Homeಮುಖಪುಟವಿವರಗಳನ್ನು ತಪ್ಪಾಗಿ ದಾಖಲಿಸಿದ ಬರೋಡಾ ಬ್ಯಾಂಕ್; ರೈತರಿಗೆ ಫಸಲ್ ಭೀಮಾ ವಿಮೆಯ ನಿರಾಕರಣೆ

ವಿವರಗಳನ್ನು ತಪ್ಪಾಗಿ ದಾಖಲಿಸಿದ ಬರೋಡಾ ಬ್ಯಾಂಕ್; ರೈತರಿಗೆ ಫಸಲ್ ಭೀಮಾ ವಿಮೆಯ ನಿರಾಕರಣೆ

ನಿಜವಾಗಿಯೂ ಭೂಮಿ ಇರುವುದು ಟ್ಯೂಬ್‌ವೆಲ್-ನೀರಾವರಿ ಪ್ರದೇಶದಲ್ಲಿ, ಆದರೆ ಪಾಲಿಸಿ-ಡಾಕುಮೆಂಟ್‌ಗಳು ಕಾಲುವೆ-ನೀರಾವರಿ ಪ್ರದೇಶ ಎಂದು ತಪ್ಪಾಗಿ ದಾಖಲಿಸಿವೆ.

- Advertisement -
- Advertisement -

ರಾಜಸ್ತಾನದ ಶ್ರೀ ಗಂಗಾನಗರ ಜಿಲ್ಲೆಯ ಕಿಸಾನ್ ಕಾರ್ಡ್ ಹೊಂದಿರುವ ರೈತರು 2019 ರ ’ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ’ಯ ವಿಮಾ ಹಣ ಪಡೆಯಲು ಪರದಾಡುತ್ತಿದ್ದಾರೆ. ವಿಮಾ ಪಾಲಿಸಿಯಲ್ಲಿ ಬ್ಯಾಂಕ್ ಆಫ್ ಬರೋಡ ರೈತರ ಭೂ ವಿವರಗಳನ್ನು ತಪ್ಪಾಗಿ ದಾಖಲಿಸಿರುವುದೇ ಇದಕ್ಕೆ ಕಾರಣ.

ಶ್ರೀ ಗಂಗಾನಗರ ಜಿಲ್ಲೆಯ ಸುರತ್‌ಘರ್ ಹೋಬಳಿಯ ರಾಕೇಶ್ ಕುಮಾರ್ ಎಂಬ ರೈತರು ಕೌನ್‌ಪಲ್ಸಾರ್ ಎಂಬ ಗ್ರಾಮದಲ್ಲಿ ಜಮೀನು ಹೊಂದಿದ್ದಾರೆ. ತಹಸೀಲ್ದಾರ್ ನೀಡಿರುವ ಭೂ ದಾಖಲೆ ಇದನ್ನು ಪುಷ್ಟಿಕರಿಸುತ್ತದೆ.
ಆದರೆ ರಾಕೇಶ್ ಅವರ ಫಸಲ್ ಭೀಮಾ ಪಾಲಿಸಿ (2019 ರ ಮುಂಗಾರು ಮತ್ತು ಹಿಂಗಾರು)ಗಳಲ್ಲಿ ಜಮೀನು ಎರಡು ಗ್ರಾಮಗಳಲ್ಲಿ ಇದೆಯೆಂದು ದಾಖಲಾಗಿದೆ. ಮುಂಗಾರು ಅವಧಿಯ ಪಾಲಿಸಿಯಲ್ಲಿ ಜಮೀನು 16 ಎಸ್‌ಎಲ್‌ಡಿ ಎಂಬ ಗ್ರಾಮದಲ್ಲಿ ಇರುವುದಾಗಿ, ಹಿಂಗಾರು ಅವಧಿಯ ಪಾಲಿಸಿಯಲ್ಲಿ ಜಮೀನು ತಿಲಾವಳಿ ಗ್ರಾಮದಲ್ಲಿ ಇರುವುದಾಗಿ ನಮೂದಿತವಾಗಿದೆ.

