Homeಕರೋನಾ ತಲ್ಲಣ'ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ - ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

"ಇಸ್ಲಾಂ ಪೋರ್ಕ್ ಮತ್ತು ಹೆಂಡವನ್ನು ನಿಷೇಧಿಸಿದೆ. ಆದರೆ ತಿನ್ನುವುದಕ್ಕೆ ಮತ್ತು ಕುಡಿಯುವುದಕ್ಕಷ್ಟೇ ಇದು ಅನ್ವಯಿಸುತ್ತದೆ. ಇವುಗಳಿಂದ ತಯಾರಾದ ಔಷಧಿಗಳ ಬಳಕೆಗೆ ಮತ್ತು ಜೀವ ರಕ್ಷಿಸುವ ಕ್ರಮಗಳಿಗೆ ಇದು ಅನ್ವಯಿಸುವುದಿಲ್ಲ"

- Advertisement -
- Advertisement -

ಈಗಾಗಲೇ ಎಲ್ಲ ಲಸಿಕಾ ಕಂಪನಿಗಳು ಲಸಿಕೆ ತಯಾರಿಕೆಯಲ್ಲಿ ಯಾವುದೇ ಬಗೆಯ ಹಂದಿ ಮಾಂಸ(ಪೋರ್ಕ್) ಬಳಸಲಾಗಿಲ್ಲ ಎಂದು ಸ್ಪಷ್ಟಪಡಿಸಿವೆ. ಲಸಿಕೆಯ ಸುರಕ್ಷಿತ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಹಂದಿ ಮಾಂಸದಿಂದ ತಯಾರಿಸಿದ ಜೆಲಾಟಿನ್ ಅನ್ನು ಸ್ಟೆಬಲೈಸರ್ ಆಗಿ ಬಳಸಲಾಗುತ್ತದಷ್ಟೇ ಎಂದೂ ಹೇಳಿವೆ.

ಈ ಹಿನ್ನೆಲೆಯಲ್ಲಿ, “ಮುಸ್ಲಿಮರು ಹಂದಿ ಮಾಂಸದ ಅಂಶವಿದ್ದರೂ ಕೂಡ ಲಸಿಕೆ ತೆಗೆದುಕೊಳ್ಳಲು ಯಾವುದೇ ರೀತಿ-ರಿವಾಜು ಅಡ್ಡಿ ಮಾಡುವುದಿಲ್ಲ” ಎಂದು ಜಮಾತ್-ಎ-ಇಸ್ಲಾಂ-ಹಿಂದ್ (ಜೆಐಎಚ್) ಮಂಡಳಿ ಹೇಳಿದ್ದು, ಮುಸ್ಲಿಮರಲ್ಲಿ ಮೂಡಿದ್ದ ಲಸಿಕೆಯ ಗೊಂದಲವನ್ನು ತೊಡೆದು ಹಾಕುವ ಪ್ರಯತ್ನ ಮಾಡಿದೆ. ಭಾರತದಲ್ಲಿ ಇಂತಹ ನಿರ್ಣಯ ಪ್ರಕಟಿಸಿದ ಮೊದಲ ಮುಸ್ಲಿಂ ಸಂಸ್ಥೆ ಇದಾಗಿದೆ.

’ಇಸ್ಲಾಂ ಮಾನವ ಜೀವಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತದೆ ಮತ್ತು ಜೀವ ರಕ್ಷಣೆಗೆ ಆದ್ಯತೆ ನೀಡುತ್ತದೆ’ ಎಂದು ಜಮಾತ್ -ಎ-ಇಸ್ಲಾಂ-ಹಿಂದ್ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: ಸ್ಥಾನಮಾನ ಸಿಕ್ಕರೆ ಬಿಜೆಪಿ ಸೇರ್ಪಡೆ ಖಚಿತ: ಶಾಸಕ ಎನ್‌ ಮಹೇಶ್

