Homeಚಳವಳಿದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ದೇಶದಾದ್ಯಂತ ರೈತರು ಈಗಾಗಲೇ ಹೋರಾಟ ಮಾಡುತ್ತಿದ್ದಾರೆ. ದೆಹಲಿಯ ಹೋರಾಟ 43 ನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿ ಗಡಿಯಲ್ಲಿ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದು ಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಕಾನೂನು ತರಬೇಕು ಎಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ ದೆಹಲಿಯ ಪೂರ್ವ ಭಾಗದಲ್ಲಿ ಮತ್ತೊಂದು ರೈತ ಪ್ರತಿಭಟನೆ ಭುಗಿಲೆದ್ದಿದ್ದು, ಉತ್ತರ ಪ್ರದೇಶದ ಕಬ್ಬು ಬೆಳೆಗಾರರು ಬಾಕಿ ಪಾವತಿಗೆ ಆಗ್ರಹಿಸಿ ಹೋರಾಟ ಪ್ರಾರಂಭಿಸಿದ್ದಾರೆ.

ಕಳೆದ ಹಂಗಾಮಿನ ಕಬ್ಬಿನ ಬಾಕಿ ಪಾವತಿಯಾಗದೇ ಇರುವುದು, ಕಬ್ಬು ಅರೆದು ಎರಡು ತಿಂಗಳಾದರೂ 2020-21 ರ ಸಾಲಿನ ರಾಜ್ಯ ಸಲಹೆ ಮಾಡಿದ ಬೆಲೆ (state advised price-SAP) ಘೋಷಿಸದಿರುವುದು ಯುಪಿಯ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಕಾರಣವಾಗಿದೆ.

ಉತ್ತರಪ್ರದೇಶದ ಮುಖ್ಯ ಬೆಳೆಯಾಗಿರುವ ಕಬ್ಬನ್ನು ಎಪಿಎಂಸಿ ಮಂಡಿಗಳಲ್ಲಿ ಮಾರುವುದಿಲ್ಲ. ಅದಕ್ಕೆ ’ರಾಜ್ಯ ಸಲಹೆ ಮಾಡಿದ ಬೆಲೆ(ಎಸ್‌ಎಪಿ)’ ನಿಗದಿ ಮಾಡಲಾಗುತ್ತದೆ. ಈ ಬೆಲೆ ಶಾಸನ ಬದ್ಧವಾಗಿರುತ್ತದೆ. ಇಲ್ಲಿ ಎಂಎಸ್‌ಪಿ ಪ್ರಶ್ನೆ ಬರುವುದಿಲ್ಲ, ಸಕ್ಕರೆ ಕಾರ್ಖಾನೆಗಳು ಎಸ್‌ಎಪಿ ಆಧರಿಸಿ ರೈತರಿಗೆ ಪಾವತಿಸಲೇಬೇಕು.

ಇದನ್ನೂ ಓದಿ: ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ದೆಹಲಿ-ಉತ್ತರಪ್ರದೇಶ ಗಡಿಯ ಘಾಜಿಪುರದ ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರು ಭಾಗವಹಿಸುತ್ತಿದ್ದಾರೆ. ಕಬ್ಬನ್ನು ಕಾರ್ಖಾನೆಗೆ ತಲುಪಿಸಿದ 14 ದಿನದಲ್ಲಿ ಎಸ್‌ಎಪಿ ಪಾವತಿಸಬೇಕು ಎಂಬ ಕಾನೂನು ಇದ್ದರೂ, 2019-20 ರ ಹಂಗಾಮಿನ (ಸೆಪ್ಟೆಂಬರ್-ಅಕ್ಟೋಬರ್) ಕಬ್ಬಿಗೆ ಕಾರ್ಖಾನೆಗಳು ಇನ್ನೂ ಹಣ ಪಾವತಿ ಮಾಡಿಲ್ಲ. 2020 ರ ಅಕ್ಟೋಬರ್ ಅಂತ್ಯದಿಂದಲೇ ಕಾರ್ಖಾನೆಗಳು 2020-21 ರ ಹಂಗಾಮಿಯ ಕಬ್ಬು ಅರೆಯಲು ಶುರು ಮಾಡಿದ್ದರೂ, ಆದಿತ್ಯನಾಥ ಸರ್ಕಾರವು ಈವರೆಗೂ ಈ ಹಂಗಾಮಿ ಎಸ್‌ಎಪಿಯನ್ನು ಘೋಷಣೆ ಮಾಡಿಲ್ಲ.