ಈ ಬದಲಾವಣೆಯ ಕಾರಣಕ್ಕೆ ರಾಕೇಶ್ ಅವರಿಗೆ ವಿಮಾ ಹಣ ಪಡೆಯಲು ಸಾಧ್ಯವಾಗುತ್ತಿಲ್ಲ. ’ಪರಿಹಾರ ಒದಗಿಲಸಲು ವಿಮಾ ಕಂಪನಿಗಳು ಇನ್ನು ಮುಂದೆ ಜವಾಬ್ದಾರರಾಗಿರುವುದಿಲ್ಲ. ಅವು ತಮ್ಮ ಲಾಭವನ್ನು ಗರಿಷ್ಠಗೊಳಿಸುವುದಕ್ಕೆ ಯತ್ನಿಸಲಿವೆ. ಇದಕ್ಕೆ ಪೂರಕವಾಗಿ ಬ್ಯಾಂಕ್ ಉದ್ದೇಶಪೂರ್ವಕವಾಗಿಯೇ ತಪ್ಪಾದ ವಿವರಗಳನ್ನು ನಮೂದಿಸಿದೆ’ ಎಂದು ರಾಕೇಶ್ ಆರೋಪಿಸಿದ್ದಾರೆ.

ಇದನ್ನೂ ಓದಿ: ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

’ರೈತರ ಜಮೀನುಗಳು ಬಾವಿ ಆಶ್ರಯಿತ ನೀರಾವರಿ ಪ್ರದೇಶದಲ್ಲಿವೆ ಎಂದು ಬ್ಯಾಂಕ್ ತೋರಿಸುತ್ತಿದೆ. ಈ ಪ್ರದೇಶದಲ್ಲಿ ಸಾಮಾನ್ಯವಾಗಿ ಒಳ್ಳೆ ಫಸಲು ಬರುವುದರಿಂದ, ಬೆಳೆ ನಷ್ಟಕ್ಕೆ ನೀಡಲ್ಪಡುವ ಪರಿಹಾರ/ವಿಮಾಹಣ ತುಂಬ ನಗಣ್ಯವಾಗಿರುತ್ತದೆ’ ಎಂದು ರಾಕೇಶ್ ಹೇಳುತ್ತಾರೆ. ’ನನ್ನ ಜಮೀನಿನ ವಿಷಯಕ್ಕೆ ಬಂದರೆ ಅದು ಇರುವುದು ಟ್ಯೂಬ್‌ವೆಲ್ ನೀರಾವರಿ ಪ್ರದೇಶದಲ್ಲಿ. ಆದರೆ ಬ್ಯಾಂಕ್ ಅದನ್ನು ಕಾಲುವೆ-ನೀರಾವರಿ ಪ್ರದೇಶದ ಹಳ್ಳಿಯಲ್ಲಿದೆ ಎಂದು ತಪ್ಪಾದ ಗ್ರಾಮವನ್ನು ನಮೂದು ಮಾಡಿದೆ’ ಎಂದು ಅವರು ಆಕ್ರೋಶ ವ್ಯಕಶಪಡಿಸಿದ್ದಾರೆ.

ಟ್ಯೂಬ್‌ವೆಲ್ ನೀರಾವರಿ ಪ್ರದೇಶದಲ್ಲಿ ಅನುಕೂಲಕರವಲ್ಲದ ಹೊತ್ತಿನಲ್ಲಿ ನೀರು ಬಿಡುವುದು ಮತ್ತು ವಿದ್ಯುತ್‌ನ ಅಸಮರ್ಪಕ ಸರಬರಾಜು ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದು ಅವರ ಫಸಲನ್ನು ಬಾಧಿಸಿ, ಅವರಿಗೆ ನಷ್ಟವುಂಟು ಮಾಡುತ್ತದೆ. ಈ ನಷ್ಟವನ್ನು ವಿಮಾ ಪರಿಹಾರದಲ್ಲಿ ಪಡೆಯಲು ರೈತರು ಬಯಸುತ್ತಿದ್ದಾರೆ.

