Homeಅಂಕಣಗಳುಗೌರಿ ಕಾರ್ನರ್: ಮರೆಮಾಚಿದ ಇತಿಹಾಸದ ಬಗ್ಗೆ....

ಗೌರಿ ಕಾರ್ನರ್: ಮರೆಮಾಚಿದ ಇತಿಹಾಸದ ಬಗ್ಗೆ….

"ಇತಿಹಾಸವು ನಡೆದಾಡುವ ವಿರೋಧಾಭಾಸವಿದ್ದಂತೆ ಮತ್ತು ಅಸಮಂಜಸತೆ ಅದರ ಕಾಲುಗಳನ್ನು ನಿಯಂತ್ರಿಸುತ್ತಿರುತ್ತದೆ. ಆ ಕಾರಣದಿಂದಾಗಿಯೇ ಇತಿಹಾಸದ ಮೌನದಲ್ಲೇ ಹಲವಾರು ಸತ್ಯಗಳು ಅಡಗಿರುತ್ತವೆ ಮತ್ತು ಕೆಲವೊಮ್ಮೆ ಸುಳ್ಳು ಹೇಳುವ ಮೂಲಕವೂ ಸತ್ಯವನ್ನು ತೆರೆದಿಡಲಾಗುತ್ತದೆ" ಎಂದು ಹೇಳಿರುವ ಗಲಿಯಾನೋ ಅಂತಹ ಹಲವು ಸತ್ಯಗಳನ್ನು ತಮ್ಮ ಪುಸ್ತಕದಲ್ಲಿ ಪಟ್ಟಿ ಮಾಡಿದ್ದಾರೆ.

- Advertisement -
- Advertisement -

ಪರ್ವತಾರೋಹಿ ಎಡ್ಮಂಡ್ ಹಿಲೇರಿ ತೀರಿಹೋಗಿದ್ದರ ಬಗ್ಗೆ ವರದಿ ಮಾಡಿದ ಎಲ್ಲಾ ಮಾಧ್ಯಮಗಳು ಮೌಂಟ್ ಎವರೆಸ್ಟ್ ಬಗ್ಗೆಯೂ ಬರೆದಿದ್ದವು. ಆದರೆ ಬಹಳಷ್ಟು ಜನಕ್ಕೆ ಗೊತ್ತಿಲ್ಲದಿರುವುದೇನೆಂದರೆ ಯಾವುದನ್ನು ನಾವೆಲ್ಲ ಇವತ್ತು ಮೌಂಟ್ ಎವರೆಸ್ಟ್ ಎಂದು ಕರೆಯುತ್ತೇವೆಯೋ ಆ ಶಿಖರವನ್ನು ನೇಪಾಳದ ಜನ ಸಾಗರಮಾತಾ ಎಂದೂ, ಟಿಬೆಟ್‌ನ ಜನ ಚಿಮೋಲುಂಗ್ಮಾ ಎಂದೂ, ಭಾರತದ ಜನ ಗೌರಿಶಂಕರ ಎಂದೂ ಕರೆಯುತ್ತಿದ್ದರು.

ಆದರೆ ಯಾವಾಗ 1865ರಲ್ಲಿ ಅಂದಿನ ಬ್ರಿಟಿಷ್ ಸಾಮ್ರಾಜ್ಯದ ಸರ್ವೇಯರ್ ಜನರಲ್ ಆಫ್ ಇಂಡಿಯಾ ಸರ್ ಜಾರ್ಜ್ ಎವರೆಸ್ಟ್ ಎಂಬ ಅಧಿಕಾರಿ ಆ ಶಿಖರವನ್ನು ಅಳತೆ ಮಾಡಿದನೋ, ಆನಂತರ ಅದಕ್ಕೆ ಆತನ ಹೆಸರನ್ನೇ ಬ್ರಿಟಿಷರು ಇಟ್ಟರು. ಈಗ ಅದರ ಸುತ್ತಮುತ್ತಲಿನ ಜನ ಇಟ್ಟಿದ್ದ ಹೆಸರು ಮಾಯವಾಗಿ ಎಲ್ಲರಿಗೂ ಅದು ಮೌಂಟ್ ಎವರೆಸ್ಟ್ ಎಂದೇ ಪರಿಚಿತವಾಗಿದೆ. ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ ಇತ್ತೀಚೆಗೆ ಎಡ್ವಾರ್ಡೋ ಗಲಿಯಾನೊ ಎಂಬ ಉರುಗ್ವೆ ದೇಶದ ಖ್ಯಾತ ಪತ್ರಕರ್ತ ಮತ್ತು ಬರಹಗಾರ ಜನರ ಇತಿಹಾಸವನ್ನು ಹೇಗೆ ಪಟ್ಟಭದ್ರ ಹಿತಾಸಕ್ತಿಗಳು ಮರೆಮಾಚುತ್ತವೆ ಎಂಬುದನ್ನು ಕುರಿತು ಒಂದು ಪುಸ್ತಕ ಬರೆದಿದ್ದಾರೆ.

