Homeಚಳವಳಿದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ದೇಶದಾದ್ಯಂತ ರೈತರು ಈಗಾಗಲೇ ಹೋರಾಟ ಮಾಡುತ್ತಿದ್ದಾರೆ. ದೆಹಲಿಯ ಹೋರಾಟ 43 ನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿ ಗಡಿಯಲ್ಲಿ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದು ಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಕಾನೂನು ತರಬೇಕು ಎಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ ದೆಹಲಿಯ ಪೂರ್ವ ಭಾಗದಲ್ಲಿ ಮತ್ತೊಂದು ರೈತ ಪ್ರತಿಭಟನೆ ಭುಗಿಲೆದ್ದಿದ್ದು, ಉತ್ತರ ಪ್ರದೇಶದ ಕಬ್ಬು ಬೆಳೆಗಾರರು ಬಾಕಿ ಪಾವತಿಗೆ ಆಗ್ರಹಿಸಿ ಹೋರಾಟ ಪ್ರಾರಂಭಿಸಿದ್ದಾರೆ.

ಕಳೆದ ಹಂಗಾಮಿನ ಕಬ್ಬಿನ ಬಾಕಿ ಪಾವತಿಯಾಗದೇ ಇರುವುದು, ಕಬ್ಬು ಅರೆದು ಎರಡು ತಿಂಗಳಾದರೂ 2020-21 ರ ಸಾಲಿನ ರಾಜ್ಯ ಸಲಹೆ ಮಾಡಿದ ಬೆಲೆ (state advised price-SAP) ಘೋಷಿಸದಿರುವುದು ಯುಪಿಯ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಕಾರಣವಾಗಿದೆ.

ಉತ್ತರಪ್ರದೇಶದ ಮುಖ್ಯ ಬೆಳೆಯಾಗಿರುವ ಕಬ್ಬನ್ನು ಎಪಿಎಂಸಿ ಮಂಡಿಗಳಲ್ಲಿ ಮಾರುವುದಿಲ್ಲ. ಅದಕ್ಕೆ ’ರಾಜ್ಯ ಸಲಹೆ ಮಾಡಿದ ಬೆಲೆ(ಎಸ್‌ಎಪಿ)’ ನಿಗದಿ ಮಾಡಲಾಗುತ್ತದೆ. ಈ ಬೆಲೆ ಶಾಸನ ಬದ್ಧವಾಗಿರುತ್ತದೆ. ಇಲ್ಲಿ ಎಂಎಸ್‌ಪಿ ಪ್ರಶ್ನೆ ಬರುವುದಿಲ್ಲ, ಸಕ್ಕರೆ ಕಾರ್ಖಾನೆಗಳು ಎಸ್‌ಎಪಿ ಆಧರಿಸಿ ರೈತರಿಗೆ ಪಾವತಿಸಲೇಬೇಕು.

ಇದನ್ನೂ ಓದಿ: ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ದೆಹಲಿ-ಉತ್ತರಪ್ರದೇಶ ಗಡಿಯ ಘಾಜಿಪುರದ ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರು ಭಾಗವಹಿಸುತ್ತಿದ್ದಾರೆ. ಕಬ್ಬನ್ನು ಕಾರ್ಖಾನೆಗೆ ತಲುಪಿಸಿದ 14 ದಿನದಲ್ಲಿ ಎಸ್‌ಎಪಿ ಪಾವತಿಸಬೇಕು ಎಂಬ ಕಾನೂನು ಇದ್ದರೂ, 2019-20 ರ ಹಂಗಾಮಿನ (ಸೆಪ್ಟೆಂಬರ್-ಅಕ್ಟೋಬರ್) ಕಬ್ಬಿಗೆ ಕಾರ್ಖಾನೆಗಳು ಇನ್ನೂ ಹಣ ಪಾವತಿ ಮಾಡಿಲ್ಲ. 2020 ರ ಅಕ್ಟೋಬರ್ ಅಂತ್ಯದಿಂದಲೇ ಕಾರ್ಖಾನೆಗಳು 2020-21 ರ ಹಂಗಾಮಿಯ ಕಬ್ಬು ಅರೆಯಲು ಶುರು ಮಾಡಿದ್ದರೂ, ಆದಿತ್ಯನಾಥ ಸರ್ಕಾರವು ಈವರೆಗೂ ಈ ಹಂಗಾಮಿ ಎಸ್‌ಎಪಿಯನ್ನು ಘೋಷಣೆ ಮಾಡಿಲ್ಲ.

