Homeಕರೋನಾ ತಲ್ಲಣ'ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ - ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

"ಇಸ್ಲಾಂ ಪೋರ್ಕ್ ಮತ್ತು ಹೆಂಡವನ್ನು ನಿಷೇಧಿಸಿದೆ. ಆದರೆ ತಿನ್ನುವುದಕ್ಕೆ ಮತ್ತು ಕುಡಿಯುವುದಕ್ಕಷ್ಟೇ ಇದು ಅನ್ವಯಿಸುತ್ತದೆ. ಇವುಗಳಿಂದ ತಯಾರಾದ ಔಷಧಿಗಳ ಬಳಕೆಗೆ ಮತ್ತು ಜೀವ ರಕ್ಷಿಸುವ ಕ್ರಮಗಳಿಗೆ ಇದು ಅನ್ವಯಿಸುವುದಿಲ್ಲ"

- Advertisement -
- Advertisement -

ಈಗಾಗಲೇ ಎಲ್ಲ ಲಸಿಕಾ ಕಂಪನಿಗಳು ಲಸಿಕೆ ತಯಾರಿಕೆಯಲ್ಲಿ ಯಾವುದೇ ಬಗೆಯ ಹಂದಿ ಮಾಂಸ(ಪೋರ್ಕ್) ಬಳಸಲಾಗಿಲ್ಲ ಎಂದು ಸ್ಪಷ್ಟಪಡಿಸಿವೆ. ಲಸಿಕೆಯ ಸುರಕ್ಷಿತ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಹಂದಿ ಮಾಂಸದಿಂದ ತಯಾರಿಸಿದ ಜೆಲಾಟಿನ್ ಅನ್ನು ಸ್ಟೆಬಲೈಸರ್ ಆಗಿ ಬಳಸಲಾಗುತ್ತದಷ್ಟೇ ಎಂದೂ ಹೇಳಿವೆ.

ಈ ಹಿನ್ನೆಲೆಯಲ್ಲಿ, “ಮುಸ್ಲಿಮರು ಹಂದಿ ಮಾಂಸದ ಅಂಶವಿದ್ದರೂ ಕೂಡ ಲಸಿಕೆ ತೆಗೆದುಕೊಳ್ಳಲು ಯಾವುದೇ ರೀತಿ-ರಿವಾಜು ಅಡ್ಡಿ ಮಾಡುವುದಿಲ್ಲ” ಎಂದು ಜಮಾತ್-ಎ-ಇಸ್ಲಾಂ-ಹಿಂದ್ (ಜೆಐಎಚ್) ಮಂಡಳಿ ಹೇಳಿದ್ದು, ಮುಸ್ಲಿಮರಲ್ಲಿ ಮೂಡಿದ್ದ ಲಸಿಕೆಯ ಗೊಂದಲವನ್ನು ತೊಡೆದು ಹಾಕುವ ಪ್ರಯತ್ನ ಮಾಡಿದೆ. ಭಾರತದಲ್ಲಿ ಇಂತಹ ನಿರ್ಣಯ ಪ್ರಕಟಿಸಿದ ಮೊದಲ ಮುಸ್ಲಿಂ ಸಂಸ್ಥೆ ಇದಾಗಿದೆ.

’ಇಸ್ಲಾಂ ಮಾನವ ಜೀವಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತದೆ ಮತ್ತು ಜೀವ ರಕ್ಷಣೆಗೆ ಆದ್ಯತೆ ನೀಡುತ್ತದೆ’ ಎಂದು ಜಮಾತ್ -ಎ-ಇಸ್ಲಾಂ-ಹಿಂದ್ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: ಸ್ಥಾನಮಾನ ಸಿಕ್ಕರೆ ಬಿಜೆಪಿ ಸೇರ್ಪಡೆ ಖಚಿತ: ಶಾಸಕ ಎನ್‌ ಮಹೇಶ್

