Homeಚಳವಳಿರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ಮೂರು ದಿನಗಳ ಹಿಂದೆ ಮಹಿಳಾ ಕಬಡ್ಡಿ ಆಟಗಾರರು, ಕಬಡ್ಡಿ ಪಂದ್ಯಗಳನ್ನು ಆಡಿ, ಹೋರಾಟಗಾರರಲ್ಲಿ ಹುರುಪು ತುಂಬಲು ಯತ್ನಿಸಿದರು.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಟಿಕ್ರಿ ಮತ್ತು ಸಿಂಘು ಗಡಿಗಳಲ್ಲಿ ಭಾರೀ ಹೋರಾಟ ಭುಗಿಲೆದ್ದಿದೆ. ಕಳೆದ 42 ದಿನಗಳಿಂದ ರೈತ ಹೋರಾಟದ ಕಣವಾಗಿ ವಿಶ್ವದ ಗಮನ ಸೆಳೆದಿರುವ ಈ ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯನ್ನು ನಮ್ಮ ಪ್ರತಿನಿಧಿಗಳು ಕಟ್ಟಿಕೊಟ್ಟಿದ್ದಾರೆ.

ದೆಹಲಿಯ ಉತ್ತರ ಭಾಗದಲ್ಲಿರುವ ಕಡೆಯ ಹಳ್ಳಿಯೇ ಸಿಂಘು. ಈ ಗಡಿಯನ್ನು ದಾಟಿದರೆ ಹರ್ಯಾಣ ಪ್ರವೇಶಿಸಿದಂತೆ. ಸುಮಾರು 250 ಮನೆಗಳಿರುವ ಈ ಹಳ್ಳಿಯು ದೆಹಲಿಯ ಕುಂಡ್ಲಿ, ನರೇಲಾ ಕೈಗಾರಿಕಾ ಪ್ರದೇಶಗಳಿಗೆ ಹತ್ತಿರವಾಗಿದೆ. ತೇಗ್‌ಬಹದ್ದೂರ್‌ ಸ್ಮಾರಕ, ರಾಜೀವ್‌ ಗಾಂಧಿ ಕ್ರೀಡಾ ಸಂಕೀರ್ಣಗಳು ಹತ್ತಿರದಲ್ಲೇ ಇರುವುದರಿಂದ ಈ ಗ್ರಾಮದ ಭೂಮಿಗೆ ಹೆಚ್ಚು ಬೆಲೆಯು ಸಿಕ್ಕಿದೆ. ಹಾಗಾಗಿ ಈ ಹಳ್ಳಿಯ ಆರ್ಥಿಕತೆ ಕೊಂಚ ಉತ್ತಮವಾಗಿದೆ. ಆದರೆ ಅರ್ಧಕ್ಕೂ ಹೆಚ್ಚು ನಿವಾಸಿಗಳು ಕೃಷಿಯನ್ನೇ ನಂಬಿ ಬದುಕುತ್ತಿದ್ದಾರೆ.

ಸಣ್ಣ ಹಿಡುವಳಿದಾರರೇ ಹೆಚ್ಚಿರುವ ಈ ಗ್ರಾಮದಲ್ಲಿ ಗೋಧಿ, ಅಕ್ಕಿಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ.
ತಮ್ಮ ಬೆಳೆಯನ್ನು ನರೇಲಾದ ಎಪಿಎಂಸಿಯಲ್ಲಿ ಮಾರುತ್ತಿದ್ದ ಇವರು ಹೊಸ ಮಸೂದೆಗಳಿಂದ ಕನಿಷ್ಠ ಬೆಂಬಲ ಬೆಲೆ, ಎಪಿಎಂಸಿ ಎಲ್ಲವೂ ಸ್ಥಗಿತಗೊಳ್ಳುತ್ತವೆ ಎಂದಿದ್ದಾರೆ.

ಕಳೆದ ವರ್ಷ ನವೆಂಬರ್‌ 28ರಿಂದ ರೈತ ಪ್ರತಿಭಟನೆ ನಡೆಯುತ್ತಿದೆ. 42 ದಿನಗಳಿಂದ ರೈತರು ಇಲ್ಲಿ ನೆರೆಯುತ್ತಿದ್ದು, ಪ್ರತಿ ದಿನ ಹೋರಾಟ ತೀವ್ರವಾಗುತ್ತಲೇ ಇದೆ.

ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಆದರೆ ಇದು ಹೋರಾಟಗಾರರ ಉತ್ಸಾಹವನ್ನು ಕಡಿಮೆ ಮಾಡಿಲ್ಲ.
ಪಂಜಾಬ್‌, ಹರ್ಯಾಣ, ರಾಜಸ್ತಾನಗಳಿಂದ ವಿವಿಧ ಸಂಘಟನೆಗಳು ಇಲ್ಲಿ ರೈತರು, ರೈತರ ಪರ ಹೋರಾಡುತ್ತಿರುವ ಕಾರ್ಯಕರ್ತರನ್ನು ಒಗ್ಗೂಡಿಸುತ್ತಿವೆ. 541 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್‌ ಮೋರ್ಚಾ ಹೋರಾಟಕ್ಕೆ ನೇತೃತ್ವ ನೀಡಿದೆ.

