Homeಚಳವಳಿಜ. 26ರ ಪರೇಡ್‌ಗೆ ತಾಲೀಮು; ದೆಹಲಿ ಗಡಿಗಳಲ್ಲಿ ನಡೆಯಿತು ರೈತರ ಟ್ರ್ಯಾಕ್ಟರ್‌ ಮೆರವಣಿಗೆ!

ಜ. 26ರ ಪರೇಡ್‌ಗೆ ತಾಲೀಮು; ದೆಹಲಿ ಗಡಿಗಳಲ್ಲಿ ನಡೆಯಿತು ರೈತರ ಟ್ರ್ಯಾಕ್ಟರ್‌ ಮೆರವಣಿಗೆ!

ಜನವರಿ 26 ರಂದು ನಾವು ಟ್ರ್ಯಾಕ್ಟರ್‌ ಮೆರವಣಿಗೆ ನಡೆಸುವುದು ನಿಶ್ಚಿತ. ಹರ್ಯಾಣ, ರಾಜಸ್ಥಾನ, ಪಂಜಾಬ್‌, ಉತ್ತರ ಪ್ರದೇಶದ ಸುಮಾರು 3000 ಟ್ರ್ಯಾಕ್ಟರ್‌ಗಳು ಪಾಲ್ಗೊಳ್ಳಲಿವೆ ಎಂದು ಪ್ರತಿಭಟನಾ ನಿರತ ರೈತರು ತಿಳಿಸಿದ್ದಾರೆ

- Advertisement -
- Advertisement -

ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್‌ ಪರೇಡ್‌ ನಡೆಸುವುದಾಗಿ ಘೋಷಿಸಿದ್ದ ರೈತ ಹೋರಾಟಗಾರರು, ಇದಕ್ಕೆ ಪೂರ್ವಭಾವಿಯಾಗಿ ತಾಲೀಮಿನ ರೂಪದಲ್ಲಿ ಜ. 7 ರ ಬೆಳಗ್ಗೆ ದೆಹಲಿಯ ಗಡಿಗಳಲ್ಲಿ ಟ್ರ್ಯಾಕ್ಟರ್‌ ಮೆರವಣಿಗೆ ನಡೆಸಿದರು. ಕಳೆದ 43 ದಿನಗಳಿಂದ ದೆಹಲಿ ನಗರವನ್ನು ಬೆಸೆಯುವ ಎಲ್ಲ ಮುಖ್ಯ ರಸ್ತೆಗಳ ಗಡಿಗಳಲ್ಲಿ ರೈತ ಹೋರಾಟ ನಡೆಸುತ್ತಿದ್ದು, ಸರ್ಕಾರದೊಂದಿಗಿನ ಇದುವರೆಗೆ ಏಳು ಸುತ್ತಿನ ಮಾತುಕತೆ ನಡೆಸದರೂ ಫಲ ನೀಡಿಲ್ಲ.

ಮಸೂದೆಯನ್ನು ಹಿಂತೆಗೆದುಕೊಳ್ಳದೆ, ರೈತರ ಮನವೊಲಿಸುವ ಯತ್ನದಲ್ಲೇ ಇರುವ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಈ ವಿನೂತನ ಪ್ರತಿಭಟನೆ ನಡೆಸುತ್ತಿರುವುದಾಗಿ ಇತ್ತೀಚೆಗೆ ರೈತ ಸಂಘಟನೆಗಳು ಪ್ರಕಟಿಸಿದ್ದವು. ತಾಲೀಮಿನ ರೂಪದಲ್ಲಿ ಸುಮಾರು ನೂರಾರು ಟ್ರ್ಯಾಕ್ಟರ್‌ಗಳು ಮೆರವಣಿಗೆಯಲ್ಲಿ ಸಾಗಿದವು. ಹರೆಯದ ಉತ್ಸಾಹಿಗಳಿಂದ ಹಿಡಿದು 70 ರ ವಯೋಮಾನ ಹಿರಿಯರು ಈ ಟ್ರ್ಯಾಕ್ಟರ್‌ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ:ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

“ಜನವರಿ 26 ರಂದು ನಾವು ಟ್ರ್ಯಾಕ್ಟರ್‌ ಮೆರವಣಿಗೆ ನಡೆಸುವುದು ನಿಶ್ಚಿತ. ಹರ್ಯಾಣ, ರಾಜಸ್ಥಾನ, ಪಂಜಾಬ್‌, ಉತ್ತರ ಪ್ರದೇಶದ ಸುಮಾರು 3000 ಟ್ರ್ಯಾಕ್ಟರ್‌ಗಳು ಪಾಲ್ಗೊಳ್ಳಲಿವೆ” ಎಂದು ಪ್ರತಿಭಟನಾ ನಿರತ ರೈತರು ತಿಳಿಸಿದ್ದಾರೆಂದು ಮಾಸ್‌‌ ಮೀಡಿಯಾ ಫೌಂಡೇಶನ್ ವರದಿ ಹೇಳಿದೆ.

ಟ್ರ್ಯಾಕ್ಟರ್‌ ಮೆರವಣಿಗೆಯಲ್ಲಿ ಮಹಿಳೆಯರೂ ವಾಹನಗಳನ್ನು ಚಾಲನೆ ಮಾಡಿದ್ದು ಕಂಡು. ಜನವರಿ 26ರ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲಿದ್ದಾರೆ ಎಂದು ರೈತ ಮುಖಂಡರು ತಿಳಿಸಿದರು. ಮೋದಿ ಸರ್ಕಾರ, ರೈತ ವಿರೋಧಿ ಮೂರು ಮಸೂದೆಗಳ ವಿರುದ್ಧ ಘೋಷಣೆ ಕೂಗಿದ ರೈತರು, ಮಸೂದೆ ಹಿಂಪಡೆಯದೆ ಹೋರಾಟ ನಿಲ್ಲುವುದೇ ಇಲ್ಲ ಎಂದು ಹೇಳಿದರು.

ರೈತ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜ. 11 ರಂದು ಏಳನೆಯ ಬಾರಿಗೆ ರೈತರೊಂದಿಗೆ ಸಭೆ ನಡೆಸಲು ಮುಂದಾಗಿದ್ದು, ಎರಡು ಮುಖ್ಯ ಬೇಡಿಕೆಗಳು ಚರ್ಚೆಯಾಗಲಿವೆ. ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯುವುದು ಮತ್ತು ಕನಿಷ್ಟ ಬೆಂಬಲ ಬೆಲೆ ಕುರಿತು ಚರ್ಚೆ ನಡೆಯಲಿದೆ.

ಇದನ್ನೂ ಓದಿ: ರೈತ ಹೋರಾಟ: 70,000 ಕೋಟಿ ನಷ್ಟವಾಗಿದೆ ಎಂದ ವಾಣಿಜ್ಯ-ಕೈಗಾರಿಕಾ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...