Homeಮುಖಪುಟವಿವರಗಳನ್ನು ತಪ್ಪಾಗಿ ದಾಖಲಿಸಿದ ಬರೋಡಾ ಬ್ಯಾಂಕ್; ರೈತರಿಗೆ ಫಸಲ್ ಭೀಮಾ ವಿಮೆಯ ನಿರಾಕರಣೆ

ವಿವರಗಳನ್ನು ತಪ್ಪಾಗಿ ದಾಖಲಿಸಿದ ಬರೋಡಾ ಬ್ಯಾಂಕ್; ರೈತರಿಗೆ ಫಸಲ್ ಭೀಮಾ ವಿಮೆಯ ನಿರಾಕರಣೆ

ನಿಜವಾಗಿಯೂ ಭೂಮಿ ಇರುವುದು ಟ್ಯೂಬ್‌ವೆಲ್-ನೀರಾವರಿ ಪ್ರದೇಶದಲ್ಲಿ, ಆದರೆ ಪಾಲಿಸಿ-ಡಾಕುಮೆಂಟ್‌ಗಳು ಕಾಲುವೆ-ನೀರಾವರಿ ಪ್ರದೇಶ ಎಂದು ತಪ್ಪಾಗಿ ದಾಖಲಿಸಿವೆ.

- Advertisement -
- Advertisement -

ರಾಜಸ್ತಾನದ ಶ್ರೀ ಗಂಗಾನಗರ ಜಿಲ್ಲೆಯ ಕಿಸಾನ್ ಕಾರ್ಡ್ ಹೊಂದಿರುವ ರೈತರು 2019 ರ ’ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ’ಯ ವಿಮಾ ಹಣ ಪಡೆಯಲು ಪರದಾಡುತ್ತಿದ್ದಾರೆ. ವಿಮಾ ಪಾಲಿಸಿಯಲ್ಲಿ ಬ್ಯಾಂಕ್ ಆಫ್ ಬರೋಡ ರೈತರ ಭೂ ವಿವರಗಳನ್ನು ತಪ್ಪಾಗಿ ದಾಖಲಿಸಿರುವುದೇ ಇದಕ್ಕೆ ಕಾರಣ.

ಶ್ರೀ ಗಂಗಾನಗರ ಜಿಲ್ಲೆಯ ಸುರತ್‌ಘರ್ ಹೋಬಳಿಯ ರಾಕೇಶ್ ಕುಮಾರ್ ಎಂಬ ರೈತರು ಕೌನ್‌ಪಲ್ಸಾರ್ ಎಂಬ ಗ್ರಾಮದಲ್ಲಿ ಜಮೀನು ಹೊಂದಿದ್ದಾರೆ. ತಹಸೀಲ್ದಾರ್ ನೀಡಿರುವ ಭೂ ದಾಖಲೆ ಇದನ್ನು ಪುಷ್ಟಿಕರಿಸುತ್ತದೆ.
ಆದರೆ ರಾಕೇಶ್ ಅವರ ಫಸಲ್ ಭೀಮಾ ಪಾಲಿಸಿ (2019 ರ ಮುಂಗಾರು ಮತ್ತು ಹಿಂಗಾರು)ಗಳಲ್ಲಿ ಜಮೀನು ಎರಡು ಗ್ರಾಮಗಳಲ್ಲಿ ಇದೆಯೆಂದು ದಾಖಲಾಗಿದೆ. ಮುಂಗಾರು ಅವಧಿಯ ಪಾಲಿಸಿಯಲ್ಲಿ ಜಮೀನು 16 ಎಸ್‌ಎಲ್‌ಡಿ ಎಂಬ ಗ್ರಾಮದಲ್ಲಿ ಇರುವುದಾಗಿ, ಹಿಂಗಾರು ಅವಧಿಯ ಪಾಲಿಸಿಯಲ್ಲಿ ಜಮೀನು ತಿಲಾವಳಿ ಗ್ರಾಮದಲ್ಲಿ ಇರುವುದಾಗಿ ನಮೂದಿತವಾಗಿದೆ.