’ಅನುಮತಿಸಲಾಗದ ಯಾವುದೇ ವಸ್ತು- ಅದರ ಗುಣಲಕ್ಷಣಗಳಲ್ಲಿ ಸಂಪೂರ್ಣ ಮಾರ್ಪಾಟನ್ನು ಹೊಂದಿದ್ದರೆ ಅದು ಶುದ್ಧವಾದುದು ಮತ್ತು ಅದನ್ನು ದೇಹಕ್ಕೆ ಸೇರಿಸಬಹುದು. ಈ ಆಧಾರದ ಮೇಲೆ, ಹರಾಮ್ ಪ್ರಾಣಿಯ ದೇಹದ ಭಾಗದಿಂದ ಪಡೆದ ಜೆಲಾಟಿನ್ ಬಳಕೆಯನ್ನು ಇಸ್ಲಾಮಿಕ್ ನ್ಯಾಯಶಾಸ್ತ್ರಜ್ಞರು ಅನುಮತಿಸಿದ್ದಾರೆ ಎಂದೂ ಮಂಡಳಿ ವಿವರಿಸಿದೆ.

ಹಲವು ದಿನಗಳಿಂದ, ’ಲಸಿಕೆಯಲ್ಲಿ ಹಂದಿ ಮಾಂಸದ ಅಂಶವಿದ್ದು, ಮುಸ್ಲಿಮರು ಲಸಿಕೆ ಪಡೆಯಬಾರದು’ ಎಂಬ ಆಧಾರರಹಿತ ಸುದ್ದಿಯೊಂದು ಜಗತ್ತಿನಾದ್ಯಂತ ಪ್ರಚಲಿತದಲ್ಲಿದೆ.

’ಯಾವುದೇ ಬೇರೆ ಆಯ್ಕೆ ಇಲ್ಲದಿರುವಾಗ, ಪೋರ್ಕ್ ಹೊಂದಿದ ಲಸಿಕೆ ಪಡೆಯುವುದರಲ್ಲೂ ತಪ್ಪಿಲ್ಲ’ ಎಂದು ಜೆಐಎಚ್ ಉಪಾಧ್ಯಕ್ಷ ಸಲೀಂ ಇಂಜಿನಿಯರ್ ಹೇಳಿದ್ದಾರೆ. ’ಬೇರೆ ಆಯ್ಕೆಗಳಿದ್ದರೆ ಅದು ಒಳ್ಳೆಯದೇ. ಆದರೆ ಆಯ್ಕೆಯೇ ಇಲ್ಲದಿರುವಾಗ ಯಾವುದೇ ಪಾಪಪ್ರಜ್ಞೆ ಅನುಭವಿಸದೇ ಲಸಿಕೆ ಪಡೆದುಕೊಳ್ಳುವುದು ಸರಿಯಾದ ಮಾರ್ಗ. ಇದು ಜೀವನ್ಮರಣದ ಪ್ರಶ್ನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧ ‘NAGA – ನರೇಂದ್ರ, ಅಮಿತ್‌, ಗೌತಮ್‌, ಅಂಬಾನಿ’ ಕಂಪನಿ ನಿಂತಿದೆ: ಶ್ರೀ…

ಪಿಝರ್, ಮಾಡೆರ್ನಾ ಮತ್ತು ಅಸ್ಟ್ರಾಜೆನಿಕಾ ವಕ್ತಾರರು, ಲಸಿಕೆಯಲ್ಲಿ ಯಾವುದೇ ಬಗೆಯ ಪೋರ್ಕ್ ಅಂಶವಿಲ್ಲ. ಲಸಿಕೆಯ ಸುರಕ್ಷಿತ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಹಂದಿ ಮಾಂಸದಿಂದ ತಯಾರಿಸಿದ ಜೆಲಾಟಿನ್ ಅನ್ನು ಸ್ಟೆಬಲೈಸರ್ ಆಗಿ ಬಳಸಲಾಗುತ್ತದಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ವಾರ ಮುಂಬೈನ ರಾಝಾ ಅಕಾಡೆಮಿ ವಿಶ್ವ ಆರೋಗ್ಯ ಸಂಸ್ಥೆಗೆ ಪತ್ರ ಬರೆದು, ಲಸಿಕೆಗಳ ವಿವರಗಳು ಮತ್ತು ಅವು ಪೋರ್ಕ್ ಒಳಗೊಂಡಿವೆಯೇ ಎಂಬುದನ್ನು ತಿಳಿಸಬೇಕು ಎಂದು ಕೋರಿತ್ತು.