’ಅನುಮತಿಸಲಾಗದ ಯಾವುದೇ ವಸ್ತು- ಅದರ ಗುಣಲಕ್ಷಣಗಳಲ್ಲಿ ಸಂಪೂರ್ಣ ಮಾರ್ಪಾಟನ್ನು ಹೊಂದಿದ್ದರೆ ಅದು ಶುದ್ಧವಾದುದು ಮತ್ತು ಅದನ್ನು ದೇಹಕ್ಕೆ ಸೇರಿಸಬಹುದು. ಈ ಆಧಾರದ ಮೇಲೆ, ಹರಾಮ್ ಪ್ರಾಣಿಯ ದೇಹದ ಭಾಗದಿಂದ ಪಡೆದ ಜೆಲಾಟಿನ್ ಬಳಕೆಯನ್ನು ಇಸ್ಲಾಮಿಕ್ ನ್ಯಾಯಶಾಸ್ತ್ರಜ್ಞರು ಅನುಮತಿಸಿದ್ದಾರೆ ಎಂದೂ ಮಂಡಳಿ ವಿವರಿಸಿದೆ.

ಹಲವು ದಿನಗಳಿಂದ, ’ಲಸಿಕೆಯಲ್ಲಿ ಹಂದಿ ಮಾಂಸದ ಅಂಶವಿದ್ದು, ಮುಸ್ಲಿಮರು ಲಸಿಕೆ ಪಡೆಯಬಾರದು’ ಎಂಬ ಆಧಾರರಹಿತ ಸುದ್ದಿಯೊಂದು ಜಗತ್ತಿನಾದ್ಯಂತ ಪ್ರಚಲಿತದಲ್ಲಿದೆ.

’ಯಾವುದೇ ಬೇರೆ ಆಯ್ಕೆ ಇಲ್ಲದಿರುವಾಗ, ಪೋರ್ಕ್ ಹೊಂದಿದ ಲಸಿಕೆ ಪಡೆಯುವುದರಲ್ಲೂ ತಪ್ಪಿಲ್ಲ’ ಎಂದು ಜೆಐಎಚ್ ಉಪಾಧ್ಯಕ್ಷ ಸಲೀಂ ಇಂಜಿನಿಯರ್ ಹೇಳಿದ್ದಾರೆ. ’ಬೇರೆ ಆಯ್ಕೆಗಳಿದ್ದರೆ ಅದು ಒಳ್ಳೆಯದೇ. ಆದರೆ ಆಯ್ಕೆಯೇ ಇಲ್ಲದಿರುವಾಗ ಯಾವುದೇ ಪಾಪಪ್ರಜ್ಞೆ ಅನುಭವಿಸದೇ ಲಸಿಕೆ ಪಡೆದುಕೊಳ್ಳುವುದು ಸರಿಯಾದ ಮಾರ್ಗ. ಇದು ಜೀವನ್ಮರಣದ ಪ್ರಶ್ನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧ ‘NAGA – ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ’ ಕಂಪನಿ ನಿಂತಿದೆ: ಶ್ರೀ…

ಪಿಝರ್, ಮಾಡೆರ್ನಾ ಮತ್ತು ಅಸ್ಟ್ರಾಜೆನಿಕಾ ವಕ್ತಾರರು, ಲಸಿಕೆಯಲ್ಲಿ ಯಾವುದೇ ಬಗೆಯ ಪೋರ್ಕ್ ಅಂಶವಿಲ್ಲ. ಲಸಿಕೆಯ ಸುರಕ್ಷಿತ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಹಂದಿ ಮಾಂಸದಿಂದ ತಯಾರಿಸಿದ ಜೆಲಾಟಿನ್ ಅನ್ನು ಸ್ಟೆಬಲೈಸರ್ ಆಗಿ ಬಳಸಲಾಗುತ್ತದಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ವಾರ ಮುಂಬೈನ ರಾಝಾ ಅಕಾಡೆಮಿ ವಿಶ್ವ ಆರೋಗ್ಯ ಸಂಸ್ಥೆಗೆ ಪತ್ರ ಬರೆದು, ಲಸಿಕೆಗಳ ವಿವರಗಳು ಮತ್ತು ಅವು ಪೋರ್ಕ್ ಒಳಗೊಂಡಿವೆಯೇ ಎಂಬುದನ್ನು ತಿಳಿಸಬೇಕು ಎಂದು ಕೋರಿತ್ತು.

