Homeಕರೋನಾ ತಲ್ಲಣಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಮಾಹಿತಿಗಳನ್ನು ಬಹಿರಂಗಪಡಿಸುವಲ್ಲಿ ತೋರುತ್ತಿರುವ ಹಿಂಜರಿಕೆಯು ಬಹಳ ದೊಡ್ಡ ಅಪಾಯವನ್ನು ಸೂಚಿಸುತ್ತಿದೆ ಎಂದು ಉಲ್ಲೇಖಿಸಿದ್ದಾರೆ

- Advertisement -
- Advertisement -

ಕೊರೊನಾ ಸಾಂಕ್ರಮಿಕ ವಿರುದ್ಧ ತುರ್ತು ಬಳಕೆಗಾಗಿ ಭಾರತೀಯ ಔಷಧೀಯ ನಿಯಂತ್ರಕ ಕೊವಿಶೀಲ್ಡ್‌, ಕೊವ್ಯಾಕ್ಸಿನ್‌ ಲಸಿಕೆಗಳಿಗೆ ಅನುಮತಿ ನೀಡಿದೆ. ಜೊತೆಗೆ ಇನ್ನೂ ಎರಡು ಲಸಿಕೆಗಳು ಅನುಮತಿಗಾಗಿ ಸರತಿಯಲ್ಲಿವೆ. ಆದರೆ ಅನುಮತಿ ಪಡೆದಿರುವ ಭಾರತ್‌ ಬಯೋಟೆಕ್‌ ತಯಾರಿಸುತ್ತಿರುವ ಕೊವ್ಯಾಕ್ಸಿನ್ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಲಸಿಕೆಯ ಮೂರನೇ ಹಂತದ ಪ್ರಯೋಗದ ವರದಿ ಇನ್ನೂ ಬಂದಿಲ್ಲ ಹಾಗಾಗಿ ಅದು ಸುರಕ್ಷಿತವಲ್ಲ ಎಂದು ಅವರ ಅನುಮಾನಕ್ಕೆ ಕಾರಣ. ಇದೀಗ ಆರ್‌ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ ಕೊವ್ಯಾಕ್ಸಿನ್ ಕುರಿತು ಅಘಾತಕಾರಿ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದಾರೆ.

ಸಾಕೇತ್‌ ಗೋಖಲೆ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಕೊವ್ಯಾಕ್ಸಿನ್ ಕುರಿತ ಹಲವು ಮಾಹಿತಿಗಳನ್ನು ಸಾಕ್ಷಿ ಸಹಿತ ಬಿಚ್ಚಿಟ್ಟಿದ್ದಾರೆ. ಈ ಮಾಹಿತಿಯು ನಿಮ್ಮ ಜೀವಕ್ಕೆ ಸಂಬಂಧ ಪಟ್ಟಿದ್ದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

“ಭಾರತ್ ಬಯೋಟೆಕ್‌ನ ಹಂತ 1 ಮತ್ತು 2 ಕೊರೊನಾ ಲಸಿಕೆ ಪ್ರಯೋಗಗಳ ರಹಸ್ಯ” ಎಂದು ಅವರು ತಮ್ಮ ಬರಹವನ್ನು ಪ್ರಾರಂಭಿಸಿದ್ದಾರೆ. “ಭಾರತ್‌ ಬಯೋಟೆಕ್‌ನ ಪಾಲುದಾರನೂ ಆಗಿರುವ ಭಾರತದ ಕ್ಲಿನಿಕಲ್‌ ಟ್ರಯಲ್ಸ್‌ ರಿಜಿಸ್ಟರ್(CTR)ನ ಐಸಿಎಂಆರ್‌‌ನ ಒಂದು ಘಟಕದಲ್ಲಿ ಕೊವ್ಯಾಕ್ಸಿನ್‌ ಲಸಿಕೆಯ 1 ನೇ ಮತ್ತು 2 ನೇ ಹಂತದ ಪ್ರಯೋಗಗಳಿಗಾಗಿ ಭಾರತ್‌ ಬಯೋಟೆಕ್ ನೋಂದಣಿ ಮಾಡಿತ್ತು‌.

