Homeಚಳವಳಿದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ದೇಶದಾದ್ಯಂತ ರೈತರು ಈಗಾಗಲೇ ಹೋರಾಟ ಮಾಡುತ್ತಿದ್ದಾರೆ. ದೆಹಲಿಯ ಹೋರಾಟ 43 ನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿ ಗಡಿಯಲ್ಲಿ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದು ಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಕಾನೂನು ತರಬೇಕು ಎಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ ದೆಹಲಿಯ ಪೂರ್ವ ಭಾಗದಲ್ಲಿ ಮತ್ತೊಂದು ರೈತ ಪ್ರತಿಭಟನೆ ಭುಗಿಲೆದ್ದಿದ್ದು, ಉತ್ತರ ಪ್ರದೇಶದ ಕಬ್ಬು ಬೆಳೆಗಾರರು ಬಾಕಿ ಪಾವತಿಗೆ ಆಗ್ರಹಿಸಿ ಹೋರಾಟ ಪ್ರಾರಂಭಿಸಿದ್ದಾರೆ.

ಕಳೆದ ಹಂಗಾಮಿನ ಕಬ್ಬಿನ ಬಾಕಿ ಪಾವತಿಯಾಗದೇ ಇರುವುದು, ಕಬ್ಬು ಅರೆದು ಎರಡು ತಿಂಗಳಾದರೂ 2020-21 ರ ಸಾಲಿನ ರಾಜ್ಯ ಸಲಹೆ ಮಾಡಿದ ಬೆಲೆ (state advised price-SAP) ಘೋಷಿಸದಿರುವುದು ಯುಪಿಯ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಕಾರಣವಾಗಿದೆ.

ಉತ್ತರಪ್ರದೇಶದ ಮುಖ್ಯ ಬೆಳೆಯಾಗಿರುವ ಕಬ್ಬನ್ನು ಎಪಿಎಂಸಿ ಮಂಡಿಗಳಲ್ಲಿ ಮಾರುವುದಿಲ್ಲ. ಅದಕ್ಕೆ ’ರಾಜ್ಯ ಸಲಹೆ ಮಾಡಿದ ಬೆಲೆ(ಎಸ್‌ಎಪಿ)’ ನಿಗದಿ ಮಾಡಲಾಗುತ್ತದೆ. ಈ ಬೆಲೆ ಶಾಸನ ಬದ್ಧವಾಗಿರುತ್ತದೆ. ಇಲ್ಲಿ ಎಂಎಸ್‌ಪಿ ಪ್ರಶ್ನೆ ಬರುವುದಿಲ್ಲ, ಸಕ್ಕರೆ ಕಾರ್ಖಾನೆಗಳು ಎಸ್‌ಎಪಿ ಆಧರಿಸಿ ರೈತರಿಗೆ ಪಾವತಿಸಲೇಬೇಕು.

ಇದನ್ನೂ ಓದಿ: ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ದೆಹಲಿ-ಉತ್ತರಪ್ರದೇಶ ಗಡಿಯ ಘಾಜಿಪುರದ ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರು ಭಾಗವಹಿಸುತ್ತಿದ್ದಾರೆ. ಕಬ್ಬನ್ನು ಕಾರ್ಖಾನೆಗೆ ತಲುಪಿಸಿದ 14 ದಿನದಲ್ಲಿ ಎಸ್‌ಎಪಿ ಪಾವತಿಸಬೇಕು ಎಂಬ ಕಾನೂನು ಇದ್ದರೂ, 2019-20 ರ ಹಂಗಾಮಿನ (ಸೆಪ್ಟೆಂಬರ್-ಅಕ್ಟೋಬರ್) ಕಬ್ಬಿಗೆ ಕಾರ್ಖಾನೆಗಳು ಇನ್ನೂ ಹಣ ಪಾವತಿ ಮಾಡಿಲ್ಲ. 2020 ರ ಅಕ್ಟೋಬರ್ ಅಂತ್ಯದಿಂದಲೇ ಕಾರ್ಖಾನೆಗಳು 2020-21 ರ ಹಂಗಾಮಿಯ ಕಬ್ಬು ಅರೆಯಲು ಶುರು ಮಾಡಿದ್ದರೂ, ಆದಿತ್ಯನಾಥ ಸರ್ಕಾರವು ಈವರೆಗೂ ಈ ಹಂಗಾಮಿ ಎಸ್‌ಎಪಿಯನ್ನು ಘೋಷಣೆ ಮಾಡಿಲ್ಲ.