“ಇತಿಹಾಸವು ನಡೆದಾಡುವ ವಿರೋಧಾಭಾಸವಿದ್ದಂತೆ ಮತ್ತು ಅಸಮಂಜಸತೆ ಅದರ ಕಾಲುಗಳನ್ನು ನಿಯಂತ್ರಿಸುತ್ತಿರುತ್ತದೆ. ಆ ಕಾರಣದಿಂದಾಗಿಯೇ ಇತಿಹಾಸದ ಮೌನದಲ್ಲೇ ಹಲವಾರು ಸತ್ಯಗಳು ಅಡಗಿರುತ್ತವೆ ಮತ್ತು ಕೆಲವೊಮ್ಮೆ ಸುಳ್ಳು ಹೇಳುವ ಮೂಲಕವೂ ಸತ್ಯವನ್ನು ತೆರೆದಿಡಲಾಗುತ್ತದೆ” ಎಂದು ಹೇಳಿರುವ ಗಲಿಯಾನೋ ಅಂತಹ ಹಲವು ಸತ್ಯಗಳನ್ನು ತಮ್ಮ ಪುಸ್ತಕದಲ್ಲಿ ಪಟ್ಟಿ ಮಾಡಿದ್ದಾರೆ. ಅವುಗಳಲ್ಲಿ ಒಂದು ಉದಾಹರಣೆ ಮೌಂಟ್ ಎವರೆಸ್ಟ್ ವೃತ್ತಾಂತವನ್ನೇ ಹೋಲುತ್ತದೆ. ಅದು ಬ್ರಿಟಿಷ್ ವಸ್ತುಸಂಗ್ರಹಾಲಯದಲ್ಲಿರುವ ಎಲ್ಜಿನ್ ಅಮೃತಶಿಲೆಗಳಿಗೆ ಸಂಬಂಧಪಟ್ಟಿದ್ದು. ಗ್ರೀಕ್ ದೇಶದಲ್ಲಿನ ಪ್ರಾರ್ಥೆನಾನ್ ಮೂಲದ ಈ ಶಿಲೆಗಳಿಗೆ ಇದ್ದ ಸ್ಥಳೀಯ ಹೆಸರು ಫಿಡಿಯಾಸ್. ಆದರೆ ಅವುಗಳನ್ನು ಎಲ್ಜಿನ್ ಎಂಬ ಬ್ರಿಟಿಷ್ ವ್ಯಕ್ತಿ ವಸ್ತುಸಂಗ್ರಹಾಲಯಕ್ಕೆ ಮಾರಿದ್ದರಿಂದ ಆತನ ಹೆಸರನ್ನೇ ಆದಕ್ಕೆ ನೀಡಲಾಗಿದೆ. ಆ ಮೂಲಕ ಅವುಗಳ ಸ್ಥಳೀಯ ಇತಿಹಾಸವನ್ನು ಮರೆಮಾಚಲಾಗಿದೆ.

ಗಲಿಯಾನೋ ಇಂತಹದ್ದೇ ಹಲವಾರು ಇತರೆ ಉದಾಹರಣೆಗಳನ್ನು ನೀಡಿದ್ದಾರೆ. ವಿಶ್ವ ಇತಿಹಾಸವನ್ನರಿಯಲು ಅವು ನೆರವಾಗಬಹುದೆಂಬ ಕಾರಣಕ್ಕೆ ಇಲ್ಲಿ ಹಲವನ್ನು ನೀಡಿದ್ದೇನೆ.

