Homeಚಳವಳಿಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಇದೊಂದು ರೈತ ಹೋರಾಟಗಾರರ ಶಕ್ತಿ ಪ್ರದರ್ಶನವಾಗಿದೆ. ಇದಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ದೆಹಲಿಯ ಎಲ್ಲಾ ಗಡಿಗಳಲ್ಲಿ 400 ಕಿ.ಮೀ‌ ಆಸುಪಾಸಿನಲ್ಲಿ ರ್ಯಾಲಿ ನಡೆಯಲಿದೆ

- Advertisement -
- Advertisement -

ಈ ಬಾರಿ ಜನವರಿ 26 ರಂದು ದೆಹಲಿಯ ಕೆಂಪುಕೋಟೆಯ ಮೇಲೆ ಪ್ರಧಾನಿ ಮೋದಿಯವರಿಗೆ ಧ್ವಜಾರೋಹಣ ಮಾಡಲು ಬಿಡುವುದಿಲ್ಲ. ಕೆಂಪು ಕೋಟೆಯ ಮೇಲೆ ಈ ಬಾರಿ ರೈತರು ತಮ್ಮ ಧ್ವಜ ಹಾರಿಸಲಿದ್ದಾರೆ ಎಂದು ರೈತ ಮುಖಂಡರೊಬ್ಬರು ತಿಳಿಸಿದ್ದಾರೆ.

ಗಣರಾಜ್ಯೋತ್ಸವದ ಪೂರ್ವಭಾವಿಯಾಗಿ ಇಂದು ದೆಹಲಿಯ ಗಡಿಗಳಲ್ಲಿ ಟ್ರಾಕ್ಟರ್ ರ್ಯಾಲಿ ಆರಂಭಿಸಿದ ರೈತರು “ಸರ್ಕಾರಕ್ಕೆ ಕಾಳಜಿಯಿದ್ದರೆ ಜನವರಿ 26ರೊಳಗೆ ಈ ಕರಾಳ ಕಾಯ್ದೆಗಳನ್ನು ವಾಪಸ್ ಪಡೆಯಲಿ. ಇಲ್ಲದಿದ್ದರೆ ಮುಂದೆ ನಡೆಯುವ ಹೋರಾಟಗಳಿಗೆ ಸರ್ಕಾರವೇ ಹೊಣೆ” ಎಂದಿದ್ದಾರೆ.

ಇಂದಿನ ಟ್ರ್ಯಾಕ್ಟರ್‌ ರ್ಯಾಲಿಗೆ ಪಂಜಾಬ್‌ ಮತ್ತು ಹರಿಯಾಣ ಮೂಲದ ಸುಮಾರು 85 ಸಾವಿರಕ್ಕೂ ಹೆಚ್ಚು  ಟ್ರ್ಯಾಕ್ಟರ್‌ಗಳು ಭಾಗವಹಿಸಿವೆ. ಈಗಾಗಲೇ ಸಿಂಘು, ಟಿಕ್ರಿ ಮತ್ತು ಗಾಜಿಪೂರ್‌ ಪ್ರತಿಭಟನಾ ಸ್ಥಳಗಳಿಂದ ರ್ಯಾಲಿ ಹೊರಟಿದ್ದು, ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದ ರೈತರು ತಮ್ಮ ಟ್ರ್ಯಾಕ್ಟರ್‌ಗಳೋಂದಿಗೆ ರ್ಯಾಲಿಯ ಜೊತೆಗೂಡಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ನೊಂದಿಗೆ ಮಾತನಾಡಿದ ರೈತ ಮುಖಂಡ ರಿಜಿಂದರ್‌ ಸಿಂಗ್‌, “ನಾವು ನವೆಂಬರ್‌ 27ಕ್ಕೆ ಇಲ್ಲಿಗೆ ಬಂದೆವು. ಸರ್ಕಾರ ನಮ್ಮನ್ನು ತಡೆಯಲು ಹಳ್ಳ ತೋಡಿತು, ಮುಳ್ಳುತಂತಿ, ಬ್ಯಾರಿಕೇಡ್‌ಗಳನ್ನು ಅಡ್ಡ ನಿಲ್ಲಿಸಿತು. ಆದರೂ ಸರ್ಕಾರ ಒಡ್ಡಿದ ಸವಾಲುಗಳನ್ನು ಎದುರಿಸಿ ನಾವು ಇಲ್ಲಿಗೆ ಬಂದಿದೇವೆ. ಇಂದು ಶಾಂತಿಯುತವಾಗಿ ಟ್ರ್ಯಾಕ್ಟರ್‌ ರ್ಯಾಲಿ ಮಾಡುತ್ತೇವೆ. ಆದರೆ, ಸರ್ಕಾರ ಅದಕ್ಕೂ ತಡೆ ಹಾಕಿದರೇ ಬ್ಯಾರಿಕೇಡ್‌ಗಳನ್ನು ಉರುಳಿಸಿ ಮುನ್ನುಗ್ಗುತ್ತೇವೆ” ಎನ್ನುತ್ತಾರೆ.

