Homeಅಂಕಣಗಳುಚಳಿಮಳೆಗೆ ಬಗ್ಗದ ರೈತರೂ ಮತ್ತು ಬರ ಬಿದ್ದ 56 ಅಂಗುಲದ ಎದೆಯೂ: ಉಮಾಪತಿ ಡಿ

ಚಳಿಮಳೆಗೆ ಬಗ್ಗದ ರೈತರೂ ಮತ್ತು ಬರ ಬಿದ್ದ 56 ಅಂಗುಲದ ಎದೆಯೂ: ಉಮಾಪತಿ ಡಿ

- Advertisement -
- Advertisement -

ಸಕಾಲಕ್ಕೆ ಬೀಳುವ ಮಳೆಯನ್ನು ರೈತರು ಬಗೆ ಬಗೆಯಾಗಿ ಬಣ್ಣಿಸಿ ಸಂತಸಪಡುವುದುಂಟು. ಉತ್ತರ ಭಾರತದ ಕಡೆಗೆ ಇಂತಹ ಮಳೆ ಸುರಿದರೆ ತುಪ್ಪ ಸುರಿಯಿತು, ಬಂಗಾರವೇ ಭುವಿಗಿಳಿಯಿತು ಎಂದು ಉದ್ಗರಿಸುತ್ತಾರೆ. ಹಿಂದಿ-ಪಂಜಾಬಿ ಸೀಮೆಯ ಹೊಲಗಳಲ್ಲಿ ಕಣ್ಣು ಹಾಯಿಸಿದಷ್ಟು ದೂರಕ್ಕೆ ಇದೀಗ ಕಾಣುವುದು ಸಾಸಿವೆ ಪೈರಿನ ಹಳದಿ ಹೂ ವಿಸ್ತಾರ. ದಕ್ಷಿಣದವರು ಒಗ್ಗರಣೆಗೆ-ಉಪ್ಪಿನಕಾಯಿಗೆ ಮಾತ್ರವೇ ಸಾಸಿವೆ ಬಳಸಿದರೆ, ಉತ್ತರಪ್ರದೇಶ, ಬಿಹಾರ, ರಾಜಸ್ತಾನ, ಹರಿಯಾಣ, ಪಂಜಾಬ್, ದೆಹಲಿ ಮಾತ್ರವಲ್ಲದೆ ಒಡಿಶಾ ಬಂಗಾಳ ಅಸ್ಸಾಮಿನಲ್ಲಿ ಅಡುಗೆ ಎಣ್ಣೆಯಾಗಿ ಸಾಸಿವೆ ಎಣ್ಣೆಯೇ ಜನಪ್ರಿಯ. ಹೀಗಾಗಿ ಸಾಸಿವೆ ಭಾರೀ ಪ್ರಮಾಣದ ಬೆಳೆ. ಕೊರೆಯುವ ಚಳಿಯಲ್ಲಿ ಮೈಯಲ್ಲಿ ಬಿಸಿ ಹುಟ್ಟಿಸುವ ಆಹಾರ ಸಾಸಿವೆ. ಸಾಸಿವೆ ಸೊಪ್ಪನ್ನು ಅರೆದು ಮಾಡಿದ ಪಲ್ಯ ಮತ್ತು ಮುಸುಕಿನ ಜೋಳದ ರೊಟ್ಟಿ ಚಳಿಯನ್ನು ಓಡಿಸುವ ಜನಪ್ರಿಯ ಮತ್ತು ರುಚಿಕರ ಖಾದ್ಯ. ರಸ್ತೆ ಬದಿಯ ಡಾಬಾಗಳಿಂದ ಹಿಡಿದು ಪಂಚತಾರಾ ಹೋಟೆಲುಗಳೂ ಉಣಬಡಿಸುವ ಊಟ ’ಸರಸೋಂ ದಾ ಸಾಗ್- ಮಕ್ಕೀ ದೀ ರೋಟಿ’.