  • ಯೂರೋಪಿನ ಪುನರುಜ್ಜೀವನಕ್ಕಾಗಿ ನೆರವಾದದ್ದು ಗನ್ ಪೌಡರ್, ದಿಕ್ಸೂಚಿ ಮತ್ತು ಮುದ್ರಣ ಯಂತ್ರ ಎಂಬ ಸಂಶೋಧನೆಗಳು. ಆದರೆ ವಾಸ್ತವವಾಗಿ ಈ ಮೂರು ವಸ್ತುಗಳನ್ನು ಚೀನಾ ದೇಶದವರು ಅದಕ್ಕೂ ಮುನ್ನವೇ ಸಂಶೋಧಿಸಿದ್ದರು ಮಾತ್ರವಲ್ಲ, ಚೀನಿಯರ ಇತರೆ ಸಂಶೋಧನೆಗಳನ್ನು ಯೂರೋಪಿಯನ್ನರು ’ಮರು ಸಂಶೋಧಿಸುತ್ತಾ’ ಅವುಗಳು ತಮ್ಮ ಕೊಡುಗೆಗಳು ಎಂದು ಹೇಳಿದರು.
  • ಅರ್ಜೆಂಟೈನಾದಲ್ಲಿರುವ ಅತಿ ಎತ್ತರದ ಸ್ಮಾರಕಕ್ಕೆ ಜನರಲ್ ರೋಕಾನ ಹೆಸರಿಡಲಾಗಿದೆ. ಈ ಪ್ರದೇಶಕ್ಕೆ ರೋಕಾನ ಕೊಡುಗೆ ಏನೆಂದರೆ ಪಟಗೊನಿಯಾದಲ್ಲಿದ್ದ ಬುಡಕಟ್ಟು ಜನರನ್ನು 19ನೇ ಶತಮಾನದಲ್ಲಿ ನಿರ್ನಾಮ ಮಾಡಿದ್ದು.
  • ಗುಲಾಮರನ್ನು ಸಾಗಿಸಲು ಬಳಸುತ್ತಿದ್ದ ಹಲವು ಹಡಗುಗಳ ಹೆಸರುಗಳು ವೋಲ್ಟೇರ್, ಜೀಸಸ್, ವಿಶ್ವಾಸ, ಸಮಾನತೆ ಮತ್ತು ಸ್ನೇಹ ಎಂಬುದಾಗಿತ್ತು.
  • ಆಮೆರಿಕವನ್ನು ಸ್ಥಾಪಿಸಿದ ಇಬ್ಬರು ಹಿರಿಯರ ಹೆಸರುಗಳು ಅಧಿಕೃತ ಇತಿಹಾಸದಿಂದಲೇ ಮರೆಯಾಗಿವೆ. ಯಾಕೆಂದರೆ ಅವರಲ್ಲಿ ರಾಬರ್ಟ್ ಕಾರ್ಟರ್ ಎಂಬಾತ ತನಗಾಗಿ ದುಡಿಯುತ್ತಿದ್ದ ಕರಿಯರಿಗೂ ಸ್ವಾತಂತ್ರ್ಯ ನೀಡಿದ್ದ ಮತ್ತು ಗವರ್ನರ್ ಮೋರಿಸ್ ಎಂಬಾತ ಕರಿಯ ಗುಲಾಮರು ಇತರರಿಗಿಂತ ಕೀಳು ಎಂಬ ಅಂಶವನ್ನು ಸಂವಿಧಾನದಲ್ಲಿ ಸೇರಿಸುವುದನ್ನು ವಿರೋಧಿಸಿದ್ದ. ಅವರ ಈ ನಿಲುವಿನಿಂದಾಗಿ ಅವರಿಬ್ಬರನ್ನು ಈಗ ಸಾಮೂಹಿಕ ನೆನಪಿನಿಂದಲೇ ಗಡಿಪಾರು ಮಾಡಲಾಗಿದೆ.
  • 1234ರಿಂದ ಏಳು ಶತಮಾನಗಳ ಕಾಲ ಚರ್ಚ್‌ಗಳಲ್ಲಿ ಮಹಿಳೆಯರು ಹಾಡುವುದನ್ನು ನಿಷೇಧಿಸಲಾಗಿತ್ತು. ಕಾರಣ ಅವರ ದನಿಗಳು ಅಪವಿತ್ರವೆಂದು ಭಾವಿಸಲಾಗಿತ್ತು.
  • 1793ರ ಫ್ರೆಂಚ್ ಕ್ರಾಂತಿಯ ನಂತರ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ಮೂರು ಸೂತ್ರಗಳನ್ನು ಘೋಷಿಸಿದಾಗ ‘ಪುರುಷರ ಹಕ್ಕುಗಳು’ ಎಂಬ ಕಾನೂನನ್ನು ಪ್ರಕಟಗೊಳಿಸಲಾಗಿತ್ತು. ಆಗ ಕ್ರಾಂತಿಕಾರಿ ತೀವ್ರವಾದಿ ಓಲಿಂಪಿಯಾ ದೆ ಗೂಬ್ ಎಂಬಾಕೆ ’ಮಹಿಳೆಯರ ಹಕ್ಕುಗಳು’ ಎಂಬ ಕಾನೂನನ್ನೂ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಳು. ಹಾಗೆ ಕೇಳಿದ್ದಕ್ಕೆ ಅವಳ ಶಿರಚ್ಛೇದನ ಮಾಡಲಾಯಿತು.
  • ರಾಣಿ ಥಿಯೋಡೋರಾಳನ್ನು ಯಾರೂ ಕ್ರಾಂತಿಕಾರಿ ಮಹಿಳಾವಾದಿ ಎಂದು ನೆನಪಿಸಿಕೊಳ್ಳುವುದಿಲ್ಲ. ಆದರೆ 1500 ವರ್ಷಗಳ ಹಿಂದೆ ಆಳಿದ್ದ ಈಕೆ ಮಹಿಳೆಯರಿಗೆ ಗರ್ಭಪಾತ ಮತ್ತು ವಿಚ್ಛೇದನಾ ಹಕ್ಕುಗಳನ್ನು ನೀಡಿದ್ದ ಪ್ರಥಮ ಮಹಿಳಾವಾದಿಯಾಗಿದ್ದಳು.
