Homeಅಂತರಾಷ್ಟ್ರೀಯಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

ಈ ಮಧ್ಯೆ ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರಗೊಂಡೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

- Advertisement -
- Advertisement -

ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾಗಿರುವ ಜೋ ಬೈಡೆನ್ ಅವರನ್ನು ಪ್ರಾಮಾಣೀಕರಿಸುವ ಕಾರ್ಯಕ್ರಮದಲ್ಲಿ, ಅಮೆರಿಕ ಸಂಸತ್ತಿನ ಹೊರಗಡೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ದಾಂಧಲೆ ನಡೆಸಿದ್ದರು. ಈ ದಾಂಧಲೆ ಸಮಯದಲ್ಲಿ ಭಾತರದ ಧ್ವಜ ಕಾಣಿಸಿಕೊಂಡಿದ್ದು ವ್ಯಾಪಕ ಖಂಡನೆಗೊಳಗಾಗಿದೆ.

ಅಮೆರಿಕ ಅಧ್ಯಕ್ಷಿಯ ಚುನಾವಣೆಯಲ್ಲಿ ಟ್ರಂಪ್ ಪರಾಜಯಗೊಂಡಿದ್ದರಾದರು, ತನ್ನ ಸೋಲನ್ನು ಅವರು ನಿರಾಕರಿಸುತ್ತಲೇ ಬಂದಿದ್ದರು. ಅವರ ಎದುರಾಳಿ ಜೋ ಬೈಡೆನ್ ಅವರ ಗೆಲುವನ್ನು ಅಮೆರಿಕ ಸಂಸತ್ತು ಗುರುವಾರ ಪ್ರಾಮಾಣಿಕರಿಸಿದೆ. ಆದರೆ ಸಂಸತ್ತಿನಲ್ಲಿ ಈ ಪ್ರಕ್ರಿಯೆ ನಡೆಯುವುದಕ್ಕಿಂಲೂ ಮುಂಚೆ, ಸಂಸತ್ತಿನ ಹೊರಗಡೆ ಟ್ರಂಪ್ ಬೆಂಬಲಿಗರು ಸಂಸತ್ತಿನ ಬ್ಯಾರಿಕೇಡ್ ಮುರಿದು ಒಳ ಪ್ರವೇಶಿಸಿದ್ದಾರೆ. ಇದರಿಂದ ಗೊಂದಲ ಉಂಟಾಗಿದ್ದು ಪೊಲೀಸರು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ನಾಲ್ಕು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ಪ್ರಧಾನಿ ಮೋದಿ ದಾಳಿಯನ್ನು ಖಂಡಿದ್ದು, “ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರಗೊಂಡೆ. ಅಧಿಕಾರದ ಕ್ರಮಬದ್ಧ ಮತ್ತು ಶಾಂತಿಯುತ ವರ್ಗಾವಣೆ ಮುಂದುವರಿಯಬೇಕು. ಕಾನೂನುಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಮಟ್ಟಹಾಕಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಆದರೆ ಇದೀಗ ಈ ದಾಂದಲೆ ನಡೆಸುವ ಸಮಯಲ್ಲಿ ಭಾರತದ ಧ್ವಜ ಕಾಣಿಸಿಕೊಂಡಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವೈರಲಾಗಿದೆ. ಘಟನೆಯನ್ನು ಹಲವಾರು ಭಾರತೀಯರು ವಿರೋಧಿಸಿದ್ದಾರೆ. ಬಿಜೆಪಿ ನಾಯಕ ವರುಣ್ ಗಾಂಧಿ, “ಅಲ್ಲಿ ಭಾರತೀಯ ಧ್ವಜ ಯಾಕಿದೆ ? ಖಂಡಿತವಾಗಿಯೂ ಇದು ನಾವು ಭಾಗವಹಿಸಬೇಕಾದ ಹೋರಾಟವಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ವರುಣ್ ಗಾಂಧಿ ಟ್ವೀಟನ್ನು ರೀಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಶಶಿತರೂರ್‌, “ವರುಣ್‌ ಗಾಂಧಿಯವರೇ, ದುರದೃಷ್ಟವಾತ್‌, ಕೆಲವು ಭಾರತೀಯರು ಕೂಡಾ ಟ್ರಂಪ್‌ ಬೆಂಬಲಿಗರ ಹಾಗೆ ಗುಂಪು ಹಿಂಸಾಚಾರ ಬೆಂಬಲಿಸುವ ಮನಸ್ಥಿತಿಯವರೆ ಆಗಿದ್ದಾರೆ. ಬಾವುಟವನ್ನು ಹೆಮ್ಮೆಯ ಸಂಕೇತವಾಗಿ ಬಳಸದೇ ಅದನ್ನು ಅಸ್ತ್ರವನ್ನಾಗಿ ಬಳಸಲು ಬಯಸುತ್ತಾರೆ. ಯಾರೆಲ್ಲಾ ಅದನ್ನು ಒಪ್ಪುವುದಿಲ್ಲವೋ ಅವರೆಲ್ಲರೂ ರಾಷ್ಟ್ರ ವಿರೋಧಿಗಳು ಮತ್ತು ದೇಶದ್ರೋಹಿಳೆಂದು ಹೇಳುತ್ತಾರೆ. ಆ ಭಾವುಟ ನಮ್ಮೆಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ” ಎಂದು ತಿರುಗೇಟು ನೀಡಿದ್ದಾರೆ. ಬಿಜೆಪಿಯು ರಾಷ್ಟ್ರದ ಸಂಕೇತಗಳನ್ನು ಬಳಸಿಕೊಂಡು ಅವರ ವಿರೋಧಿಗಳನ್ನು ಹಣಿಯುತ್ತಿರುವುದನ್ನು ಶಶಿ ತರೂರು ಇಲ್ಲಿ ಉಲ್ಲೇಖಿಸಿದ್ದಾರೆ.

