Homeಚಳವಳಿತೀವ್ರಗೊಂಡ 'ನಮ್ಮೂರಿಗೆ ಅಕೇಶಿಯಾ ಮರ ಬೇಡ' ಹೋರಾಟ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ತೀವ್ರಗೊಂಡ ‘ನಮ್ಮೂರಿಗೆ ಅಕೇಶಿಯಾ ಮರ ಬೇಡ’ ಹೋರಾಟ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ಈ ಅರಣ್ಯ ಜಾಗ ಬೇನಾಮಿಯಾಗಿ ಪ್ರೇರಣಾ ಟ್ರಸ್ಟ್‌ಗೆ, ಬಿ.ವೈ ರಾಘವೇಂದ್ರರಿಗೆ ಅಥಬಾ ಬಿ.ವೈ ವಿಜಯೇಂದ್ರರಿಗೆ ಹೋಗುತ್ತಿದೆಯೋ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಕೆ.ಪಿ ಶ್ರೀಪಾಲ್ ಒತ್ತಾಯಿಸಿದರು.

- Advertisement -
- Advertisement -

‘ಪರಿಸರ ಮತ್ತು ಜೀವವೈವಿಧ್ಯತೆಗೆ ಕುತ್ತು ತರುವ ಅಕೇಶಿಯಾ ನಮಗೆ ಬೇಡವೇ ಬೇಡ, ಅನಧಿಕೃತವಾಗಿ ಎಂಪಿಎಂಗೆ ಗುತ್ತಿಗೆ ಮುಂದುವರೆಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ, ಮಲೆನಾಡು ನಮ್ಮದು’ ಎಂಬ ಘೋಷಣೆಗಳೊಂದಿಗೆ ಇಂದು ಶಿವಮೊಗ್ಗದಲ್ಲಿ ‘ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ’ದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಶಿವಮೊಗ್ಗದ ಬೆಕ್ಕಿನಕಲ್ಮಠ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಪ್ರತಿಭಟನಾಕಾರರು, ಪರಿಸರ ಕಾರ್ಯಕರ್ತರು ಮಲೆನಾಡನ್ನು ಮಾರಲು ಬಿಡುವುದಿಲ್ಲ ಎಂಬ ಘೋಷಣೆಗಳೊಂದಿಗೆ ನಗರದ ಸಿಸಿಎಫ್‌ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಆದರೆ ಪ್ರತಿಭಟನಾಕಾರರು ಸಿಸಿಎಫ್‌ ಕಚೇರಿ ಆವರಣಕ್ಕೆ ಪ್ರವೇಶಿಸದಂತೆ ಪೊಲೀಸರು ತಡೆದಾಗ ಇಬ್ಬರ ನಡುವೆ ಜಟಾಪಟಿ ನಡೆದು ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಹೋರಾಟಗಾರರಾದ ಕೆ.ಪಿ ಶ್ರೀಪಾಲ್ ಮಾತನಾಡಿ “ಇದು ಇಡೀ ಮಲೆನಾಡಿನ ಉಳಿವಿನ ಹೋರಾಟವಾಗಿದೆ. ಏಕೆಂದರೆ ಇಡೀ ಮಲೆನಾಡನ್ನು ಹಾಳು ಮಾಡಿದ ಎಂಪಿಎಂ ಹೆಸರಿನ ಅಕೇಶಿಯಾ ನೆಡುತೋಪು ಕಳೆದ ಆಗಸ್ಟ್‌ಗೆ ಅದರ ಲೀಸ್ ಅವಧಿ ಮುಗಿಯುತ್ತದೆ ಎಂದು ನಂಬಿದ್ದೆವು. ಆದರೆ ಎಂಪಿಎಂ ಕಾರ್ಖಾನೆ ಮುಚ್ಚಿಹೋಗಿದ್ದರೂ ಸರ್ಕಾರ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿ ಪಡೆಯುವ ಬದಲು, ಮತ್ತೆ ಲೀಸ್ ನವೀಕರಣದ ಮೂಲಕ ಆ ಭೂಮಿಯನ್ನು ಮುಚ್ಚಿಹೋಗಿರುವ ಕಂಪನಿಗೆ ಪರಭಾರೆ ಮಾಡಿದೆ. ಏಕೆಂದರೆ ಇದರ ಹಿಂದೆ ಸಿಎಂ ಯಡಿಯೂರಪ್ಪನವರ ಕುಟುಂಬದ ಹಿತಾಸಕ್ತಿಯಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಖಾನೆಯೇ ಇಲ್ಲದ ಮೇಲೆ ನವೀಕರಣ ಹೇಗೆ ಸಾಧ್ಯ? ಇದರ ಬಗ್ಗೆ ಎಲ್ಲಿಯೂ ಚರ್ಚೆ ನಡೆದಿಲ್ಲ, ಯಾವ ಶಾಸಕರ ಗಮನಕ್ಕೂ ಬಂದಿಲ್ಲ. ಈ ಅರಣ್ಯ ಜಾಗ ಬೇನಾಮಿಯಾಗಿ ಪ್ರೇರಣಾ ಟ್ರಸ್ಟ್‌ಗೆ, ಬಿ.ವೈ ರಾಘವೇಂದ್ರರಿಗೆ ಅಥಬಾ ಬಿ.ವೈ ವಿಜಯೇಂದ್ರರಿಗೆ ಹೋಗುತ್ತಿದೆಯೋ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಚಿಂತಕರಾದ ಡಾ. ರಾಜೇಂದ್ರ ಚೆನ್ನಿಯವರು ಮಾತನಾಡಿ “ನಮಗೆ ಸೇರಬೇಕಾದ ಪರಿಸರ ಮತ್ತು ಕಾಡನ್ನು ನಮ್ಮ ಸರ್ಕಾರ ಮತ್ತು ರಾಜಕಾರಣಿಗಳು ಮಾರಲು ಹೊರಟಿದ್ದಾರೆ. ಅದನ್ನು ನಿಲ್ಲಿಸಬೇಕು. ಮತ್ತೆ 40 ವರ್ಷ ಈ ಅಕೇಶಿಯಾ ಮರಗಳು ಬೆಳೆದರೆ ಮರುಭೂಮಿಯನ್ನು ನೋಡಲು ನಾವು ರಾಜಸ್ಥಾನಕ್ಕೆ ಹೋಗಬೇಕಿಲ್ಲ, ಬದಲಿಗೆ ಶಿವಮೊಗ್ಗಕ್ಕೆ ಬಂದರೆ ಸಾಕು ಎನಿಸುವ ಪರಿಸ್ಥಿತಿ ಬರುತ್ತದೆ. ಈ ಸರ್ಕಾರಕ್ಕೆ ಕಿವಿ, ಕಣ್ಣು, ಮೂಗು ಏನು ಇಲ್ಲವೇ?” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ನಮ್ಮ ಹೋರಾಟಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ ಸಿಎಂರವರ ಆದೇಶವನ್ನಷ್ಟೇ ನಾವು ಪಾಲಿಸುತ್ತಿದ್ದೇವೆ ಎಂದು ಹೇಳುತ್ತಾರೆ. ಇದು ನಮ್ಮ ಪ್ರತಿಯೊಬ್ಬರ ಮನೆಯ ಪ್ರಶ್ನೆಯಾಗಿದೆ. ಇದು ನಿಧಾನಕ್ಕೆ ನಮಗೆ ವಿಷವುಣಿಸುತ್ತಿದೆ. ಹಾಗಾಗಿ ಏನೇ ಬೆಲೆ ತೆತ್ತಾದರೂ ಸರಿಯೇ ನಾವು ಮಲೆನಾಡನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್‌ರವರು ಮಾತನಾಡಿ ‘ಜನರು ಬಿಜೆಪಿ ಓಟು ಹಾಕುತ್ತಿದ್ದಾರೆ ಎಂದರೆ ದೇಶವನ್ನು ಮಾರಿಕೊಳ್ಳಿ ಎಂದು ಪರ್ಮಿಶನ್ ಕೊಟ್ಟಂತೆಯೇ? ನಾವು ಅರಣ್ಯವನ್ನು ಪ್ರೀತಿಸುತ್ತೇವೆ. ಈ ಅರಣ್ಯವನ್ನು ಮತ್ತೆ ಅರಣ್ಯ ಇಲಾಖೆಗೆ ಕೊಡಿ ಎಂದು ಒತ್ತಾಯಿಸುತ್ತಿದ್ದೇವೆಯೇ ಹೊರತು ನಮಗೆ ಕೊಡಿ ಎಂತಲ್ಲ’ ಎಂದರು.

