Homeಚಳವಳಿದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

- Advertisement -
- Advertisement -

ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಜೊತೆಗೆ ನಿಮ್ಮನ್ನು ಮತ್ತೆ ಮತ್ತೆ ಆಕರ್ಷಿಸುವುದು ಪೋಸ್ಟರ್‌ಗಳಾಗಿದೆ. ಪ್ರತಿಭಟನಾ ಸ್ಥಳದ ಉದ್ದಕ್ಕೂ ರೈತರು ತಂಗಿರುವ ಟೆಂಟ್‌, ಟ್ರ್ಯಾಲಿಗಳ ಮೇಲೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಕ್ಷಣ ಮಾತ್ರದಲ್ಲಿ ಗಮನ ಸೆಳೆಯುತ್ತವೆ. ಇಲ್ಲಿನ ಪ್ರತಿ ಪೋಸ್ಟರ್‌ಗಳೂ ಪ್ರತಿಭಟನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ.

ದೇಶದ ಐತಿಹಾಸಿಕ ಪ್ರತಿಭಟನೆಯಾಗಿರುವ ರೈತ ಹೋರಾಟ, ಬರೀ ರೈತರಿಗಷ್ಟೇ ಸೀಮಿತವಾಗಿಲ್ಲ ಎಂಬುದು ಪ್ರತಿಭಟನಾ ಸ್ಥಳದಲ್ಲಿ ಇರುವ ಪೋಸ್ಟರ್‍ಸ್‌ಗಳು ಹೇಳುತ್ತಿವೆ. ಸ್ವತಃ ಸ್ವಾತಂತ್ಯ್ರ ಹೋರಾಟಗಾರರೇ ಪ್ರತಿಭಟನೆಯಲ್ಲಿದ್ದಾರೆ ಎಂಬಂತಹ ಅನುಭವವ ಈ ಪೋಸ್ಟರ್‌ಗಳು ನಮಗೆ ನೀಡುತ್ತದೆ. ಯುವಜನತೆ ತಾವು ತಂಗಿರುವ ಡೇರೆಗಳ ಬಳಿ ಭಗತ್ ಸಿಂಗ್ ಚಿತ್ರಗಳನ್ನು, ಘೋಷಣೆಗಳನ್ನು ಹಾಕಿಕೊಂಡಿದ್ದಾರೆ. ಭಗತ್ ಸಿಂಗ್ ಮಾತುಗಳನ್ನು ತಮ್ಮದೇ ಧಾಟಿಯಲ್ಲಿ ರೈತ ಹೋರಾಟಕ್ಕೆ ಹೋಲಿಸಿ, ಭಿತ್ತಿಪತ್ರಗಳನ್ನು ಹಿಡಿದುಕೊಂಡು ಪ್ರತಿಭಟನಾಕಾರರಲ್ಲಿ ಹುಮ್ಮಸ್ಸು ತುಂಬುವ ಕೆಲಸ ಮಾಡುತ್ತಿದ್ದಾರೆ. ರೈತರು ಭಯೋತ್ಪಾಕದಕರಲ್ಲ, ರೈತರಿಲ್ಲದಿದ್ದರೇ ಊಟವಿಲ್ಲ ಎಂಬಂತಹ ಭಿತ್ತಿಪತ್ರಗಳನ್ನು ಇಲ್ಲಿ ಕಾಣಸಿಗುತ್ತದೆ.

ಇದನ್ನೂ ಓದಿ: ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

ನಾವು ಯುದ್ಧದಲ್ಲಿ ಗುಂಡು ಬೀಳುವುದೆಂದು ಹಿಂದೆ ಸರಿಯುವ ರಕ್ತದವರಲ್ಲ. ನಮ್ಮಲ್ಲಿ ಹರಿಯುತ್ತಿರುವ ರಕ್ತ ಸ್ವಾಭಿಮಾನ ಮತ್ತು ಧೈರ್ಯದ್ದು. ಅನ್ಯಾಯವನ್ನು ಎದುರಿಸಲು ಯಾವ ಕ್ಷಣದಲ್ಲೂ, ಎಲ್ಲಿಯೂ ನಾವು ಸಿದ್ಧ. ಅನ್ಯಾಯ ಯಾರು ಮಾಡಿದರೂ ಅನ್ಯಾಯವೇ, ನ್ಯಾಯ ಸಿಗುವವರೆಗೂ ನಾವು ಹೋರಾಟ ನಡೆಸುತ್ತೇವೆ ಎಂದು ಪೋಸ್ಟರ್‌ ಹಿಡಿದ ಪ್ರತಿಭಟನಾನಿರತ ಯುವಕ ತಿಳಿಸುತ್ತಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವ ಹಲವು ರೈತ ಸಂಘಟನೆಗಳು, ಸಂವಿಧಾನ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರಗಳನ್ನು ಪ್ರದರ್ಶಿಸುತ್ತಾ ತಮಗೆ ಸಂವಿಧಾನ ನೀಡಿರುವ ಹಕ್ಕಿನ ಮೂಲಕ ಹೋರಾಟ ನಡೆಸುತ್ತಿದ್ದೇವೆ ಎಂದು ಘೋಷಣೆ ಹಾಕುತ್ತಿದ್ದಾರೆ. ತಮ್ಮ ಬ್ಯಾನರ್‌ಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮತ್ತು ಸಂವಿಧಾನದ ಪೀಠಿಕೆಗಳ ಚಿತ್ರಗಳನ್ನು ಸೇರಿಸಿರುವುದು ಗಮನಾರ್ಹವಾಗಿದೆ.