ಉತ್ತರ ಭಾರತದುದ್ದಗಲವನ್ನು ಶೀತ ಮಾರುತಗಳು ರಾಚಿ ಬಡಿಯತೊಡಗಿವೆ. ಇಂತಹ ಜನವರಿಯಲ್ಲಿ ಅಷ್ಟಿಷ್ಟು ಮಳೆ ಬೀಳುವುದುಂಟು. ಆದರೆ ಕಳೆದ ಮೂರು ದಿನಗಳಿಂದ ಅನಿರೀಕ್ಷಿತವಾಗಿ ದೊಡ್ಡ ಮಳೆಯೇ ಸುರಿಯತೊಡಗಿದೆ ಮತ್ತು ಸತತವಾಗಿ ಸುರಿಯತೊಡಗಿದೆ. ಮೇ-ಜೂನ್-ಜುಲೈ ತಿಂಗಳುಗಳಲ್ಲಿ ಉಗ್ರ ಉಷ್ಣಮಾರುತಗಳು ನೆಲವನ್ನು ಸುಟ್ಟು, ಕಟುವಾದ ಕರಕಲು ವಾಸನೆಯನ್ನು ಗಾಳಿಗೆ ತೂರಿ ಬೆರೆಸುತ್ತವೆ. ಇವುಗಳ ಪ್ರಕೋಪಕ್ಕೆ ಕಷ್ಟಜೀವಿಗಳು ಕಣ್ಣೀರಿಟ್ಟು ಸಾವುನೋವುಗಳು ಉಂಟಾಗುವುದು ದುರಂತ ವಾರ್ಷಿಕ ವಿಧಿ. ಚಳಿಗಾಲವೂ ಅಂತೆಯೇ. ಹಿಮಾಲಯದ ತಪ್ಪಲು ಸೀಮೆಯಲ್ಲಿ ಹಿಮ ಸುರಿಯತೊಡಗಿದರೆ ಬಯಲು ಸೀಮೆ ಗಡಗಡ ನಡುಗುತ್ತದೆ. ನಿರ್ಗತಿಕರು ರಾತ್ರಿ ವೇಳೆ ಕೈ ಕಾಯಿಸಿಕೊಳ್ಳಲು ಸರ್ಕಾರಗಳೇ ಹಾದಿಬೀದಿಗಳಲ್ಲಿ ಕಟ್ಟಿಗೆ ಉರಿಸುವ ಯೋಜನೆಗಳಿದ್ದವು.

ಕಳೆದ ಗುರುವಾರ ಶುಕ್ರವಾರ ಶೀತಮಾರುತಗಳು ಉತ್ತರದ ತಾಪಮಾನವನ್ನು ಎರಡು ಡಿಗ್ರಿಗಿಂತ ಕೆಳಗಿಳಿಸಿದ್ದವು. ಹದಿನೈದು ವರ್ಷಗಳ ದಾಖಲೆಯ ಚಳಿ. ದೆಹಲಿಯ ಗಡಿಗಳ ಹೆದ್ದಾರಿಗಳ ವಿಸ್ತಾರದಲ್ಲಿ ಆಕಾಶವನ್ನೇ ಹೊದ್ದು ಮೈ ಚಾಚಿದೆ ರೈತ ಪ್ರತಿಭಟನೆ. ಮಣ್ಣಿನ ಮಕ್ಕಳಿಗೆ ಚಳಿ ಮಳೆ ಬಿಸಿಲು ಲೆಕ್ಕವೇ ಅಲ್ಲ. ’ರಾಜ್ಯಗಳಳಿಯಲಿ, ರಾಜ್ಯಗಳುದಿಸಲಿ, ಹಾರಲಿ ಗದ್ದುಗೆ ಮುಕುಟಗಳು… ಬಿತ್ತುಳುವುದ ತಾನು ಬಿಡುವುದೆ ಇಲ್ಲ ಎಂಬ ಕವಿವಾಣಿಯ ಯೋಗಿಗಳು ರೈತರು- ಕೃಷಿ ಕಾರ್ಮಿಕರು. ಆದರೆ ಒಕ್ಕಲುತನದ ಮಳೆಗಾಳಿ ಚಳಿ ಬಿಸಿಲುಗಳ ಗೇಮೆಯ ನಂತರ ತಲೆ ಮರೆಸಿಕೊಂಡು ನಿದ್ರಿಸಲು ಸೂರೊಂದು ಇರುತ್ತದೆ. ಪ್ರತಿಭಟಿಸುತ್ತಿರುವ ರೈತರಿಗೆ ಅಂತಹ ಅನುಕೂಲವಿಲ್ಲ.