ಪಶ್ಚಿಮ ಯುಪಿಯ ಭಾಗಪತ್ ಜಿಲ್ಲೆಯ ಖಾಸಿಮಪುರ್ ಖೇರಿಯಲ್ಲಿ ಒಂದು ಎಕರೆ ಜಮೀನು ಹೊಂದಿರುವ ರಾಕೇಶ್ ತೋಮರ್, 2019-20 ರ ಹಂಗಾಮಿಯ ಒಟ್ಟು 15 ’ಪಾರ್ಚಿ’ ಕಬ್ಬನ್ನು (ಪಾರ್ಚಿ ಎಂದರೆ ಒಂದು ಎತ್ತಿನ ಚಕ್ಕಡಿ ಭರ್ತಿ ಕಬ್ಬು, ತಲಾ 18 ಕ್ವಿಂಟಾಲ್ ತೂಗುತ್ತದೆ) ರಾಮಲಾ ಸಹಕಾರಿ ಮಿಲ್‌ಗೆ ನೀಡಿದ್ದಾರೆ. ಮಿಲ್ ಜೂನ್ 14 ರಂದೇ ಕಬ್ಬು ಅರೆಯುವಿಕೆ ಆರಂಭಿಸಿದೆ. ರಾಕೇಶ್ ಅವರಿಗೆ ಇನ್ನೂ 4 ಪಾರ್ಚಿ ಕಬ್ಬಿನ ಬಾಕಿ ಬರಬೇಕಿದ್ದು, ಇದು 23,400 ಆಗುತ್ತದೆ. ಹೊಸ ಹಂಗಾಮಿಯ 6 ಪಾರ್ಚಿ ಕಬ್ಬನ್ನೂ ಅವರು ಮಿಲ್‌ಗೆ ಪೂರೈಸಿದ್ದಾರೆ. ಅಕ್ಟೋಬರ್ ಅಂತ್ಯದಲ್ಲೇ ಅರಿಯುವಿಕೆ ಆರಂಭಗೊಂಡರೂ ಇನ್ನೂ ಬಾಕಿ ಬಂದಿಲ್ಲ.

ಇದನ್ನೂ ಓದಿ: ಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಶಾಮ್ಲಿಯಲ್ಲಿರುವ ಮಿಲ್‌ಗೆ ಅನೂಜ್ ಕಲ್ಕಂಡೆಯವರು ಜನವರಿ 3 ರಂದು 20 ಕ್ವಿಂಟಾಲ್ ಕಬ್ಬು ಪೂರೈಸಿದ್ದರು. ಕಳೆದ ಹಂಗಾಮಿನಲ್ಲಿ 2,400 ಕ್ವಿಂಟಾಲ್ ಪೂರೈಸಿದ್ದರು. ಹಿಂದಿನ ಹಂಗಾಮಿನ ಬಾಕಿಯೂ ಬಂದಿಲ್ಲ. ಈ ಸಲ ಇನ್ನೂ ಎಸ್‌ಎಪಿ ಘೋಷಣೆಯಾಗದ ಕಾರಣ, ಈ ಸಲವೂ ವಿಳಂಬವಾಗಲಿದೆ. ಸರ್ಕಾರ ಎಸ್‌ಎಪಿ ಘೋಷಣೆ ಮಾಡದೇ ಕಾರ್ಖಾನೆಗಳಿಗೆ ಪರೀಕ್ಷವಾಗಿ ಸಹಾಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

2021 ರ ಜನವರಿ 5 ರ ಅಂಕಿಅಂಶಗಳ ಪ್ರಕಾರ, ಮಿಲ್/ಕಾರ್ಖಾನೆಗಳು 2019-20 ರ ಹಂಗಾಮಿನಲ್ಲಿ ಒಟ್ಟು 35,898 ಕೋಟಿ ರೂ ಮೌಲ್ಯದ (ಎಸ್‌ಎಪಿ ಅನ್ವಯ) ಕಬ್ಬು ಖರೀದಿಸಿದ್ದು, ಇನ್ನೂ 2019-20 ರ ಸಾಲಿನ 2,470 ಕೋಟಿ ರೂ. ಬಾಕಿ ಪಾವತಿಸಿಲ್ಲ. ಈ ಹಂಗಾಮಿನಲ್ಲಿ ಅವು ಈಗಾಗಲೇ 363.20 ಲಕ್ಷ ಟನ್ ಕಬ್ಬನ್ನೂ ಅರೆದಿವೆ.

ಈಗಲೂ ಎಸ್‌ಎಪಿ ಘೋಷಣೆಯಾಗದ ನೆಪದಲ್ಲಿ ರೈತರಿಗೆ ಹಣ ಪಾವತಿ ಮಾಡುತ್ತಿಲ್ಲ. ಹೋದ ವರ್ಷದ ಎಸ್‌ಎಪಿ ಆಧಾರದಲ್ಲಿ ಹೇಳುವುದಾದರೆ, 11,660 ಕೋಟಿ ರೂ. ಮೌಲ್ಯದ ಕಬ್ಬನ್ನೂ ಈಗಾಗಲೇ ಅರೆಯಲು ಆರಂಭಿಸಿವೆ. ಇಲ್ಲಿವರೆಗೆ ಅವು 11,660 ಕೋಟಿ ರೂ. ಪೈಕಿ ಕೇವಲ 2,427 ಕೋಟಿ ರೂ ಪಾವತಿಸಿದ್ದು, ಎಸ್‌ಎಪಿ ಘೋಷಣೆ ನಂತರ ಉಳಿದ ಹಣ ಪಾವತಿಸುವ ಭರವಸೆ ನೀಡಿವೆ. ಆದರೆ ಕಳೆದ ಹಂಗಾಮಿನ ಬಾಕಿಯನ್ನೂ ಇನ್ನೂ ಕೊಡದ ಪರಿಣಾಮ ಕಬ್ಬು ಬೆಳೆಗಾರರು ಯುಪಿ ಸರ್ಕಾರ ಮತ್ತು ಕಾರ್ಖಾನೆಗಳ ವಿರುದ್ಧ ದೆಹಲಿಯ ಪೂರ್ವ ಗಡಿಯ ಘಾಜಿಪುರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...