Homeಕರ್ನಾಟಕಕಣ್ಣು ಕುರುಡಾಗಿ, ಕಿವಿ ಕಿವುಡಾಗಿ ಸಂವೇದನೆ ಹೊರಟುಹೋಗಿದೆಯೇ: ಭೈರಪ್ಪನವರಿಗೆ ತಿರುಗೇಟು ನೀಡಿದ ದೇವನೂರು

ಕಣ್ಣು ಕುರುಡಾಗಿ, ಕಿವಿ ಕಿವುಡಾಗಿ ಸಂವೇದನೆ ಹೊರಟುಹೋಗಿದೆಯೇ: ಭೈರಪ್ಪನವರಿಗೆ ತಿರುಗೇಟು ನೀಡಿದ ದೇವನೂರು

"ಸ್ವರಾಜ್ ಇಂಡಿಯಾ, ದಲಿತ ಸಂಘರ್ಷ ಸಮಿತಿ, ರೈತ ಸಂಘದ ಬೆಂಬಲಿತ 100 ಕ್ಕೂ ಹೆಚ್ಚು ಅಭ್ಯರ್ಥಿಗಳು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಆಯ್ಕೆಯಾಗಿರುವುದು ನಮಗೇ ಅನಿರೀಕ್ಷಿತ. ಇದು ಬದಲಾವಣೆಯ ಕಡೆಗೆ ನಮ್ಮ ಮೊದಲ ಹೆಜ್ಜೆ"

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಂಜಾಬ್‍ನವರು ಮಾತ್ರ ಭಾಗಿಯಾಗಿದ್ದಾರೆ ಎಂದು ಸಾಹಿತಿ ಎಸ್.ಎಲ್.ಭೈರಪ್ಪ ಹೇಳಿದ್ದರು. ಈ ಹೇಳಿಕೆಗೆ ಸಾಹಿತಿ ದೇವನೂರು ಮಹಾದೇವ ತಿರುಗೇಟು ನೀಡಿದ್ದು, “ಕಣ್ಣು ಕುರುಡಾಗಿ, ಕಿವಿ ಕಿವುಡಾಗಿ ಸಂವೇದನೆ ಹೊರಟುಹೋಗಿದೆಯೇ ಎಂದು ಮಾಧ್ಯಮದವರು ಕೇಳಬೇಕು” ಎಂದು ಹೇಳಿದ್ದಾರೆ.

ಮೈಸೂರಿನ ಕೃಷಿ ಅಧ್ಯಯನ ಸಂಸ್ಥೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದ ದೇವನೂರು ಮಹಾದೇವ, “ಪ್ರತಿಭಟನೆಯಲ್ಲಿ ಪಂಜಾಬ್‍ನವರು ಮಾತ್ರವಲ್ಲದೆ ಉತ್ತರಾಖಂಡ, ಹರಿಯಾಣ ಮುಂತಾದ ರಾಜ್ಯದ ಜನರು ಭಾಗಿಯಾಗಿದ್ದಾರೆ. ಎಲ್ಲ ರಾಜ್ಯಗಳಲ್ಲಿಯೂ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಈ ಬಗ್ಗೆ ಅವರಿಗೇಕೆ ತಿಳಿದಿಲ್ಲ? ಕಣ್ಣು ಕುರುಡಾಗಿದೆಯೇ, ಕಿವಿ ಕಿವುಡಾಗಿದೆಯೇ, ಸಂವೇದನೆ ಹೊರಟು ಹೋಗಿದೆಯೇ ಎಂದು ಮಾಧ್ಯಮದವರು ಅವರನ್ನು ಪ್ರಶ್ನಿಸಬೇಕಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: JNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ…

“ಸ್ವರಾಜ್ ಇಂಡಿಯಾ, ದಲಿತ ಸಂಘರ್ಷ ಸಮಿತಿ, ರೈತ ಸಂಘದ ಬೆಂಬಲಿತ 100 ಕ್ಕೂ ಹೆಚ್ಚು ಅಭ್ಯರ್ಥಿಗಳು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಆಯ್ಕೆಯಾಗಿರುವುದು ನಮಗೇ ಅನಿರೀಕ್ಷಿತ. ಇದು ಬದಲಾವಣೆಯ ಕಡೆಗೆ ನಮ್ಮ ಮೊದಲ ಹೆಜ್ಜೆ. ಸ್ಥಳೀಯ ಹಿತಾಸಕ್ತಿಯಿಂದ ಜನರಿಗಾಗಿ ಕೆಲಸ ಮಾಡುತ್ತಿರುವ ಅಭ್ಯರ್ಥಿಗಳು ಆಯ್ಕೆಯಾಗಿರುವುದು ನಮಗೆ ಸಂತಸ ತಂದಿದೆ. ಇದು ಸ್ವರಾಜ್ ಇಂಡಿಯಾ ಪಕ್ಷದ ಸಮತಾವಾದದ ಮೌಲ್ಯಗಳು, ಸಮಾಜಮುಖಿ ಆಶಯಗಳಿಗೆ ಸಿಕ್ಕ ಜಯ” ಎಂದು ಹರ್ಷ ವ್ಯಕ್ತಪಡಿಸಿದರು.

“ಈಗ ನೀವು ಸಾಧಿಸಿರುವ ಗೆಲುವು ಬಹಿರಂಗದ ಗೆಲುವು. ಇದರಿಂದಾಗಿ ನೀವು ಜವಾಬ್ದಾರಿಯ ನೊಗ ಹೊತ್ತಂತಾಗಿದೆ. ಮುಂದೆ ತಾಲೂಕು ಹಾಗೂ ಜಿಲ್ಲಾ ಪಂಚಾಯತ್‌ಗೆ ಸ್ಪರ್ಧಿಸುವ ಯೋಚನೆ ಮಾಡಬೇಕು. ಇನ್ನು ಮುಂದೆ ಪ್ರತಿನಿತ್ಯವೂ ನಿಮ್ಮನ್ನು ನೀವು ಗೆಲ್ಲಬೇಕು. ಇದು ಆಂತರಂಗದ ಗೆಲುವು. ಬೇರೆ ಪಕ್ಷಗಳು ಒಡ್ಡುವ ಆಮಿಷದ ಎದುರು ನೀವು ಗೆಲ್ಲಬೇಕು. ಅದು ನಿಜವಾದ ಗೆಲುವು. ಸ್ವರಾಜ್ ಇಂಡಿಯಾ ಪಕ್ಷಕ್ಕೆ ತನ್ನದೇ ಆದ ಸಿದ್ಧಾಂತಗಳಿವೆ. ನಿಷ್ಠೆಯಿಂದ ಒಳ್ಳೆಯ ಕೆಲಸ ಮಾಡಬೇಕು. ಗೆದ್ದವರು ಸೋತವರೊಂದಿಗೆ ವಿಶ್ವಾಸದಿಂದರಬೇಕು” ಎಂದು ಆಯ್ಕೆಯಾದವರಿಗೆ ಸಲಹೆ ನೀಡಿದರು.


ಇದನ್ನೂ ಓದಿ: ಸ್ಥಾನಮಾನ ಸಿಕ್ಕರೆ ಬಿಜೆಪಿ ಸೇರ್ಪಡೆ ಖಚಿತ: ಶಾಸಕ ಎನ್‌ ಮಹೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...