ಶೀತದೊಂದಿಗೆ ಮಳೆಯೂ ಸುರಿಯುತ್ತಿದ್ದು ಪ್ರತಿಭಟನಾನಿರತ ರೈತರ ಹಿಟ್ಟು, ಕಾಳು, ಬೇಳೆಗಳು, ಕಟ್ಟಿಗೆ-ಬೆರಣಿ ಉರುವಲುಗಳು, ಹಾಸಿಗೆ ಹೊದಿಕೆ ಬಟ್ಟೆ ಬರೆಗಳು ತೋಯ್ದು ಹೋಗಿವೆ. ದಿನಗಟ್ಟಲೆ ಸೂರ್ಯನ ದರ್ಶನವಿಲ್ಲದೆ ಮುಚ್ಚಿಕೊಂಡ ಆಗಸ. ಜಲನಿರೋಧಕ ಟೆಂಟುಗಳು, ತಾಡಪಾಲುಗಳು ಎಲ್ಲರ ಬಳಿಯೂ ಇಲ್ಲ. ಇದ್ದರೂ ಅವುಗಳಿಂದ ಚಳಿಯನ್ನು ತಪ್ಪಿಸಿಕೊಳ್ಳುವುದು ಸಾಧ್ಯವಿಲ್ಲ. ಟೆಂಟಿನೊಳಗೆ ನೆಲದ ಮೇಲೆ ನೀರು ಹರಿದು ನಿಲ್ಲುವುದನ್ನು ತಡೆಯಲಾಗುವುದಿಲ್ಲ. ಉತ್ತರದ ಚಳಿಯ ಈ ಉಪಟಳದ ತೀವ್ರತೆ ಅನುಭವಿಸಿದವರಿಗಷ್ಟೇ ತಿಳಿದೀತು.

ಅನ್ನ ಬೆಳೆಯುವ ರೈತರು-ಕೂಲಿಕಾರರು ದಿನಗಟ್ಟಲೆ ಈ ಸಂಕಟಕ್ಕೆ ಸಿಲುಕಿದ್ದಾರೆ. ಆದರೆ ಅವರಲ್ಲಿಯ ಪ್ರತಿಭಟನೆಯ ಕಾವು ತುಸುವೂ ಕುಂದಿಲ್ಲ. ವಯಸ್ಸು ಸಂದ ವೃದ್ಧರು ಮಕ್ಕಳು ಕೂಡ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿರುವ ಸಂಘರ್ಷವಿದು. ಆತ್ಮಹತ್ಯೆಗಳೂ ಸೇರಿದಂತೆ ರೈತ ಪ್ರತಿಭಟನೆಯಲ್ಲಿ ಸಾವುಗಳು ನಿತ್ಯ ಸಂಭವಿಸುತ್ತಲೇ ಇವೆ. ಈ ಸಂಖ್ಯೆ ಐವತ್ತನ್ನು ದಾಟಿದೆ. ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಒಕ್ಕಲುತನಕ್ಕೆ ಇಳಿದಿರುವ ಜವಾನ್-ಕಿಸಾನ್‌ರು ಕೂಡ ಈ ಪ್ರತಿಭಟನೆಯಲ್ಲಿದ್ದಾರೆ. ಜೈ ಜವಾನ್-ಜೈ ಕಿಸಾನ್ ಎಂದು ಘೋಷಣೆ ಹಾಕುವವರು ತಮ್ಮ ಕಾಮಾಲೆಗೆ ಔಷಧಿ ಸೇವಿಸಿ ಈ ಚಳವಳಿಯನ್ನು ನೋಡಬೇಕಿದೆ.

