Homeಕರ್ನಾಟಕಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ರಾಜ್ಯದ ಬಫೂನ್‌ಗಳು: ಹೆಚ್‌. ವಿಶ್ವನಾಥ್‌‌ ವ್ಯಂಗ್ಯ

ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ರಾಜ್ಯದ ಬಫೂನ್‌ಗಳು: ಹೆಚ್‌. ವಿಶ್ವನಾಥ್‌‌ ವ್ಯಂಗ್ಯ

- Advertisement -
- Advertisement -

ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ಮುಖಂಡ ಹೆಚ್‌.ಡಿ.ಕುಮಾರಸ್ವಾಮಿಯನ್ನು ಕರ್ನಾಟಕದ ಜನರು ಬಫೂನ್‌ಗಳ ತರ ನೋಡುತ್ತಾರೆ ಎಂದು ಮಾಜಿ ಸಚಿವ ಮತ್ತು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಹೆಚ್‌‌.ವಿಶ್ವಾನಾಥ್‌ ವ್ಯಂಗ್ಯವಾಡಿದ್ದಾರೆ.

ಪರಿಷತ್‌‌ನ ಉಪಸಭಾಪತಿ ಧರ್ಮೇಗೌಡ ಅವರ ಆತ್ಮಹತ್ಯೆಯ ಬಗ್ಗೆ ಮಾತನಾಡಿದ್ದ ಕುಮಾರಸ್ವಾಮಿ ಧರ್ಮೇಗೌಡ ಅವರದ್ದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ತಿರುಗೇಟು ನೀಡಿರುವ ಹೆಚ್​. ವಿಶ್ವನಾಥ್, “ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಇಬ್ಬರೂ ಕರ್ನಾಟಕದ ಬಫೂನ್‌‌ಗಳಾಗಿದ್ದು, ಇವರ ಮಾತಿಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ” ಎಂದು ಅಪಹಾಸ್ಯ ಮಾಡಿದ್ದಾರೆ.

ಇದನ್ನೂ ಓದಿ: ನಾನು ದನದ ಮಾಂಸ ತಿನ್ನುತ್ತೇನೆ, ನೀನು ಯಾವನಯ್ಯ ನನ್ನನ್ನು ಕೇಳೋಕೆ: ಸಿದ್ದರಾಮಯ್ಯ

ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಇಬ್ಬರ ವಿರುದ್ಧವೂ ಕಿಡಿಕಾರಿದ ಹೆಚ್. ವಿಶ್ವನಾಥ್​, “ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಹೋರಾಟ ಮಾಡಿದ್ದಾರೆ? ಜೆಡಿಎಸ್​ ಪಕ್ಷದಲ್ಲಿದ್ದ ಅವರನ್ನು ದೇವೇಗೌಡರು ಪಕ್ಷದಿಂದಲೇ ಹೊರ ಹಾಕಿದ್ದರು. ನಂತರ ಅವರು ಕಾಂಗ್ರೆಸ್​ಗೆ ಬಂದರು. ಅಲ್ಲೂ ಅವರೇನು ಹೋರಾಟ ಮಾಡಿಲ್ಲ. ನಾವು ಹೋರಾಟ ಮಾದ್ದೇವೆ, ಅವರು ಮುಖ್ಯಮಂತ್ರಿ ಆದರು. ಬೇಕಿದ್ದರೆ ನಾನೇ ಹೋರಾಟದ ಕುರಿತು ಸಿದ್ದರಾಮಯ್ಯ ಅವರಿಗೆ ಪಾಠ ಮಾಡಲು ಸಿದ್ದನಿದ್ದೇನೆ” ಎಂದು ಹೇಳಿದ್ದಾರೆ.

“ಕುಮಾರಸ್ವಾಮಿ ಧರ್ಮೇಗೌಡ ಅವರ ಸಾವು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದ್ದಾರೆ. ಅಸಲಿಗೆ ಈ ಇಬ್ಬರೂ ನಾಯಕರು ಯಾಕೆ ಮಾತನಾಡುತ್ತಾರೆ?. ಜನರೇ ಇವರನ್ನು ಬಫೂನ್​ ತರ ನೋಡುತ್ತಿರುವಾಗ ಇವರು ಯಾರಿಗಾಗಿ ಮಾತನಾಡುತ್ತಿದ್ದಾರೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದ ಜೊತೆ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ವಿಶ್ವನಾಥ್, “ಸಚಿವ ಸಂಪುಟದ ಬಗ್ಗೆ ಎಲ್ಲರೂ ಮಾತನಾಡುವುದು ಸರಿಯಲ್ಲ. ಮುಖ್ಯಮಂತ್ರಿಯಾಗಲಿ ಬೇರೆ ಯಾರೇ ಆಗಲಿ ಅದರ ಬಗ್ಗೆ ದಿನವಿಡೀ ಮಾತನಾಡುವುದು ಸರಿಯಲ್ಲ. ಹೈಕಮಾಂಡ್ ಯಾವಾಗ ಗ್ರೀನ್ ಸಿಗ್ನಲ್ ಕೊಡುತ್ತೋ, ಅವಾಗ ಸಂಪುಟ ವಿಸ್ತರಣೆ ಆಗುತ್ತದೆ. ಪ್ರತಿ ದಿನ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ಬದಲು ಅಭಿವೃದ್ಧಿಯ ಕುರಿತು ಮಾತನಾಡುವುದು ಉತ್ತಮ. ಹಿರಿಯನಾಗಿ ನನ್ನ ಅನುಭವದ ಆಧಾರದ ಮೇಲೆ‌ ಈ ಮಾತು ಹೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದ ಮೋದಿಗೆ ಯಡಿಯೂರಪ್ಪ ಮೇಲಿನ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...