Homeಚಳವಳಿದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

- Advertisement -
- Advertisement -

ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಜೊತೆಗೆ ನಿಮ್ಮನ್ನು ಮತ್ತೆ ಮತ್ತೆ ಆಕರ್ಷಿಸುವುದು ಪೋಸ್ಟರ್‌ಗಳಾಗಿದೆ. ಪ್ರತಿಭಟನಾ ಸ್ಥಳದ ಉದ್ದಕ್ಕೂ ರೈತರು ತಂಗಿರುವ ಟೆಂಟ್‌, ಟ್ರ್ಯಾಲಿಗಳ ಮೇಲೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಕ್ಷಣ ಮಾತ್ರದಲ್ಲಿ ಗಮನ ಸೆಳೆಯುತ್ತವೆ. ಇಲ್ಲಿನ ಪ್ರತಿ ಪೋಸ್ಟರ್‌ಗಳೂ ಪ್ರತಿಭಟನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ.

ದೇಶದ ಐತಿಹಾಸಿಕ ಪ್ರತಿಭಟನೆಯಾಗಿರುವ ರೈತ ಹೋರಾಟ, ಬರೀ ರೈತರಿಗಷ್ಟೇ ಸೀಮಿತವಾಗಿಲ್ಲ ಎಂಬುದು ಪ್ರತಿಭಟನಾ ಸ್ಥಳದಲ್ಲಿ ಇರುವ ಪೋಸ್ಟರ್‍ಸ್‌ಗಳು ಹೇಳುತ್ತಿವೆ. ಸ್ವತಃ ಸ್ವಾತಂತ್ಯ್ರ ಹೋರಾಟಗಾರರೇ ಪ್ರತಿಭಟನೆಯಲ್ಲಿದ್ದಾರೆ ಎಂಬಂತಹ ಅನುಭವವ ಈ ಪೋಸ್ಟರ್‌ಗಳು ನಮಗೆ ನೀಡುತ್ತದೆ. ಯುವಜನತೆ ತಾವು ತಂಗಿರುವ ಡೇರೆಗಳ ಬಳಿ ಭಗತ್ ಸಿಂಗ್ ಚಿತ್ರಗಳನ್ನು, ಘೋಷಣೆಗಳನ್ನು ಹಾಕಿಕೊಂಡಿದ್ದಾರೆ. ಭಗತ್ ಸಿಂಗ್ ಮಾತುಗಳನ್ನು ತಮ್ಮದೇ ಧಾಟಿಯಲ್ಲಿ ರೈತ ಹೋರಾಟಕ್ಕೆ ಹೋಲಿಸಿ, ಭಿತ್ತಿಪತ್ರಗಳನ್ನು ಹಿಡಿದುಕೊಂಡು ಪ್ರತಿಭಟನಾಕಾರರಲ್ಲಿ ಹುಮ್ಮಸ್ಸು ತುಂಬುವ ಕೆಲಸ ಮಾಡುತ್ತಿದ್ದಾರೆ. ರೈತರು ಭಯೋತ್ಪಾಕದಕರಲ್ಲ, ರೈತರಿಲ್ಲದಿದ್ದರೇ ಊಟವಿಲ್ಲ ಎಂಬಂತಹ ಭಿತ್ತಿಪತ್ರಗಳನ್ನು ಇಲ್ಲಿ ಕಾಣಸಿಗುತ್ತದೆ.

ಇದನ್ನೂ ಓದಿ: ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

ನಾವು ಯುದ್ಧದಲ್ಲಿ ಗುಂಡು ಬೀಳುವುದೆಂದು ಹಿಂದೆ ಸರಿಯುವ ರಕ್ತದವರಲ್ಲ. ನಮ್ಮಲ್ಲಿ ಹರಿಯುತ್ತಿರುವ ರಕ್ತ ಸ್ವಾಭಿಮಾನ ಮತ್ತು ಧೈರ್ಯದ್ದು. ಅನ್ಯಾಯವನ್ನು ಎದುರಿಸಲು ಯಾವ ಕ್ಷಣದಲ್ಲೂ, ಎಲ್ಲಿಯೂ ನಾವು ಸಿದ್ಧ. ಅನ್ಯಾಯ ಯಾರು ಮಾಡಿದರೂ ಅನ್ಯಾಯವೇ, ನ್ಯಾಯ ಸಿಗುವವರೆಗೂ ನಾವು ಹೋರಾಟ ನಡೆಸುತ್ತೇವೆ ಎಂದು ಪೋಸ್ಟರ್‌ ಹಿಡಿದ ಪ್ರತಿಭಟನಾನಿರತ ಯುವಕ ತಿಳಿಸುತ್ತಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವ ಹಲವು ರೈತ ಸಂಘಟನೆಗಳು, ಸಂವಿಧಾನ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರಗಳನ್ನು ಪ್ರದರ್ಶಿಸುತ್ತಾ ತಮಗೆ ಸಂವಿಧಾನ ನೀಡಿರುವ ಹಕ್ಕಿನ ಮೂಲಕ ಹೋರಾಟ ನಡೆಸುತ್ತಿದ್ದೇವೆ ಎಂದು ಘೋಷಣೆ ಹಾಕುತ್ತಿದ್ದಾರೆ. ತಮ್ಮ ಬ್ಯಾನರ್‌ಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮತ್ತು ಸಂವಿಧಾನದ ಪೀಠಿಕೆಗಳ ಚಿತ್ರಗಳನ್ನು ಸೇರಿಸಿರುವುದು ಗಮನಾರ್ಹವಾಗಿದೆ.