ಭಾರತೀಯ ಕಿಸಾನ್‌ ಯೂನಿಯನಿನ ವಿವಿಧ ಬಣಗಳು, ಕಿಸಾನ್‌ ಮಜ್ದೂರ್‌ ಸಂಘರ್ಷ ಸಮಿತಿ, ರಾಷ್ಟ್ರೀಯ ಕಿಸಾನ್‌ ಮೋರ್ಚಾ, ಪೆಂಡು ಕಿಸಾನ್‌ ಮಜ್ದೂರ್‌ ಸಂಘರ್ಷ ಸಮಿತಿ- ರಾಜಸ್ಥಾನ, ಖೇತಿ ಬವಾಚೊ ಸಂಘರ್ಷ ಸಮಿತಿ ಹರ್ಯಾಣ, ಫಾರ್ಮರ್‌ ಸ್ಟ್ರಗಲ್‌ ಕಮಿಟಿ, ಕಿಸಾನ್‌ ಸಂಘರ್ಷ ಸಮಿತಿ ಮುಂತಾದವು ಇದರ ಭಾಗವಾಗಿವೆ. ಪಂಜಾಬ್ ಮತ್ತು ಹರಿಯಾಣದ ರೈತರು ಬೃಹತ್ ಸಂಖ್ಯೆಯಲ್ಲಿದ್ದು ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಸೇರಿದಂತೆ ಇನ್ನು ಕೆಲವು ರಾಜ್ಯಗಳಿಂದ ನೂರಕ್ಕೂ ರೈತ-ರೈತ ಪರ ಸಂಘಟನೆಗಳು ಸಿಂಘುಗಡಿಯಲ್ಲಿ ಕೈಜೋಡಿಸಿವೆ.

ಸಿಂಘುವಿನಿಂದ ದೆಹಲಿಗೆ ಸಂಪರ್ಕ ಬೆಸೆಯುವ ಮೆಟ್ರೋ ಮಾರ್ಗದ ಉದ್ದಕ್ಕೂ ರೈತರ ಟ್ರ್ಯಾಕ್ಟರ್‌, ಲಾರಿ, ಟ್ರೇಲರ್‌ಗಳು ಸಾಲುಗಟ್ಟಿವೆ.

ಇಂಗ್ಲೆಂಡಿನ ಖಾಲ್ಸಾ ಏಡ್‌ ಎಂಬ ಸರ್ಕಾರೇತರ ಸಂಸ್ಥೆ ಎಲ್ಲ ರೀತಿಯ ನೆರವುಗಳನ್ನು ಒದಗಿಸಿದೆ. ವಿಶೇಷವಾಗಿ ಮಾಲ್‌ವೊಂದನ್ನು ಸ್ಥಾಪಿಸಿದ್ದು ಇಲ್ಲಿ ಹೋರಾಟ ನಿರತರಿಗೆ ಅಗತ್ಯವಾದ ಎಲ್ಲ ದಿನಸಿ, ತಿನಿಸು ಪದಾರ್ಥಗಳು ಲಭ್ಯವಿದೆ. ಇವೆಲ್ಲವೂ ಉಚಿತವಾಗಿ ಪೂರೈಸುತ್ತಿದೆ.

ಸಿಂಘು ಗಡಿಯ ಪ್ರತಿಭಟನಾ ಪ್ರದೇಶದಲ್ಲಿ ವಿವಿಧ ಸಣ್ಣ ವೇದಿಕೆಗಳಲ್ಲಿ ಕ್ರಾಂತಿಗೀತೆಗಳು, ಘೋಷಣೆಗಳು, ಭಾಷಣಗಳು ನಿರಂತರವಾಗಿ ನಡೆಯುತ್ತಿವೆ.

ಮೂರು ದಿನಗಳ ಹಿಂದೆ ಮಹಿಳಾ ಕಬಡ್ಡಿ ಆಟಗಾರರು, ಕಬಡ್ಡಿ ಪಂದ್ಯಗಳನ್ನು ಆಡಿ, ಹೋರಾಟಗಾರರಲ್ಲಿ ಹುರುಪು ತುಂಬಲು ಯತ್ನಿಸಿದರು.

ಟಿಕ್ರಿ ಗಡಿ

ದೆಹಲಿಯ ಪಶ್ಚಿಮ ಭಾಗದಲ್ಲಿರುವ ಟಿಕ್ರಿ ಗಡಿ, ದೆಹಲಿ ಮತ್ತು ಹರ್ಯಾಣ ರಾಜ್ಯಗಳನ್ನು ಬೆಸೆಯುತ್ತದೆ. ಇದೀಗ ರೈತ ಹೋರಾಟದ ಬಹುಮುಖ್ಯ ಕೇಂದ್ರವೂ ಆಗಿದೆ.