’ಯಾವ ಲಸಿಕೆ ಏನನ್ನು ಒಳಗೊಂಡಿದೆ ಎಂಬುದನ್ನು ನಾವು ತಿಳಿಯಲು ಬಯಸಿದ್ದೆವು. ಪೋರ್ಕ್ ಇಲ್ಲದ ಲಸಿಕೆಯಿದ್ದರೆ ಅದನ್ನೇ ಪಡೆದುಕೊಳ್ಳಲು ಸೂಚಿಸಲು ಈ ಕ್ರಮ ಕೈಗೊಂಡಿದ್ದೆವು. ಇದೇನೂ ಸಲಹೆಯಲ್ಲ, ಆದರೆ ಪಾರದರ್ಶಕತೆಗಾಗಿ ಒಂದು ಮನವಿ ಅಷ್ಟೇ’ ಎಂದು ರಾಝಾ ಅಕಾಡೆಮಿಯ ಜನರಲ್ ಸೆಕ್ರೆಟರಿ ಸಯೀದ್ ನೂರಿ ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: ಮಲೆಂಗಾವ್ ಸ್ಪೋಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

ಭಾರತದ ಹಿಂದೂ ಮಹಾಸಭಾ ಸೇರಿ ಹಲವು ಗುಂಪುಗಳು ಕೂಡ ಇಂತಹ ಮನವಿ ಸಲ್ಲಿಸಿವೆ ಎಂದು ಅವರು ಹೇಳಿದ್ದಾರೆ.
ಹಿಂದೂ ಮಹಾಸಭಾದ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ರಾಷ್ಟ್ರಪತಿಗೆ ಪತ್ರ ಬರೆದು, ಯಾವುದಾದರೂ ಲಸಿಕೆಯಲ್ಲಿ ಗೋವಿನ ರಕ್ತದ ಅಂಶವಿದೆಯೇ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದ್ದರು.

ಡಿಸೆಂಬರ್‌ನಲ್ಲಿ ಐಎಎಸ್ ಅಧಿಕಾರಿ ಸಂಜಯ್ ದಿಕ್ಷಿತ್ ಮಾತನಾಡಿ, ‘ಮುಸ್ಲಿಮರು ಲಸಿಕೆಯನ್ನು ಬಾಯ್ಕಾಟ್ ಮಾಡಬೇಕು’ ಎಂದು ಕರೆ ನೀಡಿದ್ದರು. ಈ ಕುರಿತಂತೆ ’ದಿ ಪ್ರಿಂಟ್’ ಹಲವಾರು ಮುಸ್ಲಿಂ ಧರ್ಮಗುರುಗಳು, ಚಿಂತಕರನ್ನು ಮಾತಾಡಿಸಿದಾಗ ಅವರು ಲಸಿಕೆ ತೆಗೆದುಕೊಳ್ಳುವುದರ ಪರವೇ ಮಾತನಾಡಿದ್ದಾರೆ.

ಶಿಯಾ ಧರ್ಮಗುರು ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿಯ ಕಲ್ಬೆ ಜಾವೇದ್, ’ಲಸಿಕೆ ಪಡೆಯುವುದಕ್ಕೆ ಅನುಮತಿಯಿದೆ. ಯಾರಾದರೂ ಬೇಡ ಎಂದರೆ ಅವರು ಮುಸ್ಲಿಮರ ವಿರೋಧಿಗಳೆಂದೇ ಅರ್ಥ’ ಎಂದಿದ್ದಾರೆ.

ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಜನವರಿ 7 ರಂದು ತೋರಿಸುತ್ತೇವೆ: ರೈತ ಒಕ್ಕೂಟ

’ಲಸಿಕೆಯಲ್ಲಿ ಏನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಒಂದೇ ಒಂದು ಲಸಿಕೆಯಿದ್ದು ಅದು ಪೋರ್ಕ್ ಅಂಶ ಹೊಂದಿದ್ದರೆ, ಆಗ ಆ ಲಸಿಕೆ ಪಡೆಯುವುದು ಅನಿವಾರ್ಯ’ ಎಂದು ಜಮೈತ್-ಉಲೈಮಾ-ಎ-ಹಿಂದ್‌ನ ಜನರಲ್ ಸೆಕ್ರೆಟರಿ ಮಹಮೂದ್ ಮದಾನಿ ಹೇಳಿದ್ದಾರೆ.

’ದ್ವೇಷ ಪ್ರಚಾರದ ಭಾಗ’

’ಮಾನವ ಜೀವವೇ ಇಸ್ಲಾಂನ ಆದ್ಯತೆ. ಇದರಲ್ಲಿ ಚರ್ಚೆಯ ಅಗತ್ಯವೇ ಇಲ್ಲ. ಇಸ್ಲಾಂ ಪೋರ್ಕ್ ಮತ್ತು ಹೆಂಡವನ್ನು ನಿಷೇಧಿಸಿದೆ. ಆದರೆ ತಿನ್ನುವುದಕ್ಕೆ ಮತ್ತು ಕುಡಿಯುವುದಕ್ಕಷ್ಟೇ ಇದು ಅನ್ವಯಿಸುತ್ತದೆ. ಇವುಗಳಿಂದ ತಯಾರಾದ ಔಷಧಿಗಳ ಬಳಕೆಗೆ ಮತ್ತು ಜೀವ ರಕ್ಷಿಸುವ ಕ್ರಮಗಳಿಗೆ ಇದು ಅನ್ವಯಿಸುವುದಿಲ್ಲ’ ಎಂದು ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾದ ಪ್ರೊ. ಅಖ್ತಾನಿ ವಾಸೆ ತಿಳಿಸಿದ್ದಾರೆ.

ಮುಸ್ಲಿಮರು ಲಸಿಕೆ ಪಡೆಯಬಾರದು ಎನ್ನುವುದು ದ್ವೇಷದ ಪ್ರಚಾರ (ಹೇಟ್‌ಫುಲ್ ಪ್ರೊಪಗಂಡಾ) ಎಂದು ಅವರು ಹೇಳಿದ್ದಾರೆ.

’ಕೆಲವರು ಮುಸ್ಲಿಮರನ್ನು ಅವಮಾನಿಸಿ ನಿರಾಶೆಗೊಳಿಸಲು ನೋಡುತ್ತಾರೆ. ಈ ಪ್ರೊಪಗಂಡಾವೇ ಪೊಲೀಯೋ ಲಸಿಕೆ ಕಾರ್ಯಕ್ರಮದ ಸಂದರ್ಭದಲ್ಲೂ ಚಾಲ್ತಿಗೆ ಬಂದಿತ್ತು. ಆಗ ಮುಸ್ಲಿಂ ವಿದ್ವಾಂಸರು ಮಧ್ಯ ಪ್ರವೇಶಿಸಿ ಲಸಿಕೆ ವಿಷಯದಲ್ಲಿ ಯಾವುದೇ ಪೂರ್ವಗ್ರಹ ಬೇಡ ಎಂದು ಹೇಳಿದ್ದರು. ಈಗಲೂ ಅವರು ಆ ಕೆಲಸವನ್ನು ಮಾಡಬೇಕಿದೆ’ ಎಂದು ವಾಸೆ ಅಭಿಪ್ರಾಯ ಪಟ್ಟಿದ್ದಾರೆ.


ಇದನ್ನೂ ಓದಿ: ಪುರಸಭೆ ಸದಸ್ಯೆಯನ್ನು ಎಳೆದಾಡಿದ್ದ ಬಿಜೆಪಿ ಶಾಸಕ ಸಿದ್ದು ಸವದಿ: 31 ಜನರ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...