  • ಚೀನಾದ ಪೀಕಿಂಗ್‌ನಿಂದ ಯೂರೋಪಿಗೆ ತಂದ ಪ್ರಥಮ ಪೀಕಿನೀಸ್ ನಾಯಿಗೆ ಇಂಗ್ಲಿಷರು ’ಲೂಟಿ’ ಎಂದು ಹೆಸರಿಟ್ಟರು. ಬ್ರಿಟಿಷರು ಚೀನಾ ದೇಶವನ್ನು ಲೂಟಿ ಹೊಡೆದಿದ್ದರ ಸಂಕೇತವಾಗಿ ಆ ಹೆಸರು ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.
  • ಕುಖ್ಯಾತ ಚಿತ್ರಹಿಂಸೆಯ ಯಾತನಾ ಶಿಬಿರಗಳನ್ನು ಮೊದಲ ಬಾರಿ ಆಫ್ರಿಕಾದಲ್ಲಿ ಪ್ರಾರಂಭಿಸಿದವರು ಬ್ರಿಟಿಷರು. ಆನಂತರ 2ನೇ ವಿಶ್ವ ಮಹಾಯುದ್ಧದಲ್ಲಿ ಯಹೂದಿಯರನ್ನು ಕೊಲ್ಲಲು ಅದನ್ನು ಉಪಯೋಗಿಸಿದವರು ಜರ್ಮನ್ನರು.
  • 1936ರ ಒಲಂಪಿಕ್ಸ್‌ಅನ್ನು ಆಯೋಜಿಸಿದ್ದು ಹಿಟ್ಲರ್. ಅಂದು ಫುಟ್‌ಬಾಲ್‌ನಲ್ಲಿ ಆಸ್ಟ್ರಿಯಾ ದೇಶವನ್ನು ಪೆರು ದೇಶ ಸೋಲಿಸಿತ್ತು. ಹಿಟ್ಲರ್‌ನ ಜನ್ಮಭೂಮಿ ಆಸ್ಟ್ರಿಯಾ ಆಗಿದ್ದರಿಂದ ಆ ಮ್ಯಾಚ್‌ಅನ್ನೇ ಒಲಂಪಿಕ್ಸ್ ಸಮಿತಿ ರದ್ದುಗೊಳಿಸಿತ್ತು.
  • ಕೊಲೆಗಡುಕ ಹಿಟ್ಲರ್ ಕಾರ್ಪೊರೆಟ್ ಕಂಪನಿಗಳ ಮಿತ್ರನಾಗಿದ್ದ. ಎರಡನೇ ಮಹಾಯುದ್ಧ ನಡೆಯುತ್ತಿದ್ದಾಗಲೇ ಜರ್ಮನ್ ಮಾರುಕಟ್ಟೆಗೆಂದು ಕೋಕಾಕೋಲಾ ಕಂಪನಿ ಫಾಂಟಾ ಎಂಬ ಪಾನೀಯವನ್ನು ತಯಾರಿಸಿತ್ತು. ಹಾಗೆಯೇ ಐಬಿಎಂ ಕೂಡ ಯಹೂದಿಯರನ್ನು ಗುರುತಿಸುವ ಮತ್ತು ವರ್ಗೀಕರಿಸುವ ತಂತ್ರಜ್ಞಾನವನ್ನು ನೀಡಿತ್ತು.
  • 1953ರಲ್ಲಿ ಕಮ್ಯುನಿಸ್ಟ್ ಜರ್ಮನಿಯಲ್ಲಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸಿ ಬೀದಿಗಿಳಿದರು. ಆಗ ರಷ್ಯಾದ ಮಿಲಿಟರಿ ಟ್ಯಾಂಕ್‌ಗಳು ಅವರ ಬಾಯನ್ನು ಬಂದ್ ಮಾಡಿದವು. ಇದನ್ನು ನೋಡಿ ಬರ್ಟೋಲ್ಟ್ ಬ್ರೆಕ್ಟ್ ಎಂಬ ಖ್ಯಾತ ನಾಟಕಕಾರ ಒಂದು ಸಲಹೆಯನ್ನು ನೀಡಿದ್ದ: “ಸರ್ಕಾರವೇ ತನ್ನ ಪ್ರಜೆಗಳನ್ನು ನಿರ್ನಾಮ ಮಾಡಿ ತನಗೆ ಸೂಕ್ತವಾದ ಜನರನ್ನು ಆಯ್ಕೆಮಾಡಿಕೊಳ್ಳುವುದು ಸುಲಭವಲ್ಲವೆ?”
  • 1964ರಲ್ಲಿ ಟಾನ್ಕಿನ್ ಬೇ ಎಂಬಲ್ಲಿ ವಿಯೆಟ್ನಾಂ ಸೈನ್ಯವು ಆಮೆರಿಕದ ಎರಡು ಹಡಗುಗಳ ಮೇಲೆ ಯುದ್ಧ ದಾಳಿ ನಡೆಸಿದೆ ಎಂದು ಆರೋಪಿಸಿ, ಅಮೆರಿಕ ವಿಯೆಟ್ನಾಂ ಮೇಲೆ ಯುದ್ಧ ಸಾರಿತು. ಸಾವಿರಾರು ವಿಯೆಟ್ನಾಂ ಜನರನ್ನು ಹತ್ಯೆ ಮಾಡಿದ ನಂತರ ಅಮೆರಿಕದ ರಕ್ಷಣಾ ಸಚಿವ ಟಾನ್ಕಿನ್ ಬೇ ಮೇಲೆ ಯಾವುದೇ ದಾಳಿ ನಡೆದಿರಲಿಲ್ಲ ಎಂದು ಒಪ್ಪಿಕೊಂಡ.

