. ಅಂದು 8 ಸಂಶಯಿತರನ್ನು (ಎಲ್ಲರೂ ವಿದ್ಯಾರ್ಥಿಗಳು) ಹೆಸರಿಸಿದ್ದ ಪೊಲೀಸರು ಅದರಲ್ಲಿ 7 ಜನ ಎಡಪಂಥೀಯ ಸಂಘಟನೆಗೆ ಸೇರಿದವರು ಎಂದು ಹೇಳಿದ್ದರು. ಇನ್ನಿಬ್ಬರು ಯಾವ ಸಂಘಟನೆ ಎಂದು ಹೇಳಿರಲಿಲ್ಲ. ಆದರೆ ಅವರಿಬ್ಬರು ಎಬಿವಿಪಿ ಸಂಘಟನೆಯವರಾಗಿದ್ದರು.

ಇದನ್ನೂ ಓದಿ: ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ಉತ್ತರ ದೆಹಲಿಯ ವಸಂತ್‌ಕುಂಜ್‌ನಲ್ಲಿ ಮೂರು ಎಫ್‌ಐಆರ್ ದಾಖಲಿಸಲಾಗಿತ್ತು. ನಂತರ ಪ್ರಕರಣವನ್ನು ಕ್ರೈಮ್ ಬ್ರ್ಯಾಂಚ್‌ಗೆ ವರ್ಗಾಯಿಸಲಾಯಿತು. ಜೆಎನ್‌ಯು ಕ್ಯಾಂಪಸ್‌ನಲ್ಲೇ 20 ಪೊಲೀಸರ ಒಂದು ತನಿಖಾ ತಂಡವನ್ನು ಸ್ಥಾಪಿಸಲಾಯಿತು. ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳ ತನಿಖೆಯನ್ನು ಮತ್ತು ಕೊವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಹೊತ್ತಿದ್ದ ನಿಜಾಮುದ್ದೀನ್ ಮರ್ಕಜ್‌ನ ಮೌಲಾನಾ ಸಾದ್ ತನಿಖೆಯನ್ನು ಇದೇ ತಂಡಕ್ಕೆ ವಹಿಸಲಾಗಿತು.

ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪೊಲೀಸ್ ಮೂಲಗಳು ಹೇಳಿದ ಪ್ರಕಾರ, ಪತ್ರಿಕಾಗೋಷ್ಠಿಯಲ್ಲಿ ಸಂಶಯಿತರು ಎಂದು ಕರೆದಿದ್ದ 9 ಜನರನ್ನು ಸೇರಿಸಿ 88 ಜನರನ್ನು ಎಸ್‌ಐಟಿ ಪ್ರಶ್ನಿಸಿತು. ದಾಂಧಲೆಯ ಆರೋಪ ಹೊತ್ತಿದ್ದ ಗಾಯಗೊಂಡ ಅಧ್ಯಾಪಕರು, ವಾರ್ಡನ್‌ಗಳು, ಸೆಕ್ಯುರಿಟಿ ಗಾರ್ಡ್ಸ್ ಮತ್ತು ವಿದ್ಯಾರ್ಥಿಗಳ ಹೇಳಿಕೆಯನ್ನೂ ಎಸ್‌ಐಟಿ ಪಡೆಯಿತು. ’ಪ್ರಶ್ನಿಸಿದ ನಂತರ ಇತರ ಸಂಶಯಿತರ ಮಾಹಿತಿಯೂ ದೊರಕಿತು. ಆದರೆ ಲಾಕ್‌ಡೌನ್ ಘೋಷಣೆಯಾದ ಪರಿಣಾಮ ತಂಡಕ್ಕೆ ಹೆಚ್ಚಿನ ಮಾಹಿತಿ ಪಡೆಯಲು ಆಗಲಿಲ್ಲ’ ಎಂದು ತಿಳಿಸಿವೆ.

ಇದನ್ನೂ ಓದಿ: ಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

ಅವತ್ತಿನ ಹಿಂಸಾಚಾರದ ವಿಡಿಯೋದಲ್ಲಿ ’ಕಾಣಿಸಿಕೊಂಡಿದ್ದ’ ದೆಹಲಿ ವಿವಿಯ ಕೋಮಲ್ ಶರ್ಮಾಳನ್ನು ಎಸ್‌ಐಟಿ ವಿಚಾರಣೆ ಮಾಡಿತು ಎನ್ನಲಾಗಿದೆ. ಆದರೆ ಆಕೆ, ’ಕೆಲವರು ನನ್ನನ್ನು ಇದರಲ್ಲಿ ಸಿಕ್ಕಿಸಲು ಯತ್ನಿಸುತ್ತಿದ್ದಾರೆ. ಈ ದಾಂಧಲೆಯಲ್ಲಿ ನಾನು ಪಾಲ್ಗೊಂಡಿಲ್ಲ’ ಎಂಬ ಹೇಳಿಕೆ ನೀಡಿದ್ದಾಳೆ ಎಂದು ಪೊಲೀಸ್ ಮೂಲಗಳು ಹೇಳುತ್ತಿವೆ.

ದೆಹಲಿ ಪೊಲೀಸ್ ವಕ್ತಾರ ಏಯಿಷ್ ಸಿಂಘಾಲ್, ’ದಾಂಧಲೆಗೆ ಸಂಬಂಧಿಸಿ ಮೂರು ಎಫ್‌ಐಆರ್ ದಾಖಲಾಗಿವೆ, ಆದರೆ ತನಿಖೆ ಪೆಂಡಿಂಗ್‌ನಲ್ಲಿದೆ’ ಎಂದು ಹೇಳಿದ್ದಾರೆ.