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

 

ರೈತರು ದೆಹಲಿ ಚಲೋ ಹೋರಾಟ ಆರಂಭಿಸಿದ ದಿನದಿಂದಲೂ ಹೇಳುತ್ತಿರುವುದು ನಮ್ಮದು ಶಾಂತಿಯುತ ಪ್ರತಿಭಟನೆ ಎಂದು. ಇದಕ್ಕೆ ಪೂರಕವೆಂಬಂತೆ ಶಾಂತಿದೂತ ಬುದ್ಧನ ಚಿತ್ರಗಳು ಪ್ರತಿಭಟನಾ ಸ್ಥಳದಲ್ಲಿ ಕಾಣಸಿಗುತ್ತವೆ. ದೆಹಲಿಯ ಪ್ರಮುಖ ಗಡಿಗಳಾದ ಸಿಂಘು, ಟಕ್ರಿ ಮತ್ತು ಗಾಜಿಪುರ್‌ಗಳಲ್ಲೂ ಇದೆ ರೀತಿಯ ಪೋಸ್ಟರ್‌ಗಳಿವೆ.

ಪ್ರತಿಭಟನಾ ನಿರತ ರೈತ ಸಂಘಟನೆಗಳು ತಮ್ಮ ಸಂಘಟನೆಯ ಹೆಸರುಗಳ ಜೊತೆಗೆ ಬುದ್ಧ, ಅಂಬೇಡ್ಕರ್, ಏಸುಕ್ರಿಸ್ತ ಮತ್ತು ಭಗತ್ ಸಿಂಗ್, ಬುಡಕಟ್ಟು ನಾಯಕ ಬಿರ್ಸಾ ಮುಂಡಾ ನಾಯಕರ ಚಿತ್ರಗಳ ಪೋಸ್ಟರ್‌ಗಳನ್ನು ಹಿಡಿದು ನಿಂತಿದ್ದಾರೆ. ಇದಲ್ಲದೇ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಈ ಹಿಂದೆ ಹಲವು ಕೃಷಿ ಕಾನೂನುಗಳನ್ನು ವಿರೋಧಿಸಿ, ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿ ಹುತಾತ್ಮರಾಗಿರುವ ರೈತ ನಾಯಕರ ಚಿತ್ರಗಳು ಇವರ ಪೋಸ್ಟರ್‌‌ಗಳಲ್ಲಿದೆ. ಇವರುಗಳೆ ನಮ್ಮ ಪ್ರತಿಭಟನೆಗೆ ಸ್ಫೂರ್ತಿ ಎನ್ನುತ್ತಾರೆ ಇಲ್ಲಿನ ಪ್ರತಿಭಟನಾಕಾರರು.

ಇದನ್ನೂ ಓದಿ: ರೈತ ಹೋರಾಟ – ಒಕ್ಕೂಟ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡಿದ ಸೋನಿಯ ಗಾಂಧಿ

ಇನ್ನೂ ವಿಶೇಷವೇನೆಂದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಘೋಷಣೆಗಳಿರುವ ಹಲವು ಪೋಸ್ಟರ್‌ಗಳನ್ನು ಇಲ್ಲಿ ಕಾಣಬಹುದಾಗಿದೆ.

“ನಿಮ್ಮ ಬೇಜವಾಬ್ದಾರಿ ಕಾರಣದಿಂದ ದೇಶದ ರೈತರು ಬೀದಿಗೆ ಬಿದ್ದಿದ್ದಾರೆ. ಮೊದಲು ನಿಮ್ಮ ಕಪ್ಪು ಕಾನೂನುಗಳನ್ನು ವಾಪಸ್ ಪಡೆಯಿರಿ”, “ದೇಶದ ರೈತರ ಆರ್ಥಿಕ ಸ್ಥಿತಿ ಕೆಳಗಿಳಿಯುತ್ತಿದೆ. ಆದರೆ ಅದಾನಿ, ಅಂಬಾನಿಯವರ ಆರ್ಥಿಕ ಪರಿಸ್ಥಿತಿ ಎತ್ತರಕ್ಕೆ ಏರುತ್ತಿದ್ದೆ, ಇದಕ್ಕೆಲ್ಲಾ ಕಾರಣ ಮೋದಿ ಸರ್ಕಾರ” ಎಂಬ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳಿರುವ ಭಿತ್ತಿಪತ್ರಗಳು ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಸಾಮಾನ್ಯವಾಗಿ ಕಾಣಿಸುತ್ತಿವೆ.

ಇದನ್ನೂ ಓದಿ: ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...