ನಲವತ್ತು ವರ್ಷಗಳ ನಂತರ ಇರಾಕ್ ಮೇಲೂ ಇಂತಹದ್ದೇ ಕುತಂತ್ರವನ್ನು ಅಮೆರಿಕ ನಡೆಸಿತು.
ಇರಾಕಿನಲ್ಲಿ ’ನಾಗರಿಕತೆ’ಯನ್ನು ಸ್ಥಾಪಿಸಲೆಂದು ಅಮೆರಿಕ ದಾಳಿ ಮಾಡುವ ಸಾವಿರ ವರ್ಷಗಳ ಹಿಂದೆಯೇ ಈ ’ಹಿಂದುಳಿ’ದ ಪ್ರದೇಶದಲ್ಲಿ ಜಗತ್ತಿನ ಪ್ರಪ್ರಥಮ ಪ್ರೇಮ ಕವನವನ್ನು ರಚಿಸಲಾಗಿತ್ತು. ಸುಮೇರಿಯಾ ಭಾಷೆಯಲ್ಲಿರುವ ಈ ಕವನವನ್ನು ಮಣ್ಣಿನ ಮೇಲೆ ಬರೆಯಲಾಗಿತ್ತಲ್ಲದೆ ಅದು ದೇವತೆ ಮತ್ತು ಕುರುಬನೊಬ್ಬನ ಪ್ರೇಮ ಪ್ರಸಂಗ ಕುರಿತದ್ದಾಗಿತ್ತು.

ಪಟ್ಟಭದ್ರರ ದೃಷ್ಟಿಕೋನದಿಂದ ಬರೆದ ಇತಿಹಾಸದಲ್ಲಿ ಈ ಯಾವುದಕ್ಕೂ ಪ್ರಾಮುಖ್ಯತೆ ಇರುವುದಿಲ್ಲ.

(ಜನವರಿ 30, 2008ರಂದು ಬರೆದ ಗೌರಿಯವರ ಕಂಡಹಾಗೆ ಅಂಕಣದ ಆಯ್ದ ಭಾಗ ಇದು)


ಇದನ್ನೂ ಓದಿ: ಅಂದು ಟ್ಯಾಗೋರ್ ದ್ವೇಷ, ಇಂದು ಅವರನ್ನೇ ಅಪ್ರಾಪ್ರಿಯೇಟ್ ಮಾಡಿಕೊಳ್ಳಲು ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...