Homeಚಳವಳಿದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

- Advertisement -
- Advertisement -

ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಜೊತೆಗೆ ನಿಮ್ಮನ್ನು ಮತ್ತೆ ಮತ್ತೆ ಆಕರ್ಷಿಸುವುದು ಪೋಸ್ಟರ್‌ಗಳಾಗಿದೆ. ಪ್ರತಿಭಟನಾ ಸ್ಥಳದ ಉದ್ದಕ್ಕೂ ರೈತರು ತಂಗಿರುವ ಟೆಂಟ್‌, ಟ್ರ್ಯಾಲಿಗಳ ಮೇಲೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಕ್ಷಣ ಮಾತ್ರದಲ್ಲಿ ಗಮನ ಸೆಳೆಯುತ್ತವೆ. ಇಲ್ಲಿನ ಪ್ರತಿ ಪೋಸ್ಟರ್‌ಗಳೂ ಪ್ರತಿಭಟನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ.

ದೇಶದ ಐತಿಹಾಸಿಕ ಪ್ರತಿಭಟನೆಯಾಗಿರುವ ರೈತ ಹೋರಾಟ, ಬರೀ ರೈತರಿಗಷ್ಟೇ ಸೀಮಿತವಾಗಿಲ್ಲ ಎಂಬುದು ಪ್ರತಿಭಟನಾ ಸ್ಥಳದಲ್ಲಿ ಇರುವ ಪೋಸ್ಟರ್‍ಸ್‌ಗಳು ಹೇಳುತ್ತಿವೆ. ಸ್ವತಃ ಸ್ವಾತಂತ್ಯ್ರ ಹೋರಾಟಗಾರರೇ ಪ್ರತಿಭಟನೆಯಲ್ಲಿದ್ದಾರೆ ಎಂಬಂತಹ ಅನುಭವವ ಈ ಪೋಸ್ಟರ್‌ಗಳು ನಮಗೆ ನೀಡುತ್ತದೆ. ಯುವಜನತೆ ತಾವು ತಂಗಿರುವ ಡೇರೆಗಳ ಬಳಿ ಭಗತ್ ಸಿಂಗ್ ಚಿತ್ರಗಳನ್ನು, ಘೋಷಣೆಗಳನ್ನು ಹಾಕಿಕೊಂಡಿದ್ದಾರೆ. ಭಗತ್ ಸಿಂಗ್ ಮಾತುಗಳನ್ನು ತಮ್ಮದೇ ಧಾಟಿಯಲ್ಲಿ ರೈತ ಹೋರಾಟಕ್ಕೆ ಹೋಲಿಸಿ, ಭಿತ್ತಿಪತ್ರಗಳನ್ನು ಹಿಡಿದುಕೊಂಡು ಪ್ರತಿಭಟನಾಕಾರರಲ್ಲಿ ಹುಮ್ಮಸ್ಸು ತುಂಬುವ ಕೆಲಸ ಮಾಡುತ್ತಿದ್ದಾರೆ. ರೈತರು ಭಯೋತ್ಪಾಕದಕರಲ್ಲ, ರೈತರಿಲ್ಲದಿದ್ದರೇ ಊಟವಿಲ್ಲ ಎಂಬಂತಹ ಭಿತ್ತಿಪತ್ರಗಳನ್ನು ಇಲ್ಲಿ ಕಾಣಸಿಗುತ್ತದೆ.

ಇದನ್ನೂ ಓದಿ: ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

ನಾವು ಯುದ್ಧದಲ್ಲಿ ಗುಂಡು ಬೀಳುವುದೆಂದು ಹಿಂದೆ ಸರಿಯುವ ರಕ್ತದವರಲ್ಲ. ನಮ್ಮಲ್ಲಿ ಹರಿಯುತ್ತಿರುವ ರಕ್ತ ಸ್ವಾಭಿಮಾನ ಮತ್ತು ಧೈರ್ಯದ್ದು. ಅನ್ಯಾಯವನ್ನು ಎದುರಿಸಲು ಯಾವ ಕ್ಷಣದಲ್ಲೂ, ಎಲ್ಲಿಯೂ ನಾವು ಸಿದ್ಧ. ಅನ್ಯಾಯ ಯಾರು ಮಾಡಿದರೂ ಅನ್ಯಾಯವೇ, ನ್ಯಾಯ ಸಿಗುವವರೆಗೂ ನಾವು ಹೋರಾಟ ನಡೆಸುತ್ತೇವೆ ಎಂದು ಪೋಸ್ಟರ್‌ ಹಿಡಿದ ಪ್ರತಿಭಟನಾನಿರತ ಯುವಕ ತಿಳಿಸುತ್ತಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವ ಹಲವು ರೈತ ಸಂಘಟನೆಗಳು, ಸಂವಿಧಾನ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರಗಳನ್ನು ಪ್ರದರ್ಶಿಸುತ್ತಾ ತಮಗೆ ಸಂವಿಧಾನ ನೀಡಿರುವ ಹಕ್ಕಿನ ಮೂಲಕ ಹೋರಾಟ ನಡೆಸುತ್ತಿದ್ದೇವೆ ಎಂದು ಘೋಷಣೆ ಹಾಕುತ್ತಿದ್ದಾರೆ. ತಮ್ಮ ಬ್ಯಾನರ್‌ಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮತ್ತು ಸಂವಿಧಾನದ ಪೀಠಿಕೆಗಳ ಚಿತ್ರಗಳನ್ನು ಸೇರಿಸಿರುವುದು ಗಮನಾರ್ಹವಾಗಿದೆ.