ಜುಲೈ 1, 2020 ಕ್ಕೆ 1 ನೇ ಹಂತದ ಪ್ರಯೋಗಗಳ ಮಾಹಿತಿಗಳನ್ನು ಭಾರತ್ ಬಯೋಟೆಕ್ ರಿಜಿಸ್ಟರ್‌ ಮಾಡಿತ್ತು. ಅದಕ್ಕಾಗಿ ಲಸಿಕೆಗಳ ಮಾದರಿ‌‌‌ಗಳನ್ನು ಪಡೆದುಕೊಳ್ಳಲು ಒಟ್ಟು 1125 ಜನರನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು ಎಂದಿರುವ ಅವರು, “ನೆನಪಿಡಿ, ಇದೇ ಸಮಯದಲ್ಲಿ ನರೇಂದ್ರ ಮೋದಿಯ ವರ್ಚಸ್ಸು ಹೆಚ್ಚಾಗಲೆಂದು ’ಲಸಿಕೆಯು ಸ್ವಾತಂತ್ರ್ಯ ದಿನದೊಳಗೆ ತಯಾರಾಗಬೇಕು’ ಎಂದು ಎಂಸಿಆರ್‌ ಆಘಾತಕಾರಿ ಪತ್ರ ರವಾನಿತ್ತು” ಎಂದು ಅವರು ನೆನಪಿಸಿದ್ದಾರೆ.

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

“ಲಸಿಕೆಯ 2 ನೇ ಹಂತದ ಮಾಹಿತಿಗಳನ್ನು ಸೆಪ್ಟೆಂಬರ್ 8, 2020 ರಲ್ಲಿ ರಿಜಿಸ್ಟರ್‌ ಮಾಡಲಾಗಿತ್ತು. ಇದು 1 ನೇ ಹಂತದ ಪ್ರಯೋಗ ರಿಜಿಸ್ಟರ್ ಮಾಡಿದ ಕೇವಲ 2 ತಿಂಗಳೊಳಗೆ ನಡೆದಿತ್ತು. ಅಂದರೆ, 1 ನೇ ಪ್ರಯೋಗ ಪೂರ್ಣಗೊಳ್ಳುವ ಮುನ್ನವೇ 2 ನೇ ಪ್ರಯೋಗವನ್ನು ಅನ್ನು ರಿಜಿಸ್ಟರ್ ಮಾಡಲಾಗಿತ್ತು. ಅದಲ್ಲದೆ 2 ನೇ ಪ್ರಯೋಗದಲ್ಲಿ ಕೇವಲ 124 ಸ್ವಯಂಸೇವಕರು ಮಾತ್ರ ಭಾಗವಹಿಸಿದ್ದರು” ಎಂದು ಸಾಕೇತ್‌ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಸಂಭ್ರಮದ ಮಧ್ಯೆ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮರೆಯದಿರಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

“ಜುಲೈ 2020 ರಲ್ಲಿ ರಿಜಿಸ್ಟರ್ ಮಾಡಲಾಗಿದ್ದ 1ನೇ ಹಂತದ ಪ್ರಯೋಗವು ಮಾರ್ಚ್‌ 2021 ರೊಳಗೆ ಪೂರ್ತಿಗೊಳ್ಳಬೇಕಿತ್ತು. 2 ನೇ ಹಂತದ ಪ್ರಯೋಗ ಸೆಪ್ಟೆಂಬರ್‌ 8, 2020 ರಲ್ಲಿ ರಿಜಿಸ್ಟರ್ ಮಾಡಿದ್ದು, ಇದರ ಪ್ರಯೋಗವು ಒಂದು ವರ್ಷ ಹಾಗೂ 3 ತಿಂಗಳು ಅಂದರೆ 2021 ರ ಡಿಸೆಂಬರ್‌‌ವರೆಗೆ ನಡೆಯಬೇಕಿತ್ತು. 3 ನೇ ಹಂತದ ಪ್ರಯೋಗ‌ ನವೆಂಬರ್‌ 9 2020 ರಂದು ರಿಜಿಸ್ಟರ್ ಮಾಡಲಾಗಿದ್ದು, ಇದರ ಪ್ರಯೋಗವನ್ನು 25,800 ಮಂದಿಯನ್ನು ಬಳಸಿ ನಡೆಸಲಾಗುವುದು ಎಂದು ಇದರಲ್ಲಿ ಉಲ್ಲೇಖಿಸಲಾಗಿತ್ತು” ಎಂದು ಅವರು ಹೇಳಿದ್ದಾರೆ.

ಮೂರನೇ ಹಂತದ ಪ್ರಯೋಗಕ್ಕೆ ಒಂದು ವರ್ಷವನ್ನು ನಿಗದಿಪಡಿಸಲಾಗಿತ್ತು. ಆದರೆ, ಮೊದಲ ಹಂತದ ಪ್ರಯೋಗಗಳು ಮುಗಿಯುವ ಮೊದಲೇ 2 ಮತ್ತು 3 ನೇ ಹಂತದ ಪ್ರಯೋಗಗಳನ್ನು ರಿಜಿಸ್ಟರ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಒಟ್ಟಾರೆಯಾಗಿ 1 ನೇ ಹಂತ ಮಾರ್ಚ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು. 2 ನೇ ಹಂತವು ಡಿಸೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು. 3 ನೇ ಹಂತವು ನವೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು” ಎಂದು ಅವರು ಸೂಚಿಸಿದ್ದಾರೆ. ಆದರೆ ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಲಸಿಕೆಗೆ ಭಾರತ ಸರಕಾರವು ಜನವರಿ 2021 ರಲ್ಲೇ ಅನುಮತಿ ನೀಡಿದೆ.