ಈ ಬದಲಾವಣೆಯ ಕಾರಣಕ್ಕೆ ರಾಕೇಶ್ ಅವರಿಗೆ ವಿಮಾ ಹಣ ಪಡೆಯಲು ಸಾಧ್ಯವಾಗುತ್ತಿಲ್ಲ. ’ಪರಿಹಾರ ಒದಗಿಲಸಲು ವಿಮಾ ಕಂಪನಿಗಳು ಇನ್ನು ಮುಂದೆ ಜವಾಬ್ದಾರರಾಗಿರುವುದಿಲ್ಲ. ಅವು ತಮ್ಮ ಲಾಭವನ್ನು ಗರಿಷ್ಠಗೊಳಿಸುವುದಕ್ಕೆ ಯತ್ನಿಸಲಿವೆ. ಇದಕ್ಕೆ ಪೂರಕವಾಗಿ ಬ್ಯಾಂಕ್ ಉದ್ದೇಶಪೂರ್ವಕವಾಗಿಯೇ ತಪ್ಪಾದ ವಿವರಗಳನ್ನು ನಮೂದಿಸಿದೆ’ ಎಂದು ರಾಕೇಶ್ ಆರೋಪಿಸಿದ್ದಾರೆ.

ಇದನ್ನೂ ಓದಿ: ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

’ರೈತರ ಜಮೀನುಗಳು ಬಾವಿ ಆಶ್ರಯಿತ ನೀರಾವರಿ ಪ್ರದೇಶದಲ್ಲಿವೆ ಎಂದು ಬ್ಯಾಂಕ್ ತೋರಿಸುತ್ತಿದೆ. ಈ ಪ್ರದೇಶದಲ್ಲಿ ಸಾಮಾನ್ಯವಾಗಿ ಒಳ್ಳೆ ಫಸಲು ಬರುವುದರಿಂದ, ಬೆಳೆ ನಷ್ಟಕ್ಕೆ ನೀಡಲ್ಪಡುವ ಪರಿಹಾರ/ವಿಮಾಹಣ ತುಂಬ ನಗಣ್ಯವಾಗಿರುತ್ತದೆ’ ಎಂದು ರಾಕೇಶ್ ಹೇಳುತ್ತಾರೆ. ’ನನ್ನ ಜಮೀನಿನ ವಿಷಯಕ್ಕೆ ಬಂದರೆ ಅದು ಇರುವುದು ಟ್ಯೂಬ್‌ವೆಲ್ ನೀರಾವರಿ ಪ್ರದೇಶದಲ್ಲಿ. ಆದರೆ ಬ್ಯಾಂಕ್ ಅದನ್ನು ಕಾಲುವೆ-ನೀರಾವರಿ ಪ್ರದೇಶದ ಹಳ್ಳಿಯಲ್ಲಿದೆ ಎಂದು ತಪ್ಪಾದ ಗ್ರಾಮವನ್ನು ನಮೂದು ಮಾಡಿದೆ’ ಎಂದು ಅವರು ಆಕ್ರೋಶ ವ್ಯಕಶಪಡಿಸಿದ್ದಾರೆ.

ಟ್ಯೂಬ್‌ವೆಲ್ ನೀರಾವರಿ ಪ್ರದೇಶದಲ್ಲಿ ಅನುಕೂಲಕರವಲ್ಲದ ಹೊತ್ತಿನಲ್ಲಿ ನೀರು ಬಿಡುವುದು ಮತ್ತು ವಿದ್ಯುತ್‌ನ ಅಸಮರ್ಪಕ ಸರಬರಾಜು ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದು ಅವರ ಫಸಲನ್ನು ಬಾಧಿಸಿ, ಅವರಿಗೆ ನಷ್ಟವುಂಟು ಮಾಡುತ್ತದೆ. ಈ ನಷ್ಟವನ್ನು ವಿಮಾ ಪರಿಹಾರದಲ್ಲಿ ಪಡೆಯಲು ರೈತರು ಬಯಸುತ್ತಿದ್ದಾರೆ.