’ಚಲಿಗಾಲ ಆರಂಭವಾದ ಕೂಡಲೇ ರಾತ್ರಿ 9 ರಿಂದ ಬೆಳಗಿನ 3 ರವರೆಗೆ ವಿದ್ಯುತ್ ಸರಬರಾಜು ಮಾಡುವುದರಿಂದ ನೀರು ಹಾಯಿಸಲು ರೈತರಿಗೆ ಕಷ್ಟವಾಗುತ್ತಿದೆ ಎಂದು ರಾಕೇಶ್ ಹೇಳುತ್ತಾರೆ. ಸುರತ್‌ಘರ್ ‌ಹೋಬಳಿಯಲ್ಲಿ ಬಹುಪಾಲು ರೈತರು ಟ್ಯೂಬ್‌ವೆಲ್‌ಗಳಿಂದ ಪಡೆಯುವ ನೀರನ್ನು ಹನಿ ನೀರಾವರಿ ಪದ್ಧತಿ ಬಳಸಿ ನೀರಾವರಿ ಮಾಡುತ್ತಾರೆ. ರಾತ್ರಿ ಸಂದರ್ಭದಲ್ಲಿ ವಿದ್ಯುತ್ ಸರಬರಾಜು ಮಾಡುವುದರಿಂದ ಆ ಚಳಿಯಲ್ಲಿ ಡ್ರಿಪ್ ಪೈಪ್‌ಗಳನ್ನು ಆ ಕಡೆಯಿಂದ ಈ ಕಡೆಗೆ ಶಿಫ್ಟ್‌ ಮಾಡುವುದು ಕಷ್ಟ. ಈ ನಡುವೆ ನೀರು ಸೋರಿಕೆಯಾಗಿದೆಯಾ ಎಂದು ಪರೀಕ್ಷಿಸುತ್ತಿರಬೇಕು. ಹೆಚ್ಚು ಪ್ರಮಾಣದ ಅಥವಾ ಕಡಿಮೆ ಪ್ರಮಾಣದ ನೀರನ್ನು ಬೆಳೆಗಳಿಗೆ ಹಾಯಿಸಿದರೆ ಅದು ಫಸಲಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಸುರತ್‌ಘರ್ ರೈತರು ವಿದ್ಯುತ್ ಮಂಡಳಿ ಕಚೇರಿ ವಿರುದ್ಧ ಆಗಾಗ ಪ್ರತಿಭಟನೆ ನಡೆಸಿ ವಿದ್ಯುತ್ ಸರಬರಾಜು ಸಮಯವನ್ನು ಹಗಲಿನಲ್ಲಿ ನಿಗದಿಪಡಿಸಿ ಎಂದ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಟ್ಯೂಬ್-ವೆಲ್ ನೀರಾವರಿಯ ಕಷ್ಟಗಳು ಕಾಲುವೆ-ನೀರಾವರಿಯಲ್ಲಿ ಅಷ್ಟಾಗಿ ಇಲ್ಲ. ಕಾಲುವೆ ನೀರು ನೇರವಾಗಿ ಜಮೀನು ತಲುಪತ್ತದೆ. ವಿದ್ಯುತ್‌ನ ಹಂಗೂ ಇರುವುದಿಲ್ಲ.ಇಂತಹ ಸಂದರ್ಭದಲ್ಲೇ ಟ್ಯೂಬ್‌ವೆಲ್ ನೀರಾವರಿ ಪ್ರದೇಶವನ್ನು ಕಾಲುವೆ-ನೀರಾವರಿ ಪ್ರದೇಶ ಎಂದು ತೋರಿಸಿದ ಬ್ಯಾಂಕ್ ರೈತರಿಗೆ ವಿಮಾ ಪರಿಹಾರ ನಿರಾಕರಿಸುತ್ತಿದೆ.

ದಿ ವೈರ್ ಜೊತೆ ಮಾತನಾಡಿರುವ ಸುರತ್‌ಘರ್ ಬರೋಡಾ ಬ್ಯಾಂಕ್ ಫೀಲ್ಡ್ ಆಫೀಸರ್ ಕಾಲ್ರಾಮ್, “2019 ಕ್ಕೆ ಸಂಬಂಧಿಸಿದಂತೆ ವ್ಯವಸ್ಥೆಯಲ್ಲಿ ಸಮಸ್ಯೆಯಾಗಿದೆ. ನಾವು ಆಧಾರ್ ವಿವರಗಳನ್ನು ಎಂಟ್ರಿ ಮಾಡಿದಾಗ, ಅದು ಹಿಂದಿನ ವರ್ಷದ ವಿವರಗಳನ್ನೇ ತೆಗೆದುಕೊಂಡ ಪರಿಣಾಮ ಮಿಸ್‌ಮ್ಯಾಚ್ ಸಂಭವಿಸಿದೆ. ಈಗ ಮ್ಯಾನುವಲ್ ಆಗಿ ವಿವರ ಸೇರಿಸುತ್ತಿದ್ದು, ಅಂತಹ ಸಮಸ್ಯೆ ಮತ್ತೆ ಸಂಭವಿಸದು’ ಎನ್ನುತ್ತಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಗಾಂಧಿ- ಅಂಬೇಡ್ಕರ್ ವಿಚಾರಗಳು