ಇದೊಂದು ರೈತ ಹೋರಾಟಗಾರರ ಶಕ್ತಿ ಪ್ರದರ್ಶನವಾಗಿದೆ. ಇದಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ದೆಹಲಿಯ ಎಲ್ಲಾ ಗಡಿಗಳಲ್ಲಿ 400 ಕಿ.ಮೀ‌ ಆಸುಪಾಸಿನಲ್ಲಿ ರ್ಯಾಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಟ್ರಾಕ್ಟರ್ ರ್ಯಾಲಿಯಲ್ಲಿ ಭಾಗವಹಿಸಿರುವ ರೈತ ಮಹಿಳೆಯನ್ನು ಇನ್ನು ಎಷ್ಟು ದಿನ ಹೋರಾಟ ಮಾಡುತ್ತೀರಿ ಎಂದು ಕೇಳಿದರೆ “ನಾವು ಈ ಕಾಯ್ದೆಗಳು ರದ್ದಾಗುವವರೆಗೂ ಇಲ್ಲಿಯೇ ಇರುತ್ತೇವೆ. ಅದಕ್ಕಾಗಿ ಎಷ್ಟು ವರ್ಷಗಳು ತೆಗೆದುಕೊಂಡರೂ ಸರಿಯೇ ಹೋರಾಟದಿಂದ ಹಿಂದೆ ಸರಿಯುವುದಿಲ್ಲ” ಎಂದಿದ್ದಾರೆ.

ಹರಿಯಾಣದ ಇತರ ಭಾಗಗಳಲ್ಲೂ ರೈತರು ಮೂರು ಕೃಷಿ ಕಾನೂನುಗಳನ್ನು ವಿರೋಧಿಸಲು ಗುರುವಾರ ಟ್ರಾಕ್ಟರ್ ಮೆರವಣಿಗೆ ನಡೆಸಲಿದ್ದಾರೆ. ಅಲ್ಲದೆ, ರೈತರ ಟ್ರ್ಯಾಕ್ಟರ್​ ಮೆರವಣಿಗೆಯಿಂದಾಗಿ ಕುಂಡ್ಲಿ ಗಡಿಯಿಂದ ಟಿಕ್ರಿ ಗಡಿಯವರೆಗೆ ಸುಮಾರು ನಾಲ್ಕು ಗಂಟೆಗಳ ಕಾಲ ಸಾಮಾನ್ಯ ಸಂಚಾರದ ಮೇಲೆ ಪರಿಣಾಮ ಬೀರಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ನಾವು ರೈತ ಮೆರವಣಿಗೆಯನ್ನು ಸುರಕ್ಷಿತವಾಗಿ ನಡೆಯುವಂತೆ ಮತ್ತು ಜನರಿಗೆ ಹೆಚ್ಚಿನ ಅನಾನುಕೂಲತೆ ಉಂಟುಮಾಡದೆ ನಡೆಯುವಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತೇವೆ” ಎಂದು ಹರಿಯಾಣ ಡಿಜಿಪಿ ಮನೋಜ್​ ಯಾದವ್ ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...