’ಚಲಿಗಾಲ ಆರಂಭವಾದ ಕೂಡಲೇ ರಾತ್ರಿ 9 ರಿಂದ ಬೆಳಗಿನ 3 ರವರೆಗೆ ವಿದ್ಯುತ್ ಸರಬರಾಜು ಮಾಡುವುದರಿಂದ ನೀರು ಹಾಯಿಸಲು ರೈತರಿಗೆ ಕಷ್ಟವಾಗುತ್ತಿದೆ ಎಂದು ರಾಕೇಶ್ ಹೇಳುತ್ತಾರೆ. ಸುರತ್‌ಘರ್ ‌ಹೋಬಳಿಯಲ್ಲಿ ಬಹುಪಾಲು ರೈತರು ಟ್ಯೂಬ್‌ವೆಲ್‌ಗಳಿಂದ ಪಡೆಯುವ ನೀರನ್ನು ಹನಿ ನೀರಾವರಿ ಪದ್ಧತಿ ಬಳಸಿ ನೀರಾವರಿ ಮಾಡುತ್ತಾರೆ. ರಾತ್ರಿ ಸಂದರ್ಭದಲ್ಲಿ ವಿದ್ಯುತ್ ಸರಬರಾಜು ಮಾಡುವುದರಿಂದ ಆ ಚಳಿಯಲ್ಲಿ ಡ್ರಿಪ್ ಪೈಪ್‌ಗಳನ್ನು ಆ ಕಡೆಯಿಂದ ಈ ಕಡೆಗೆ ಶಿಫ್ಟ್‌ ಮಾಡುವುದು ಕಷ್ಟ. ಈ ನಡುವೆ ನೀರು ಸೋರಿಕೆಯಾಗಿದೆಯಾ ಎಂದು ಪರೀಕ್ಷಿಸುತ್ತಿರಬೇಕು. ಹೆಚ್ಚು ಪ್ರಮಾಣದ ಅಥವಾ ಕಡಿಮೆ ಪ್ರಮಾಣದ ನೀರನ್ನು ಬೆಳೆಗಳಿಗೆ ಹಾಯಿಸಿದರೆ ಅದು ಫಸಲಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಸುರತ್‌ಘರ್ ರೈತರು ವಿದ್ಯುತ್ ಮಂಡಳಿ ಕಚೇರಿ ವಿರುದ್ಧ ಆಗಾಗ ಪ್ರತಿಭಟನೆ ನಡೆಸಿ ವಿದ್ಯುತ್ ಸರಬರಾಜು ಸಮಯವನ್ನು ಹಗಲಿನಲ್ಲಿ ನಿಗದಿಪಡಿಸಿ ಎಂದ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಟ್ಯೂಬ್-ವೆಲ್ ನೀರಾವರಿಯ ಕಷ್ಟಗಳು ಕಾಲುವೆ-ನೀರಾವರಿಯಲ್ಲಿ ಅಷ್ಟಾಗಿ ಇಲ್ಲ. ಕಾಲುವೆ ನೀರು ನೇರವಾಗಿ ಜಮೀನು ತಲುಪತ್ತದೆ. ವಿದ್ಯುತ್‌ನ ಹಂಗೂ ಇರುವುದಿಲ್ಲ.ಇಂತಹ ಸಂದರ್ಭದಲ್ಲೇ ಟ್ಯೂಬ್‌ವೆಲ್ ನೀರಾವರಿ ಪ್ರದೇಶವನ್ನು ಕಾಲುವೆ-ನೀರಾವರಿ ಪ್ರದೇಶ ಎಂದು ತೋರಿಸಿದ ಬ್ಯಾಂಕ್ ರೈತರಿಗೆ ವಿಮಾ ಪರಿಹಾರ ನಿರಾಕರಿಸುತ್ತಿದೆ.

ದಿ ವೈರ್ ಜೊತೆ ಮಾತನಾಡಿರುವ ಸುರತ್‌ಘರ್ ಬರೋಡಾ ಬ್ಯಾಂಕ್ ಫೀಲ್ಡ್ ಆಫೀಸರ್ ಕಾಲ್ರಾಮ್, “2019 ಕ್ಕೆ ಸಂಬಂಧಿಸಿದಂತೆ ವ್ಯವಸ್ಥೆಯಲ್ಲಿ ಸಮಸ್ಯೆಯಾಗಿದೆ. ನಾವು ಆಧಾರ್ ವಿವರಗಳನ್ನು ಎಂಟ್ರಿ ಮಾಡಿದಾಗ, ಅದು ಹಿಂದಿನ ವರ್ಷದ ವಿವರಗಳನ್ನೇ ತೆಗೆದುಕೊಂಡ ಪರಿಣಾಮ ಮಿಸ್‌ಮ್ಯಾಚ್ ಸಂಭವಿಸಿದೆ. ಈಗ ಮ್ಯಾನುವಲ್ ಆಗಿ ವಿವರ ಸೇರಿಸುತ್ತಿದ್ದು, ಅಂತಹ ಸಮಸ್ಯೆ ಮತ್ತೆ ಸಂಭವಿಸದು’ ಎನ್ನುತ್ತಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಗಾಂಧಿ- ಅಂಬೇಡ್ಕರ್ ವಿಚಾರಗಳು

