Homeಚಳವಳಿರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ಮೂರು ದಿನಗಳ ಹಿಂದೆ ಮಹಿಳಾ ಕಬಡ್ಡಿ ಆಟಗಾರರು, ಕಬಡ್ಡಿ ಪಂದ್ಯಗಳನ್ನು ಆಡಿ, ಹೋರಾಟಗಾರರಲ್ಲಿ ಹುರುಪು ತುಂಬಲು ಯತ್ನಿಸಿದರು.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಟಿಕ್ರಿ ಮತ್ತು ಸಿಂಘು ಗಡಿಗಳಲ್ಲಿ ಭಾರೀ ಹೋರಾಟ ಭುಗಿಲೆದ್ದಿದೆ. ಕಳೆದ 42 ದಿನಗಳಿಂದ ರೈತ ಹೋರಾಟದ ಕಣವಾಗಿ ವಿಶ್ವದ ಗಮನ ಸೆಳೆದಿರುವ ಈ ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯನ್ನು ನಮ್ಮ ಪ್ರತಿನಿಧಿಗಳು ಕಟ್ಟಿಕೊಟ್ಟಿದ್ದಾರೆ.

ದೆಹಲಿಯ ಉತ್ತರ ಭಾಗದಲ್ಲಿರುವ ಕಡೆಯ ಹಳ್ಳಿಯೇ ಸಿಂಘು. ಈ ಗಡಿಯನ್ನು ದಾಟಿದರೆ ಹರ್ಯಾಣ ಪ್ರವೇಶಿಸಿದಂತೆ. ಸುಮಾರು 250 ಮನೆಗಳಿರುವ ಈ ಹಳ್ಳಿಯು ದೆಹಲಿಯ ಕುಂಡ್ಲಿ, ನರೇಲಾ ಕೈಗಾರಿಕಾ ಪ್ರದೇಶಗಳಿಗೆ ಹತ್ತಿರವಾಗಿದೆ. ತೇಗ್‌ಬಹದ್ದೂರ್‌ ಸ್ಮಾರಕ, ರಾಜೀವ್‌ ಗಾಂಧಿ ಕ್ರೀಡಾ ಸಂಕೀರ್ಣಗಳು ಹತ್ತಿರದಲ್ಲೇ ಇರುವುದರಿಂದ ಈ ಗ್ರಾಮದ ಭೂಮಿಗೆ ಹೆಚ್ಚು ಬೆಲೆಯು ಸಿಕ್ಕಿದೆ. ಹಾಗಾಗಿ ಈ ಹಳ್ಳಿಯ ಆರ್ಥಿಕತೆ ಕೊಂಚ ಉತ್ತಮವಾಗಿದೆ. ಆದರೆ ಅರ್ಧಕ್ಕೂ ಹೆಚ್ಚು ನಿವಾಸಿಗಳು ಕೃಷಿಯನ್ನೇ ನಂಬಿ ಬದುಕುತ್ತಿದ್ದಾರೆ.

ಸಣ್ಣ ಹಿಡುವಳಿದಾರರೇ ಹೆಚ್ಚಿರುವ ಈ ಗ್ರಾಮದಲ್ಲಿ ಗೋಧಿ, ಅಕ್ಕಿಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ.
ತಮ್ಮ ಬೆಳೆಯನ್ನು ನರೇಲಾದ ಎಪಿಎಂಸಿಯಲ್ಲಿ ಮಾರುತ್ತಿದ್ದ ಇವರು ಹೊಸ ಮಸೂದೆಗಳಿಂದ ಕನಿಷ್ಠ ಬೆಂಬಲ ಬೆಲೆ, ಎಪಿಎಂಸಿ ಎಲ್ಲವೂ ಸ್ಥಗಿತಗೊಳ್ಳುತ್ತವೆ ಎಂದಿದ್ದಾರೆ.

ಕಳೆದ ವರ್ಷ ನವೆಂಬರ್‌ 28ರಿಂದ ರೈತ ಪ್ರತಿಭಟನೆ ನಡೆಯುತ್ತಿದೆ. 42 ದಿನಗಳಿಂದ ರೈತರು ಇಲ್ಲಿ ನೆರೆಯುತ್ತಿದ್ದು, ಪ್ರತಿ ದಿನ ಹೋರಾಟ ತೀವ್ರವಾಗುತ್ತಲೇ ಇದೆ.

ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಆದರೆ ಇದು ಹೋರಾಟಗಾರರ ಉತ್ಸಾಹವನ್ನು ಕಡಿಮೆ ಮಾಡಿಲ್ಲ.
ಪಂಜಾಬ್‌, ಹರ್ಯಾಣ, ರಾಜಸ್ತಾನಗಳಿಂದ ವಿವಿಧ ಸಂಘಟನೆಗಳು ಇಲ್ಲಿ ರೈತರು, ರೈತರ ಪರ ಹೋರಾಡುತ್ತಿರುವ ಕಾರ್ಯಕರ್ತರನ್ನು ಒಗ್ಗೂಡಿಸುತ್ತಿವೆ. 541 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್‌ ಮೋರ್ಚಾ ಹೋರಾಟಕ್ಕೆ ನೇತೃತ್ವ ನೀಡಿದೆ.