ರಾಜಧಾನಿಯ ಕೇಂದ್ರಭಾಗದಿಂದ ಸುಮಾರು ಒಂದು ತಾಸು ಪ್ರಯಾಣದಷ್ಟು ದೂರವಿರುವ ಟಿಕ್ರಿಯಲ್ಲಿ ಸುಮಾರು 100ಕ್ಕೂ ರೈತ ಸಂಘಟನೆಗಳು ಲಕ್ಷಾಂತರ ರೈತರನ್ನು ಸಂಘಟಿಸಿವೆ.

ಟಿಕ್ರಿಯ ಉದ್ದಕ್ಕೂ ಮೆಟ್ರೋ ಮಾರ್ಗವಿದ್ದು, ಅದರ ಬೃಹತ್‌ ಕಂಬಗಳಡಿಯಲ್ಲಿ ರೈತರು ಬಿಡಾರ ಹೂಡಿದ್ದಾರೆ.
ಸುಮಾರು 15 ಕಿಮೀ ಉದ್ದಕ್ಕೂ ವಾಹನಗಳು ಸಾಲುಗಟ್ಟಿದ್ದು, ಕೆಲವು ವಾಹನಗಳು ರೈತ ಹೋರಾಟಗಾರರಿಗೆ ಅಗತ್ಯವಾದ ಎಲ್ಲ ರೀತಿಯ ಸಾಮಾಗ್ರಿಗಳನ್ನು ಹೊತ್ತು ನಿಂತಿವೆ. ಇನ್ನು ಕೆಲವು ಆಶ್ರಯತಾಣಗಳಾಗಿವೆ.

ಇನ್ನೂ ಅನೇಕರು ಮೆಟ್ರೋ ಮಾರ್ಗಕ್ಕೆಂದು ನಿರ್ಮಿಸಲಾಗಿರುವ ಕಂಬಗಳ ಅಡಿ ಆಶ್ರಯ ಪಡೆದುಕೊಂಡಿದ್ದಾರೆ.
ಟ್ಯಾಕ್ಟರು, ಲಗೇಜ್ ಆಟೋ, ಕಾರು, ಮಿನಿ ಬಸ್ ಮುಂತಾದ ವಾಹನಗಳ ನಡುವೆಯೇ ರಸ್ತೆಯ ಮಧ್ಯಭಾಗದಲ್ಲಿ ಜನ ಓಡಾಟಕ್ಕೆ ದಾರಿ ಮಾಡಿಕೊಂಡು, ಅದರ ಆಸುಪಾಸಿನಲ್ಲಿ ಉದ್ದಕ್ಕೂ ಡೇರೆಗಳನ್ನು ಹಾಕಲಾಗಿದೆ. ಆ ಡೇರೆಗಳಲ್ಲಿ ದೆಹಲಿ ಚಳಿಯಿಂದ ಜೀವ ಹಿಡಿದುಕೊಳ್ಳಲು ಬೇಕಾದ ಉಣ್ಣೆಯ ಶಾಲು, ಟೊಪ್ಪಿ, ಹೊದಿಕೆ, ಹಾಸಿಗೆ, ನಿತ್ಯ ಬಳಕೆಯ ವಸ್ತುಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ 500 ಮೀಟರಿಗೊಂದು ಪ್ರತ್ಯೇಕ ಅಡುಗೆ ಮತ್ತು ಊಟದ ಲಂಗರುಗಳನ್ನು ನಿರ್ಮಿಸಲಾಗಿದೆ. ಸ್ನಾನ ಮತ್ತು ಶೌಚಕ್ಕೆ ಮೊಬೈಲ್ ಬಾತ್ ರೂಂ- ಟಾಯ್ಲೆಟ್ ವ್ಯವಸ್ಥೆಗಳಿವೆ.

 

ಟಿಕ್ರಿ ಗಡಿಯಲ್ಲಿ ಒಂದು ಮುಖ್ಯ ವೇದಿಕೆ ಮೂಲಕ ಪ್ರತಿಭಟನಾ ಭಾಷಣ, ಧರಣಿಗಳನ್ನು ನಡೆಸಲಾಗುತ್ತಿದ್ದರೂ, ಅಲ್ಲಿ ಸೇರಿರುವ ಸುಮಾರು ನೂರಾರು ವಿವಿಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ತಮ್ಮ ತಮ್ಮ ವಾಸ್ತವ್ಯದ ಟೆಂಟ್ ಬಳಿಯೇ ನಿತ್ಯದ ಸಭೆ, ಚರ್ಚೆ, ಹಾಡು, ನೃತ್ಯಗಳಿಗಾಗಿ ಪ್ರತ್ಯೇಕ ಚಿಕ್ಕಚಿಕ್ಕ ವೇದಿಕೆಗಳನ್ನೂ ಮಾಡಿಕೊಂಡಿವೆ. 200ಕ್ಕೂ ಹೆಚ್ಚು ಸಂಘಟನೆಗಳು ರೈತ ಹೋರಾಟಕ್ಕೆ ದನಿಗೂಡಿಸಿವೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...