Homeಮುಖಪುಟ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಜಾಹಿರಾತನ್ನು ವಾಸ್ತವದ ವರದಿ/ಲೇಖನ ಎಂದು ಬಿಂಬಿಸಲು ಯತ್ನಿಸಿದ ಹಲವು ಭಾರತೀಯ ಮಾಧ್ಯಮಗಳು ಯೋಗಿ ಆದಿತ್ಯನಾಥರನ್ನು ಸಿಕ್ಕಾಪಟ್ಟೆ ಹೊಗಳಿ ಕೃತಾರ್ಥವಾಗಿವೆ!

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌‌ ಕೊರೊನಾ ಬಿಕ್ಕಟ್ಟನ್ನು ನಿರ್ವಹಿಸಿದ ರೀತಿಯನ್ನು ಟೈಮ್ ಮ್ಯಾಗಜೀನ್ ಹೊಗಳಿ ವರದಿ/ಲೇಖನ ಪ್ರಕಟಿಸಿದೆ ಎಂದು ಝೀ ನ್ಯೂಸ್, ಎಬಿಪಿ ಗಂಗಾ, ನ್ಯೂಸ್18-ಯುಪಿ ಸೇರಿದಂತೆ ಹಲವು ಚಾನೆಲ್‌ಗಳು ಸುಳ್ಳು ಸುದ್ದಿ ಪ್ರಸಾರ ಮಾಡಿವೆ.

ಟೈಮ್ ಮ್ಯಾಗಜೀನ್‌ನ ಜಾಹಿರಾತನ್ನು ತೋರಿಸಿ ಮುಖ್ಯಮಂತ್ರಿ ಆದಿತ್ಯನಾಥ್‌ನನ್ನು ಈ ಚಾನೆಲ್‌ಗಳ ಆಂಕರ್‌ಗಳು ವಿಪರೀತವಾಗಿ ಹೊಗಳಿದ್ದಾರೆ. ಟಿವಿ ಪರದೆಯ ಮೇಲೆ ಆದಿತ್ಯನಾಥ್‌‌ನನ್ನು ಶ್ಲಾಘಿಸುವ ಭರದಲ್ಲಿ ಹಲವು ಗುಣನಾಮಳನ್ನೂ ನೀಡಿದ್ದವು. ಇದೇ ಮಾದರಿಯ ವರದಿಯನ್ನು ಕೆಲವು ಮುದ್ರಣ ಮಾಧ್ಯಮಗಳು ಕೂಡಾ ಮಾಡಿವೆ.

ವಾಸ್ತವದಲ್ಲಿ ಟೈಮ್‌ನಲ್ಲಿ ಬಂದಿದ್ದು ಉತ್ತರಪ್ರದೇಶ ಸರ್ಕಾರ ನೀಡಿದ ಜಾಹೀರಾತು. ಅದನ್ನು ಲೇಖನ ರೂಪದಲ್ಲಿ ಪ್ರೆಸೆಂಟ್ ಮಾಡಲಾಗಿತ್ತು. ಇಂತಹ ಜಾಹೀರಾತುಗಳನ್ನು ಅಡ್ವಟೋರಿಯಲ್ ಎಂದೇ ಕರೆಯಲಾಗುತ್ತದೆ. ಇದರ ಮೇಲುಗಡೆ ’ಯುಪಿ ಸರ್ಕಾರ ನಿಡಿದ ಕಂಟೆಂಟ್’ ಎಂದೂ ಉಲ್ಲೇಖಿಸಲಾಗಿದೆ. ಈ ಅಡ್ವಟೋರಿಯಲ್ ಟೈಮ್‌ನ ಇಂಟರ್‌ನೆಟ್ ಆವೃತ್ತಿಯಲ್ಲಿ ಪ್ರಕಟವಾಗಿಲ್ಲ. ವಿದೇಶಿ ಮತ್ತು ಅಮೆರಿಕನ್ ಪ್ರಿಂಟ್ ಆವೃತ್ತಿಯಲ್ಲೂ ಇದನ್ನು ಪ್ರಕಟಿಸಲಾಗಿಲ್ಲ.