ಪಶ್ಚಿಮ ಯುಪಿಯ ಭಾಗಪತ್ ಜಿಲ್ಲೆಯ ಖಾಸಿಮಪುರ್ ಖೇರಿಯಲ್ಲಿ ಒಂದು ಎಕರೆ ಜಮೀನು ಹೊಂದಿರುವ ರಾಕೇಶ್ ತೋಮರ್, 2019-20 ರ ಹಂಗಾಮಿಯ ಒಟ್ಟು 15 ’ಪಾರ್ಚಿ’ ಕಬ್ಬನ್ನು (ಪಾರ್ಚಿ ಎಂದರೆ ಒಂದು ಎತ್ತಿನ ಚಕ್ಕಡಿ ಭರ್ತಿ ಕಬ್ಬು, ತಲಾ 18 ಕ್ವಿಂಟಾಲ್ ತೂಗುತ್ತದೆ) ರಾಮಲಾ ಸಹಕಾರಿ ಮಿಲ್‌ಗೆ ನೀಡಿದ್ದಾರೆ. ಮಿಲ್ ಜೂನ್ 14 ರಂದೇ ಕಬ್ಬು ಅರೆಯುವಿಕೆ ಆರಂಭಿಸಿದೆ. ರಾಕೇಶ್ ಅವರಿಗೆ ಇನ್ನೂ 4 ಪಾರ್ಚಿ ಕಬ್ಬಿನ ಬಾಕಿ ಬರಬೇಕಿದ್ದು, ಇದು 23,400 ಆಗುತ್ತದೆ. ಹೊಸ ಹಂಗಾಮಿಯ 6 ಪಾರ್ಚಿ ಕಬ್ಬನ್ನೂ ಅವರು ಮಿಲ್‌ಗೆ ಪೂರೈಸಿದ್ದಾರೆ. ಅಕ್ಟೋಬರ್ ಅಂತ್ಯದಲ್ಲೇ ಅರಿಯುವಿಕೆ ಆರಂಭಗೊಂಡರೂ ಇನ್ನೂ ಬಾಕಿ ಬಂದಿಲ್ಲ.

ಇದನ್ನೂ ಓದಿ: ಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಶಾಮ್ಲಿಯಲ್ಲಿರುವ ಮಿಲ್‌ಗೆ ಅನೂಜ್ ಕಲ್ಕಂಡೆಯವರು ಜನವರಿ 3 ರಂದು 20 ಕ್ವಿಂಟಾಲ್ ಕಬ್ಬು ಪೂರೈಸಿದ್ದರು. ಕಳೆದ ಹಂಗಾಮಿನಲ್ಲಿ 2,400 ಕ್ವಿಂಟಾಲ್ ಪೂರೈಸಿದ್ದರು. ಹಿಂದಿನ ಹಂಗಾಮಿನ ಬಾಕಿಯೂ ಬಂದಿಲ್ಲ. ಈ ಸಲ ಇನ್ನೂ ಎಸ್‌ಎಪಿ ಘೋಷಣೆಯಾಗದ ಕಾರಣ, ಈ ಸಲವೂ ವಿಳಂಬವಾಗಲಿದೆ. ಸರ್ಕಾರ ಎಸ್‌ಎಪಿ ಘೋಷಣೆ ಮಾಡದೇ ಕಾರ್ಖಾನೆಗಳಿಗೆ ಪರೀಕ್ಷವಾಗಿ ಸಹಾಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

2021 ರ ಜನವರಿ 5 ರ ಅಂಕಿಅಂಶಗಳ ಪ್ರಕಾರ, ಮಿಲ್/ಕಾರ್ಖಾನೆಗಳು 2019-20 ರ ಹಂಗಾಮಿನಲ್ಲಿ ಒಟ್ಟು 35,898 ಕೋಟಿ ರೂ ಮೌಲ್ಯದ (ಎಸ್‌ಎಪಿ ಅನ್ವಯ) ಕಬ್ಬು ಖರೀದಿಸಿದ್ದು, ಇನ್ನೂ 2019-20 ರ ಸಾಲಿನ 2,470 ಕೋಟಿ ರೂ. ಬಾಕಿ ಪಾವತಿಸಿಲ್ಲ. ಈ ಹಂಗಾಮಿನಲ್ಲಿ ಅವು ಈಗಾಗಲೇ 363.20 ಲಕ್ಷ ಟನ್ ಕಬ್ಬನ್ನೂ ಅರೆದಿವೆ.

ಈಗಲೂ ಎಸ್‌ಎಪಿ ಘೋಷಣೆಯಾಗದ ನೆಪದಲ್ಲಿ ರೈತರಿಗೆ ಹಣ ಪಾವತಿ ಮಾಡುತ್ತಿಲ್ಲ. ಹೋದ ವರ್ಷದ ಎಸ್‌ಎಪಿ ಆಧಾರದಲ್ಲಿ ಹೇಳುವುದಾದರೆ, 11,660 ಕೋಟಿ ರೂ. ಮೌಲ್ಯದ ಕಬ್ಬನ್ನೂ ಈಗಾಗಲೇ ಅರೆಯಲು ಆರಂಭಿಸಿವೆ. ಇಲ್ಲಿವರೆಗೆ ಅವು 11,660 ಕೋಟಿ ರೂ. ಪೈಕಿ ಕೇವಲ 2,427 ಕೋಟಿ ರೂ ಪಾವತಿಸಿದ್ದು, ಎಸ್‌ಎಪಿ ಘೋಷಣೆ ನಂತರ ಉಳಿದ ಹಣ ಪಾವತಿಸುವ ಭರವಸೆ ನೀಡಿವೆ. ಆದರೆ ಕಳೆದ ಹಂಗಾಮಿನ ಬಾಕಿಯನ್ನೂ ಇನ್ನೂ ಕೊಡದ ಪರಿಣಾಮ ಕಬ್ಬು ಬೆಳೆಗಾರರು ಯುಪಿ ಸರ್ಕಾರ ಮತ್ತು ಕಾರ್ಖಾನೆಗಳ ವಿರುದ್ಧ ದೆಹಲಿಯ ಪೂರ್ವ ಗಡಿಯ ಘಾಜಿಪುರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...