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

 

ರೈತರು ದೆಹಲಿ ಚಲೋ ಹೋರಾಟ ಆರಂಭಿಸಿದ ದಿನದಿಂದಲೂ ಹೇಳುತ್ತಿರುವುದು ನಮ್ಮದು ಶಾಂತಿಯುತ ಪ್ರತಿಭಟನೆ ಎಂದು. ಇದಕ್ಕೆ ಪೂರಕವೆಂಬಂತೆ ಶಾಂತಿದೂತ ಬುದ್ಧನ ಚಿತ್ರಗಳು ಪ್ರತಿಭಟನಾ ಸ್ಥಳದಲ್ಲಿ ಕಾಣಸಿಗುತ್ತವೆ. ದೆಹಲಿಯ ಪ್ರಮುಖ ಗಡಿಗಳಾದ ಸಿಂಘು, ಟಕ್ರಿ ಮತ್ತು ಗಾಜಿಪುರ್‌ಗಳಲ್ಲೂ ಇದೆ ರೀತಿಯ ಪೋಸ್ಟರ್‌ಗಳಿವೆ.

ಪ್ರತಿಭಟನಾ ನಿರತ ರೈತ ಸಂಘಟನೆಗಳು ತಮ್ಮ ಸಂಘಟನೆಯ ಹೆಸರುಗಳ ಜೊತೆಗೆ ಬುದ್ಧ, ಅಂಬೇಡ್ಕರ್, ಏಸುಕ್ರಿಸ್ತ ಮತ್ತು ಭಗತ್ ಸಿಂಗ್, ಬುಡಕಟ್ಟು ನಾಯಕ ಬಿರ್ಸಾ ಮುಂಡಾ ನಾಯಕರ ಚಿತ್ರಗಳ ಪೋಸ್ಟರ್‌ಗಳನ್ನು ಹಿಡಿದು ನಿಂತಿದ್ದಾರೆ. ಇದಲ್ಲದೇ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಈ ಹಿಂದೆ ಹಲವು ಕೃಷಿ ಕಾನೂನುಗಳನ್ನು ವಿರೋಧಿಸಿ, ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿ ಹುತಾತ್ಮರಾಗಿರುವ ರೈತ ನಾಯಕರ ಚಿತ್ರಗಳು ಇವರ ಪೋಸ್ಟರ್‌‌ಗಳಲ್ಲಿದೆ. ಇವರುಗಳೆ ನಮ್ಮ ಪ್ರತಿಭಟನೆಗೆ ಸ್ಫೂರ್ತಿ ಎನ್ನುತ್ತಾರೆ ಇಲ್ಲಿನ ಪ್ರತಿಭಟನಾಕಾರರು.

ಇದನ್ನೂ ಓದಿ: ರೈತ ಹೋರಾಟ – ಒಕ್ಕೂಟ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡಿದ ಸೋನಿಯ ಗಾಂಧಿ

ಇನ್ನೂ ವಿಶೇಷವೇನೆಂದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಘೋಷಣೆಗಳಿರುವ ಹಲವು ಪೋಸ್ಟರ್‌ಗಳನ್ನು ಇಲ್ಲಿ ಕಾಣಬಹುದಾಗಿದೆ.

“ನಿಮ್ಮ ಬೇಜವಾಬ್ದಾರಿ ಕಾರಣದಿಂದ ದೇಶದ ರೈತರು ಬೀದಿಗೆ ಬಿದ್ದಿದ್ದಾರೆ. ಮೊದಲು ನಿಮ್ಮ ಕಪ್ಪು ಕಾನೂನುಗಳನ್ನು ವಾಪಸ್ ಪಡೆಯಿರಿ”, “ದೇಶದ ರೈತರ ಆರ್ಥಿಕ ಸ್ಥಿತಿ ಕೆಳಗಿಳಿಯುತ್ತಿದೆ. ಆದರೆ ಅದಾನಿ, ಅಂಬಾನಿಯವರ ಆರ್ಥಿಕ ಪರಿಸ್ಥಿತಿ ಎತ್ತರಕ್ಕೆ ಏರುತ್ತಿದ್ದೆ, ಇದಕ್ಕೆಲ್ಲಾ ಕಾರಣ ಮೋದಿ ಸರ್ಕಾರ” ಎಂಬ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳಿರುವ ಭಿತ್ತಿಪತ್ರಗಳು ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಸಾಮಾನ್ಯವಾಗಿ ಕಾಣಿಸುತ್ತಿವೆ.

ಇದನ್ನೂ ಓದಿ: ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...