ಇದನ್ನೂ ಓದಿ: ನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

ಬಲಪಂಥಿಯ ವೆಬ್‌ಸೈಟ್ ಒಪಿ‌ಇಂಡಿಯಾ, ’ಹಿಂದೊಮ್ಮೆ ಯೋಗಿ ಅವರನ್ನು ರಾಡಿಕಲ್ ಎಂದು ಕರೆದಿದ್ದ ಟೈಮ್ ಈಗ ಯೋಗಿಯವರನ್ನು ಹೊಗಳಿದೆ’ ಎಂಬ ಶಿರ್ಷಿಕೆ ನೀಡಿ ವರದಿ ಪ್ರಕಟಿಸಿದೆ.

‘Hang in there, better times are ahead’ – ಎಂಬ ತಲೆಬರಹದ ಈ ಅಡ್ವಟೋರಿಯಲ್ ಅನ್ನು ಡಿಸೆಂಬರ್ 15 ರಂದು ಆದಿತ್ಯನಾಥ್ ಶೇರ್ ಮಾಡಿ, ಅದನ್ನು ಲೇಖನ ಎಂಬಂತೆ ಬಿಂಬಿಸಿದ್ದರು. ಆ ಸಮಯದಲ್ಲಿ ಇದು ಗಮನ ಸೆಳೆದಿರಲಿಲ್ಲ. ನಂತರದ ಇದು ಸಾಮಾಜಿಕ ಜಾಲತಾಣಗಳ ಮೂಲಕ ಹರಡಿದೆ. ಎರಡು ವಾರಗಳ ನಂತರ ಎಚ್ಚೆತ್ತುಕೊಂಡ ಚಾನೆಲ್‌ಗಳು ಇತ್ತೀಚೆಗೆ ಯೋಗಿ ಧ್ಯಾನ ಮಾಡಿದವು.

ಒಂದೆರಡು ತಿಂಗಳ ಹಿಂದಷ್ಟೇ ಟೈಮ್‌ನಲ್ಲಿ, ಭಾರತದ ಕೊರೊನಾ ನಿರ್ವಹಣೆಯ ವಿಫಲತೆ ಕುರಿತು ಬರೆಯಲಾಗಿತ್ತು. ಅದರಲ್ಲಿ ಕೊರೊನಾ ಕುರಿತು ತಪ್ಪು ಮಾಹಿತಿ ಹರಡುವವರ ಕುರಿತ ಬಾಕ್ಸ್‌ನಲ್ಲಿ ಆದಿತ್ಯನಾಥ್‌ ಕೂಡಾ ಇದ್ದರು. ’ಯೋಗದಿಂದ ಕೊವಿಡ್ ನಿವಾರಿಸಬಹುದು’ ಎಂಬ ಅವರ ಹೇಳಿಕೆಯನ್ನು ಟೈಮ್ ಟೀಕಿಸಿತ್ತು.

ಅಡ್ವಟೋರಿಯಲ್‌ಗಳು ಪಾವತಿ ಕೊಟ್ಟು ಪ್ರಕಟಿಸುವ ಲೇಖನಗಳಾಗಿದ್ದು, ಅವು ಜಾಹೀರಾತಿನಂತಿರದೇ ಎಡಿಟೋರಿಯಲ್ ಶೈಲಿಯಲ್ಲಿ ನಿರೂಪಿತಗೊಂಡಿರುತ್ತವೆ.

ಇದನ್ನೂ ಓದಿ: ಸ್ವತಃ ಆದಿತ್ಯನಾಥ್‌‌ಗೆ ಯುಪಿ ಪೊಲೀಸರ ಮೇಲೆ ನಂಬಿಕೆಯಿಲ್ಲ: ಬಿಜೆಪಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...