ಇದನ್ನೂ ಓದಿ: ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ತಮ್ಮ ಮಾಹಿತಿಯಲ್ಲಿ ಸಾಕೇತ್ ಗೋಖಲೆ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

  • ಭಾರತ್ ಬಯೋಟೆಕ್‍ನ ಸ್ವತಃ ರಿಜಿಸ್ಟ್ರೇಶನ್ ದಾಖಲೆಗಳಲ್ಲಿರುವಂತಹ 1 ನೇ ಪ್ರಯೋಗ ಪೂರ್ಣಗೊಳ್ಳುವಿಕೆಗೆ ಇನ್ನೂ 3 ತಿಂಗಳುಗಳಿರುವಾಗ ಯಾವ ಆಧಾರದಲ್ಲಿ ಲಸಿಕೆ ಅನುಮತಿ ನೀಡಲಾಗಿದೆ?
  • ಈ ಕಾರಣಕ್ಕಾಗಿಯೇ ಭಾರತ್ ಬಯೋಟೆಕ್‍ನ 1 ನೇ ಹಂತ ಮತ್ತು 2 ನೇ ಹಂತದ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲು ಮೋದಿ ಸರರ್ಕಾರ ಹಿಂಜರಿಯುತ್ತಿದೆಯೆ?
  • ಲಸಿಕೆಯ 1 ನೇ ಮತ್ತು 2 ನೇ ಹಂತದ ಸ್ವಯಂ ಸೇವಕರ ಸಂಖ್ಯೆ ಕೇವಲ 1249. 130 ಕೋಟಿಯಷ್ಟು ಜನಸಂಖ್ಯೆಯಿರುವ ಭಾರತದಲ್ಲಿ ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
  • ಪರಿಸ್ಥಿತಿ ಹೀಗಿರುವಾಗ ಈ ಲಸಿಕೆಯು 110% ಸುರಕ್ಷಿತ ಎಂದು ಹೇಗೆ ಹೇಳುತ್ತೀರಿ?
  • ಅಲ್ಲದೆ ರೂಪಾಂತರಿ ಕೊರೊನಾ ವೈರಸ್‌ ವಿರುದ್ಧ ಇದು ಕೆಲಸ ನಿರ್ವಹಿಸುತ್ತದೆ ಎಂದು ಯಾವ ಆಧಾರದಲ್ಲಿ ಹೇಳುತ್ತೀರಿ?
  • ಇದನ್ನೆಲ್ಲಾ ಸಾಬೀತುಪಡಿಸಲು 1 ನೇ ಹಾಗೂ 2 ನೇ ಹಂತದ ಅಂಕಿ ಅಂಶಗಳು ಎಲ್ಲಿವೆ? ಎಂದು ಪ್ರಶ್ನಿಸಿದ್ದಾರೆ.

“ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಪ್ರಯೋಗಗಳ 1ನೇ ಹಾಗೂ 2 ನೇ ಹಂತದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಬೇಕು. ಒಂದೂವರೆ ವರ್ಷದಲ್ಲಿ ಮಗಿಯಬೇಕಿದ್ದ ಪ್ರಯೋಗಗಳು ಕೇವಲ 5 ತಿಂಗಳಿನಲ್ಲಿ ಹೇಗೆ ಮುಗಿಯಿತು ಅನ್ನುವುದನ್ನು ವಿವರಿಸಬೇಕು. ಮಾಹಿತಿಗಳನ್ನು ಬಹಿರಂಗಪಡಿಸುವಲ್ಲಿ ತೋರುತ್ತಿರುವ ಹಿಂಜರಿಕೆಯು ಬಹಳ ದೊಡ್ಡ ಅಪಾಯವನ್ನು ಸೂಚಿಸುತ್ತಿದೆ” ಎಂದು ಅವರು ಮಾಹಿತಿ ಬಿಡುಗಡೆಗೆ ಮೋದಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಷ್ಟೇ ಅಲ್ಲದೆ ಸಾಖೇತ್‌ ಗೋಖಲೆ ತಾವು ಬರೆದ ಎಲ್ಲಾ ವಿಚಾರಗಳಿಗೂ ದಾಖಲೆಗಳನ್ನೂ ನೀಡಿದ್ದಾರೆ.

ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...