ಭಾರತೀಯ ಕಿಸಾನ್‌ ಯೂನಿಯನಿನ ವಿವಿಧ ಬಣಗಳು, ಕಿಸಾನ್‌ ಮಜ್ದೂರ್‌ ಸಂಘರ್ಷ ಸಮಿತಿ, ರಾಷ್ಟ್ರೀಯ ಕಿಸಾನ್‌ ಮೋರ್ಚಾ, ಪೆಂಡು ಕಿಸಾನ್‌ ಮಜ್ದೂರ್‌ ಸಂಘರ್ಷ ಸಮಿತಿ- ರಾಜಸ್ಥಾನ, ಖೇತಿ ಬವಾಚೊ ಸಂಘರ್ಷ ಸಮಿತಿ ಹರ್ಯಾಣ, ಫಾರ್ಮರ್‌ ಸ್ಟ್ರಗಲ್‌ ಕಮಿಟಿ, ಕಿಸಾನ್‌ ಸಂಘರ್ಷ ಸಮಿತಿ ಮುಂತಾದವು ಇದರ ಭಾಗವಾಗಿವೆ. ಪಂಜಾಬ್ ಮತ್ತು ಹರಿಯಾಣದ ರೈತರು ಬೃಹತ್ ಸಂಖ್ಯೆಯಲ್ಲಿದ್ದು ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಸೇರಿದಂತೆ ಇನ್ನು ಕೆಲವು ರಾಜ್ಯಗಳಿಂದ ನೂರಕ್ಕೂ ರೈತ-ರೈತ ಪರ ಸಂಘಟನೆಗಳು ಸಿಂಘುಗಡಿಯಲ್ಲಿ ಕೈಜೋಡಿಸಿವೆ.

ಸಿಂಘುವಿನಿಂದ ದೆಹಲಿಗೆ ಸಂಪರ್ಕ ಬೆಸೆಯುವ ಮೆಟ್ರೋ ಮಾರ್ಗದ ಉದ್ದಕ್ಕೂ ರೈತರ ಟ್ರ್ಯಾಕ್ಟರ್‌, ಲಾರಿ, ಟ್ರೇಲರ್‌ಗಳು ಸಾಲುಗಟ್ಟಿವೆ.

ಇಂಗ್ಲೆಂಡಿನ ಖಾಲ್ಸಾ ಏಡ್‌ ಎಂಬ ಸರ್ಕಾರೇತರ ಸಂಸ್ಥೆ ಎಲ್ಲ ರೀತಿಯ ನೆರವುಗಳನ್ನು ಒದಗಿಸಿದೆ. ವಿಶೇಷವಾಗಿ ಮಾಲ್‌ವೊಂದನ್ನು ಸ್ಥಾಪಿಸಿದ್ದು ಇಲ್ಲಿ ಹೋರಾಟ ನಿರತರಿಗೆ ಅಗತ್ಯವಾದ ಎಲ್ಲ ದಿನಸಿ, ತಿನಿಸು ಪದಾರ್ಥಗಳು ಲಭ್ಯವಿದೆ. ಇವೆಲ್ಲವೂ ಉಚಿತವಾಗಿ ಪೂರೈಸುತ್ತಿದೆ.

ಸಿಂಘು ಗಡಿಯ ಪ್ರತಿಭಟನಾ ಪ್ರದೇಶದಲ್ಲಿ ವಿವಿಧ ಸಣ್ಣ ವೇದಿಕೆಗಳಲ್ಲಿ ಕ್ರಾಂತಿಗೀತೆಗಳು, ಘೋಷಣೆಗಳು, ಭಾಷಣಗಳು ನಿರಂತರವಾಗಿ ನಡೆಯುತ್ತಿವೆ.

ಮೂರು ದಿನಗಳ ಹಿಂದೆ ಮಹಿಳಾ ಕಬಡ್ಡಿ ಆಟಗಾರರು, ಕಬಡ್ಡಿ ಪಂದ್ಯಗಳನ್ನು ಆಡಿ, ಹೋರಾಟಗಾರರಲ್ಲಿ ಹುರುಪು ತುಂಬಲು ಯತ್ನಿಸಿದರು.

ಟಿಕ್ರಿ ಗಡಿ

ದೆಹಲಿಯ ಪಶ್ಚಿಮ ಭಾಗದಲ್ಲಿರುವ ಟಿಕ್ರಿ ಗಡಿ, ದೆಹಲಿ ಮತ್ತು ಹರ್ಯಾಣ ರಾಜ್ಯಗಳನ್ನು ಬೆಸೆಯುತ್ತದೆ. ಇದೀಗ ರೈತ ಹೋರಾಟದ ಬಹುಮುಖ್ಯ ಕೇಂದ್ರವೂ ಆಗಿದೆ.