ಈ ಹಿಂದೆಯಿಂದಲೂ ಅಕೇಶಿಯಾ ಅಪಾಯಕಾರಿ ಎಂದು ನಾವು ಹೇಳಿದ್ದೆವು. ಆದರೆ ಅದನ್ನು ಸರ್ಕಾರಗಳು ಪರಿಗಣಿಸಲಿಲ್ಲ. ಈಗ ಅದರ ಪರಿಣಾಮವನ್ನು ಎದುರಿಸುತ್ತಿದ್ದೇವೆ. ಹಾಗಾಗಿ ಅರಣ್ಯ ಇಲಾಖೆಯು ಎಚ್ಚೆತ್ತುಕೊಂಡು ಅರಣ್ಯವನ್ನು ರಕ್ಷಿಸಬೇಕು. ಅದಕ್ಕಾಗಿ ಈ ಚಳವಳಿಯನ್ನು ತೀವ್ರಗೊಳಿಸುತ್ತೇವೆ. ದಕ್ಷಿಣ ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಈ ಚಳವಳಿ ಹಬ್ಬಿಸುವ ಜವಾಬ್ದಾರಿ ಹೊತ್ತುಕೊಳ್ಳುತ್ತೇನೆ ಎಂದರು.

ಪ್ರತಿಭಟನೆಯಲ್ಲಿ ಸಾಗರ ರಾಘವೇಂದ್ರ, ಶಶಿ ಸಂಪಳ್ಳಿ, ಕಲ್ಕುಳಿ ವಿಠಲ್ ಹೆಗಡೆ, ಪಿ. ಕುಮಾರಸ್ವಾಮಿ ಮುಂತಾದವರು ಮಾತನಾಡಿದರು.


ಇದನ್ನೂ ಓದಿ: ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...