Homeಕರೋನಾ ತಲ್ಲಣಮಧ್ಯಪ್ರದೇಶ: 'ಇದು ಪ್ರಯೋಗ' ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸುತ್ತಾರೆ ಎಂದು ನನ್ನ ಸ್ನೇಹಿತ ಹೇಳಿದ. ಹಾಗಾಗಿ ನಾನು ಅರ್ಜಿಯೊಂದಕ್ಕೆ ಸಹಿ ಹಾಕಿದ್ದೆ. ಅನಂತರ ನನಗೆ ಲಸಿಕೆ ನೀಡಲಾಗಿತ್ತು. ಕೆಲವೇ ದಿನಗಳಲ್ಲಿ ನನಗೆ ವಾಂತಿ ಆರಂಭವಾಗಿ, ಜ್ವರ ಬಂತು. ಕೆಲಸಕ್ಕೂ ಹೋಗಲು ಸಾಧ್ಯವಾಗಲಿಲ್ಲ- ದಿನಗೂಲಿ ಕೆಲಸಗಾರ ಜಿತೇಂದ್ರ

- Advertisement -
- Advertisement -

ಜನರ ಒಪ್ಪಿಗೆ ಇಲ್ಲದೆ ಅವರಿಗೆ ಕೊರೊನಾ ವೈರಸ್ ಲಸಿಕೆ ನೀಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದ್ದು, “ಇದು ಪ್ರಯೋಗ ಎಂದು ನಮಗೆ ಯಾರೂ ಹೇಳಿಲ್ಲ” ಎಂದು ಹಲವು ಜನರು ಆರೋಪಿಸಿದ್ದಾರೆ.

ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆಸಿದ ಲಸಿಕೆ ಪ್ರಯೋಗಗಳಲ್ಲಿ ಪಾಲ್ಗೊಳ್ಳಲು ಜನರನ್ನು ದಾರಿ ತಪ್ಪಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದ್ದು, “ನಮಗೆ ಯಾರೂ ಕೂಡ ಲಸಿಕೆ ಪ್ರಯೋಗದ ಕುರಿತು, ಅದರ ಅಪಾಯದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಚುಚ್ಚುಮದ್ದು ಕೊರೊನಾವನ್ನು ತಡೆಗಟ್ಟುತ್ತದೆ ಎಂದು ಮಾತ್ರ ಹೇಳಿದ್ದಾರೆ. ಇಂತಹ ಪ್ರಯೋಗಕ್ಕೆ ಕಡ್ಡಾಯವಾಗಿರುವ ಒಪ್ಪಿಗೆಯ ಅರ್ಜಿಯನ್ನೂ ನೀಡಿಲ್ಲ” ಎಂದು ಜನರು ಆರೋಪಿಸಿದ್ದಾರೆ.

“ಈ ಲಸಿಕೆ ತೆಗೆದುಕೊಳ್ಳುವುದರಿಂದ ಉಂಟಾಗುವು ಯಾವುದೇ ಅಡ್ಡ ಪರಿಣಾಮದ ಬಗ್ಗೆ ಯಾರೂ ನನಗೆ ಮಾಹಿತಿ ನೀಡಿಲ್ಲ. ಒಪ್ಪಿಗೆ ಫಾರ್ಮ್ ಅನ್ನು ಯಾರೂ ನನಗೆ ಕೊಟ್ಟಿಲ್ಲ. ಆಸ್ಪತ್ರೆಯಿಂದ ನನಗೆ ಯಾವತ್ತೂ ಕರೆ ಬಂದಿಲ್ಲ. ಈ ಚುಚ್ಚುಮದ್ದನ್ನು ತೆಗೆದುಕೊಂಡರೆ ನನಗೆ ಕೊರೊನಾ ಬರುವುದಿಲ್ಲ ಎಂದು ಆಸ್ಪತ್ರೆಯವರು ಹೇಳಿದ್ದರು” ಎಂದು ಭೋಪಾಲ್‌ನ ರೇಖಾ ಹೇಳಿದ್ದಾರೆ.