ಪಶ್ಚಿಮ ಯುಪಿಯ ಭಾಗಪತ್ ಜಿಲ್ಲೆಯ ಖಾಸಿಮಪುರ್ ಖೇರಿಯಲ್ಲಿ ಒಂದು ಎಕರೆ ಜಮೀನು ಹೊಂದಿರುವ ರಾಕೇಶ್ ತೋಮರ್, 2019-20 ರ ಹಂಗಾಮಿಯ ಒಟ್ಟು 15 ’ಪಾರ್ಚಿ’ ಕಬ್ಬನ್ನು (ಪಾರ್ಚಿ ಎಂದರೆ ಒಂದು ಎತ್ತಿನ ಚಕ್ಕಡಿ ಭರ್ತಿ ಕಬ್ಬು, ತಲಾ 18 ಕ್ವಿಂಟಾಲ್ ತೂಗುತ್ತದೆ) ರಾಮಲಾ ಸಹಕಾರಿ ಮಿಲ್‌ಗೆ ನೀಡಿದ್ದಾರೆ. ಮಿಲ್ ಜೂನ್ 14 ರಂದೇ ಕಬ್ಬು ಅರೆಯುವಿಕೆ ಆರಂಭಿಸಿದೆ. ರಾಕೇಶ್ ಅವರಿಗೆ ಇನ್ನೂ 4 ಪಾರ್ಚಿ ಕಬ್ಬಿನ ಬಾಕಿ ಬರಬೇಕಿದ್ದು, ಇದು 23,400 ಆಗುತ್ತದೆ. ಹೊಸ ಹಂಗಾಮಿಯ 6 ಪಾರ್ಚಿ ಕಬ್ಬನ್ನೂ ಅವರು ಮಿಲ್‌ಗೆ ಪೂರೈಸಿದ್ದಾರೆ. ಅಕ್ಟೋಬರ್ ಅಂತ್ಯದಲ್ಲೇ ಅರಿಯುವಿಕೆ ಆರಂಭಗೊಂಡರೂ ಇನ್ನೂ ಬಾಕಿ ಬಂದಿಲ್ಲ.

ಇದನ್ನೂ ಓದಿ: ಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಶಾಮ್ಲಿಯಲ್ಲಿರುವ ಮಿಲ್‌ಗೆ ಅನೂಜ್ ಕಲ್ಕಂಡೆಯವರು ಜನವರಿ 3 ರಂದು 20 ಕ್ವಿಂಟಾಲ್ ಕಬ್ಬು ಪೂರೈಸಿದ್ದರು. ಕಳೆದ ಹಂಗಾಮಿನಲ್ಲಿ 2,400 ಕ್ವಿಂಟಾಲ್ ಪೂರೈಸಿದ್ದರು. ಹಿಂದಿನ ಹಂಗಾಮಿನ ಬಾಕಿಯೂ ಬಂದಿಲ್ಲ. ಈ ಸಲ ಇನ್ನೂ ಎಸ್‌ಎಪಿ ಘೋಷಣೆಯಾಗದ ಕಾರಣ, ಈ ಸಲವೂ ವಿಳಂಬವಾಗಲಿದೆ. ಸರ್ಕಾರ ಎಸ್‌ಎಪಿ ಘೋಷಣೆ ಮಾಡದೇ ಕಾರ್ಖಾನೆಗಳಿಗೆ ಪರೀಕ್ಷವಾಗಿ ಸಹಾಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

2021 ರ ಜನವರಿ 5 ರ ಅಂಕಿಅಂಶಗಳ ಪ್ರಕಾರ, ಮಿಲ್/ಕಾರ್ಖಾನೆಗಳು 2019-20 ರ ಹಂಗಾಮಿನಲ್ಲಿ ಒಟ್ಟು 35,898 ಕೋಟಿ ರೂ ಮೌಲ್ಯದ (ಎಸ್‌ಎಪಿ ಅನ್ವಯ) ಕಬ್ಬು ಖರೀದಿಸಿದ್ದು, ಇನ್ನೂ 2019-20 ರ ಸಾಲಿನ 2,470 ಕೋಟಿ ರೂ. ಬಾಕಿ ಪಾವತಿಸಿಲ್ಲ. ಈ ಹಂಗಾಮಿನಲ್ಲಿ ಅವು ಈಗಾಗಲೇ 363.20 ಲಕ್ಷ ಟನ್ ಕಬ್ಬನ್ನೂ ಅರೆದಿವೆ.

ಈಗಲೂ ಎಸ್‌ಎಪಿ ಘೋಷಣೆಯಾಗದ ನೆಪದಲ್ಲಿ ರೈತರಿಗೆ ಹಣ ಪಾವತಿ ಮಾಡುತ್ತಿಲ್ಲ. ಹೋದ ವರ್ಷದ ಎಸ್‌ಎಪಿ ಆಧಾರದಲ್ಲಿ ಹೇಳುವುದಾದರೆ, 11,660 ಕೋಟಿ ರೂ. ಮೌಲ್ಯದ ಕಬ್ಬನ್ನೂ ಈಗಾಗಲೇ ಅರೆಯಲು ಆರಂಭಿಸಿವೆ. ಇಲ್ಲಿವರೆಗೆ ಅವು 11,660 ಕೋಟಿ ರೂ. ಪೈಕಿ ಕೇವಲ 2,427 ಕೋಟಿ ರೂ ಪಾವತಿಸಿದ್ದು, ಎಸ್‌ಎಪಿ ಘೋಷಣೆ ನಂತರ ಉಳಿದ ಹಣ ಪಾವತಿಸುವ ಭರವಸೆ ನೀಡಿವೆ. ಆದರೆ ಕಳೆದ ಹಂಗಾಮಿನ ಬಾಕಿಯನ್ನೂ ಇನ್ನೂ ಕೊಡದ ಪರಿಣಾಮ ಕಬ್ಬು ಬೆಳೆಗಾರರು ಯುಪಿ ಸರ್ಕಾರ ಮತ್ತು ಕಾರ್ಖಾನೆಗಳ ವಿರುದ್ಧ ದೆಹಲಿಯ ಪೂರ್ವ ಗಡಿಯ ಘಾಜಿಪುರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...