ಯೋಧರನ್ನೂ ರೈತರನ್ನೂ ಆಕಾಶದೆತ್ತರಕ್ಕೆ ಹೊಗಳುವ ದೊಡ್ಡ ವರ್ಗವೊಂದು ಈ ಚಳವಳಿಯನ್ನು ಹಳಿಯುವ ನೀಚತನಕ್ಕೆ ಇಳಿದಿದೆ. ದೇಶದ ಪ್ರಧಾನಮಂತ್ರಿಯವರ ಐವತ್ತಾರು ಅಂಗುಲದ ಭಾರೀ ಎದೆಯಲ್ಲಿ ದೆಹಲಿಯ ಗಡಿಗಳ ಬಯಲಿನಲ್ಲಿ ಬೀಡು ಬಿಟ್ಟಿರುವ ಕಿಸಾನ್- ಜವಾನ್‌ರ ಕುರಿತು ತುಸುವಾದರೂ ಪಸೆ ಕಂಡಿಲ್ಲದಿರುವುದು ಅತೀವ ವ್ಯಥೆಯ ಸಂಗತಿ. ಎಂತೆಂತಹ ವಿಷಯಗಳ ಕುರಿತು ಟ್ವೀಟ್ ಮಾಡುವ ಪ್ರಧಾನಿಯವರ ಕಲ್ಲು ಗುಂಡಿಗೆಯನ್ನು ರೈತರ ದುಮ್ಮಾನ ತಾಕಿಯೇ ಇಲ್ಲ! ಅವರು ಅಲ್ಲಿ ಚಳಿಮಳೆ ಗಾಳಿಯಲ್ಲಿ ಪಾಡುಪಡುತ್ತಿದ್ದರೆ ಇತ್ತ ಕೋಟಿನ ಮೇಲೆ ಕೋಟು ಉಟ್ಟು ಬೆಚ್ಚಗಿರುವ ದೇಶ ಆಳುವವರಿಗೆ ಮನಸು ಹೇಗೆ ಬರುತ್ತದೆಯೋ ಎಂಬುದು ಸೋಜಿಗದ ಸಂಗತಿ.

ಪ್ರತಿಭಟನಾನಿರತ ರೈತರು ಮೋದಿಯವರ ಶತ್ರುಗಳಲ್ಲ. ಅವರನ್ನು ಗದ್ದುಗೆಯಿಂದ ಇಳಿಸಬೇಕೆಂದು ಕಳೆದ ಆರು ವರ್ಷಗಳಲ್ಲಿ ಒಮ್ಮೆಯೂ ಚಕಾರ ಎತ್ತಿದವರಲ್ಲ. ಆದರೂ ಪ್ರಧಾನಿಯವರು ಅವರನ್ನು ವೈರಿಗಳಂತೆ ಕಾಣುತ್ತಿರುವುದು ದುಃಖದ ಸಂಗತಿ. ಭಾಷಣಗಳಲ್ಲಿ ರೈತನನ್ನು ಹೊಗಳಿ ಹೊನ್ನ ಶೂಲಕ್ಕೆ ಏರಿಸುವವರು ಆತ ಪ್ರತ್ಯಕ್ಷನಾಗಿ ಎದುರಾದರೆ ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದಕ್ಕೆ ಉತ್ತಮ ಉದಾಹರಣೆಯಿದು. ’ಕಲ್ಲನಾಗರೆ ಕಂಡರೆ ಹಾಲೆರೆವರು, ಉಣ್ಣದ ಲಿಂಗಕ್ಕೆ ಬೋನವನಿಕ್ಕುವರು, ಉಣುವ ಜಂಗಮ ಬಂದರೆ ಪೋ ಪೋ ಎಂಬುವರು’ ಎಂಬ ವಚನದಂತೆ ಡಂಭಾಚಾರದ ಪರಾಕಾಷ್ಠೆಯಿದು.


ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಜನವರಿ 7 ರಂದು ತೋರಿಸುತ್ತೇವೆ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....