ಇದನ್ನೂ ಓದಿ: ಕಣ್ಣು ಕುರುಡಾಗಿ, ಕಿವಿ ಕಿವುಡಾಗಿ ಸಂವೇದನೆ ಹೊರಟುಹೋಗಿದೆಯೇ: ಭೈರಪ್ಪನವರಿಗೆ ತಿರುಗೇಟು ನೀಡಿದ ದೇವನೂರು

“ಇದು ಒಂದು ಪ್ರಯೋಗ ಎಂದು ಯಾರೂ ನಮಗೆ ಹೇಳಲಿಲ್ಲ. ಕೊರೋನ ಲಸಿಕೆ ನೀಡುತ್ತಿದ್ದೇವೆ, ನಿಮಗೆ ಏನಾದರೂ ಸಮಸ್ಯೆಯಾದರೆ ನಮಗೆ ಕರೆ ಮಾಡಿ ಎಂದು ಆಸ್ಪತ್ರೆಯವರು ನಮಗೆ ಹೇಳಿದ್ದರು” ಎಂದು ಡಿಸಂಬರ್ 8 ರಂದು ಮೊದಲ ಡೋಸ್ ಪಡೆದಿದ್ದ ಶಂಕರ ನಗರದ ಸಾವಿತ್ರಿ ಹೇಳಿದ್ದಾರೆ.

“ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸುತ್ತಾರೆ ಎಂದು ನನ್ನ ಸ್ನೇಹಿತ ಹೇಳಿದ. ಹಾಗಾಗಿ ನಾನು ಅರ್ಜಿಯೊಂದಕ್ಕೆ ಸಹಿ ಹಾಕಿದ್ದೆ. ಅನಂತರ ನನಗೆ ಲಸಿಕೆ ನೀಡಲಾಗಿತ್ತು. ಕೆಲವೇ ದಿನಗಳಲ್ಲಿ ನನಗೆ ವಾಂತಿ ಆರಂಭವಾಗಿ, ಜ್ವರ ಬಂತು. ಕೆಲಸಕ್ಕೂ ಹೋಗಲು ಸಾಧ್ಯವಾಗಲಿಲ್ಲ. ಇದೊಂದು ಟ್ರಯಲ್ ಎಂದು ಯಾರೂ ಹೇಳಲಿಲ್ಲ” ಎಂದು ದಿನಗೂಲಿ ಕೆಲಸ ಮಾಡುತ್ತಿರುವ ಜಿತೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

ಈ ಕುರಿತು ಪ್ರತಿಕ್ರಿಯಿಸಿದ ಕಾಲೇಜ್ ಆಫ್ ಮೆಡಿಕಲ್ ಸೈಯನ್ಸ್ ಡೀನ್ ಡಾ. ಎ.ಕೆ ದೀಕ್ಷಿತ್, “ನಾವು ಎಲ್ಲ ನಿಯಮಗಳನ್ನು ಪಾಲಿಸಿದ್ದೇವೆ. ಐಸಿಎಂಆರ್ ಮಾರ್ಗಸೂಚಿಯ ಅನ್ವಯ ಟ್ರಯಲ್ಸ್ ನಡೆಸಿದ್ದೇವೆ. ಟ್ರಯಲ್ಸ್‌ನಲ್ಲಿ ಭಾಗವಹಿಸಿದವರಿಗೆ ಅರ್ಧಗಂಟೆ ಮೊದಲೇ ಆಪ್ತ ಸಮಾಲೋಚನೆ ನಡೆಸಿದ್ದೆವು. ಆಗ ಅವರಿಗೆ ಡೋಸ್‌ಗಳು ಹಾಗೂ ಅದರ ಅಡ್ಡ ಪರಿಣಾಮಗಳ ಬಗ್ಗೆ ತಿಳಿಸಲಾಗಿತ್ತು” ಎಂದು ಹೇಳಿದ್ದಾರೆ.

ಈ ವಿಚಾರವನ್ನು ತನಿಖೆ ನಡೆಸಲಾಗುವುದು ಎಂದು ಮಧ್ಯಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದು, “ಈ ಆರೋಪದ ಹಿಂದೆ ರಾಜಕೀಯ ಹುನ್ನಾರವಿದೆ. ನಮ್ಮ ವಿಜ್ಞಾನಿಗಳು ಲಸಿಕೆಯನ್ನು ತಯಾರಿಸಿದ್ದಾರೆ. ತುಕ್ಡೇ ತುಕ್ಟೇ ಗ್ಯಾಂಗ್ ಇದನ್ನು ವಿರೋಧಿಸುತ್ತಿದೆ” ಎಂದು  ಆರೋಪಿಸಿದ್ದಾರೆ.


ಇದನ್ನೂ ಓದಿ: JNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...