’ಯಾವ ಲಸಿಕೆ ಏನನ್ನು ಒಳಗೊಂಡಿದೆ ಎಂಬುದನ್ನು ನಾವು ತಿಳಿಯಲು ಬಯಸಿದ್ದೆವು. ಪೋರ್ಕ್ ಇಲ್ಲದ ಲಸಿಕೆಯಿದ್ದರೆ ಅದನ್ನೇ ಪಡೆದುಕೊಳ್ಳಲು ಸೂಚಿಸಲು ಈ ಕ್ರಮ ಕೈಗೊಂಡಿದ್ದೆವು. ಇದೇನೂ ಸಲಹೆಯಲ್ಲ, ಆದರೆ ಪಾರದರ್ಶಕತೆಗಾಗಿ ಒಂದು ಮನವಿ ಅಷ್ಟೇ’ ಎಂದು ರಾಝಾ ಅಕಾಡೆಮಿಯ ಜನರಲ್ ಸೆಕ್ರೆಟರಿ ಸಯೀದ್ ನೂರಿ ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: ಮಲೆಂಗಾವ್ ಸ್ಪೋಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

ಭಾರತದ ಹಿಂದೂ ಮಹಾಸಭಾ ಸೇರಿ ಹಲವು ಗುಂಪುಗಳು ಕೂಡ ಇಂತಹ ಮನವಿ ಸಲ್ಲಿಸಿವೆ ಎಂದು ಅವರು ಹೇಳಿದ್ದಾರೆ.
ಹಿಂದೂ ಮಹಾಸಭಾದ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ರಾಷ್ಟ್ರಪತಿಗೆ ಪತ್ರ ಬರೆದು, ಯಾವುದಾದರೂ ಲಸಿಕೆಯಲ್ಲಿ ಗೋವಿನ ರಕ್ತದ ಅಂಶವಿದೆಯೇ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದ್ದರು.

ಡಿಸೆಂಬರ್‌ನಲ್ಲಿ ಐಎಎಸ್ ಅಧಿಕಾರಿ ಸಂಜಯ್ ದಿಕ್ಷಿತ್ ಮಾತನಾಡಿ, ‘ಮುಸ್ಲಿಮರು ಲಸಿಕೆಯನ್ನು ಬಾಯ್ಕಾಟ್ ಮಾಡಬೇಕು’ ಎಂದು ಕರೆ ನೀಡಿದ್ದರು. ಈ ಕುರಿತಂತೆ ’ದಿ ಪ್ರಿಂಟ್’ ಹಲವಾರು ಮುಸ್ಲಿಂ ಧರ್ಮಗುರುಗಳು, ಚಿಂತಕರನ್ನು ಮಾತಾಡಿಸಿದಾಗ ಅವರು ಲಸಿಕೆ ತೆಗೆದುಕೊಳ್ಳುವುದರ ಪರವೇ ಮಾತನಾಡಿದ್ದಾರೆ.

ಶಿಯಾ ಧರ್ಮಗುರು ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿಯ ಕಲ್ಬೆ ಜಾವೇದ್, ’ಲಸಿಕೆ ಪಡೆಯುವುದಕ್ಕೆ ಅನುಮತಿಯಿದೆ. ಯಾರಾದರೂ ಬೇಡ ಎಂದರೆ ಅವರು ಮುಸ್ಲಿಮರ ವಿರೋಧಿಗಳೆಂದೇ ಅರ್ಥ’ ಎಂದಿದ್ದಾರೆ.

ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಜನವರಿ 7 ರಂದು ತೋರಿಸುತ್ತೇವೆ: ರೈತ ಒಕ್ಕೂಟ

’ಲಸಿಕೆಯಲ್ಲಿ ಏನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಒಂದೇ ಒಂದು ಲಸಿಕೆಯಿದ್ದು ಅದು ಪೋರ್ಕ್ ಅಂಶ ಹೊಂದಿದ್ದರೆ, ಆಗ ಆ ಲಸಿಕೆ ಪಡೆಯುವುದು ಅನಿವಾರ್ಯ’ ಎಂದು ಜಮೈತ್-ಉಲೈಮಾ-ಎ-ಹಿಂದ್‌ನ ಜನರಲ್ ಸೆಕ್ರೆಟರಿ ಮಹಮೂದ್ ಮದಾನಿ ಹೇಳಿದ್ದಾರೆ.

’ದ್ವೇಷ ಪ್ರಚಾರದ ಭಾಗ’

’ಮಾನವ ಜೀವವೇ ಇಸ್ಲಾಂನ ಆದ್ಯತೆ. ಇದರಲ್ಲಿ ಚರ್ಚೆಯ ಅಗತ್ಯವೇ ಇಲ್ಲ. ಇಸ್ಲಾಂ ಪೋರ್ಕ್ ಮತ್ತು ಹೆಂಡವನ್ನು ನಿಷೇಧಿಸಿದೆ. ಆದರೆ ತಿನ್ನುವುದಕ್ಕೆ ಮತ್ತು ಕುಡಿಯುವುದಕ್ಕಷ್ಟೇ ಇದು ಅನ್ವಯಿಸುತ್ತದೆ. ಇವುಗಳಿಂದ ತಯಾರಾದ ಔಷಧಿಗಳ ಬಳಕೆಗೆ ಮತ್ತು ಜೀವ ರಕ್ಷಿಸುವ ಕ್ರಮಗಳಿಗೆ ಇದು ಅನ್ವಯಿಸುವುದಿಲ್ಲ’ ಎಂದು ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾದ ಪ್ರೊ. ಅಖ್ತಾನಿ ವಾಸೆ ತಿಳಿಸಿದ್ದಾರೆ.

ಮುಸ್ಲಿಮರು ಲಸಿಕೆ ಪಡೆಯಬಾರದು ಎನ್ನುವುದು ದ್ವೇಷದ ಪ್ರಚಾರ (ಹೇಟ್‌ಫುಲ್ ಪ್ರೊಪಗಂಡಾ) ಎಂದು ಅವರು ಹೇಳಿದ್ದಾರೆ.

’ಕೆಲವರು ಮುಸ್ಲಿಮರನ್ನು ಅವಮಾನಿಸಿ ನಿರಾಶೆಗೊಳಿಸಲು ನೋಡುತ್ತಾರೆ. ಈ ಪ್ರೊಪಗಂಡಾವೇ ಪೊಲೀಯೋ ಲಸಿಕೆ ಕಾರ್ಯಕ್ರಮದ ಸಂದರ್ಭದಲ್ಲೂ ಚಾಲ್ತಿಗೆ ಬಂದಿತ್ತು. ಆಗ ಮುಸ್ಲಿಂ ವಿದ್ವಾಂಸರು ಮಧ್ಯ ಪ್ರವೇಶಿಸಿ ಲಸಿಕೆ ವಿಷಯದಲ್ಲಿ ಯಾವುದೇ ಪೂರ್ವಗ್ರಹ ಬೇಡ ಎಂದು ಹೇಳಿದ್ದರು. ಈಗಲೂ ಅವರು ಆ ಕೆಲಸವನ್ನು ಮಾಡಬೇಕಿದೆ’ ಎಂದು ವಾಸೆ ಅಭಿಪ್ರಾಯ ಪಟ್ಟಿದ್ದಾರೆ.


ಇದನ್ನೂ ಓದಿ: ಪುರಸಭೆ ಸದಸ್ಯೆಯನ್ನು ಎಳೆದಾಡಿದ್ದ ಬಿಜೆಪಿ ಶಾಸಕ ಸಿದ್ದು ಸವದಿ: 31 ಜನರ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...