Homeಚಳವಳಿಜ. 26ರ ಪರೇಡ್‌ಗೆ ತಾಲೀಮು; ದೆಹಲಿ ಗಡಿಗಳಲ್ಲಿ ನಡೆಯಿತು ರೈತರ ಟ್ರ್ಯಾಕ್ಟರ್‌ ಮೆರವಣಿಗೆ!

ಜ. 26ರ ಪರೇಡ್‌ಗೆ ತಾಲೀಮು; ದೆಹಲಿ ಗಡಿಗಳಲ್ಲಿ ನಡೆಯಿತು ರೈತರ ಟ್ರ್ಯಾಕ್ಟರ್‌ ಮೆರವಣಿಗೆ!

ಜನವರಿ 26 ರಂದು ನಾವು ಟ್ರ್ಯಾಕ್ಟರ್‌ ಮೆರವಣಿಗೆ ನಡೆಸುವುದು ನಿಶ್ಚಿತ. ಹರ್ಯಾಣ, ರಾಜಸ್ಥಾನ, ಪಂಜಾಬ್‌, ಉತ್ತರ ಪ್ರದೇಶದ ಸುಮಾರು 3000 ಟ್ರ್ಯಾಕ್ಟರ್‌ಗಳು ಪಾಲ್ಗೊಳ್ಳಲಿವೆ ಎಂದು ಪ್ರತಿಭಟನಾ ನಿರತ ರೈತರು ತಿಳಿಸಿದ್ದಾರೆ

- Advertisement -
- Advertisement -

ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್‌ ಪರೇಡ್‌ ನಡೆಸುವುದಾಗಿ ಘೋಷಿಸಿದ್ದ ರೈತ ಹೋರಾಟಗಾರರು, ಇದಕ್ಕೆ ಪೂರ್ವಭಾವಿಯಾಗಿ ತಾಲೀಮಿನ ರೂಪದಲ್ಲಿ ಜ. 7 ರ ಬೆಳಗ್ಗೆ ದೆಹಲಿಯ ಗಡಿಗಳಲ್ಲಿ ಟ್ರ್ಯಾಕ್ಟರ್‌ ಮೆರವಣಿಗೆ ನಡೆಸಿದರು. ಕಳೆದ 43 ದಿನಗಳಿಂದ ದೆಹಲಿ ನಗರವನ್ನು ಬೆಸೆಯುವ ಎಲ್ಲ ಮುಖ್ಯ ರಸ್ತೆಗಳ ಗಡಿಗಳಲ್ಲಿ ರೈತ ಹೋರಾಟ ನಡೆಸುತ್ತಿದ್ದು, ಸರ್ಕಾರದೊಂದಿಗಿನ ಇದುವರೆಗೆ ಏಳು ಸುತ್ತಿನ ಮಾತುಕತೆ ನಡೆಸದರೂ ಫಲ ನೀಡಿಲ್ಲ.

ಮಸೂದೆಯನ್ನು ಹಿಂತೆಗೆದುಕೊಳ್ಳದೆ, ರೈತರ ಮನವೊಲಿಸುವ ಯತ್ನದಲ್ಲೇ ಇರುವ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಈ ವಿನೂತನ ಪ್ರತಿಭಟನೆ ನಡೆಸುತ್ತಿರುವುದಾಗಿ ಇತ್ತೀಚೆಗೆ ರೈತ ಸಂಘಟನೆಗಳು ಪ್ರಕಟಿಸಿದ್ದವು. ತಾಲೀಮಿನ ರೂಪದಲ್ಲಿ ಸುಮಾರು ನೂರಾರು ಟ್ರ್ಯಾಕ್ಟರ್‌ಗಳು ಮೆರವಣಿಗೆಯಲ್ಲಿ ಸಾಗಿದವು. ಹರೆಯದ ಉತ್ಸಾಹಿಗಳಿಂದ ಹಿಡಿದು 70 ರ ವಯೋಮಾನ ಹಿರಿಯರು ಈ ಟ್ರ್ಯಾಕ್ಟರ್‌ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ:ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

“ಜನವರಿ 26 ರಂದು ನಾವು ಟ್ರ್ಯಾಕ್ಟರ್‌ ಮೆರವಣಿಗೆ ನಡೆಸುವುದು ನಿಶ್ಚಿತ. ಹರ್ಯಾಣ, ರಾಜಸ್ಥಾನ, ಪಂಜಾಬ್‌, ಉತ್ತರ ಪ್ರದೇಶದ ಸುಮಾರು 3000 ಟ್ರ್ಯಾಕ್ಟರ್‌ಗಳು ಪಾಲ್ಗೊಳ್ಳಲಿವೆ” ಎಂದು ಪ್ರತಿಭಟನಾ ನಿರತ ರೈತರು ತಿಳಿಸಿದ್ದಾರೆಂದು ಮಾಸ್‌‌ ಮೀಡಿಯಾ ಫೌಂಡೇಶನ್ ವರದಿ ಹೇಳಿದೆ.

ಟ್ರ್ಯಾಕ್ಟರ್‌ ಮೆರವಣಿಗೆಯಲ್ಲಿ ಮಹಿಳೆಯರೂ ವಾಹನಗಳನ್ನು ಚಾಲನೆ ಮಾಡಿದ್ದು ಕಂಡು. ಜನವರಿ 26ರ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲಿದ್ದಾರೆ ಎಂದು ರೈತ ಮುಖಂಡರು ತಿಳಿಸಿದರು. ಮೋದಿ ಸರ್ಕಾರ, ರೈತ ವಿರೋಧಿ ಮೂರು ಮಸೂದೆಗಳ ವಿರುದ್ಧ ಘೋಷಣೆ ಕೂಗಿದ ರೈತರು, ಮಸೂದೆ ಹಿಂಪಡೆಯದೆ ಹೋರಾಟ ನಿಲ್ಲುವುದೇ ಇಲ್ಲ ಎಂದು ಹೇಳಿದರು.

ರೈತ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜ. 11 ರಂದು ಏಳನೆಯ ಬಾರಿಗೆ ರೈತರೊಂದಿಗೆ ಸಭೆ ನಡೆಸಲು ಮುಂದಾಗಿದ್ದು, ಎರಡು ಮುಖ್ಯ ಬೇಡಿಕೆಗಳು ಚರ್ಚೆಯಾಗಲಿವೆ. ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯುವುದು ಮತ್ತು ಕನಿಷ್ಟ ಬೆಂಬಲ ಬೆಲೆ ಕುರಿತು ಚರ್ಚೆ ನಡೆಯಲಿದೆ.

ಇದನ್ನೂ ಓದಿ: ರೈತ ಹೋರಾಟ: 70,000 ಕೋಟಿ ನಷ್ಟವಾಗಿದೆ ಎಂದ ವಾಣಿಜ್ಯ-ಕೈಗಾರಿಕಾ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...