ರಾಜಧಾನಿಯ ಕೇಂದ್ರಭಾಗದಿಂದ ಸುಮಾರು ಒಂದು ತಾಸು ಪ್ರಯಾಣದಷ್ಟು ದೂರವಿರುವ ಟಿಕ್ರಿಯಲ್ಲಿ ಸುಮಾರು 100ಕ್ಕೂ ರೈತ ಸಂಘಟನೆಗಳು ಲಕ್ಷಾಂತರ ರೈತರನ್ನು ಸಂಘಟಿಸಿವೆ.

ಟಿಕ್ರಿಯ ಉದ್ದಕ್ಕೂ ಮೆಟ್ರೋ ಮಾರ್ಗವಿದ್ದು, ಅದರ ಬೃಹತ್‌ ಕಂಬಗಳಡಿಯಲ್ಲಿ ರೈತರು ಬಿಡಾರ ಹೂಡಿದ್ದಾರೆ.
ಸುಮಾರು 15 ಕಿಮೀ ಉದ್ದಕ್ಕೂ ವಾಹನಗಳು ಸಾಲುಗಟ್ಟಿದ್ದು, ಕೆಲವು ವಾಹನಗಳು ರೈತ ಹೋರಾಟಗಾರರಿಗೆ ಅಗತ್ಯವಾದ ಎಲ್ಲ ರೀತಿಯ ಸಾಮಾಗ್ರಿಗಳನ್ನು ಹೊತ್ತು ನಿಂತಿವೆ. ಇನ್ನು ಕೆಲವು ಆಶ್ರಯತಾಣಗಳಾಗಿವೆ.

ಇನ್ನೂ ಅನೇಕರು ಮೆಟ್ರೋ ಮಾರ್ಗಕ್ಕೆಂದು ನಿರ್ಮಿಸಲಾಗಿರುವ ಕಂಬಗಳ ಅಡಿ ಆಶ್ರಯ ಪಡೆದುಕೊಂಡಿದ್ದಾರೆ.
ಟ್ಯಾಕ್ಟರು, ಲಗೇಜ್ ಆಟೋ, ಕಾರು, ಮಿನಿ ಬಸ್ ಮುಂತಾದ ವಾಹನಗಳ ನಡುವೆಯೇ ರಸ್ತೆಯ ಮಧ್ಯಭಾಗದಲ್ಲಿ ಜನ ಓಡಾಟಕ್ಕೆ ದಾರಿ ಮಾಡಿಕೊಂಡು, ಅದರ ಆಸುಪಾಸಿನಲ್ಲಿ ಉದ್ದಕ್ಕೂ ಡೇರೆಗಳನ್ನು ಹಾಕಲಾಗಿದೆ. ಆ ಡೇರೆಗಳಲ್ಲಿ ದೆಹಲಿ ಚಳಿಯಿಂದ ಜೀವ ಹಿಡಿದುಕೊಳ್ಳಲು ಬೇಕಾದ ಉಣ್ಣೆಯ ಶಾಲು, ಟೊಪ್ಪಿ, ಹೊದಿಕೆ, ಹಾಸಿಗೆ, ನಿತ್ಯ ಬಳಕೆಯ ವಸ್ತುಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ 500 ಮೀಟರಿಗೊಂದು ಪ್ರತ್ಯೇಕ ಅಡುಗೆ ಮತ್ತು ಊಟದ ಲಂಗರುಗಳನ್ನು ನಿರ್ಮಿಸಲಾಗಿದೆ. ಸ್ನಾನ ಮತ್ತು ಶೌಚಕ್ಕೆ ಮೊಬೈಲ್ ಬಾತ್ ರೂಂ- ಟಾಯ್ಲೆಟ್ ವ್ಯವಸ್ಥೆಗಳಿವೆ.

 

ಟಿಕ್ರಿ ಗಡಿಯಲ್ಲಿ ಒಂದು ಮುಖ್ಯ ವೇದಿಕೆ ಮೂಲಕ ಪ್ರತಿಭಟನಾ ಭಾಷಣ, ಧರಣಿಗಳನ್ನು ನಡೆಸಲಾಗುತ್ತಿದ್ದರೂ, ಅಲ್ಲಿ ಸೇರಿರುವ ಸುಮಾರು ನೂರಾರು ವಿವಿಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ತಮ್ಮ ತಮ್ಮ ವಾಸ್ತವ್ಯದ ಟೆಂಟ್ ಬಳಿಯೇ ನಿತ್ಯದ ಸಭೆ, ಚರ್ಚೆ, ಹಾಡು, ನೃತ್ಯಗಳಿಗಾಗಿ ಪ್ರತ್ಯೇಕ ಚಿಕ್ಕಚಿಕ್ಕ ವೇದಿಕೆಗಳನ್ನೂ ಮಾಡಿಕೊಂಡಿವೆ. 200ಕ್ಕೂ ಹೆಚ್ಚು ಸಂಘಟನೆಗಳು ರೈತ ಹೋರಾಟಕ್ಕೆ ದನಿಗೂಡಿಸಿವೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...