ಜನೆವರಿ 5 ರ ದಾಂಧಲೆ ಕುರಿತು ನಿಷ್ಕ್ರಿಯತೆ ತೋರಿದ್ದಕ್ಕಾಗಿ ಮತ್ತು ಗಾಯಗೊಂಡ ಅಧ್ಯಾಪಕರು, ವಿದ್ಯಾರ್ಥಿಗಳನ್ನು ಸೌಜನ್ಯಕ್ಕೂ ಭೇಟಿಯಾಗದ ಕಾರಣಕ್ಕಾಗಿ ಟೀಕೆಗೆ ಗುರಿಯಾದ ವಿವಿಯ ಆಡಳಿತವು, ಘಟನೆಯ ತನಿಖೆಗೆ ಐವರು ಸದಸ್ಯರ ಸಮಿತಿಯನ್ನು ನೇಮಿಸಿತು. ಆದರೆ ದಾಂಧಲೆ ನಡೆದು ಒಂದು ವರ್ಷವಾದ ಈ ಸಂದರ್ಭದಲ್ಲಿ ವಿವಿಯ ರಿಜಿಸ್ಟ್ರಾರ್ ಪ್ರಮೋದ್‌ಕುಮಾರ್, ’ಪೊಲೀಸರ ತನಿಖೆ ಜಾರಿಯಲ್ಲಿರುವ ಕಾರಣ ಆಂತರಿಕ ತನಿಖೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ದಾಂಧಲೆಯಲ್ಲಿ ಗಾಯಗೊಂಡ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ವಿವಿ ಸಮಿತಿ ತಮ್ಮನ್ನು ಒಂದು ಸಲವೂ ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

’ಪೊಲೀಸರು ತನಿಖೆ ಮಾಡುತ್ತಿರುವ ಕಾರಣಕ್ಕೆ ಸಮಿತಿ ವರದಿ ಸಲ್ಲಿಸಿಲ್ಲ. ಇಲ್ಲಿ ಸಮಸ್ಯೆ ಏನಿದೆ? ದಾಂಧಲೆ ಆರಂಭಿಸಿದವರು ಯಾರು ಎಂಬುದಷ್ಟೇ ಅಲ್ಲವಾ? ನಾವು ಪೊಲೀಸರಿಗೆ ಎಲ್ಲ ರೀತಿಯ ನೆರವು ನೀಡಿದ್ದೇವೆ’ ಎನ್ನುತ್ತಾರೆ ರಿಜಿಸ್ಟ್ರಾರ್ ಪ್ರಮೋದ್ ಕುಮಾರ್.

ಕಬ್ಬಿಣದ ರಾಡ್‌ನಿಂದ ಹಲ್ಲೆಗೊಳಗಾಗಿ, ತಲೆಗೆ 16 ಹೊಲಿಗೆ ಹಾಕಿಸಿಕೊಂಡ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯೀಷಾ ಘೋಷ್, ’ಒಂದು ವರ್ಷದ ನಂತರ ಪ್ರಕರಣದಲ್ಲಿ ಒಂದಿಷ್ಟಾದರೂ ಬೆಳವಣಿಗೆ ಆಗಬೇಕಿತ್ತು. ನಮ್ಮ ಜೊತೆ ಇದ್ದೇವೆಂದು ಪೊಲೀಸರು ಹೇಳುತ್ತಾರಾದರೂ, ನಮ್ಮ ಹೇಳಿಕೆ ಪಡೆದ ನಂತರ ಮತ್ತೆಂದೂ ನಮ್ಮನ್ನು ಸಂಪರ್ಕಿಸಿಲ್ಲ, ಅವರು ಫಾಲೋ-ಅಪ್ ಮಾಡಲೇ ಇಲ್ಲ. ನಮ್ಮನ್ನೆಂದೂ ಸಂಪರ್ಕಿಸದ ಆಂತರಿಕ ತನಿಖಾ ಸಮಿತಿ ಬಗ್ಗೆ ನಮಗೆ ಭರವಸೆಯಿಲ್ಲ’ ಎಂದು ನಿರಾಶೆಯಿಂದ ಹೇಳಿದ್ದಾರೆ.

ಕಲ್ಲುಗಳ ಏಟಿನಿಂದಾದ ಗಾಯದಿಂದ ತಲೆಗೆ ನಾಲ್ಕು ಹೊಲಿಗೆ ಹಾಕಿಸಿಕೊಂಡ ಪ್ರೊ. ಸುಚಿತ್ರಾ ಸೇನ್, ’ಜನೆವರಿ 20 ರಂದು ವಿ.ಸಿಗೆ ಪತ್ರ ಬರೆದು ನಿಷ್ಪಕ್ಷಪಾತ ತನಿಖೆ ನಡೆಸಿ ಮತ್ತು ಜೆಎನ್‌ಯು ನೇಮಿಸಿಕೊಂಡಿರುವ ಸೆಕ್ಯುರಿಟಿ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದೆ. ಇವತ್ತಿಗೂ ಇದಕ್ಕೆ ಉತ್ತರ ಬಂದಿಲ್ಲ. ಪೊಲೀಸರು ಒಮ್ಮೆ ಮಾತ್ರ ನಮ್ಮನ್ನು ಸಂರ್ಕಿಸಿದ್ದರು’ ಎನ್ನುತ್ತಾರೆ.


ಇದನ್ನೂ ಓದಿ: ಜೆಎನ್‍ಯು ಘಟನೆ: ಸಂಪೂರ್ಣ ಹಿನ್ನೆಲೆ ಮತ್ತು ಉತ್ತರವಿಲ್ಲದ ಪ್ರಶ್ನೆಗಳು – ಪ್ರೊ. ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...