ಪ್ರವೀಣ್ ಕುಮಾರ್‌ ರಾಜೇಂದ್ರನ್, “ಆಂತರಿಕ ಗಲಭೆಯ ಸಂದರ್ಭದಲ್ಲಿ ಭಾರತೀಯ ಧ್ವಜದ ಹಾರಾಟ ನಡೆಸಿರುವವರ ವೀಸಾವನ್ನು ಅಮೆರಿಕ ರದ್ದುಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರ ದಾಳಿ: ಒಬ್ಬನ ಮರಣ, ಹಲವರಿಗೆ ಗಾಯ

ತಿಲಕ್ ಅವರು, “ದೊಡ್ಡ ಗುಂಪಿನಲ್ಲಿರುವ ಮೂರ್ಖ ಜನರ ಶಕ್ತಿಯನ್ನು ಕಡೆಗಣಿಸಬೇಡಿ. ವಿಶ್ವದ ಹಳೆಯ ಪ್ರಜಾಪ್ರಭುತ್ವದ ಸಂಸತ್ತಿನ ಮೇಲೆ ನಡೆದ ದಾಳಿಗೆ ಶತಮೂರ್ಖ ಅನಿವಾಸಿಯೊಬ್ಬ ಭಾರತೀಯ ಧ್ವಜವನ್ನು ಹಿಡಿದಿದ್ದಾನೆ” ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.

ಪ್ರಧಾನಿ ಮೋದಿಯ ಖಂಡನೆಗೆ ಕೆಲವರು ಆಕ್ಷೇಪ ವ್ಯಕ್ತಪಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಶೀವತ್ಸ ಅವರು, “‘ಅಬ್ ಕಿ ಬಾರ್ ಟ್ರಂಪ್ ಸರ್ಕಾರ್’ಗೆ ಏನಾಯಿತು? ನಿಮ್ಮ ‘ಪ್ರೇಂಡ್‌‌’ ಗಾಗಿ ನೀವು ಪ್ರಚಾರ ಮಾಡಿ ನಮ್ಮ ವಿದೇಶಾಂಗ ನೀತಿಯನ್ನು ಕುಗ್ಗಿಸಲಿಲ್ಲವೇ? ಭಾರತದಲ್ಲಿ ಕೊರೊನಾ ಹರಡುತ್ತಿರುವಾಗ, ನೀವು ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕೆ ₹ 100 ಕೋಟಿ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂತರನ್‌ಆಫ್‌ ಎಂಬ ಟ್ವಿಟ್ಟರ್‌ ಹ್ಯಾಂಡಲ್‌, ಬಿಜೆಪಿ ನಾಯಕ ವರುಣ್ ಗಾಂಧಿ ಟ್ವೀಟ್‌ಗೆ ಅಧ್ಯಕ್ಷೀಯ ಚುನಾವಣೆಗಿಂತಲೂ ಮುಂಚೆ ಪ್ರಧಾನಿ ಮೋದಿ ಅಲ್ಲಿನ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಟ್ರಂಪ್ ಪರ ಪ್ರಚಾರ ಮಾಡಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕಾ ನಾಲ್ಕು ಐತಿಹಾಸಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ – ಜೋ ಬೈಡೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...