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

 

ರೈತರು ದೆಹಲಿ ಚಲೋ ಹೋರಾಟ ಆರಂಭಿಸಿದ ದಿನದಿಂದಲೂ ಹೇಳುತ್ತಿರುವುದು ನಮ್ಮದು ಶಾಂತಿಯುತ ಪ್ರತಿಭಟನೆ ಎಂದು. ಇದಕ್ಕೆ ಪೂರಕವೆಂಬಂತೆ ಶಾಂತಿದೂತ ಬುದ್ಧನ ಚಿತ್ರಗಳು ಪ್ರತಿಭಟನಾ ಸ್ಥಳದಲ್ಲಿ ಕಾಣಸಿಗುತ್ತವೆ. ದೆಹಲಿಯ ಪ್ರಮುಖ ಗಡಿಗಳಾದ ಸಿಂಘು, ಟಕ್ರಿ ಮತ್ತು ಗಾಜಿಪುರ್‌ಗಳಲ್ಲೂ ಇದೆ ರೀತಿಯ ಪೋಸ್ಟರ್‌ಗಳಿವೆ.

ಪ್ರತಿಭಟನಾ ನಿರತ ರೈತ ಸಂಘಟನೆಗಳು ತಮ್ಮ ಸಂಘಟನೆಯ ಹೆಸರುಗಳ ಜೊತೆಗೆ ಬುದ್ಧ, ಅಂಬೇಡ್ಕರ್, ಏಸುಕ್ರಿಸ್ತ ಮತ್ತು ಭಗತ್ ಸಿಂಗ್, ಬುಡಕಟ್ಟು ನಾಯಕ ಬಿರ್ಸಾ ಮುಂಡಾ ನಾಯಕರ ಚಿತ್ರಗಳ ಪೋಸ್ಟರ್‌ಗಳನ್ನು ಹಿಡಿದು ನಿಂತಿದ್ದಾರೆ. ಇದಲ್ಲದೇ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಈ ಹಿಂದೆ ಹಲವು ಕೃಷಿ ಕಾನೂನುಗಳನ್ನು ವಿರೋಧಿಸಿ, ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿ ಹುತಾತ್ಮರಾಗಿರುವ ರೈತ ನಾಯಕರ ಚಿತ್ರಗಳು ಇವರ ಪೋಸ್ಟರ್‌‌ಗಳಲ್ಲಿದೆ. ಇವರುಗಳೆ ನಮ್ಮ ಪ್ರತಿಭಟನೆಗೆ ಸ್ಫೂರ್ತಿ ಎನ್ನುತ್ತಾರೆ ಇಲ್ಲಿನ ಪ್ರತಿಭಟನಾಕಾರರು.

ಇದನ್ನೂ ಓದಿ: ರೈತ ಹೋರಾಟ – ಒಕ್ಕೂಟ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡಿದ ಸೋನಿಯ ಗಾಂಧಿ

ಇನ್ನೂ ವಿಶೇಷವೇನೆಂದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಘೋಷಣೆಗಳಿರುವ ಹಲವು ಪೋಸ್ಟರ್‌ಗಳನ್ನು ಇಲ್ಲಿ ಕಾಣಬಹುದಾಗಿದೆ.

“ನಿಮ್ಮ ಬೇಜವಾಬ್ದಾರಿ ಕಾರಣದಿಂದ ದೇಶದ ರೈತರು ಬೀದಿಗೆ ಬಿದ್ದಿದ್ದಾರೆ. ಮೊದಲು ನಿಮ್ಮ ಕಪ್ಪು ಕಾನೂನುಗಳನ್ನು ವಾಪಸ್ ಪಡೆಯಿರಿ”, “ದೇಶದ ರೈತರ ಆರ್ಥಿಕ ಸ್ಥಿತಿ ಕೆಳಗಿಳಿಯುತ್ತಿದೆ. ಆದರೆ ಅದಾನಿ, ಅಂಬಾನಿಯವರ ಆರ್ಥಿಕ ಪರಿಸ್ಥಿತಿ ಎತ್ತರಕ್ಕೆ ಏರುತ್ತಿದ್ದೆ, ಇದಕ್ಕೆಲ್ಲಾ ಕಾರಣ ಮೋದಿ ಸರ್ಕಾರ” ಎಂಬ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳಿರುವ ಭಿತ್ತಿಪತ್ರಗಳು ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಸಾಮಾನ್ಯವಾಗಿ ಕಾಣಿಸುತ್ತಿವೆ.

ಇದನ್ನೂ ಓದಿ: ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....