ಫಸಲ್ ಬೀಮಾ ಯೋಜನೆಯ ಪೋರ್ಟಲ್‌ನಲ್ಲೇ ಹಲವಾರು ಸಮಸ್ಯೆಗಳಿದ್ದು, ಅದರ ಪರಿಣಾಮಗಳನ್ನು ರೈತರು ಅನುಭವಿಸುತ್ತಿದ್ದಾರೆ. ಹಿರಿಯ ಕೃಷಿ ವಿಜ್ಞಾನಿಯೊಬ್ಬರ ಪ್ರಕಾರ, ಈ ಪೋರ್ಟಲ್‌ನ ಡ್ರಾಪ್ ಬಾಕ್ಸ್‌ನಲ್ಲಿ ನೂರಾರು ಗ್ರಾಮಗಳ ಹೆಸರು ಗೋಚರಿಸುವುದೇ ಇಲ್ಲ. ಹೀಗಾಗಿ ಸಮೀಪದ ಯಾವುದೋ ಗ್ರಾಮದ ಹೆಸರು ನಮೂದಿತಗೊಂಡು ರೈತರು ಪರಿತಪಿಸಬೇಕಾಗಿದೆ’ ಎಂದಿದ್ದಾರೆ.

2018 ರ ಸೆಪ್ಟೆಂಬರ್‌ನಲ್ಲಿ ಹನುಮಾನಘರ್ ಜಿಲ್ಲೆಯ ಹಲವು ಗ್ರಾಮಗಳ ರೈತರಿಗೆ ವಿಮಾ ಪರಿಹಾರ ನಿರಾಕರಿಸಲ್ಪಟ್ಟಿತ್ತು. ಅಲ್ಲಿನ ಎಸ್‌ಬಿಐ ಶಾಖೆಯು ರೈತರ ಪ್ರಿಮಿಯಂ ಹಣವನ್ನು ಬಜಾಜ್ ಅಲಾಯನ್ಸ್ ವಿಮಾ ಕಂಪನಿಗೆ ಕಟ್ಟದಿದುದೇ ಇದಕ್ಕೆ ಕಾರಣವಾಗಿತ್ತು. ಈ ವಿಮಾ ಕಂಪನಿಗೆ ಪ್ರಿಮಿಯಂ ಕಟ್ಟುವ ಬದಲು ಅಗ್ರಿಕಲ್ಚರಲ್ ಇನ್ಸುರನ್ಸ್ ಕಂಪನಿಗೆ ಪ್ರಿಮಿಯಂ ಹಣವನ್ನು ಎಸ್‌ಬಿಐ ಶಾಖೆ ವರ್ಗಾಯಿಸಿತ್ತು! ಈ ವಿಮಾ ಕಂಪನಿ ಹಣ ವಾಪಸ್ ಮಾಡಿತಾದರೂ ಅಷ್ಟು ಹೊತ್ತಿಗೆ ಪಾವತಿಸುವ ಅವಧಿ ಮುಗಿದಿತ್ತು.

2019 ರ ಏಪ್ರಿಲ್‌ನಲ್ಲಿ ಹನುಮಾನ್‌ಘರ್ ಹೋಬಳಿಯ ನೊಹಾರ್ ಹೋಬಳಿಯ 135 ಕಿಸಾನ್ ಕಾರ್ಡುದಾರ ರೈತರಿಗೆ ವಿಮಾ ಹಣ ನಿರಾಕರಿಸಲಾಗಿತು. ಅವರ 2017ರ ಪ್ರಿಮಿಯಂ ಹಣವನ್ನು ಆಕ್ಸಿಸ್ ಬ್ಯಾಂಕ್ ಆ ರೈತರು ಬೆಳೆಯದೇ ಇದ್ದ ಹತ್ತಿ ಬೆಳೆಗೆ ವರ್ಗಾಯಿಸಿತ್ತು!

ಇದನ್ನೂ ಓದಿ: ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...