ಫಸಲ್ ಬೀಮಾ ಯೋಜನೆಯ ಪೋರ್ಟಲ್‌ನಲ್ಲೇ ಹಲವಾರು ಸಮಸ್ಯೆಗಳಿದ್ದು, ಅದರ ಪರಿಣಾಮಗಳನ್ನು ರೈತರು ಅನುಭವಿಸುತ್ತಿದ್ದಾರೆ. ಹಿರಿಯ ಕೃಷಿ ವಿಜ್ಞಾನಿಯೊಬ್ಬರ ಪ್ರಕಾರ, ಈ ಪೋರ್ಟಲ್‌ನ ಡ್ರಾಪ್ ಬಾಕ್ಸ್‌ನಲ್ಲಿ ನೂರಾರು ಗ್ರಾಮಗಳ ಹೆಸರು ಗೋಚರಿಸುವುದೇ ಇಲ್ಲ. ಹೀಗಾಗಿ ಸಮೀಪದ ಯಾವುದೋ ಗ್ರಾಮದ ಹೆಸರು ನಮೂದಿತಗೊಂಡು ರೈತರು ಪರಿತಪಿಸಬೇಕಾಗಿದೆ’ ಎಂದಿದ್ದಾರೆ.

2018 ರ ಸೆಪ್ಟೆಂಬರ್‌ನಲ್ಲಿ ಹನುಮಾನಘರ್ ಜಿಲ್ಲೆಯ ಹಲವು ಗ್ರಾಮಗಳ ರೈತರಿಗೆ ವಿಮಾ ಪರಿಹಾರ ನಿರಾಕರಿಸಲ್ಪಟ್ಟಿತ್ತು. ಅಲ್ಲಿನ ಎಸ್‌ಬಿಐ ಶಾಖೆಯು ರೈತರ ಪ್ರಿಮಿಯಂ ಹಣವನ್ನು ಬಜಾಜ್ ಅಲಾಯನ್ಸ್ ವಿಮಾ ಕಂಪನಿಗೆ ಕಟ್ಟದಿದುದೇ ಇದಕ್ಕೆ ಕಾರಣವಾಗಿತ್ತು. ಈ ವಿಮಾ ಕಂಪನಿಗೆ ಪ್ರಿಮಿಯಂ ಕಟ್ಟುವ ಬದಲು ಅಗ್ರಿಕಲ್ಚರಲ್ ಇನ್ಸುರನ್ಸ್ ಕಂಪನಿಗೆ ಪ್ರಿಮಿಯಂ ಹಣವನ್ನು ಎಸ್‌ಬಿಐ ಶಾಖೆ ವರ್ಗಾಯಿಸಿತ್ತು! ಈ ವಿಮಾ ಕಂಪನಿ ಹಣ ವಾಪಸ್ ಮಾಡಿತಾದರೂ ಅಷ್ಟು ಹೊತ್ತಿಗೆ ಪಾವತಿಸುವ ಅವಧಿ ಮುಗಿದಿತ್ತು.

2019 ರ ಏಪ್ರಿಲ್‌ನಲ್ಲಿ ಹನುಮಾನ್‌ಘರ್ ಹೋಬಳಿಯ ನೊಹಾರ್ ಹೋಬಳಿಯ 135 ಕಿಸಾನ್ ಕಾರ್ಡುದಾರ ರೈತರಿಗೆ ವಿಮಾ ಹಣ ನಿರಾಕರಿಸಲಾಗಿತು. ಅವರ 2017ರ ಪ್ರಿಮಿಯಂ ಹಣವನ್ನು ಆಕ್ಸಿಸ್ ಬ್ಯಾಂಕ್ ಆ ರೈತರು ಬೆಳೆಯದೇ ಇದ್ದ ಹತ್ತಿ ಬೆಳೆಗೆ ವರ್ಗಾಯಿಸಿತ್ತು!

ಇದನ್ನೂ ಓದಿ: ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...